ರೈತರಿಗೆ ಖುಷಿ ಸುದ್ದಿ; 14 ಬೆಳೆಗಳ ಕನಿಷ್ಠ ಬೆಂಬಲ ಹೆಚ್ಚಳಕ್ಕೆ ಕೇಂದ್ರ ಸಂಪುಟ ಒಪ್ಪಿಗೆ

ಖಾರಿಫ್​ ಬೆಳೆಗಳ ಎಂಎಸ್​ಪಿ (ಕನಿಷ್ಠ ಬೆಂಬಲ ಬೆಲೆ) ಹೆಚ್ಚಳಕ್ಕೆ ಕೇಂದ್ರ ಸಚಿವ ಸಂಪುಟ ನಿರ್ಧಾರ ಮಾಡಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ನಿರ್ಧಾರ ಮಾಡಲಾಗಿದೆ. ದೇಶದ 14 ಬೆಳೆಗಳ ಕನಿಷ್ಠ ಬೆಂಬಲ ಬೆಲೆ ಹೆಚ್ಚಳಕ್ಕೆ ಕೇಂದ್ರ ಸಂಪುಟ ಒಪ್ಪಿಗೆ ನೀಡಿದೆ. ಸಾನ್ ಕ್ರೆಡಿಟ್ ಕಾರ್ಡ್ ಯೋಜನೆಯನ್ನು ಮುಂದುವರಿಸಲು ನಿರ್ಧಾರ ಮಾಡಲಾಗಿದೆ. ರಾಗಿ, ಹತ್ತಿ, ಎಳ್ಳು ಸೇರಿದಂತೆ 14 ಬೆಳೆಗಳ ಬೆಂಬಲ ಬೆಂಬಲ ಹೆಚ್ಚಳ ಮಾಡಲಾಗಿದೆ ಎಂದು ಕ್ಯಾಬಿನೆಟ್​ ಸಭೆ ಬಳಿಕ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್​ ಮಾಹಿತಿ ನೀಡಿದ್ದಾರೆ.

ರೈತರಿಗೆ ಖುಷಿ ಸುದ್ದಿ; 14 ಬೆಳೆಗಳ ಕನಿಷ್ಠ ಬೆಂಬಲ ಹೆಚ್ಚಳಕ್ಕೆ ಕೇಂದ್ರ ಸಂಪುಟ ಒಪ್ಪಿಗೆ
Crop

Updated on: May 28, 2025 | 5:15 PM

ನವದೆಹಲಿ, ಮೇ 28: ಕೇಂದ್ರ ಸಚಿವ ಸಂಪುಟವು (Modi Cabinet) ಇಂದು ರೈತರಿಗೆ ಖುಷಿ ಸುದ್ದಿಯೊಂದನ್ನು ನೀಡಿದೆ. ಮೋದಿ ಸರ್ಕಾರ ಕೃಷಿ ಮತ್ತು ಮೂಲಸೌಕರ್ಯ ಕ್ಷೇತ್ರದಲ್ಲಿ ಪ್ರಮುಖ ನಿರ್ಧಾರಗಳನ್ನು ಅಂಗೀಕರಿಸಿದೆ. 2025–26ರ ಋತುವಿನ ಖಾರಿಫ್ ಬೆಳೆಗಳಿಗೆ (Kharif crops) ಕನಿಷ್ಠ ಬೆಂಬಲ ಬೆಲೆಗಳನ್ನು (MSP) ಸರ್ಕಾರ ಅನುಮೋದಿಸಿದೆ. ಮಾರುಕಟ್ಟೆ ಬೆಲೆಗಳು ಕಡಿಮೆಯಾಗಿದ್ದರೂ ಸಹ, ರೈತರಿಂದ ಬೆಳೆಗಳನ್ನು ಖರೀದಿಸಲು ಸರ್ಕಾರ ಭರವಸೆ ನೀಡುವ ಕನಿಷ್ಠ ಬೆಲೆಯೇ ಎಂಎಸ್​ಪಿ. ರೈತರು ನ್ಯಾಯಯುತ ಬೆಲೆಯನ್ನು ಪಡೆಯಲು ಪ್ರತಿ ವರ್ಷ ವಿವಿಧ ಬೆಳೆಗಳಿಗೆ ಎಂಎಸ್​ಪಿ ನಿಗದಿಪಡಿಸಲಾಗುತ್ತದೆ.

ಖಾರಿಫ್ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಗಳಲ್ಲಿ (MSP) ಹೊಸ ಹೆಚ್ಚಳ, ರೈತರಿಗೆ ಬಡ್ಡಿ ರಿಯಾಯಿತಿ ಯೋಜನೆಯ ಮುಂದುವರಿಕೆ ಮತ್ತು ಆಂಧ್ರಪ್ರದೇಶ, ಮಧ್ಯಪ್ರದೇಶ ಮತ್ತು ಮಹಾರಾಷ್ಟ್ರದಾದ್ಯಂತ ಪ್ರಮುಖ ರಸ್ತೆ ಮತ್ತು ರೈಲು ಯೋಜನೆಗಳಿಗೆ ಹಸಿರು ನಿಶಾನೆ ಸೇರಿದಂತೆ ಕೃಷಿ ಮತ್ತು ಮೂಲಸೌಕರ್ಯದ ಮೇಲೆ ಪರಿಣಾಮ ಬೀರುವ ಹಲವಾರು ಮಹತ್ವದ ಕ್ರಮಗಳನ್ನು ಕೇಂದ್ರ ಸಚಿವ ಸಂಪುಟ ಇಂದು ಅನುಮೋದಿಸಿದೆ.

ಇದನ್ನೂ ಓದಿ
ಮೇ 29-30ರಂದು ಈ ನಾಲ್ಕು ರಾಜ್ಯಗಳಿಗೆ ಪ್ರಧಾನಿ ಮೋದಿ ಭೇಟಿ
ಅಮೆರಿಕದ ಅಧೀನ ಕಾರ್ಯದರ್ಶಿ ಜೆಫ್ರಿಯನ್ನು ಭೇಟಿಯಾದ ವಿಕ್ರಮ್ ಮಿಸ್ರಿ
ವೀಸಾ ರದ್ದು; ಭಾರತೀಯ, ವಿದೇಶಿ ವಿದ್ಯಾರ್ಥಿಗಳಿಗೆ ಅಮೆರಿಕ ಎಚ್ಚರಿಕೆ
ಶ್ರೀಲಂಕಾದಲ್ಲಿ ಉಪ್ಪಿನ ಬಿಕ್ಕಟ್ಟು; ದ್ವೀಪ ರಾಷ್ಟ್ರಕ್ಕೆ ಭಾರತದ ಸಹಾಯಹಸ್ತ


ಖಾರಿಫ್ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಹೆಚ್ಚಳವು ವೆಚ್ಚಕ್ಕಿಂತ 50% ಲಾಭದ ಅಂತರವನ್ನು ಖಚಿತಪಡಿಸುತ್ತದೆ. ಕೃಷಿ ವೆಚ್ಚ ಮತ್ತು ಬೆಲೆಗಳ ಆಯೋಗದ (CACP) ಶಿಫಾರಸುಗಳ ಆಧಾರದ ಮೇಲೆ 2025–26ರ ಋತುವಿನ ಖಾರಿಫ್ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು ಸಚಿವ ಸಂಪುಟ ಅನುಮೋದಿಸಿದೆ ಎಂದು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದಾರೆ. ಬೆಳೆಗಳ ಅಂದಾಜು ಖರೀದಿ ವೆಚ್ಚವು 2.07 ಲಕ್ಷ ಕೋಟಿ ರೂ.ಗಳಷ್ಟಿದೆ.


ಇದನ್ನೂ ಓದಿ: ಜಸ್ಟ್​ ಸಿಂಗಲ್​​ ಮಾವಿನ ಹಣ್ಣಿಗೆ 10 ಸಾವಿರ ರೂ.: ಇದು ಕರ್ನಾಟಕದಲ್ಲೇ ಬೆಳೆದ ತಳಿ ಯಾವುದು ಗೊತ್ತಾ?

“ಕಳೆದ 10–11 ವರ್ಷಗಳಲ್ಲಿ ಖಾರಿಫ್ ಬೆಳೆಗಳ ಕನಿಷ್ಠ ಬೆಂಬಲ ಬೆಲೆಗಳಲ್ಲಿ ಭಾರೀ ಏರಿಕೆ ಕಂಡುಬಂದಿದೆ. ಪ್ರಧಾನಿ ನರೇಂದ್ರ ಮೋದಿ ರೈತರು ತಮ್ಮ ಉತ್ಪಾದನಾ ವೆಚ್ಚಕ್ಕಿಂತ ಕನಿಷ್ಠ 50% ಲಾಭವನ್ನು ಪಡೆಯುವುದನ್ನು ಖಚಿತಪಡಿಸಿದ್ದಾರೆ. ಬಡ್ಡಿ ಸಬ್ಸಿಡಿ ಯೋಜನೆಯಡಿ ಸಬ್ಸಿಡಿ ಕೃಷಿ ಸಾಲಗಳು ಮುಂದುವರಿಯಲಿವೆ. ರೈತರಿಗೆ ರಿಯಾಯಿತಿ ಬಡ್ಡಿದರದಲ್ಲಿ ಅಲ್ಪಾವಧಿಯ ಸಾಲವನ್ನು ಒದಗಿಸುವ ಬಡ್ಡಿ ಸಬ್ಸಿಡಿ ಯೋಜನೆಯ ಮುಂದುವರಿಕೆಗೆ ಸಂಪುಟ ಅನುಮೋದನೆ ನೀಡಿದೆ.


ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಅವಧಿಯಲ್ಲಿ ಮೊದಲು ಪರಿಚಯಿಸಲಾದ ಕಿಸಾನ್ ಕ್ರೆಡಿಟ್ ಕಾರ್ಡ್ (ಕೆಸಿಸಿ) ಉಪಕ್ರಮವು ರೈತರಿಗೆ ಬಂಡವಾಳವನ್ನು ಸುಲಭವಾಗಿ ಪಡೆಯಲು ಸಹಾಯ ಮಾಡಿದೆ ಎಂದು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದಾರೆ. “ಈ ಯೋಜನೆಯ ಮೂಲಕ ನಾವು ಸಾಲದ ವೆಚ್ಚವನ್ನು ಕಡಿಮೆ ಮಾಡಿದ್ದೇವೆ. ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಸಾಲಗಳನ್ನು ಸುಲಭವಾಗಿ ಪಡೆಯಲು ಅನುವು ಮಾಡಿಕೊಟ್ಟಿದ್ದೇವೆ” ಎಂದು ಅವರು ಹೇಳಿದ್ದಾರೆ.


ಇದನ್ನೂ ಓದಿ: Narendra Modi: ಮೇ 29ರಿಂದ ಎರಡು ದಿನ ಈ ನಾಲ್ಕು ರಾಜ್ಯಗಳಿಗೆ ಪ್ರಧಾನಿ ಮೋದಿ ಭೇಟಿ

ಮುಂಬರುವ ಖಾರಿಫ್ 2025–26 ಮಾರುಕಟ್ಟೆ ಋತುವಿನಲ್ಲಿ ಭತ್ತದ ಕನಿಷ್ಠ ಬೆಂಬಲ ಬೆಲೆಯಲ್ಲಿ (MSP) ಕ್ವಿಂಟಾಲ್‌ಗೆ 69 ರೂ. ಹೆಚ್ಚಳಕ್ಕೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ. ಇದು ಭತ್ತದ MSP ಅನ್ನು ಕ್ವಿಂಟಾಲ್‌ಗೆ 2,369 ರೂ.ಗೆ ಇಳಿಸಿದೆ. ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಚಿವ ಸಂಪುಟ ಸಮಿತಿ (CCEA) ಈ ನಿರ್ಧಾರವನ್ನು ತೆಗೆದುಕೊಂಡಿದೆ. ಭತ್ತದ (ಗ್ರೇಡ್ A) MSP ಅನ್ನು ಕ್ವಿಂಟಾಲ್‌ಗೆ 69 ರೂ.ನಿಂದ 2,389 ರೂ.ಗೆ ಹೆಚ್ಚಿಸಲಾಗಿದೆ.


ಭತ್ತದ ಮೇಲಿನ ಹೆಚ್ಚಳವನ್ನು ಎತ್ತಿ ತೋರಿಸಲಾಗಿದ್ದರೂ ಇತರ 13 ಖಾರಿಫ್ ಬೆಳೆಗಳಿಗೆ ಪರಿಷ್ಕೃತ MSPಗಳನ್ನು ಸಹ ಸಚಿವ ಸಂಪುಟ ಅನುಮೋದಿಸಿದೆ. ನೈಜರ್ ಸೀಡ್ ಕ್ವಿಂಟಾಲ್‌ಗೆ 820 ರೂ.ನಷ್ಟು ಅತ್ಯಧಿಕ ಹೆಚ್ಚಳ ಕಂಡಿದ್ದು, ನಂತರ ರಾಗಿ (596 ರೂ.), ಹತ್ತಿ (589 ರೂ.), ಮತ್ತು ಎಳ್ಳು (579 ರೂ.) ಏರಿಕೆ ಕಂಡಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
Follow Us