AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸವರ್ಷಕ್ಕೆ ಜಿಯೋದಿಂದ ಗ್ರಾಹಕರಿಗೆ ಗುಡ್​ನ್ಯೂಸ್​; ಜ.1ರಿಂದ ಎಲ್ಲ ಕರೆಗಳೂ ಉಚಿತ

ಹೊಸವರ್ಷಕ್ಕೆ ಟೆಲಿಕಾಂ ಸಂಸ್ಥೆ ರಿಲಯನ್ಸ್​ ಜಿಯೋ ಗುಡ್​ನ್ಯೂಸ್​ ಕೊಟ್ಟಿದೆ. ಜ.1ರಿಂದ ಜಿಯೋ ನೆಟ್​ವರ್ಕ್​ನಿಂದ ನೀವು ಉಳಿದ ಯಾವುದೇ ನೆಟ್​ವರ್ಕ್​ಗೆ ಅಂದರೆ ಏರ್​ಟೆಲ್​, ವೊಡಾಫೋನ್​ ಇತ್ಯಾದಿಗೆ ಮಾಡುವ ಕರೆಗೆ ಹೆಚ್ಚುವರಿ ಶುಲ್ಕ ಪಾವತಿಸಬೇಕಿಲ್ಲ.

ಹೊಸವರ್ಷಕ್ಕೆ ಜಿಯೋದಿಂದ ಗ್ರಾಹಕರಿಗೆ ಗುಡ್​ನ್ಯೂಸ್​; ಜ.1ರಿಂದ ಎಲ್ಲ ಕರೆಗಳೂ ಉಚಿತ
ಪ್ರಾತಿನಿಧಿಕ ಚಿತ್ರ
Lakshmi Hegde
| Edited By: |

Updated on: Dec 31, 2020 | 4:04 PM

Share

ದೆಹಲಿ: ಹೊಸವರ್ಷಕ್ಕೆ ಟೆಲಿಕಾಂ ಸಂಸ್ಥೆ ರಿಲಯನ್ಸ್​ ಜಿಯೋ ಗುಡ್​ನ್ಯೂಸ್​ ಕೊಟ್ಟಿದೆ. ಜ.1ರಿಂದ ಜಿಯೋ ನೆಟ್​ವರ್ಕ್​ನಿಂದ ನೀವು ಉಳಿದ ಯಾವುದೇ ನೆಟ್​ವರ್ಕ್​ಗೆ ಅಂದರೆ ಏರ್​ಟೆಲ್​, ವೊಡಾಫೋನ್​ ಇತ್ಯಾದಿಗೆ ಮಾಡುವ ಕರೆಗೆ ಹೆಚ್ಚುವರಿ ಶುಲ್ಕ ಪಾವತಿಸಬೇಕಿಲ್ಲ.

ಭಾರತೀಯ ಟೆಲಿಕಾಂ ನಿಯಂತ್ರಣಾ ಪ್ರಾಧಿಕಾರ ( TRAI-ಟ್ರಾಯ್​) ನಿರ್ದೇಶನದ ಹಿನ್ನೆಲೆಯಲ್ಲಿ ಜಿಯೋ ಬಿಲ್​ ಆ್ಯಂಡ್ ಕೀಪ್​ ಪದ್ಧತಿಯನ್ನು ಅಳವಡಿಸಿಕೊಳ್ಳಲಿದೆ. ಇದರಡಿಯಲ್ಲಿ ಜ.1ರಿಂದ ಅಂತರ್ ಸಂಪರ್ಕ ಬಳಕೆ ಶುಲ್ಕ (IUC) ವನ್ನು ರದ್ದುಗೊಳಿಸುತ್ತಿದ್ದು, ಎಲ್ಲ ದೇಶೀಯ ಕರೆಗಳೂ ಉಚಿತವಾಗಲಿದೆ ಎಂದು ರಿಲಯನ್ಸ್​ ಜಿಯೋ ತಿಳಿಸಿದೆ. Bill and Keep ವ್ಯವಸ್ಥೆಯಡಿ ಎರಡು ಭಿನ್ನ ದೂರ ಸಂಪರ್ಕ ಜಾಲಗಳ ಅಂತರ್​ ಸಂಪರ್ಕಕ್ಕೆ ಪರಸ್ಪರ ನೆಟ್​ವರ್ಕ್​ಗಳು ಶುಲ್ಕ ವಿಧಿಸುವುದಿಲ್ಲ.

ಜಿಯೋದಿಂದ ಜಿಯೋ ನೆಟ್​ವರ್ಕ್​ಗೆ ಹಿಂದಿನಿಂದಲೂ ಉಚಿತ ಕರೆಯನ್ನು ನಿಗದಿಪಡಿಸಿದ್ದ ಟೆಲಿಕಾಂ ಕಂಪನಿ, 2019ರಲ್ಲಿ ಜಿಯೋದಿಂದ ಉಳಿದ ನೆಟ್ವರ್ಕ್​ಗಳಿಗೆ ಕರೆಯನ್ನು ಶುಲ್ಕ ಸಹಿತ ಮಾಡಿತ್ತು. ಅಲ್ಲದೆ, ಟ್ರಾಯ್​ ಅಂತರ್​ ಸಂಪರ್ಕ ಬಳಕೆ ಶುಲ್ಕವನ್ನು ರದ್ದುಗೊಳಿಸುವವರೆಗೆ ಜಿಯೋದಿಂದ ಉಳಿದ ನೆಟ್​ವರ್ಕ್​ಗಳಿಗೆ ಮಾಡುವ ಕರೆಗೆ ಶುಲ್ಕ ವಿಧಿಸಲಾಗುವುದು. ನಂತರ ಅದನ್ನು ರದ್ದುಗೊಳಿಸಲಾಗುವುದು ಎಂದಿತ್ತು. ಆ ಭರವಸೆಯಂತೆ ಈಗ ನಾಳೆಯಿಂದ ಜಿಯೋದಿಂದ ಬೇರೆ ನೆಟ್​ವರ್ಕ್​ಗಳಿಗೂ ಗ್ರಾಹಕರು ಉಚಿತ ಕರೆ ಮಾಡಬಹುದಾಗಿದೆ. ಏರ್​ಟೆಲ್​ ಷೇರು ಕುಸಿತ

ಜಿಯೋ ಈ ಘೋಷಣೆ ಮಾಡುತ್ತಿದ್ದಂತೆ, ಅದರ ಪ್ರತಿಸ್ಪರ್ಧಿ ಭಾರತಿ ಏರ್​ಟೆಲ್​ನ ಷೇರುಗಳು ಅಂತರ್​ ದಿನ ವಹಿವಾಟಿನಲ್ಲಿ ಶೇ.2ರಷ್ಟು ಕುಸಿಯಿತು.

ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?