AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುದನಾಳದಲ್ಲಿ ಚಿನ್ನವನ್ನಿಟ್ಟುಕೊಂಡು ಬಂದರೂ ಪಾರಾಗಲು ಸಾಧ್ಯವಾಗಲಿಲ್ಲ; ವ್ಯಕ್ತಿ ಅರೆಸ್ಟ್​, 810 ಗ್ರಾಂ ಬಂಗಾರ ವಶ

ಗುದನಾಳದಲ್ಲಿ ಚಿನ್ನ ಇಟ್ಟು ಸ್ಮಗ್ಲಿಂಗ್ ಮಾಡುವ ಪ್ರಕರಣಗಳು ಇತ್ತೀಚೆಗೆ ತುಂಬ ಏರಿಕೆಯಾಗುತ್ತಿವೆ. ಡಿಸೆಂಬರ್​ನಲ್ಲಿ ದುಬೈನಿಂದ ಬಂದ ಇಬ್ಬರು ಹೀಗೆ ಗುದನಾಳದಲ್ಲಿ ಚಿನ್ನದ ಪೇಸ್ಟ್ ತಂದಿದ್ದರು.

ಗುದನಾಳದಲ್ಲಿ ಚಿನ್ನವನ್ನಿಟ್ಟುಕೊಂಡು ಬಂದರೂ ಪಾರಾಗಲು ಸಾಧ್ಯವಾಗಲಿಲ್ಲ; ವ್ಯಕ್ತಿ ಅರೆಸ್ಟ್​, 810 ಗ್ರಾಂ ಬಂಗಾರ ವಶ
ವಶಪಡಿಸಿಕೊಳ್ಳಲಾದ ಚಿನ್ನದ ಬಂಡಲ್​ಗಳು
TV9 Web
| Edited By: |

Updated on: Jul 21, 2021 | 1:26 PM

Share

ದುಬೈನಿಂದ ಚೆನ್ನೈಗೆ ತೆರಳುತ್ತಿದ್ದ ವ್ಯಕ್ತಿಯೊಬ್ಬ ತನ್ನ ಗುದನಾಳದಲ್ಲಿ 40 ಲಕ್ಷ ರೂ. ಮೌಲ್ಯದ 810 ಗ್ರಾಂ ಚಿನ್ನವನ್ನು ಸಾಗಿಸಲು ಪ್ರಯತ್ನಿಸಿ ಏರ್​ಪೋರ್ಟ್​ನ ಕಸ್ಟಮ್​ ಅಧಿಕಾರಿಗಳ ಬಳಿ ಸಿಕ್ಕಿಬಿದ್ದಿದ್ದಾನೆ. ದುಬೈನಿಂದ ಚೆನ್ನೈಗೆ ಪ್ರಯಾಣ ಮಾಡುತ್ತಿರುವ ವ್ಯಕ್ತಿಯೊಬ್ಬ ಚಿನ್ನವನ್ನು ಸ್ಮಗ್ಲಿಂಗ್ ಮಾಡುತ್ತಿದ್ದಾನೆ ಎಂದು ಕೇಂದ್ರೀಯ ಕಂದಾಯ ತನಿಖಾ ವಿಭಾಗಕ್ಕೆ ಮಾಹಿತಿ ಬಂದಿತ್ತು. ಹಾಗಾಗಿ ಚೆನ್ನೈ ಏರ್​ಪೋರ್ಟ್​​ನಲ್ಲಿ ಅಧಿಕಾರಿಗಳು ಪ್ರತಿಯೊಬ್ಬ ಪ್ರಯಾಣಿಕನನ್ನು ತಪಾಸಣೆಗೆ ಒಡ್ಡುತ್ತಿದ್ದರು.

ಕಸ್ಟಮ್ಸ್ ಅಧಿಕಾರಿಗಳ ಬಳಿ ಈತ ಸಿಕ್ಕಿಬಿದ್ದಿದ್ದಾನೆ. ಈತ ಗುದನಾಳದಲ್ಲಿ ಕೊಂಡೊಯ್ಯುತ್ತಿದ್ದ 24 ಕ್ಯಾರೆಟ್​ ಚಿನ್ನದ ಬೆಲೆ 40.35 ಲಕ್ಷ ಎಂದು ಏರ್​ಪೋರ್ಟ್ ಅಧಿಕಾರಿಗಳು ಮಾಹಿತಿ ನೀಡಿದ್ದು, ಸದ್ಯ ಆತ ಬಂಧಿತನಾಗಿದ್ದಾನೆ. ಇವನ ಗುದನಾಳದಿಂದ ಒಟ್ಟು 948 ಗ್ರಾಂ.ತೂಕದ 4 ಬಂಡಲ್​ಗಳಷ್ಟು ಗೋಲ್ಡ್ ಪೇಸ್ಟ್​ನ್ನು ಹೊರತೆಗೆಯಲಾಗಿದ್ದು, ಅದರಲ್ಲಿ 810 ಗ್ರಾಂ. 24 ಕ್ಯಾರೆಟ್​ ಚಿನ್ನವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ ಇನ್ನೂ ತನಿಖೆ ನಡೆಯುತ್ತಿದೆ.

ಗುದನಾಳದಲ್ಲಿ ಚಿನ್ನ ಇಟ್ಟು ಸ್ಮಗ್ಲಿಂಗ್ ಮಾಡುವ ಪ್ರಕರಣಗಳು ಇತ್ತೀಚೆಗೆ ತುಂಬ ಏರಿಕೆಯಾಗುತ್ತಿವೆ. ಡಿಸೆಂಬರ್​ನಲ್ಲಿ ದುಬೈನಿಂದ ಬಂದ ಇಬ್ಬರು ಹೀಗೆ ಗುದನಾಳದಲ್ಲಿ ಚಿನ್ನದ ಪೇಸ್ಟ್ ತಂದಿದ್ದರು. ಅವರಿಂದ 35.5 ಲಕ್ಷ ರೂ.ಮೌಲ್ಯದ 706 ಗ್ರಾಂ ಚಿನ್ನವನ್ನು ವಶಪಡಿಸಿಕೊಳ್ಳಲಾಗಿತ್ತು. ಹಾಗೇ, ಜನವರಿಯಲ್ಲೂ 17 ಮಂದಿ ಹೀಗೆ ಮಾಡಿದ್ದರು. ಈ ಎಲ್ಲರಿಂದ ಒಟ್ಟಾರೆ 3.93 ಕೋಟಿ ರೂ.ಬೆಲೆಯ ಚಿನ್ನವನ್ನು ಕಸ್ಟಮ್ಸ್​ ಅಧಿಕಾರಿಗಳು ವಶಪಡಿಸಿಕೊಂಡಿದ್ದರು.

ಇದನ್ನೂ ಓದಿ: Rashmika Mandanna: ಸೆಟ್ಟೇರಿತು ರಶ್ಮಿಕಾರ ಹೊಸ ತೆಲುಗು ಚಿತ್ರ; ತೆರೆ ಹಂಚಿಕೊಳ್ಳಲಿದ್ದಾರೆ ತೆಲುಗಿನ ಈ ಖ್ಯಾತ ನಟ!

Gold worth over 40 lakh Rupees has been seized from a man In Chennai

Follow Us
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು