Sign In

By signing in or creating an account, you agree with Associated Broadcasting Company's Terms & Conditions and Privacy Policy.

Nashik: ಒಂದು ಕೆಜಿ ಮೋದಕದ ಬೆಲೆ ಬರೋಬ್ಬರಿ 12,000 ರೂ.; ಅದೆಂತಾ ವಿಶೇಷ ಮೋದಕ ಗೊತ್ತಾ?

ಗಣಪ ಮೋದಕ ಪ್ರಿಯ ಎಂಬುದು ಪುರಾಣದಲ್ಲೇ ಉಲ್ಲೇಖವಾಗಿದೆ. ಹಾಗಾಗಿ ಗಣೇಶ ಚತುರ್ಥಿಯಂದು ವಿವಿಧ ರೀತಿಯ ಮೋದಕಗಳನ್ನು ತಯಾರಿಸುವುದು ಸಾಮಾನ್ಯ.

Nashik: ಒಂದು ಕೆಜಿ ಮೋದಕದ ಬೆಲೆ ಬರೋಬ್ಬರಿ 12,000 ರೂ.; ಅದೆಂತಾ ವಿಶೇಷ ಮೋದಕ ಗೊತ್ತಾ?
ಗೋಲ್ಡನ್​ ಮೋದಕ
Follow us
TV9 Web
| Updated By: Lakshmi Hegde

Updated on: Sep 19, 2021 | 6:05 PM

ನಾಸಿಕ್: ಯಾವುದೇ ಹಬ್ಬವಿರಲಿ ಅಲ್ಲಿ ಸಿಹಿತಿಂಡಿ ಇರಲೇಬೇಕು. ಅದರಲ್ಲೂ ಗಣೇಶ ಚೌತಿಯಂತೂ ಸಿಹಿ ತಿಂಡಿಗೇ ಹೆಸರಾದ ಹಬ್ಬ. ಮಹಾರಾಷ್ಟ್ರದಲ್ಲಿ ಈ ಗಣೇಶನ ಹಬ್ಬದ ಸಂಭ್ರಮ ಇನ್ನೂ ಮುಗಿದಿಲ್ಲ. ಸುಮಾರು 10 ದಿನಗಳ ಕಾಲ ಗಣೇಶ ಚತುರ್ಥಿ ಸಂಭ್ರಮ, ಹಾಡು, ಗಣೇಶನಿಗೆ ಪೂಜೆ ಇದ್ದೇ ಇರುತ್ತದೆ. ಇದೀಗ ಈ ವರ್ಷ ನಾಸಿಕ್​​ನಲ್ಲಿರುವ ಒಂದು ಸಿಹಿತಿಂಡಿಯ ಅಂಗಡಿ ಒಂದು ವಿಶೇಷ ಮೋದಕವನ್ನು ಮಾರಾಟ ಮಾಡುತ್ತಿದೆ. ಅದೆಷ್ಟು ದುಬಾರಿಯೆಂದರೆ, ಒಂದು ಕೆಜೆ ಮೋದಕದ ಬೆಲೆ ಬರೋಬ್ಬರಿ 12,000 ರೂ. !

ಗಣಪ ಮೋದಕ ಪ್ರಿಯ ಎಂಬುದು ಪುರಾಣದಲ್ಲೇ ಉಲ್ಲೇಖವಾಗಿದೆ. ಹಾಗಾಗಿ ಗಣೇಶ ಚತುರ್ಥಿಯಂದು ವಿವಿಧ ರೀತಿಯ ಮೋದಕಗಳನ್ನು ತಯಾರಿಸುವುದು ಸಾಮಾನ್ಯ. ಅದರಲ್ಲಿ ಮುಖ್ಯವಾಗಿ ಗಣೇಶನಿಗಾಗಿ ಚಾಕಲೇಟ್​, ಕೇಸರಿ, ಕಾಜು, ಮೋತಿಚೂರ್​ ಮತ್ತು ಖೋಯಾ ಮೋದಕಗಳು ತಯಾರಾಗುತ್ತವೆ.  ಆದರೆ ಈ ಸಾಗರ್​ ಸ್ವೀಟ್ಸ್​ ಎಂಬ ಅಂಗಡಿ ಮಾರುತ್ತಿರುವ ಮೋದಕದ ಹೆಸರು ಗೋಲ್ಡನ್​ ಮೋದಕ್​ (ಬಂಗಾರದ ಮೋದಕ). ಈ ಅಂಗಡಿ ಸುಮಾರು 26 ವಿಧದ ಮೋದಕಗಳನ್ನು ತಯಾರಿಸಿ ಮಾರಾಟ ಮಾಡುತ್ತಿದ್ದು, ಅದರಲ್ಲಿ ಬಂಗಾರದ ಮೋದಕ ಹೆಚ್ಚಿನ ಹಣ ಗಳಿಸುತ್ತಿದೆ. ಎಡಿಬಲ್​ ಬಂಗಾರದ ಮೋದಕವನ್ನು ಜನರು ತುಂಬ ಖುಷಿಯಿಂದ ಖರೀದಿಸುತ್ತಿದ್ದಾರೆ. ಅದರೊಂದಿಗೆ ಎಡಿಬಲ್​ ಬೆಳ್ಳಿ ಮೋದಕವೂ ಸಹ ಈ ಅಂಗಡಿಯಲ್ಲಿ ಮಾರಾಟಕ್ಕಿದ್ದು, ಅದರ ಬೆಲೆ ಕೆಜಿಗೆ 1460 ರೂಪಾಯಿ.

ಮೋದಕದ ಬಗ್ಗೆ ಪ್ರತಿಕ್ರಿಯೆ ನೀಡಿದ ಅಂಗಡಿ ಮಾಲೀಕ ದೀಪಕ್ ಚೌಧರಿ, ಈ ಬಂಗಾರದ ಮೋದಕಕ್ಕೆ ಒಳ್ಳೆಯ ಪ್ರತಿಕ್ರಿಯೆ ಬಂದಿದೆ. ಭರ್ಜರಿ ಮಾರಾಟವಾಗುತ್ತಿದೆ. ಉಳಿದ 25 ವಿಧದ ಮೋದಕಕ್ಕಿಂತಲೂ ಇದೇ ಸಿಕ್ಕಾಪಟೆ ಸೇಲ್​ ಆಗುತ್ತಿದೆ ಎಂದಿದ್ದಾರೆ.

ಇದನ್ನೂ ಓದಿ: Dairy Milk: 1990ರ ಡೈರಿಮಿಲ್ಕ್ ಚಾಕೊಲೇಟ್ ಜಾಹೀರಾತು ಹೊಸ ರೂಪದಲ್ಲಿ ಬಿಡುಗಡೆ! ಮನಸೋತ ನೆಟ್ಟಿಗರು

ಮಹಾತ್ಮಾ ಗಾಂಧೀಜಿ ಕುರಿತು ವಿವಾದಾತ್ಮ ಹೇಳಿಕೆ ನೀಡಿದ ಹಿಂದೂ ಮಹಾಸಭಾ ಮುಖಂಡನ ಬಂಧನ

ಬೆಂಗಳೂರು ತಲುಪಿದ ಕನ್ನಡಿಗರ ಪಾರ್ಥಿವ ಶರೀರ, ಅಂತಿಮ ನಮನ ಸಲ್ಲಿಕೆ
ಬೆಂಗಳೂರು ತಲುಪಿದ ಕನ್ನಡಿಗರ ಪಾರ್ಥಿವ ಶರೀರ, ಅಂತಿಮ ನಮನ ಸಲ್ಲಿಕೆ
ಮನೆ ಗೋಡೆಲಿ, ಕಿಟಕಿಗಳಲ್ಲಿ ಜೇನುಗೂಡು ಕಟ್ಟಿದ್ರೆ ಏನರ್ಥ? ಇಲ್ಲಿದೆ ಮಾಹಿತಿ
ಮನೆ ಗೋಡೆಲಿ, ಕಿಟಕಿಗಳಲ್ಲಿ ಜೇನುಗೂಡು ಕಟ್ಟಿದ್ರೆ ಏನರ್ಥ? ಇಲ್ಲಿದೆ ಮಾಹಿತಿ
ಈ ದಿನದ ವಿಶೇಷವೇನು? ನಿಮ್ಮ ರಾಶಿ ಭವಿಷ್ಯವೇನು? ಇಲ್ಲಿದೆ ನೋಡಿ
ಈ ದಿನದ ವಿಶೇಷವೇನು? ನಿಮ್ಮ ರಾಶಿ ಭವಿಷ್ಯವೇನು? ಇಲ್ಲಿದೆ ನೋಡಿ
ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ
ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ
ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ
ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ
ಮಂಜುನಾಥ್ ಪಾರ್ಥೀವ ಶರೀರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಬರುವ ನಿರೀಕ್ಷೆ
ಮಂಜುನಾಥ್ ಪಾರ್ಥೀವ ಶರೀರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಬರುವ ನಿರೀಕ್ಷೆ
ಉಗ್ರರ ಅಟ್ಟಹಾಸದಿಂದ ರಕ್ತಪಾತವಾದ ಪಹಲ್ಗಾಮ್ ಈಗ ಹೇಗಿದೆ ನೋಡಿ...
ಉಗ್ರರ ಅಟ್ಟಹಾಸದಿಂದ ರಕ್ತಪಾತವಾದ ಪಹಲ್ಗಾಮ್ ಈಗ ಹೇಗಿದೆ ನೋಡಿ...
ಕಾಶ್ಮೀರದ ಉಗ್ರರ ದಾಳಿ ಬಗ್ಗೆ ಅಮೆರಿಕ ಉಪಾಧ್ಯಕ್ಷ ವ್ಯಾನ್ಸ್ ಹೇಳಿದ್ದೇನು?
ಕಾಶ್ಮೀರದ ಉಗ್ರರ ದಾಳಿ ಬಗ್ಗೆ ಅಮೆರಿಕ ಉಪಾಧ್ಯಕ್ಷ ವ್ಯಾನ್ಸ್ ಹೇಳಿದ್ದೇನು?
ಬಿಜೆಪಿಯಿಂದ ಹೊರಬಿದ್ದ ಬಳಿಕ ಜನಪ್ರಿಯತೆ ಹೆಚ್ಚುತ್ತಾ ಸಾಗಿದೆ: ಯತ್ನಾಳ್
ಬಿಜೆಪಿಯಿಂದ ಹೊರಬಿದ್ದ ಬಳಿಕ ಜನಪ್ರಿಯತೆ ಹೆಚ್ಚುತ್ತಾ ಸಾಗಿದೆ: ಯತ್ನಾಳ್
ಉಗ್ರರಿಗೆ ಪಾಕಿಸ್ತಾನ ತರಬೇತಿ ನೀಡುತ್ತಿರೋದನ್ನು ಖಂಡಿಸಬೇಕು: ಹರಿಪ್ರಸಾದ್​​
ಉಗ್ರರಿಗೆ ಪಾಕಿಸ್ತಾನ ತರಬೇತಿ ನೀಡುತ್ತಿರೋದನ್ನು ಖಂಡಿಸಬೇಕು: ಹರಿಪ್ರಸಾದ್​​