AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸವರ್ಷಕ್ಕೆ ಜಿಯೋದಿಂದ ಗ್ರಾಹಕರಿಗೆ ಗುಡ್​ನ್ಯೂಸ್​; ಜ.1ರಿಂದ ಎಲ್ಲ ಕರೆಗಳೂ ಉಚಿತ

ಹೊಸವರ್ಷಕ್ಕೆ ಟೆಲಿಕಾಂ ಸಂಸ್ಥೆ ರಿಲಯನ್ಸ್​ ಜಿಯೋ ಗುಡ್​ನ್ಯೂಸ್​ ಕೊಟ್ಟಿದೆ. ಜ.1ರಿಂದ ಜಿಯೋ ನೆಟ್​ವರ್ಕ್​ನಿಂದ ನೀವು ಉಳಿದ ಯಾವುದೇ ನೆಟ್​ವರ್ಕ್​ಗೆ ಅಂದರೆ ಏರ್​ಟೆಲ್​, ವೊಡಾಫೋನ್​ ಇತ್ಯಾದಿಗೆ ಮಾಡುವ ಕರೆಗೆ ಹೆಚ್ಚುವರಿ ಶುಲ್ಕ ಪಾವತಿಸಬೇಕಿಲ್ಲ.

ಹೊಸವರ್ಷಕ್ಕೆ ಜಿಯೋದಿಂದ ಗ್ರಾಹಕರಿಗೆ ಗುಡ್​ನ್ಯೂಸ್​; ಜ.1ರಿಂದ ಎಲ್ಲ ಕರೆಗಳೂ ಉಚಿತ
ಪ್ರಾತಿನಿಧಿಕ ಚಿತ್ರ
Lakshmi Hegde
| Edited By: |

Updated on: Dec 31, 2020 | 4:04 PM

Share

ದೆಹಲಿ: ಹೊಸವರ್ಷಕ್ಕೆ ಟೆಲಿಕಾಂ ಸಂಸ್ಥೆ ರಿಲಯನ್ಸ್​ ಜಿಯೋ ಗುಡ್​ನ್ಯೂಸ್​ ಕೊಟ್ಟಿದೆ. ಜ.1ರಿಂದ ಜಿಯೋ ನೆಟ್​ವರ್ಕ್​ನಿಂದ ನೀವು ಉಳಿದ ಯಾವುದೇ ನೆಟ್​ವರ್ಕ್​ಗೆ ಅಂದರೆ ಏರ್​ಟೆಲ್​, ವೊಡಾಫೋನ್​ ಇತ್ಯಾದಿಗೆ ಮಾಡುವ ಕರೆಗೆ ಹೆಚ್ಚುವರಿ ಶುಲ್ಕ ಪಾವತಿಸಬೇಕಿಲ್ಲ.

ಭಾರತೀಯ ಟೆಲಿಕಾಂ ನಿಯಂತ್ರಣಾ ಪ್ರಾಧಿಕಾರ ( TRAI-ಟ್ರಾಯ್​) ನಿರ್ದೇಶನದ ಹಿನ್ನೆಲೆಯಲ್ಲಿ ಜಿಯೋ ಬಿಲ್​ ಆ್ಯಂಡ್ ಕೀಪ್​ ಪದ್ಧತಿಯನ್ನು ಅಳವಡಿಸಿಕೊಳ್ಳಲಿದೆ. ಇದರಡಿಯಲ್ಲಿ ಜ.1ರಿಂದ ಅಂತರ್ ಸಂಪರ್ಕ ಬಳಕೆ ಶುಲ್ಕ (IUC) ವನ್ನು ರದ್ದುಗೊಳಿಸುತ್ತಿದ್ದು, ಎಲ್ಲ ದೇಶೀಯ ಕರೆಗಳೂ ಉಚಿತವಾಗಲಿದೆ ಎಂದು ರಿಲಯನ್ಸ್​ ಜಿಯೋ ತಿಳಿಸಿದೆ. Bill and Keep ವ್ಯವಸ್ಥೆಯಡಿ ಎರಡು ಭಿನ್ನ ದೂರ ಸಂಪರ್ಕ ಜಾಲಗಳ ಅಂತರ್​ ಸಂಪರ್ಕಕ್ಕೆ ಪರಸ್ಪರ ನೆಟ್​ವರ್ಕ್​ಗಳು ಶುಲ್ಕ ವಿಧಿಸುವುದಿಲ್ಲ.

ಜಿಯೋದಿಂದ ಜಿಯೋ ನೆಟ್​ವರ್ಕ್​ಗೆ ಹಿಂದಿನಿಂದಲೂ ಉಚಿತ ಕರೆಯನ್ನು ನಿಗದಿಪಡಿಸಿದ್ದ ಟೆಲಿಕಾಂ ಕಂಪನಿ, 2019ರಲ್ಲಿ ಜಿಯೋದಿಂದ ಉಳಿದ ನೆಟ್ವರ್ಕ್​ಗಳಿಗೆ ಕರೆಯನ್ನು ಶುಲ್ಕ ಸಹಿತ ಮಾಡಿತ್ತು. ಅಲ್ಲದೆ, ಟ್ರಾಯ್​ ಅಂತರ್​ ಸಂಪರ್ಕ ಬಳಕೆ ಶುಲ್ಕವನ್ನು ರದ್ದುಗೊಳಿಸುವವರೆಗೆ ಜಿಯೋದಿಂದ ಉಳಿದ ನೆಟ್​ವರ್ಕ್​ಗಳಿಗೆ ಮಾಡುವ ಕರೆಗೆ ಶುಲ್ಕ ವಿಧಿಸಲಾಗುವುದು. ನಂತರ ಅದನ್ನು ರದ್ದುಗೊಳಿಸಲಾಗುವುದು ಎಂದಿತ್ತು. ಆ ಭರವಸೆಯಂತೆ ಈಗ ನಾಳೆಯಿಂದ ಜಿಯೋದಿಂದ ಬೇರೆ ನೆಟ್​ವರ್ಕ್​ಗಳಿಗೂ ಗ್ರಾಹಕರು ಉಚಿತ ಕರೆ ಮಾಡಬಹುದಾಗಿದೆ. ಏರ್​ಟೆಲ್​ ಷೇರು ಕುಸಿತ

ಜಿಯೋ ಈ ಘೋಷಣೆ ಮಾಡುತ್ತಿದ್ದಂತೆ, ಅದರ ಪ್ರತಿಸ್ಪರ್ಧಿ ಭಾರತಿ ಏರ್​ಟೆಲ್​ನ ಷೇರುಗಳು ಅಂತರ್​ ದಿನ ವಹಿವಾಟಿನಲ್ಲಿ ಶೇ.2ರಷ್ಟು ಕುಸಿಯಿತು.

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ