AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Price Today: ಈ ವರ್ಷದಲ್ಲಿ ಮೊದಲ ಬಾರಿಗೆ ಭಾರತದಲ್ಲಿ ಚಿನ್ನದ ದರ ಇಳಿಕೆ

ಮೊದಲ ವಾರಕ್ಕೆ ಹೋಲಿಸಿದರೆ ಈ ವಾರದಲ್ಲಿ ವ್ಯಾಪಾರಸ್ಥರು 2 ಡಾಲರ್​ನಷ್ಟು ಚಿನ್ನಕ್ಕೆ ರಿಯಾಯತಿ ನೀಡಿದ್ದಾರೆ ಎಂದು ರಾಯಿಟರ್ಸ್​​ ಸುದ್ದಿ ಸಂಸ್ಥೆ ವರದಿ ಮಾಡಿದೆ.

Gold Price Today: ಈ ವರ್ಷದಲ್ಲಿ ಮೊದಲ ಬಾರಿಗೆ ಭಾರತದಲ್ಲಿ ಚಿನ್ನದ ದರ ಇಳಿಕೆ
ಚಿನ್ನಾಭರಣ (ಸಾಂದರ್ಭಿಕ ಚಿತ್ರ)
shruti hegde
|

Updated on:May 03, 2021 | 8:06 AM

Share

ಕೊವಿಡ್​19 ಸಾಂಕ್ರಾಮಿಕ ಕಾಯಿಲೆ ದೇಶದಾದ್ಯಂತ ಹೆಚ್ಚಾಗಿ ಹರಡುತ್ತಿದ್ದಂತೆಯೇ ಕೊರೊನಾ ತಡೆಯಲು ಸರ್ಕಾರ ಕೆಲವು ನಿರ್ಬಂಧಗಳನ್ನು ಹೇರಿದೆ. ಇದು ಚಿನ್ನದ ಬೇಡಿಕೆಯ ಮೇಲೂ ಪರಿಣಾಮ ಬೀರಿದ್ದು, ಸದ್ಯದ ಪರಿಸ್ಥಿತಿಯಲ್ಲಿ ಚಿನ್ನದ ದರ ಕಡಿಮೆಯಾಗಿದೆ.  ಮೇಲೆ ರಿಯಾಯತಿ ನೀಡಲಾಗಿದೆ. ಮೊದಲ ವಾರಕ್ಕೆ ಹೋಲಿಸಿದರೆ ಈ ವಾರದಲ್ಲಿ ವ್ಯಾಪಾರಸ್ಥರು 2 ಡಾಲರ್​ನಷ್ಟು ಚಿನ್ನದ ದರ ಕಡಿಮೆ ಮಾಡಿದ್ದಾರೆ ಎಂದು ರಾಯಿಟರ್ಸ್​​ ಸುದ್ದಿಸಂಸ್ಥೆ ವರದಿ ಮಾಡಿದೆ.

ಆಮದು ಮಾಡಿಕೊಳ್ಳುವ ಚಿನ್ನದ ಮೇಲೆ ಭಾರತದಲ್ಲಿ ಶೇ 10.57 ಆಮದು ಸುಂಕ ಮತ್ತು ಶೇ 3 ಜಿಎಸ್​ಟಿ ತೆರಿಗೆ ವಿಧಿಸಲಾಗುತ್ತದೆ. ಬಹುತೇಕ ಎಲ್ಲಾ ರಾಜ್ಯಗಳಲ್ಲಿಯೂ ಕೊವಿಡ್-​19 ನಿಯಂತ್ರಣಕ್ಕೆ ಸಂಬಂಧಿಸಿದ ನಿರ್ಬಂಧಗಳು ಇರುವುದಿಂದ ಚಿನ್ನಕ್ಕೆ ರಿಯಾಯತಿ ನೀಡಲಾಗಿದೆ ಎಂದು ಮುಂಬೈ ಮೂಲದ ವ್ಯಾಪರಿಯೊಬ್ಬರು ತಿಳಿಸಿದ್ದಾರೆ. ಕಳೆದ ಮಾರ್ಚ್​ ತಿಂಗಳಿನಲ್ಲಿ ಚಿನ್ನದ ಬೇಡಿಕೆಯು 140 ಟನ್​ಗಳಿಗೆ ಅಂದರೆ ಶೇ 37ರಷ್ಟು ಬೇಡಿಕೆ ಏರಿಕೆಯಾಗಿದೆ ಎಂದು ವರ್ಲ್ಡ್​ ಗೋಲ್ಡ್​ ಕೌನ್ಸಿಲ್​ ತಿಳಿಸಿದೆ.

ಮುಂಬರುವ ದಿನಗಳಲ್ಲಿ 10 ಗ್ರಾಂ ಚಿನ್ನದ ದರ ಶೇ 0.13ರಷ್ಟು ಹೆಚ್ಚಳವಾಗಿ, 46,785 ರೂಪಾಯಿ ಆಗುವ ಸಾಧ್ಯತೆ ಇದೆ. ಹಾಗೆಯೇ ಬೆಳ್ಳಿ ದರ 1 ಕೆಜಿಗೆ 68,423 ರೂಪಾಯಿಗೆ ಏರಿಕೆಯಾಗುವ ಸಾಧ್ಯತೆ ಇದೆ. ಪ್ರತಿ ತಿಂಗಳಿಗೂ ಭಾರತದಲ್ಲಿ 10 ಗ್ರಾಂ ಗೆ 1,800ರಂತೆ ದರ ಏರಿಕೆಯಾಗಿದೆ. ಮುಂಬರುವ ದಿನಗಳಲ್ಲಿ ಎಂಸಿಎಕ್ಸ್​ ಗೋಲ್ಡ್​ 49,000 ವರೆಗೂ ತಲುಪಬಹುದು. ಚಿನ್ನದ ದರ ಏರಿಳಿಕೆ ಹೊಂದಿದ್ದರೂ ಕೂಡಾ ಟ್ರೇಡರ್ಸ್,​ ಚಿನ್ನ ಖರೀದಿಗೆ ಮುಂದಾಗುತ್ತಾರೆ ಎಂದು ಎಂಸಿಎಕ್ಸ್​ ಗೋಲ್ಡ್​ ತಿಳಿಸಿದೆ. ಚಿನ್ನದ ಬೇಡಿಕೆ ಪ್ರತಿದಿನದ ಏರಿಳಿತದ ಮೇಲೆ ಅವಲಂಬಿತವಾಗಿದೆ.

ಇದನ್ನೂ ಓದಿ: Gold Rate Today: ಬೆಂಗಳೂರು ಸೇರಿ ವಿವಿಧ ನಗರಗಳಲ್ಲಿ ಚಿನ್ನದ ದರ ಇಳಿಕೆ, ಹೈದರಾಬಾದ್​ನಲ್ಲಿ ಏರಿದ ಚಿನ್ನದ ಬೆಲೆ; ಸಂಪೂರ್ಣ ವಿವರ ಇಲ್ಲಿದೆ

Published On - 2:10 pm, Sun, 2 May 21

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ