AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Cyclone Asani: ಆಂಧ್ರದ ಕರಾವಳಿಗೆ ತೇಲಿ ಬಂದ ಚಿನ್ನದ ತೇರು, ರಥ ನೋಡಲು ಜನಸಂದಣಿ

ಥಾಯ್ಲೆಂಡ್ ಅಥವಾ ಮ್ಯಾನ್ಮಾರ್​ನಿಂದ ಈ ರಥ ತೇಲಿ ಬಂದಿರಬಹುದು ಎಂದು ಊಹಿಸಲಾಗಿದೆ.

Cyclone Asani: ಆಂಧ್ರದ ಕರಾವಳಿಗೆ ತೇಲಿ ಬಂದ ಚಿನ್ನದ ತೇರು, ರಥ ನೋಡಲು ಜನಸಂದಣಿ
ಸಮುದ್ರದಲ್ಲಿ ತೇಲಿ ಬಂದ ಚಿನ್ನದ ತೇರು
TV9 Web
| Edited By: |

Updated on:May 11, 2022 | 2:15 PM

Share

ಶ್ರೀಕಾಕುಳಂ: ಆಂಧ್ರ ಪ್ರದೇಶದ ಶ್ರೀಕಾಕುಳಂ ಜಿಲ್ಲೆಯ ಸುನ್ನಪಲ್ಲಿ ಗ್ರಾಮಸ್ಥರು ಕಡಲಿನಲ್ಲಿ ತೇಲಿ ಬಂದ ಚಿನ್ನದ ತೇರು ಕಂಡು ಅಚ್ಚರಿಗೊಂಡರು. ಥಾಯ್ಲೆಂಡ್ ಅಥವಾ ಮ್ಯಾನ್ಮಾರ್​ನಿಂದ ಈ ರಥ ತೇಲಿ ಬಂದಿರಬಹುದು ಎಂದು ಊಹಿಸಲಾಗಿದೆ. ಅಸನಿ ಚಂಡಮಾರುತ ಪ್ರಭಾವದಿಂದ ಸಮುದ್ರದಲ್ಲಿ ಎತ್ತರದ ಅಲೆಗಳು ಕಾಣಿಸಿಕೊಂಡಿವೆ. ಸಮುದ್ರದ ತೀರದಲ್ಲಿರುವ ಯಾವುದಾದರೂ ದೇವಸ್ಥಾನಕ್ಕೆ ಅಲೆಗಳು ಅಪ್ಪಳಿಸಿರಬಹುದು, ಆಗ ಅಲ್ಲಿದ್ದ ರಥ ಸಮುದ್ರಕ್ಕೆ ಬಂದಿರಬಹುದು ಎಂದು ಮೀನುಗಾರರು ಮತ್ತು ಅಧಿಕಾರಿಗಳು ಅಭಿಪ್ರಾಯಪಟ್ಟಿದ್ದಾರೆ.

ಅಸನಿ ಚಂಡಮಾರುತ ಕುರಿತು ಇನ್ನಷ್ಟು ಮಾಹಿತಿಗೆ ಲಿಂಕ್ ಕ್ಲಿಕ್ ಮಾಡಿ

ಸಮುದ್ರದಲ್ಲಿ ರಥವು ತೇಲುತ್ತಿರುವ ದೃಶ್ಯವಿರುವ ವಿಡಿಯೊ ವೈರಲ್ ಆಗಿದೆ. ಸ್ಥಳೀಯ ಮೀನುಗಾರರು ಹಗ್ಗ ಕಟ್ಟಿ ರಥವನ್ನು ಸಮುದ್ರದಿಂದ ದಡಕ್ಕೆ ಎಳೆದು ತಂದರು. ಸಮುದ್ರದಲ್ಲಿ ತೇಲಿ ಬಂದ ತೇರು ನೋಡಲು ಅಕ್ಕಪಕ್ಕದ ಹಳ್ಳಿಗಳ ನೂರು ಮಂದಿ ನೆರೆದಿದ್ದರು. ಅಂಡಮಾನ್​ ಸಮೀಪ ಇರುವ ಯಾವುದಾದರೂ ಬೌದ್ಧ ಚೈತ್ಯಾಲಯಕ್ಕೆ ಈ ತೇರು ಸೇರಿರಬಹುದು. ಬಹುಶಃ ಮ್ಯಾನ್ಮಾರ್, ಥಾಯ್ಲೆಂಡ್, ಮಲೇಷಿಯಾ ಅಥವಾ ಇಂಡೋನೇಷಿಯಾದಿಂದ ಈ ರಥ ಕೊಚ್ಚಿಕೊಂಡು ಬಂದಿರಬಹುದು ಎಂದು ಹೇಳಲಾಗಿದೆ. ಈ ಸಂಬಂಧ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ರಥವನ್ನು ಪರಿಶೀಲಿಸಲಾಗುತ್ತಿದೆ.

ಇದು ಬೇರೆ ದೇಶದಿಂದ ಬಂದಿರುವ ಸಾಧ್ಯತೆ ಕಡಿಮೆ ಎಂಬ ವಾದವೂ ಚಾಲ್ತಿಯಲ್ಲಿದೆ. ‘ಇದು ಸ್ಥಳೀಯ ನಿರ್ಮಾಣವಾಗಿರುವ ಸಾಧ್ಯತೆಯನ್ನು ತಳ್ಳಿಹಾಕಲು ಆಗುವುದಿಲ್ಲ. ಯಾವುದಾದರೂ ಸಿನಿಮಾ ನಿರ್ಮಾಣ ಸಂಸ್ಥೆಯು ರಥವನ್ನು ನಿರ್ಮಿಸಿ ಶೂಟಿಂಗ್​ಗೆಂದು ಬಳಸುತ್ತಿರುವಾಗ ಇದ್ದಕ್ಕಿದ್ದಂತೆ ಸಮುದ್ರದಲ್ಲಿ ಅಲೆಗಳು ತೇಲಿ ಬಂದು ತೇರು ಕೊಚ್ಚಿ ಹೋಗಿರಬಹುದು’ ಎಂದು ತಹಶೀಲ್ದಾರ್ ಜೆ.ಚಲಮಯ್ಯ ಅಭಿಪ್ರಾಯಪಟ್ಟಿದ್ದಾರೆ.

ಅಸನಿ ಚಂಡಮಾರುತ ಪ್ರಭಾವದಿಂದ ಆಂಧ್ರದಲ್ಲಿ ಕಳೆದ ಕೆಲ ದಿನಗಳಿಂದ ಭಾರೀ ಮಳೆಯಾಗುತ್ತಿದೆ. ಆಂಧ್ರ ಕರಾವಳಿಯಲ್ಲಿ ಕಟ್ಟೆಚ್ಚರ ಘೋಷಿಸಲಾಗಿದೆ. ಕೃಷ್ಣ, ಗುಂಟೂರು, ಕಾಕಿನಾಡ, ಕೋನಸೀಮಾ, ಪಶ್ಚಿಮ ಗೋದಾವರಿ, ಪೂರ್ವ ಗೋದಾವರಿ ಮತ್ತು ವಿಶಾಖಪಟ್ಟಣ ಜಿಲ್ಲೆಗಳಲ್ಲಿ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಗಂಟೆಗೆ 75ರಿಂದ 95 ಕಿಮೀ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆಯಿದೆ. ಬಾಧಿತ ಜಿಲ್ಲೆಗಳಲ್ಲಿ ಅಧಿಕಾರಿಗಳು ಕಂಟ್ರೋಲ್​ ರೂಮ್​ಗಳನ್ನು ಸ್ಥಾಪಿಸಿದ್ದಾರೆ. ತಗ್ಗು ಪ್ರದೇಶದಲ್ಲಿ ವಾಸಿಸುತ್ತಿರುವವರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ.

ತೆಲುಗು ಭಾಷೆಯಲ್ಲಿ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: ಬೇಲೂರು ಚನ್ನಕೇಶವ ಸ್ವಾಮಿ ತೇರು: ಸಂಪ್ರದಾಯದಂತೆ ಕುರಾನ್ ಪಠಣಕ್ಕೆ ಅವಕಾಶ ಕೊಟ್ಟ ಸರ್ಕಾರ

Published On - 2:14 pm, Wed, 11 May 22

‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ