AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sunil Jakhar: ಒಂದೆಡೆ ಕಾಂಗ್ರೆಸ್ ಚಿಂತನಾ ಸಭೆ; ಇನ್ನೊಂದೆಡೆ ಪಂಜಾಬ್ ಕೈ ನಾಯಕ ಸುನಿಲ್ ಜಖಾರ್ ರಾಜೀನಾಮೆ

ಕಾಂಗ್ರೆಸ್ ಪಕ್ಷದ ವಿರೋಧಿ ಚಟುವಟಿಕೆಗಳ ಆರೋಪದ ಮೇಲೆ ಪಕ್ಷವು ಅವರ ವಿರುದ್ಧ ಕ್ರಮ ತೆಗೆದುಕೊಂಡ ದಿನದಿಂದ ಸುನಿಲ್ ಜಾಖರ್ ಕಾಂಗ್ರೆಸ್ ನಾಯಕತ್ವದ ವಿರುದ್ಧ ಅಸಮಾಧಾನಗೊಂಡಿದ್ದರು. ಇದೇ ಅವರ ರಾಜೀನಾಮೆಗೆ ಕಾರಣವಾಗಿದೆ ಎನ್ನಲಾಗಿದೆ.

Sunil Jakhar: ಒಂದೆಡೆ ಕಾಂಗ್ರೆಸ್ ಚಿಂತನಾ ಸಭೆ; ಇನ್ನೊಂದೆಡೆ ಪಂಜಾಬ್ ಕೈ ನಾಯಕ ಸುನಿಲ್ ಜಖಾರ್ ರಾಜೀನಾಮೆ
ಸುನಿಲ್ ಜಖಾರ್
TV9 Web
| Edited By: |

Updated on: May 14, 2022 | 2:48 PM

Share

ಚಂಡೀಗಢ: ಒಂದೆಡೆ ಕಾಂಗ್ರೆಸ್​ ದೇಶದಲ್ಲಿ ಮುಂದೆ ಯಾವ ರೀತಿಯ ಹೆಜ್ಜೆ ಇರಿಸಬೇಕು ಎಂಬುದರ ಬಗ್ಗೆ ಚರ್ಚಿಸಲು ಚಿಂತನಾ ಶಿಬಿರವನ್ನು ಆಯೋಜಿಸಿದೆ. ಇನ್ನೊಂದೆಡೆ ಪಂಜಾಬ್‌ನ ಕಾಂಗ್ರೆಸ್‌ನ ಮಾಜಿ ಮುಖ್ಯಸ್ಥ ಸುನಿಲ್ ಜಾಖರ್ (Sunil Jakhar) ಇಂದು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ತಮ್ಮ ಸಾಮಾಜಿಕ ಮಾಧ್ಯಮ ಹ್ಯಾಂಡಲ್‌ಗಳಿಂದ ಕಾಂಗ್ರೆಸ್‌ನ ಎಲ್ಲಾ ಉಲ್ಲೇಖಗಳನ್ನು ತೆಗೆದುಹಾಕಿರುವ ಅವರು ಅಧಿಕೃತವಾಗಿ ರಾಜೀನಾಮೆ ನೀಡಿದ್ದಾರೆ. ಕಾಂಗ್ರೆಸ್ ಪಕ್ಷದ ವಿರೋಧಿ ಚಟುವಟಿಕೆಗಳ ಆರೋಪದ ಮೇಲೆ ಪಕ್ಷವು ಅವರ ವಿರುದ್ಧ ಕ್ರಮ ತೆಗೆದುಕೊಂಡ ದಿನದಿಂದ ಸುನಿಲ್ ಜಾಖರ್ ಕಾಂಗ್ರೆಸ್ ನಾಯಕತ್ವದ ವಿರುದ್ಧ ಅಸಮಾಧಾನಗೊಂಡಿದ್ದರು. ಇದೇ ಅವರ ರಾಜೀನಾಮೆಗೆ ಕಾರಣವಾಗಿದೆ ಎನ್ನಲಾಗಿದೆ.

ಇತ್ತೀಚೆಗೆ, ಕಾಂಗ್ರೆಸ್ ಶಿಸ್ತು ಸಮಿತಿಯು ಸುನಿಲ್ ಜಾಖರ್ ಮತ್ತು ಕೆ.ವಿ ಥಾಮಸ್ ಅವರನ್ನು ಪಕ್ಷದ ನಿಯಮಗಳಿಗೆ ವಿರುದ್ಧವಾಗಿ ನಡೆದುಕೊಂಡಿದ್ದರಿಂದ ಎಲ್ಲಾ ಪಕ್ಷದ ಹುದ್ದೆಗಳಿಂದ ವಜಾಗೊಳಿಸಿತ್ತು. ಮೂಲಗಳ ಪ್ರಕಾರ, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಸುನಿಲ್ ಜಾಖರ್ ಬಗ್ಗೆ ಮೃದು ಧೋರಣೆ ಹೊಂದಿದ್ದರು. ಹೀಗಾಗಿಯೇ ಸಮಿತಿ ಸುನಿಲ್ ಜಾಖರ್ ಅವರನ್ನು ವಜಾಗೊಳಿಸಬೇಕೆಂದು ಶಿಫಾರಸು ಮಾಡಿದ್ದರೂ ಅವರನ್ನು ಪಕ್ಷದಿಂದ ಅಮಾನತುಗೊಳಿಸಿರಲಿಲ್ಲ.

ಎ.ಕೆ ಆ್ಯಂಟನಿ ನೇತೃತ್ವದ ಕಾಂಗ್ರೆಸ್ ಶಿಸ್ತು ಸಮಿತಿಯು ಈ ದೂರುಗಳ ಬಗ್ಗೆ ಸರ್ವಾನುಮತದಿಂದ ನಿರ್ಣಯ ಕೈಗೊಂಡು ಅಂತಿಮ ನಿರ್ಧಾರಕ್ಕಾಗಿ ಸೋನಿಯಾ ಗಾಂಧಿ ಅವರಿಗೆ ಕಳುಹಿಸಿತ್ತು. ಏಪ್ರಿಲ್ 11ರಂದು ಕಾಂಗ್ರೆಸ್ ಮುಖಂಡರಾದ ಕೆವಿ ಥಾಮಸ್ ಮತ್ತು ಸುನಿಲ್ ಜಾಖರ್ ಅವರಿಗೆ ಕಾಂಗ್ರೆಸ್ ಪಕ್ಷದ ಶಿಸ್ತನ್ನು ಉಲ್ಲಂಘಿಸಿದ್ದಕ್ಕಾಗಿ ಶೋಕಾಸ್ ನೋಟಿಸ್ ಜಾರಿ ಮಾಡಿದೆ. ಹಾಗೇ, ಇನ್ನೊಂದು ವಾರದೊಳಗೆ ಉತ್ತರ ನೀಡುವಂತೆ ಸೂಚಿಸಿತ್ತು. ಆದರೆ, ಸುನೀಲ್ ಜಾಖರ್ ಅವರು ಸಮಿತಿಯ ಮುಂದೆ ಯಾವುದೇ ಹೇಳಿಕೆಯನ್ನು ನೀಡಿರಲಿಲ್ಲ.

ನಾನುಕಾಂಗ್ರೆಸ್ ಪಕ್ಷದ ಗುಲಾಮನಲ್ಲ, ಆದರೆ ಶಿಸ್ತಿನ ಕಾರ್ಯಕರ್ತ ಎಂದು ಸುನಿಲ್ ಜಾಖರ್ ಹೇಳಿದ್ದರು. ಕಾಂಗ್ರೆಸ್ ಪಕ್ಷದೊಂದಿಗೆ 50 ವರ್ಷಗಳಿಂದ ನನಗೆ ಸಂಬಂಧವಿದೆ ಎಂದು ಹೇಳಿದ್ದ ಸುನಿಲ್ ಜಾಖರ್, ನಾನು ಇಷ್ಟು ವರ್ಷಗಳೂ ಕಾಂಗ್ರೆಸ್ ಪಕ್ಷದ ಶಿಸ್ತಿನ ಕಾರ್ಯಕರ್ತನಾಗಿ ಕಾರ್ಯ ನಿರ್ವಹಿಸಿದ್ದೇನೆ ಎಂದಿದ್ದರು. ಆದರೀಗ ಪಕ್ಷ ತೊರೆಯುವ ನಿರ್ಧಾರ ಮಾಡಿದ್ದಾರೆ.

ಫೇಸ್​ಬುಕ್ ಲೈವ್​ನಲ್ಲಿ ಕಾಂಗ್ರೆಸ್ ನಾಯಕರು ಮತ್ತು ಮಾಜಿ ಸಹೋದ್ಯೋಗಿಗಳ ವಿರುದ್ಧ ಕಿಡಿ ಕಾರಿದ್ದ ಸುನಿಲ್ ಜಾಖರ್ ” ಕಾಂಗ್ರೆಸ್​ಗೆ ವಿದಾಯ ಮತ್ತು ಶುಭವಾಗಲಿ” ಎಂದು ಲೈವ್ ವೀಡಿಯೊದಲ್ಲಿ ತಮ್ಮ ವಿರುದ್ಧ ಕ್ರಮಕ್ಕೆ ಕಾರಣರಾದ ಪಕ್ಷದ ಮಾಜಿ ಸಹೋದ್ಯೋಗಿಗಳ ಬಗ್ಗೆ ಕಟುವಾದ ಟೀಕೆ ಮಾಡಿದ್ದರು. ಅದಾದ ನಂತರ ಅವರು ರಾಜೀನಾಮೆ ನೀಡಿದ್ದಾರೆ.

ಪಂಜಾಬ್​ನಲ್ಲಿ ಸುನಿಲ್ ಜಾಖರ್ ಅವರು ಚುನಾವಣೆಗೆ ಚರಣ್​ಜಿತ್ ಸಿಂಗ್ ಚನ್ನಿ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಆಯ್ಕೆ ಮಾಡಿದ್ದಕ್ಕಾಗಿ ಪಕ್ಷದ ನಾಯಕತ್ವವನ್ನು ಟೀಕಿಸಿದ್ದರು. ಕ್ಯಾಪ್ಟನ್ ಅಮರೀಂದರ್ ಸಿಂಗ್ ಅವರ ಪದಚ್ಯುತಗೊಂಡ ನಂತರ ಮುಖ್ಯಮಂತ್ರಿಯಾಗಿ ಆಯ್ಕೆಯಾಗುವ ಸಾಧ್ಯತೆ ತಪ್ಪೆ ಅವರು ಬೇಸರ ವ್ಯಕ್ತಪಡಿಸಿದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನ ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ