AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Agniveer Reservation: ದೇಶದ ಗಡಿ ಕಾಯುವ ಅಗ್ನಿವೀರರಿಗೆ ರೈಲ್ವೆ ಉದ್ಯೋಗದಲ್ಲಿ ಮೀಸಲಾತಿ

ದೇಶದ ಗಡಿ ಕಾಯುವ ಅಗ್ನಿವೀರ(Agniveer)ರಿಗೆ ಭಾರತೀಯ ರೈಲ್ವೆಯು ಭರ್ಜರಿ ಉಡುಗೊರೆ ನೀಡಿದೆ, ರೈಲ್ವೆ ಇಲಾಖೆ ಉದ್ಯೋಗದಲ್ಲಿ ಅಗ್ನಿವೀರರಿಗೆ ಶೇ.15ರಷ್ಟು ಮೀಸಲಿಡುವುದಾಗಿ ತಿಳಿಸಿದೆ.

Agniveer Reservation: ದೇಶದ ಗಡಿ ಕಾಯುವ ಅಗ್ನಿವೀರರಿಗೆ ರೈಲ್ವೆ ಉದ್ಯೋಗದಲ್ಲಿ ಮೀಸಲಾತಿ
ಅಗ್ನಿವೀರ್Image Credit source: Punekar News
ನಯನಾ ರಾಜೀವ್
|

Updated on:May 12, 2023 | 7:56 AM

Share

ದೇಶದ ಗಡಿ ಕಾಯುವ ಅಗ್ನಿವೀರ(Agniveer)ರಿಗೆ ಭಾರತೀಯ ರೈಲ್ವೆಯು ಭರ್ಜರಿ ಉಡುಗೊರೆ ನೀಡಿದೆ, ರೈಲ್ವೆ ಇಲಾಖೆ ಉದ್ಯೋಗದಲ್ಲಿ ಅಗ್ನಿವೀರರಿಗೆ ಶೇ.15ರಷ್ಟು ಮೀಸಲಿಡುವುದಾಗಿ ತಿಳಿಸಿದೆ. ರೈಲ್ವೆ ಇಲಾಖೆಯ ಲೆವೆಲ್​ 1 ಹುದ್ದೆಗಳಲ್ಲಿ ಶೇ.10ರಷ್ಟು ಮೀಸಲಿರಿಸಲಾಗುತ್ತದೆ, ಲೆವೆಲ್​ 2, ಗೆಜೆಟೆಡ್​ ಅಲ್ಲದ ಹುದ್ದೆಗಳಲ್ಲಿ ಶೇ.5ರಷ್ಟು ಮೀಸಲಿಡಲಾಗುತ್ತದೆ, ಒಟ್ಟು ಶೇ. 15 ಮೀಸಲಾತಿ ಕಲ್ಪಿಸಲು ರೈಲ್ವೆ ಇಲಾಖೆ ನಿರ್ಧಾರ ಮಾಡಿದೆ.

ವಿವಿಧ ಇಲಾಖೆಗಳಲ್ಲಿನ ನಾನ್ ಗೆಜೆಟೆಡ್ ಹುದ್ದೆಗಳ ಭರ್ತಿಗೆ ನಡೆಯುವ ನೇರ ನೇಮಕಾತಿಯಲ್ಲಿ ರೈಲ್ವೆಯು ಅಗ್ನಿವೀರರಿಗೆ ಶೇ.15ರಷ್ಟು ಮೀಸಲಾತಿ ನೀಡಲಿದೆ. ಅಗ್ನಿವೀರರಿಗಾಗಿ ರೈಲ್ವೆಯ ಭದ್ರತಾ ಪಡೆಗಳಲ್ಲಿ ಕೂಡ ಮೀಸಲಾತಿ ನೀತಿಯನ್ನು ಜಾರಿಗೆ ತರಲಾಗುತ್ತದೆ, ಮೊದಲ ಬ್ಯಾಚ್​ನ ಅಗ್ನಿವೀರರಿಗೆ ವಯೋಮಿತಿಯಲ್ಲಿ 5 ವರ್ಷ ಹಾಗೂ ನಂತರದ ಬ್ಯಾಚ್​ಗಳ ಅಗ್ನಿವೀರರಿಗೆ 3 ವರ್ಷಗಳಷ್ಟು ಸಡಿಲಿಕೆ ನೀಡಲಾಗುವುದು ಎಂದು ತಿಳಿಸಿದ್ದಾರೆ.

ಮತ್ತಷ್ಟು ಓದಿ: Agniveer Scheme: ಅಗ್ನಿವೀರ್ ಯೋಜನೆಯಡಿ ಭಾರತೀಯ ನೌಕಾಪಡೆಗೆ ಮೊದಲ ಬಾರಿಗೆ 341 ಮಹಿಳೆಯರ ನೇಮಕ

ಕಳೆದ ವರ್ಷ ಕೇಂದ್ರವು ಪ್ರಾರಂಭಿಸಿದ ‘ಅಗ್ನಿಪಥ್’ ನೇಮಕಾತಿ ಯೋಜನೆಯಡಿ, ನಾಲ್ಕು ವರ್ಷಗಳನ್ನು ಪೂರ್ಣಗೊಳಿಸಿದ ನಂತರ ಕೇವಲ 25 ಪ್ರತಿಶತದಷ್ಟು ಅಗ್ನಿವೀರ್‌ಗಳನ್ನು ಮಾತ್ರ ಪಡೆಯಲಾಗುತ್ತದೆ ಮತ್ತು ಉಳಿದವರು ನಿವೃತ್ತರಾಗುತ್ತಾರೆ ಎಂಬುದು ಗಮನಾರ್ಹ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:55 am, Fri, 12 May 23

ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ