AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುದನಾಳದಲ್ಲಿ ಚಿನ್ನವನ್ನಿಟ್ಟುಕೊಂಡು ಬಂದರೂ ಪಾರಾಗಲು ಸಾಧ್ಯವಾಗಲಿಲ್ಲ; ವ್ಯಕ್ತಿ ಅರೆಸ್ಟ್​, 810 ಗ್ರಾಂ ಬಂಗಾರ ವಶ

ಗುದನಾಳದಲ್ಲಿ ಚಿನ್ನ ಇಟ್ಟು ಸ್ಮಗ್ಲಿಂಗ್ ಮಾಡುವ ಪ್ರಕರಣಗಳು ಇತ್ತೀಚೆಗೆ ತುಂಬ ಏರಿಕೆಯಾಗುತ್ತಿವೆ. ಡಿಸೆಂಬರ್​ನಲ್ಲಿ ದುಬೈನಿಂದ ಬಂದ ಇಬ್ಬರು ಹೀಗೆ ಗುದನಾಳದಲ್ಲಿ ಚಿನ್ನದ ಪೇಸ್ಟ್ ತಂದಿದ್ದರು.

ಗುದನಾಳದಲ್ಲಿ ಚಿನ್ನವನ್ನಿಟ್ಟುಕೊಂಡು ಬಂದರೂ ಪಾರಾಗಲು ಸಾಧ್ಯವಾಗಲಿಲ್ಲ; ವ್ಯಕ್ತಿ ಅರೆಸ್ಟ್​, 810 ಗ್ರಾಂ ಬಂಗಾರ ವಶ
ವಶಪಡಿಸಿಕೊಳ್ಳಲಾದ ಚಿನ್ನದ ಬಂಡಲ್​ಗಳು
TV9 Web
| Edited By: |

Updated on: Jul 21, 2021 | 1:26 PM

Share

ದುಬೈನಿಂದ ಚೆನ್ನೈಗೆ ತೆರಳುತ್ತಿದ್ದ ವ್ಯಕ್ತಿಯೊಬ್ಬ ತನ್ನ ಗುದನಾಳದಲ್ಲಿ 40 ಲಕ್ಷ ರೂ. ಮೌಲ್ಯದ 810 ಗ್ರಾಂ ಚಿನ್ನವನ್ನು ಸಾಗಿಸಲು ಪ್ರಯತ್ನಿಸಿ ಏರ್​ಪೋರ್ಟ್​ನ ಕಸ್ಟಮ್​ ಅಧಿಕಾರಿಗಳ ಬಳಿ ಸಿಕ್ಕಿಬಿದ್ದಿದ್ದಾನೆ. ದುಬೈನಿಂದ ಚೆನ್ನೈಗೆ ಪ್ರಯಾಣ ಮಾಡುತ್ತಿರುವ ವ್ಯಕ್ತಿಯೊಬ್ಬ ಚಿನ್ನವನ್ನು ಸ್ಮಗ್ಲಿಂಗ್ ಮಾಡುತ್ತಿದ್ದಾನೆ ಎಂದು ಕೇಂದ್ರೀಯ ಕಂದಾಯ ತನಿಖಾ ವಿಭಾಗಕ್ಕೆ ಮಾಹಿತಿ ಬಂದಿತ್ತು. ಹಾಗಾಗಿ ಚೆನ್ನೈ ಏರ್​ಪೋರ್ಟ್​​ನಲ್ಲಿ ಅಧಿಕಾರಿಗಳು ಪ್ರತಿಯೊಬ್ಬ ಪ್ರಯಾಣಿಕನನ್ನು ತಪಾಸಣೆಗೆ ಒಡ್ಡುತ್ತಿದ್ದರು.

ಕಸ್ಟಮ್ಸ್ ಅಧಿಕಾರಿಗಳ ಬಳಿ ಈತ ಸಿಕ್ಕಿಬಿದ್ದಿದ್ದಾನೆ. ಈತ ಗುದನಾಳದಲ್ಲಿ ಕೊಂಡೊಯ್ಯುತ್ತಿದ್ದ 24 ಕ್ಯಾರೆಟ್​ ಚಿನ್ನದ ಬೆಲೆ 40.35 ಲಕ್ಷ ಎಂದು ಏರ್​ಪೋರ್ಟ್ ಅಧಿಕಾರಿಗಳು ಮಾಹಿತಿ ನೀಡಿದ್ದು, ಸದ್ಯ ಆತ ಬಂಧಿತನಾಗಿದ್ದಾನೆ. ಇವನ ಗುದನಾಳದಿಂದ ಒಟ್ಟು 948 ಗ್ರಾಂ.ತೂಕದ 4 ಬಂಡಲ್​ಗಳಷ್ಟು ಗೋಲ್ಡ್ ಪೇಸ್ಟ್​ನ್ನು ಹೊರತೆಗೆಯಲಾಗಿದ್ದು, ಅದರಲ್ಲಿ 810 ಗ್ರಾಂ. 24 ಕ್ಯಾರೆಟ್​ ಚಿನ್ನವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ ಇನ್ನೂ ತನಿಖೆ ನಡೆಯುತ್ತಿದೆ.

ಗುದನಾಳದಲ್ಲಿ ಚಿನ್ನ ಇಟ್ಟು ಸ್ಮಗ್ಲಿಂಗ್ ಮಾಡುವ ಪ್ರಕರಣಗಳು ಇತ್ತೀಚೆಗೆ ತುಂಬ ಏರಿಕೆಯಾಗುತ್ತಿವೆ. ಡಿಸೆಂಬರ್​ನಲ್ಲಿ ದುಬೈನಿಂದ ಬಂದ ಇಬ್ಬರು ಹೀಗೆ ಗುದನಾಳದಲ್ಲಿ ಚಿನ್ನದ ಪೇಸ್ಟ್ ತಂದಿದ್ದರು. ಅವರಿಂದ 35.5 ಲಕ್ಷ ರೂ.ಮೌಲ್ಯದ 706 ಗ್ರಾಂ ಚಿನ್ನವನ್ನು ವಶಪಡಿಸಿಕೊಳ್ಳಲಾಗಿತ್ತು. ಹಾಗೇ, ಜನವರಿಯಲ್ಲೂ 17 ಮಂದಿ ಹೀಗೆ ಮಾಡಿದ್ದರು. ಈ ಎಲ್ಲರಿಂದ ಒಟ್ಟಾರೆ 3.93 ಕೋಟಿ ರೂ.ಬೆಲೆಯ ಚಿನ್ನವನ್ನು ಕಸ್ಟಮ್ಸ್​ ಅಧಿಕಾರಿಗಳು ವಶಪಡಿಸಿಕೊಂಡಿದ್ದರು.

ಇದನ್ನೂ ಓದಿ: Rashmika Mandanna: ಸೆಟ್ಟೇರಿತು ರಶ್ಮಿಕಾರ ಹೊಸ ತೆಲುಗು ಚಿತ್ರ; ತೆರೆ ಹಂಚಿಕೊಳ್ಳಲಿದ್ದಾರೆ ತೆಲುಗಿನ ಈ ಖ್ಯಾತ ನಟ!

Gold worth over 40 lakh Rupees has been seized from a man In Chennai

Follow Us
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?