AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸತತ ಇಳಿಕೆ ಬೆನ್ನಲ್ಲೇ ಅಲ್ಪ ಏರಿಕೆ ಕಂಡ ಚಿನ್ನದ ದರ; ಇಲ್ಲಿದೆ ಇಂದಿನ ದರಪಟ್ಟಿ

ಚಿನ್ನದ ಜೊತೆ ಇಳಿಕೆ ಹಾದಿ ಹಿಡಿದಿದ್ದ ಬೆಳ್ಳಿ ಬೆಲೆ ಕೂಡ ಮಂಗಳವಾರ ಭಾರೀ ಏರಿಕೆ ಕಂಡಿದೆ. ಕೆಜಿ ಬೆಳ್ಳಿ ಬೆಲೆ 1700 ರೂಪಾಯಿ ಜಿಗಿತ ಕಂಡು 60300 ರೂಪಾಯಿ ಆಗಿದೆ.

ಸತತ ಇಳಿಕೆ ಬೆನ್ನಲ್ಲೇ ಅಲ್ಪ ಏರಿಕೆ ಕಂಡ ಚಿನ್ನದ ದರ; ಇಲ್ಲಿದೆ ಇಂದಿನ ದರಪಟ್ಟಿ
ಸಾಂದರ್ಭಿಕ ಚಿತ್ರ
shruti hegde
| Edited By: |

Updated on: Dec 02, 2020 | 12:24 PM

Share

ಬೆಂಗಳೂರು: ಕಳೆದ ಮೂರು ವಾರಗಳಿಂದ ಸತತ ಇಳಿಕೆ ಕಾಣುತ್ತಿರುವ ಚಿನ್ನದ ಬೆಲೆ ಈ ವಾರದ ಆರಂಭದಲ್ಲೂ ಕುಸಿತ ಕಂಡಿತ್ತು. ಆದರೆ, ಮಂಗಳವಾರ ಚಿನ್ನದ ಬೆಲೆ ಅಲ್ಪ ಮಾತ್ರ ಏರಿಕೆ ಕಂಡಿದೆ.

ಕೊರೋನಾ ವೈರಸ್​ ಭಾರತಕ್ಕೆ ಕಾಲಿಟ್ಟ ನಂತರದಲ್ಲಿ ಚಿನ್ನದ ಬೆಲೆಯಲ್ಲಿ ಭಾರೀ ಏರಿಕೆ ಕಂಡಿತ್ತು. ಜನರು ಬೇರೆ ಯಾವುದೇ ಕ್ಷೇತ್ರಗಳಲ್ಲಿ ಹೂಡಿಕೆ ಮಾಡಲು ಅವಕಾಶ ಇರದ ಕಾರಣ ಚಿನ್ನದ ಮೇಲೆ ಹೂಡಿಕೆ ಮಾಡಿದ್ದು ಇದಕ್ಕೆ ಕಾರಣವಿರಬಹುದು ಎಂದು ವಿಶ್ಲೇಷಿಸಲಾಗಿತ್ತು. ಈಗ ಸುಮಾರು ಎಂಟು ತಿಂಗಳ ನಂತರದಲ್ಲಿ ಚಿನ್ನದ ದರ ಇಳಿಕೆ ಹಾದಿ ಹಿಡಿದಿದೆ.

ಬೆಂಗಳೂರಿನಲ್ಲಿ ಡಿಸೆಂಬರ್ 1ರಂದು ಆಭರಣ ಚಿನ್ನ 10 ಗ್ರಾಂಗೆ 200 ರೂಪಾಯಿ ಏರಿಕೆ ಕಂಡು ₹44,900 ರೂಪಾಯಿ ಆಗಿದೆ. ಇನ್ನು, ಶುದ್ಧ ಚಿನ್ನ 10 ಗ್ರಾಂಗೆ 200 ರೂಪಾಯಿ ಏರಿಕೆ ಕಾಣುವ ಮೂಲಕ 48,980 ರೂಪಾಯಿ ಆಗಿದೆ.

ಚಿನ್ನದ ಜೊತೆ ಇಳಿಕೆ ಹಾದಿ ಹಿಡಿದಿದ್ದ ಬೆಳ್ಳಿ ಬೆಲೆ ಕೂಡ ಮಂಗಳವಾರ ಭಾರೀ ಏರಿಕೆ ಕಂಡಿದೆ. ಕೆಜಿ ಬೆಳ್ಳಿ ಬೆಲೆ 1700 ರೂಪಾಯಿ ಜಿಗಿತ ಕಂಡು 60300 ರೂಪಾಯಿ ಆಗಿದೆ.

ಭಾರತದಲ್ಲಿ ಹಬ್ಬದ ಸಮಯದಲ್ಲಿ ಚಿನ್ನ ಖರೀದಿ ಜೋರಾಗಿರುತ್ತದೆ. ಇದೇ ಕಾರಣಕ್ಕೆ ಬೇಡಿಕೆ ಹೆಚ್ಚಾಗಿ, ಆಭರಣದ ದರ ಕೂಡ ಏರಿಕೆ ಕಾಣುವುದು ವಾಡಿಕೆ. ಆದರೆ, ಈ ಬಾರಿ ದೀಪಾವಳಿಯಂದು ಗ್ರಾಹಕರಿಗೆ ಖುಷಿ ಸುದ್ದಿ ಸಿಕ್ಕಿತ್ತು. ದೀಪಾವಳಿ ಹಬ್ಬದ ಸಯಮದಲ್ಲೂ ಚಿನ್ನದ ದರ ಇಳಿಕೆ ಕಂಡಿತ್ತು.

ಸಾಕಷ್ಟು ಅಂಶಗಳು ಚಿನ್ನದ ಬೆಲೆಯನ್ನು ನಿರ್ಧಾರ ಮಾಡುತ್ತವೆ. ಅಂತಾರಾಷ್ಟ್ರೀಯ ಮಾರುಕಟ್ಟೆ ಬೆಲೆ, ಚಿನ್ನದ ಮಾರುಕಟ್ಟೆ, ವ್ಯಾಪಾರ ಯುದ್ಧ, ಡಾಲರ್​ ಮೌಲ್ಯ ಸೇರಿ ಸಾಕಷ್ಟು ವಿಚಾರಗಳು ಚಿನ್ನದ ಬೆಲೆಯ ಏರಿಳಿತಕ್ಕೆ ನೇರ ಕಾರಣವಾಗುತ್ತವೆ. ಕೊರೋನಾ ವೈರಸ್​ ಬಂದ ಸಂದರ್ಭದಲ್ಲಿ ಜನರಿಗೆ ಹೂಡಿಕೆ ಮಾಡಲು ಯಾವುದೇ ಕ್ಷೇತ್ರಗಳು ಸಿಕ್ಕಿರಲಿಲ್ಲ. ಹೀಗಾಗಿ, ಚಿನ್ನದ ಮೇಲೆ ಹೂಡಿಕೆ ಮಾಡಲು ಮುಂದಾಗಿದ್ದರು. ಇದರಿಂದ ಸಹಜವಾಗಿಯೇ ಚಿನ್ನದ ದರದಲ್ಲಿ ಏರಿಕೆ ಕಂಡಿತ್ತು.

ಇದನ್ನೂ ಓದಿ: ಚಿನ್ನ ಖರೀದಿ ಮಾಡೋರಿಗೆ ಗುಡ್ ನ್ಯೂಸ್; ಐತಿಹಾಸಿಕ ಕುಸಿತ ಕಂಡ ಆಭರಣ ಬೆಲೆ

Follow Us
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ