AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸತತ ಇಳಿಕೆ ಬೆನ್ನಲ್ಲೇ ಅಲ್ಪ ಏರಿಕೆ ಕಂಡ ಚಿನ್ನದ ದರ; ಇಲ್ಲಿದೆ ಇಂದಿನ ದರಪಟ್ಟಿ

ಚಿನ್ನದ ಜೊತೆ ಇಳಿಕೆ ಹಾದಿ ಹಿಡಿದಿದ್ದ ಬೆಳ್ಳಿ ಬೆಲೆ ಕೂಡ ಮಂಗಳವಾರ ಭಾರೀ ಏರಿಕೆ ಕಂಡಿದೆ. ಕೆಜಿ ಬೆಳ್ಳಿ ಬೆಲೆ 1700 ರೂಪಾಯಿ ಜಿಗಿತ ಕಂಡು 60300 ರೂಪಾಯಿ ಆಗಿದೆ.

ಸತತ ಇಳಿಕೆ ಬೆನ್ನಲ್ಲೇ ಅಲ್ಪ ಏರಿಕೆ ಕಂಡ ಚಿನ್ನದ ದರ; ಇಲ್ಲಿದೆ ಇಂದಿನ ದರಪಟ್ಟಿ
ಸಾಂದರ್ಭಿಕ ಚಿತ್ರ
shruti hegde
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on: Dec 02, 2020 | 12:24 PM

Share

ಬೆಂಗಳೂರು: ಕಳೆದ ಮೂರು ವಾರಗಳಿಂದ ಸತತ ಇಳಿಕೆ ಕಾಣುತ್ತಿರುವ ಚಿನ್ನದ ಬೆಲೆ ಈ ವಾರದ ಆರಂಭದಲ್ಲೂ ಕುಸಿತ ಕಂಡಿತ್ತು. ಆದರೆ, ಮಂಗಳವಾರ ಚಿನ್ನದ ಬೆಲೆ ಅಲ್ಪ ಮಾತ್ರ ಏರಿಕೆ ಕಂಡಿದೆ.

ಕೊರೋನಾ ವೈರಸ್​ ಭಾರತಕ್ಕೆ ಕಾಲಿಟ್ಟ ನಂತರದಲ್ಲಿ ಚಿನ್ನದ ಬೆಲೆಯಲ್ಲಿ ಭಾರೀ ಏರಿಕೆ ಕಂಡಿತ್ತು. ಜನರು ಬೇರೆ ಯಾವುದೇ ಕ್ಷೇತ್ರಗಳಲ್ಲಿ ಹೂಡಿಕೆ ಮಾಡಲು ಅವಕಾಶ ಇರದ ಕಾರಣ ಚಿನ್ನದ ಮೇಲೆ ಹೂಡಿಕೆ ಮಾಡಿದ್ದು ಇದಕ್ಕೆ ಕಾರಣವಿರಬಹುದು ಎಂದು ವಿಶ್ಲೇಷಿಸಲಾಗಿತ್ತು. ಈಗ ಸುಮಾರು ಎಂಟು ತಿಂಗಳ ನಂತರದಲ್ಲಿ ಚಿನ್ನದ ದರ ಇಳಿಕೆ ಹಾದಿ ಹಿಡಿದಿದೆ.

ಬೆಂಗಳೂರಿನಲ್ಲಿ ಡಿಸೆಂಬರ್ 1ರಂದು ಆಭರಣ ಚಿನ್ನ 10 ಗ್ರಾಂಗೆ 200 ರೂಪಾಯಿ ಏರಿಕೆ ಕಂಡು ₹44,900 ರೂಪಾಯಿ ಆಗಿದೆ. ಇನ್ನು, ಶುದ್ಧ ಚಿನ್ನ 10 ಗ್ರಾಂಗೆ 200 ರೂಪಾಯಿ ಏರಿಕೆ ಕಾಣುವ ಮೂಲಕ 48,980 ರೂಪಾಯಿ ಆಗಿದೆ.

ಚಿನ್ನದ ಜೊತೆ ಇಳಿಕೆ ಹಾದಿ ಹಿಡಿದಿದ್ದ ಬೆಳ್ಳಿ ಬೆಲೆ ಕೂಡ ಮಂಗಳವಾರ ಭಾರೀ ಏರಿಕೆ ಕಂಡಿದೆ. ಕೆಜಿ ಬೆಳ್ಳಿ ಬೆಲೆ 1700 ರೂಪಾಯಿ ಜಿಗಿತ ಕಂಡು 60300 ರೂಪಾಯಿ ಆಗಿದೆ.

ಭಾರತದಲ್ಲಿ ಹಬ್ಬದ ಸಮಯದಲ್ಲಿ ಚಿನ್ನ ಖರೀದಿ ಜೋರಾಗಿರುತ್ತದೆ. ಇದೇ ಕಾರಣಕ್ಕೆ ಬೇಡಿಕೆ ಹೆಚ್ಚಾಗಿ, ಆಭರಣದ ದರ ಕೂಡ ಏರಿಕೆ ಕಾಣುವುದು ವಾಡಿಕೆ. ಆದರೆ, ಈ ಬಾರಿ ದೀಪಾವಳಿಯಂದು ಗ್ರಾಹಕರಿಗೆ ಖುಷಿ ಸುದ್ದಿ ಸಿಕ್ಕಿತ್ತು. ದೀಪಾವಳಿ ಹಬ್ಬದ ಸಯಮದಲ್ಲೂ ಚಿನ್ನದ ದರ ಇಳಿಕೆ ಕಂಡಿತ್ತು.

ಸಾಕಷ್ಟು ಅಂಶಗಳು ಚಿನ್ನದ ಬೆಲೆಯನ್ನು ನಿರ್ಧಾರ ಮಾಡುತ್ತವೆ. ಅಂತಾರಾಷ್ಟ್ರೀಯ ಮಾರುಕಟ್ಟೆ ಬೆಲೆ, ಚಿನ್ನದ ಮಾರುಕಟ್ಟೆ, ವ್ಯಾಪಾರ ಯುದ್ಧ, ಡಾಲರ್​ ಮೌಲ್ಯ ಸೇರಿ ಸಾಕಷ್ಟು ವಿಚಾರಗಳು ಚಿನ್ನದ ಬೆಲೆಯ ಏರಿಳಿತಕ್ಕೆ ನೇರ ಕಾರಣವಾಗುತ್ತವೆ. ಕೊರೋನಾ ವೈರಸ್​ ಬಂದ ಸಂದರ್ಭದಲ್ಲಿ ಜನರಿಗೆ ಹೂಡಿಕೆ ಮಾಡಲು ಯಾವುದೇ ಕ್ಷೇತ್ರಗಳು ಸಿಕ್ಕಿರಲಿಲ್ಲ. ಹೀಗಾಗಿ, ಚಿನ್ನದ ಮೇಲೆ ಹೂಡಿಕೆ ಮಾಡಲು ಮುಂದಾಗಿದ್ದರು. ಇದರಿಂದ ಸಹಜವಾಗಿಯೇ ಚಿನ್ನದ ದರದಲ್ಲಿ ಏರಿಕೆ ಕಂಡಿತ್ತು.

ಇದನ್ನೂ ಓದಿ: ಚಿನ್ನ ಖರೀದಿ ಮಾಡೋರಿಗೆ ಗುಡ್ ನ್ಯೂಸ್; ಐತಿಹಾಸಿಕ ಕುಸಿತ ಕಂಡ ಆಭರಣ ಬೆಲೆ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ