AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುದನಾಳದಲ್ಲಿ ಚಿನ್ನವನ್ನಿಟ್ಟುಕೊಂಡು ಬಂದರೂ ಪಾರಾಗಲು ಸಾಧ್ಯವಾಗಲಿಲ್ಲ; ವ್ಯಕ್ತಿ ಅರೆಸ್ಟ್​, 810 ಗ್ರಾಂ ಬಂಗಾರ ವಶ

ಗುದನಾಳದಲ್ಲಿ ಚಿನ್ನ ಇಟ್ಟು ಸ್ಮಗ್ಲಿಂಗ್ ಮಾಡುವ ಪ್ರಕರಣಗಳು ಇತ್ತೀಚೆಗೆ ತುಂಬ ಏರಿಕೆಯಾಗುತ್ತಿವೆ. ಡಿಸೆಂಬರ್​ನಲ್ಲಿ ದುಬೈನಿಂದ ಬಂದ ಇಬ್ಬರು ಹೀಗೆ ಗುದನಾಳದಲ್ಲಿ ಚಿನ್ನದ ಪೇಸ್ಟ್ ತಂದಿದ್ದರು.

ಗುದನಾಳದಲ್ಲಿ ಚಿನ್ನವನ್ನಿಟ್ಟುಕೊಂಡು ಬಂದರೂ ಪಾರಾಗಲು ಸಾಧ್ಯವಾಗಲಿಲ್ಲ; ವ್ಯಕ್ತಿ ಅರೆಸ್ಟ್​, 810 ಗ್ರಾಂ ಬಂಗಾರ ವಶ
ವಶಪಡಿಸಿಕೊಳ್ಳಲಾದ ಚಿನ್ನದ ಬಂಡಲ್​ಗಳು
TV9 Web
| Updated By: Lakshmi Hegde|

Updated on: Jul 21, 2021 | 1:26 PM

Share

ದುಬೈನಿಂದ ಚೆನ್ನೈಗೆ ತೆರಳುತ್ತಿದ್ದ ವ್ಯಕ್ತಿಯೊಬ್ಬ ತನ್ನ ಗುದನಾಳದಲ್ಲಿ 40 ಲಕ್ಷ ರೂ. ಮೌಲ್ಯದ 810 ಗ್ರಾಂ ಚಿನ್ನವನ್ನು ಸಾಗಿಸಲು ಪ್ರಯತ್ನಿಸಿ ಏರ್​ಪೋರ್ಟ್​ನ ಕಸ್ಟಮ್​ ಅಧಿಕಾರಿಗಳ ಬಳಿ ಸಿಕ್ಕಿಬಿದ್ದಿದ್ದಾನೆ. ದುಬೈನಿಂದ ಚೆನ್ನೈಗೆ ಪ್ರಯಾಣ ಮಾಡುತ್ತಿರುವ ವ್ಯಕ್ತಿಯೊಬ್ಬ ಚಿನ್ನವನ್ನು ಸ್ಮಗ್ಲಿಂಗ್ ಮಾಡುತ್ತಿದ್ದಾನೆ ಎಂದು ಕೇಂದ್ರೀಯ ಕಂದಾಯ ತನಿಖಾ ವಿಭಾಗಕ್ಕೆ ಮಾಹಿತಿ ಬಂದಿತ್ತು. ಹಾಗಾಗಿ ಚೆನ್ನೈ ಏರ್​ಪೋರ್ಟ್​​ನಲ್ಲಿ ಅಧಿಕಾರಿಗಳು ಪ್ರತಿಯೊಬ್ಬ ಪ್ರಯಾಣಿಕನನ್ನು ತಪಾಸಣೆಗೆ ಒಡ್ಡುತ್ತಿದ್ದರು.

ಕಸ್ಟಮ್ಸ್ ಅಧಿಕಾರಿಗಳ ಬಳಿ ಈತ ಸಿಕ್ಕಿಬಿದ್ದಿದ್ದಾನೆ. ಈತ ಗುದನಾಳದಲ್ಲಿ ಕೊಂಡೊಯ್ಯುತ್ತಿದ್ದ 24 ಕ್ಯಾರೆಟ್​ ಚಿನ್ನದ ಬೆಲೆ 40.35 ಲಕ್ಷ ಎಂದು ಏರ್​ಪೋರ್ಟ್ ಅಧಿಕಾರಿಗಳು ಮಾಹಿತಿ ನೀಡಿದ್ದು, ಸದ್ಯ ಆತ ಬಂಧಿತನಾಗಿದ್ದಾನೆ. ಇವನ ಗುದನಾಳದಿಂದ ಒಟ್ಟು 948 ಗ್ರಾಂ.ತೂಕದ 4 ಬಂಡಲ್​ಗಳಷ್ಟು ಗೋಲ್ಡ್ ಪೇಸ್ಟ್​ನ್ನು ಹೊರತೆಗೆಯಲಾಗಿದ್ದು, ಅದರಲ್ಲಿ 810 ಗ್ರಾಂ. 24 ಕ್ಯಾರೆಟ್​ ಚಿನ್ನವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ ಇನ್ನೂ ತನಿಖೆ ನಡೆಯುತ್ತಿದೆ.

ಗುದನಾಳದಲ್ಲಿ ಚಿನ್ನ ಇಟ್ಟು ಸ್ಮಗ್ಲಿಂಗ್ ಮಾಡುವ ಪ್ರಕರಣಗಳು ಇತ್ತೀಚೆಗೆ ತುಂಬ ಏರಿಕೆಯಾಗುತ್ತಿವೆ. ಡಿಸೆಂಬರ್​ನಲ್ಲಿ ದುಬೈನಿಂದ ಬಂದ ಇಬ್ಬರು ಹೀಗೆ ಗುದನಾಳದಲ್ಲಿ ಚಿನ್ನದ ಪೇಸ್ಟ್ ತಂದಿದ್ದರು. ಅವರಿಂದ 35.5 ಲಕ್ಷ ರೂ.ಮೌಲ್ಯದ 706 ಗ್ರಾಂ ಚಿನ್ನವನ್ನು ವಶಪಡಿಸಿಕೊಳ್ಳಲಾಗಿತ್ತು. ಹಾಗೇ, ಜನವರಿಯಲ್ಲೂ 17 ಮಂದಿ ಹೀಗೆ ಮಾಡಿದ್ದರು. ಈ ಎಲ್ಲರಿಂದ ಒಟ್ಟಾರೆ 3.93 ಕೋಟಿ ರೂ.ಬೆಲೆಯ ಚಿನ್ನವನ್ನು ಕಸ್ಟಮ್ಸ್​ ಅಧಿಕಾರಿಗಳು ವಶಪಡಿಸಿಕೊಂಡಿದ್ದರು.

ಇದನ್ನೂ ಓದಿ: Rashmika Mandanna: ಸೆಟ್ಟೇರಿತು ರಶ್ಮಿಕಾರ ಹೊಸ ತೆಲುಗು ಚಿತ್ರ; ತೆರೆ ಹಂಚಿಕೊಳ್ಳಲಿದ್ದಾರೆ ತೆಲುಗಿನ ಈ ಖ್ಯಾತ ನಟ!

Gold worth over 40 lakh Rupees has been seized from a man In Chennai

ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ಭಾರತಕ್ಕೆ ಬಂದ ಗೆಳೆಯ ಪುಟಿನ್​ಗೆ ಪ್ರಧಾನಿ ಮೋದಿಯ ಅಪ್ಪುಗೆಯ ಸ್ವಾಗತ
ಭಾರತಕ್ಕೆ ಬಂದ ಗೆಳೆಯ ಪುಟಿನ್​ಗೆ ಪ್ರಧಾನಿ ಮೋದಿಯ ಅಪ್ಪುಗೆಯ ಸ್ವಾಗತ