AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿನ್ನ ಕಳ್ಳ ಸಾಗಾಣಿಕೆ ಪ್ರಕರಣ: ಜಾರಿ ನಿರ್ದೇಶನಾಲಯದ ವಿರುದ್ಧ ಪೊಲೀಸ್ ತನಿಖೆಗೆ ತಡೆಯಾಜ್ಞೆ ನೀಡಲು ಕೇರಳ ಹೈಕೋರ್ಟ್ ನಕಾರ

Kerala High Court: ಕೇರಳ ಪೊಲೀಸರ ತನಿಖೆಗೆ ತಡೆಯಾಜ್ಞೆ ನೀಡಬೇಕು ಎಂದು ಹೇಳಿ ಜಾರಿ ನಿರ್ದೇಶನಾಲಯ ಹೈಕೋರ್ಟ್ ಮೊರೆ ಹೋಗಿತ್ತು. ಇಡಿ ಪರ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಹಾಜರಾಗಿದ್ದರು. ಮುಂದಿನ ವಿಚಾರಣೆಯನ್ನ ಏಪ್ರಿಲ್ 8ಕ್ಕೆ ಮುಂದೂಡಿದ ನ್ಯಾಯಾಲಯವು ಅಂದೇ ತೀರ್ಪು ಪ್ರಕಟಿಸಲಾಗುವುದು ಎಂದು ಹೇಳಿದೆ.

ಚಿನ್ನ ಕಳ್ಳ ಸಾಗಾಣಿಕೆ ಪ್ರಕರಣ: ಜಾರಿ ನಿರ್ದೇಶನಾಲಯದ ವಿರುದ್ಧ ಪೊಲೀಸ್ ತನಿಖೆಗೆ ತಡೆಯಾಜ್ಞೆ ನೀಡಲು ಕೇರಳ ಹೈಕೋರ್ಟ್ ನಕಾರ
ಕೇರಳ ಹೈಕೋರ್ಟ್
ರಶ್ಮಿ ಕಲ್ಲಕಟ್ಟ
|

Updated on: Mar 31, 2021 | 7:40 PM

Share

ತಿರುವನಂತಪುರಂ: ಚಿನ್ನ ಕಳ್ಳ ಸಾಗಾಣಿಕೆ ಪ್ರಕರಣದಲ್ಲಿ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೆಸರನ್ನು ಹೇಳುವಂತೆ  ಪ್ರಕರಣದ ಪ್ರಮುಖ ಆರೋಪಿ ಸ್ವಪ್ನಾ ಸುರೇಶ್ ಅವರನ್ನು ಒತ್ತಾಯಿಸಲಾಗಿದೆ ಎಂದು ಆರೋಪಿಸಿ ಜಾರಿ ನಿರ್ದೇಶನಾಲಯದ (ED) ಅಧಿಕಾರಿಗಳ ವಿರುದ್ಧ ಕೇರಳ ಪೊಲೀಸರ ಅಪರಾಧ ದಳ ಎಫ್ಐಆರ್ ದಾಖಲಿಸಿಕೊಂಡಿತ್ತು. ಈ ನಡೆಯನ್ನು ಪ್ರಶ್ನಿಸಿ ಜಾರಿ ನಿರ್ದೇಶನಾಲಯ ಸಲ್ಲಿಸಿದ ಅರ್ಜಿಯ ವಿಚಾರಣೆಯನ್ನು  ಬಂಧವಾರ ಕೈಗೆತ್ತಿಕೊಂಡ ಕೇರಳ ಹೈಕೋರ್ಟ್, ಕೇರಳ ಪೊಲೀಸರು ತನಿಖೆ ಮುಂದುವರಿಸಬಹುದು ಎಂದು ಹೇಳಿದೆ.

ಕೇರಳ ಪೊಲೀಸರ ತನಿಖೆಗೆ ತಡೆಯಾಜ್ಞೆ ನೀಡಬೇಕು ಎಂದು ಒತ್ತಾಯಿಸಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಹೈಕೋರ್ಟ್ ಮೊರೆ ಹೋಗಿದ್ದರು. ಇಡಿ ಪರ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಹಾಜರಾಗಿದ್ದರು. ಮುಂದಿನ ವಿಚಾರಣೆಯನ್ನ ಏಪ್ರಿಲ್ 8ಕ್ಕೆ ಮುಂದೂಡಿದ ನ್ಯಾಯಾಲಯವು ಅಂದೇ ತೀರ್ಪು ಪ್ರಕಟಿಸಲಾಗುವುದು ಎಂದು ಹೇಳಿದೆ. ಅದೇ ವೇಳೆ ಇಡಿ ಅಧಿಕಾರಿಗಳ ವಿರುದ್ಧ ಯಾವುದೇ ಕಠಿಣ ಕ್ರಮ ಇಲ್ಲವೇ ಅವರನ್ನು ಬಂಧಿಸುವ ಕಾರ್ಯ ಮಾಡಬಾರದು ಎಂದು ಹೈಕೋರ್ಟ್ ಅಪರಾಧ ದಳಕ್ಕೆ ನಿರ್ದೇಶನ ನೀಡಿದೆ.

ಮಾರ್ಚ್ ತಿಂಗಳ ಆರಂಭದಲ್ಲಿ ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಇಡಿ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಲು ಅನುಮತಿ ನೀಡಿದ್ದರು. ಪೊಲೀಸರು ದಾಖಲಿಸಿರುವ ಎಫ್​ಐಆರ್​ನ ವಿವರಗಳಂತೆ, ಕಳೆದ ವರ್ಷದ ಆಗಸ್ಟ್ 12 ಮತ್ತು 13ರಂದು ಸ್ವಪ್ನಾ ಸುರೇಶ್​ರನ್ನು ಪ್ರಶ್ನಿಸಿರುವ ಜಾರಿ ನಿರ್ದೇಶನಾಲಯ, ಮುಖ್ಯಮಂತ್ರಿ ವಿರುದ್ಧ ಸುಳ್ಳು ಹೇಳಿಕೆ ನೀಡುವಂತೆ ಒತ್ತಾಯಿಸಿದೆ. ಸುಳ್ಳು ಸಾಕ್ಷಿ ಸಿದ್ಧಪಡಿಸಲು ಜಾರಿ ನಿರ್ದೇಶನಾಲಯ ಹೀಗೆ ಮಾಡಿದೆ ಎಂದು ಹೇಳಲಾಗಿದೆ. ಸ್ವಪ್ನಾ ಸುರೇಶ್ ಅವರದು ಎನ್ನಲಾಗಿರುವ ಧ್ವನಿ ತುಣುಕೊಂದನ್ನು ಆಧರಿಸಿ ಜಾರಿ ನಿರ್ದೇಶನಾಲಯ ವಿರುದ್ಧ ಸೆಕ್ಷನ್ 120-ಬಿ, 167, 192, 195-ಎ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.

14.82 ಕೋಟಿ ಬೆಲೆಬಾಳುವ 30 ಕೆಜಿ ಚಿನ್ನ ಕಳ್ಳ ಸಾಗಾಣಿಕೆ ಆರೋಪದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಸ್ವಪ್ನಾ ಸುರೇಶ್ ಕೇರಳದಲ್ಲಿನ ಯುಎಇ ರಾಯಭಾರ ಕಚೇರಿಯ ಮಾಜಿ ಉದ್ಯೋಗಿಯಾಗಿದ್ದರು. ಕಳೆದ ಕೆಲವು ತಿಂಗಳ ಹಿಂದೆ ಹಂಚಿಕೆಯಾಗಿದ್ದ ಸ್ವಪ್ನಾ ಸುರೇಶ್​ಗೆ ಸಂಬಂಧಿಸಿದ್ದು ಎನ್ನಲಾಗಿರುವ ಧ್ವನಿ ತುಣುಕಿನಲ್ಲಿ, ಇಡಿ ಅಧಿಕಾರಿಗಳು ಮುಖ್ಯಮಂತ್ರಿ ಹಾಗೂ ಇತರ ಕೆಲವು ಸಚಿವರ ವಿರುದ್ಧ ಹೇಳಿಕೆ ನೀಡುವಂತೆ ಒತ್ತಾಯಿಸಿದ್ದಾರೆ ಎಂದು ಆರೋಪ ಕೇಳಿಬಂದಿದೆ.

ಅಷ್ಟೇ ಅಲ್ಲದೆ, ಇಡಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದ ವೇಳೆ ಸ್ವಪ್ನಾ ಸುರೇಶ್ ಜೊತೆಗಿದ್ದ ಇಬ್ಬರು ಮಹಿಳಾ ಪೊಲೀಸರು ಕೂಡ, ವಿಜಯನ್ ಹೆಸರು ಹೇಳುವಂತೆ ಸ್ವಪ್ನಾರನ್ನು ಒತ್ತಾಯಿಸಿದ್ದನ್ನು ಕೇಳಿದ್ದೇವೆ ಎಂದು ಹೇಳಿಕೆ ನೀಡಿದ್ದಾರೆ.  ಜಾರಿ ನಿರ್ದೇಶನಾಲಯ ಜೊತೆಗೆ ರಾಷ್ಟ್ರೀಯ ತನಿಖಾ ದಳ (NIA) ಹಾಗೂ ಕಸ್ಟಮ್ಸ್ ಅಧಿಕಾರಿಗಳು ಕೂಡ ಚಿನ್ನ ಕಳ್ಳ ಸಾಗಾಣಿಕೆ ಪ್ರಕರಣದ ವಿರುದ್ಧ ತನಿಖೆ ನಡೆಸುತ್ತಿದ್ದಾರೆ. ಕೇಂದ್ರದ ಏಜೆನ್ಸಿಗಳು ತಮ್ಮ ರಾಜ್ಯ ಸರ್ಕಾರವನ್ನು ಗುರಿಯಾಗಿಸಿ ಹೀಗೆ ಮಾಡುತ್ತಿದೆ ಎಂದು ಪಿಣರಾಯಿ ವಿಜಯನ್ ಆರೋಪಿಸಿದ್ದಾರೆ.

ಇದನ್ನೂ ಓದಿ:  ಪಿಣರಾಯಿ ವಿಜಯನ್ ಹೆಸರು ಹೇಳಲು ಸ್ವಪ್ನಾ ಸುರೇಶ್​ರನ್ನು ಒತ್ತಾಯಿಸಲಾಗಿದೆ: ED ವಿರುದ್ಧ ಪ್ರಕರಣ ದಾಖಲಿಸಿದ ಕೇರಳ ಪೊಲೀಸ್

ಬಳ್ಳಾರಿ ಗಲಭೆ: ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ಪವನ್?
ಬಳ್ಳಾರಿ ಗಲಭೆ: ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ಪವನ್?
ಟೈರ್ ಸ್ಪೋಟಗೊಂಡು ಮನೆಯ ಆವರಣಕ್ಕೆ ಹಾರಿ ಬಂದು ಬಿದ್ದ ಕಾರು
ಟೈರ್ ಸ್ಪೋಟಗೊಂಡು ಮನೆಯ ಆವರಣಕ್ಕೆ ಹಾರಿ ಬಂದು ಬಿದ್ದ ಕಾರು
ಗವಿ ಮಠದ ಜಾತ್ರೆಗೆ ರೆಡಿಯಾಗ್ತಿದೆ 10 ಲಕ್ಷ ರೂ. ವೆಚ್ಚದಲ್ಲಿ ಮೈಸೂರ್ ಪಾಕ್
ಗವಿ ಮಠದ ಜಾತ್ರೆಗೆ ರೆಡಿಯಾಗ್ತಿದೆ 10 ಲಕ್ಷ ರೂ. ವೆಚ್ಚದಲ್ಲಿ ಮೈಸೂರ್ ಪಾಕ್
ರಾಯಚೂರು: ಗೃಹಲಕ್ಷ್ಮಿ ಹಣದಲ್ಲಿ ಫ್ರಿಡ್ಜ್ ಖರೀದಿಸಿದ ಮಹಿಳೆ
ರಾಯಚೂರು: ಗೃಹಲಕ್ಷ್ಮಿ ಹಣದಲ್ಲಿ ಫ್ರಿಡ್ಜ್ ಖರೀದಿಸಿದ ಮಹಿಳೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ