AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುದನಾಳದಲ್ಲಿ ಚಿನ್ನವನ್ನಿಟ್ಟುಕೊಂಡು ಬಂದರೂ ಪಾರಾಗಲು ಸಾಧ್ಯವಾಗಲಿಲ್ಲ; ವ್ಯಕ್ತಿ ಅರೆಸ್ಟ್​, 810 ಗ್ರಾಂ ಬಂಗಾರ ವಶ

ಗುದನಾಳದಲ್ಲಿ ಚಿನ್ನ ಇಟ್ಟು ಸ್ಮಗ್ಲಿಂಗ್ ಮಾಡುವ ಪ್ರಕರಣಗಳು ಇತ್ತೀಚೆಗೆ ತುಂಬ ಏರಿಕೆಯಾಗುತ್ತಿವೆ. ಡಿಸೆಂಬರ್​ನಲ್ಲಿ ದುಬೈನಿಂದ ಬಂದ ಇಬ್ಬರು ಹೀಗೆ ಗುದನಾಳದಲ್ಲಿ ಚಿನ್ನದ ಪೇಸ್ಟ್ ತಂದಿದ್ದರು.

ಗುದನಾಳದಲ್ಲಿ ಚಿನ್ನವನ್ನಿಟ್ಟುಕೊಂಡು ಬಂದರೂ ಪಾರಾಗಲು ಸಾಧ್ಯವಾಗಲಿಲ್ಲ; ವ್ಯಕ್ತಿ ಅರೆಸ್ಟ್​, 810 ಗ್ರಾಂ ಬಂಗಾರ ವಶ
ವಶಪಡಿಸಿಕೊಳ್ಳಲಾದ ಚಿನ್ನದ ಬಂಡಲ್​ಗಳು
Follow us
TV9 Web
| Updated By: Lakshmi Hegde

Updated on: Jul 21, 2021 | 1:26 PM

ದುಬೈನಿಂದ ಚೆನ್ನೈಗೆ ತೆರಳುತ್ತಿದ್ದ ವ್ಯಕ್ತಿಯೊಬ್ಬ ತನ್ನ ಗುದನಾಳದಲ್ಲಿ 40 ಲಕ್ಷ ರೂ. ಮೌಲ್ಯದ 810 ಗ್ರಾಂ ಚಿನ್ನವನ್ನು ಸಾಗಿಸಲು ಪ್ರಯತ್ನಿಸಿ ಏರ್​ಪೋರ್ಟ್​ನ ಕಸ್ಟಮ್​ ಅಧಿಕಾರಿಗಳ ಬಳಿ ಸಿಕ್ಕಿಬಿದ್ದಿದ್ದಾನೆ. ದುಬೈನಿಂದ ಚೆನ್ನೈಗೆ ಪ್ರಯಾಣ ಮಾಡುತ್ತಿರುವ ವ್ಯಕ್ತಿಯೊಬ್ಬ ಚಿನ್ನವನ್ನು ಸ್ಮಗ್ಲಿಂಗ್ ಮಾಡುತ್ತಿದ್ದಾನೆ ಎಂದು ಕೇಂದ್ರೀಯ ಕಂದಾಯ ತನಿಖಾ ವಿಭಾಗಕ್ಕೆ ಮಾಹಿತಿ ಬಂದಿತ್ತು. ಹಾಗಾಗಿ ಚೆನ್ನೈ ಏರ್​ಪೋರ್ಟ್​​ನಲ್ಲಿ ಅಧಿಕಾರಿಗಳು ಪ್ರತಿಯೊಬ್ಬ ಪ್ರಯಾಣಿಕನನ್ನು ತಪಾಸಣೆಗೆ ಒಡ್ಡುತ್ತಿದ್ದರು.

ಕಸ್ಟಮ್ಸ್ ಅಧಿಕಾರಿಗಳ ಬಳಿ ಈತ ಸಿಕ್ಕಿಬಿದ್ದಿದ್ದಾನೆ. ಈತ ಗುದನಾಳದಲ್ಲಿ ಕೊಂಡೊಯ್ಯುತ್ತಿದ್ದ 24 ಕ್ಯಾರೆಟ್​ ಚಿನ್ನದ ಬೆಲೆ 40.35 ಲಕ್ಷ ಎಂದು ಏರ್​ಪೋರ್ಟ್ ಅಧಿಕಾರಿಗಳು ಮಾಹಿತಿ ನೀಡಿದ್ದು, ಸದ್ಯ ಆತ ಬಂಧಿತನಾಗಿದ್ದಾನೆ. ಇವನ ಗುದನಾಳದಿಂದ ಒಟ್ಟು 948 ಗ್ರಾಂ.ತೂಕದ 4 ಬಂಡಲ್​ಗಳಷ್ಟು ಗೋಲ್ಡ್ ಪೇಸ್ಟ್​ನ್ನು ಹೊರತೆಗೆಯಲಾಗಿದ್ದು, ಅದರಲ್ಲಿ 810 ಗ್ರಾಂ. 24 ಕ್ಯಾರೆಟ್​ ಚಿನ್ನವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ ಇನ್ನೂ ತನಿಖೆ ನಡೆಯುತ್ತಿದೆ.

ಗುದನಾಳದಲ್ಲಿ ಚಿನ್ನ ಇಟ್ಟು ಸ್ಮಗ್ಲಿಂಗ್ ಮಾಡುವ ಪ್ರಕರಣಗಳು ಇತ್ತೀಚೆಗೆ ತುಂಬ ಏರಿಕೆಯಾಗುತ್ತಿವೆ. ಡಿಸೆಂಬರ್​ನಲ್ಲಿ ದುಬೈನಿಂದ ಬಂದ ಇಬ್ಬರು ಹೀಗೆ ಗುದನಾಳದಲ್ಲಿ ಚಿನ್ನದ ಪೇಸ್ಟ್ ತಂದಿದ್ದರು. ಅವರಿಂದ 35.5 ಲಕ್ಷ ರೂ.ಮೌಲ್ಯದ 706 ಗ್ರಾಂ ಚಿನ್ನವನ್ನು ವಶಪಡಿಸಿಕೊಳ್ಳಲಾಗಿತ್ತು. ಹಾಗೇ, ಜನವರಿಯಲ್ಲೂ 17 ಮಂದಿ ಹೀಗೆ ಮಾಡಿದ್ದರು. ಈ ಎಲ್ಲರಿಂದ ಒಟ್ಟಾರೆ 3.93 ಕೋಟಿ ರೂ.ಬೆಲೆಯ ಚಿನ್ನವನ್ನು ಕಸ್ಟಮ್ಸ್​ ಅಧಿಕಾರಿಗಳು ವಶಪಡಿಸಿಕೊಂಡಿದ್ದರು.

ಇದನ್ನೂ ಓದಿ: Rashmika Mandanna: ಸೆಟ್ಟೇರಿತು ರಶ್ಮಿಕಾರ ಹೊಸ ತೆಲುಗು ಚಿತ್ರ; ತೆರೆ ಹಂಚಿಕೊಳ್ಳಲಿದ್ದಾರೆ ತೆಲುಗಿನ ಈ ಖ್ಯಾತ ನಟ!

Gold worth over 40 lakh Rupees has been seized from a man In Chennai

Live: ರಕ್ಷಣಾ, ವಿದೇಶಾಂಗ ಸಚಿವಾಲಯ ತುರ್ತು ಸುದ್ದಿಗೋಷ್ಠಿಯ ನೇರ ಪ್ರಸಾರ
Live: ರಕ್ಷಣಾ, ವಿದೇಶಾಂಗ ಸಚಿವಾಲಯ ತುರ್ತು ಸುದ್ದಿಗೋಷ್ಠಿಯ ನೇರ ಪ್ರಸಾರ
ಹೇಗಿದೆ ನೋಡಿ ‘ಭರ್ಜರಿ ಬ್ಯಾಚುಲರ್ಸ್​’ ಹಳ್ಳಿ ಜೀವನ; ಸಾರ್ಥಕತೆಯ ಭಾವನೆ
ಹೇಗಿದೆ ನೋಡಿ ‘ಭರ್ಜರಿ ಬ್ಯಾಚುಲರ್ಸ್​’ ಹಳ್ಳಿ ಜೀವನ; ಸಾರ್ಥಕತೆಯ ಭಾವನೆ
ಅಮೃತಸರ ಬಳಿ ಪಾಕಿಸ್ತಾನದ ಛಿದ್ರಗೊಂಡ ಡ್ರೋಣ್ ಪತ್ತೆ, ಪರಿಶೀಲನೆ
ಅಮೃತಸರ ಬಳಿ ಪಾಕಿಸ್ತಾನದ ಛಿದ್ರಗೊಂಡ ಡ್ರೋಣ್ ಪತ್ತೆ, ಪರಿಶೀಲನೆ
ಸಿಂಧೂರದ ಮಹತ್ವ ಹಾಗೂ ಇದರ ಹಿಂದಿನ ರಹಸ್ಯವೇನು ಗೊತ್ತಾ?
ಸಿಂಧೂರದ ಮಹತ್ವ ಹಾಗೂ ಇದರ ಹಿಂದಿನ ರಹಸ್ಯವೇನು ಗೊತ್ತಾ?
ಇಂದಿನ ದ್ವಾದಶ ರಾಶಿಗಳ ಫಲಾನುಫಲಗಳ ಬಗ್ಗೆ ಸಂಕ್ಷಿಪ್ತ ವಿವರ ಇಲ್ಲಿದೆ
ಇಂದಿನ ದ್ವಾದಶ ರಾಶಿಗಳ ಫಲಾನುಫಲಗಳ ಬಗ್ಗೆ ಸಂಕ್ಷಿಪ್ತ ವಿವರ ಇಲ್ಲಿದೆ
ಪಾಕ್​ ಡ್ರೋನ್​ ಆಕಾಶದಲ್ಲೇ ಉಡೀಸ್: ಭಯಾನಕ ಸೌಂಡ್​ಗೆ ಬೆಚ್ಚಿಬಿದ್ದ ಜಮ್ಮು
ಪಾಕ್​ ಡ್ರೋನ್​ ಆಕಾಶದಲ್ಲೇ ಉಡೀಸ್: ಭಯಾನಕ ಸೌಂಡ್​ಗೆ ಬೆಚ್ಚಿಬಿದ್ದ ಜಮ್ಮು
ಭಾರತೀಯ ಸೇನೆಯಿಂದ ಅಗ್ನಿವೀರರಿಗೆ ಕಠಿಣ ತರಬೇತಿ
ಭಾರತೀಯ ಸೇನೆಯಿಂದ ಅಗ್ನಿವೀರರಿಗೆ ಕಠಿಣ ತರಬೇತಿ
ಭಟಿಂಡಾ ಸೇನಾನೆಲೆ ಮೇಲೆ ದಾಳಿಯ ವಿಫಲಯತ್ನ ಪಾಕ್ ನಡೆಸಿದೆ: ವ್ಯೋಮಿಕಾ ಸಿಂಗ್
ಭಟಿಂಡಾ ಸೇನಾನೆಲೆ ಮೇಲೆ ದಾಳಿಯ ವಿಫಲಯತ್ನ ಪಾಕ್ ನಡೆಸಿದೆ: ವ್ಯೋಮಿಕಾ ಸಿಂಗ್
ತೆಲುಗಿನಲ್ಲಿ ಕನ್ನಡದ ನಟರಿಗೆ ಹೆಚ್ಚು ಸಂಬಳ ಸಿಗುತ್ತಾ? ಚಂದು ಗೌಡ ಉತ್ತರ
ತೆಲುಗಿನಲ್ಲಿ ಕನ್ನಡದ ನಟರಿಗೆ ಹೆಚ್ಚು ಸಂಬಳ ಸಿಗುತ್ತಾ? ಚಂದು ಗೌಡ ಉತ್ತರ
ಪಾಕಿಸ್ತಾನದಿಂದ ಮತ್ತೆ ಕದನ ವಿರಾಮ ಉಲ್ಲಂಘನೆ; ಉರಿಯಲ್ಲಿ ಗುಂಡಿನ ದಾಳಿ
ಪಾಕಿಸ್ತಾನದಿಂದ ಮತ್ತೆ ಕದನ ವಿರಾಮ ಉಲ್ಲಂಘನೆ; ಉರಿಯಲ್ಲಿ ಗುಂಡಿನ ದಾಳಿ