AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ghost Train: ನಿಂತಿದ್ದ ರೈಲು ಲೋಕೊ ಪೈಲಟ್ ಇಲ್ಲದೆ ಏಕಾಏಕಿ ಹೊರಟೇ ಬಿಡ್ತು, ವೇಗ ನೋಡಿ ಬೆಚ್ಚಿಬಿದ್ದ ಜನ

ಜಮ್ಮು ಮತ್ತು ಕಾಶ್ಮೀರದ ಕಥುವಾ ರೈಲ್ವೆ ನಿಲ್ದಾಣದಲ್ಲಿ ನಿಲುಗಡೆಯಾಗಿದ್ದ ರೈಲು ಏಕಾಏಕಿ ಚಲಿಸಿದ ಘಟನೆ ನಡೆದಿದೆ. ಲೋಕೊ ಪೈಲಟ್ ಇಲ್ಲದೆಯೇ ಗಂಟೆಗೆ 100 ಕಿ.ಮೀ ವೇಗದಲ್ಲಿ ರೈಲು ಸಂಚರಿಸಿತ್ತು ಆದರೆ ಇಳಿಜಾರು ಇದ್ದುದೇ ಕಾರಣ ಎಂದು ಹೇಳಲಾಗಿದೆ.

Ghost Train: ನಿಂತಿದ್ದ ರೈಲು ಲೋಕೊ ಪೈಲಟ್ ಇಲ್ಲದೆ ಏಕಾಏಕಿ ಹೊರಟೇ ಬಿಡ್ತು, ವೇಗ ನೋಡಿ ಬೆಚ್ಚಿಬಿದ್ದ ಜನ
ರೈಲು
ನಯನಾ ರಾಜೀವ್
|

Updated on:Feb 25, 2024 | 12:36 PM

Share

ಜಮ್ಮು ಮತ್ತು ಕಾಶ್ಮೀರ(Jammu And Kashmir)ರದ ಕಥುವಾ ನಿಲ್ದಾಣದಲ್ಲಿ ನಿಂತಿದ್ದ ರೈಲೊಂದು ಲೋಕೊ ಪೈಲಟ್(Loco Pilot)​ ಇಲ್ಲದೆ ಹೊರಟೇಬಿಟ್ಟಿತ್ತು. ರೈಲ್ವೆ ನಿಲ್ದಾಣದಲ್ಲಿದ್ದ ಜನರು ಈ ರೈಲನ್ನು ನೋಡಿ ಒಮ್ಮೆ ಬೆಚ್ಚಿಬಿದ್ದಿದ್ದಾರೆ ಏಕೆಂದರೆ ಅದರ ವೇಗ ಗಂಟೆಗೆ 100 ಕಿ.ಮೀನಷ್ಟಿತ್ತು. ವೇಗ ನೋಡಿ ಈ ರೈಲಿನಲ್ಲಿ ದೆವ್ವವೇನಾದರೂ ಇದೆಯೇ ಎಂದು ಒಮ್ಮೆ ಜನರು ಭಯಗೊಂಡರು.  ಅದೃಷ್ಟಕ್ಕೆ ಅದು ಸರಕು ಸಾಗಣೆ ರೈಲಾಗಿದ್ದ ಹಿನ್ನೆಲೆಯಲ್ಲಿ ಅಷ್ಟೊಂದು ಜನರು ರೈಲಿನಲ್ಲಿರಲಿಲ್ಲ, ರೈಲ್ವೆ ಅಧಿಕಾರಿಗಳ ಪ್ರಯತ್ನದಿಂದಾಗಿ ಪಂಜಾಬ್​ನ ಮುಕೇರಿಯನ್ ರೈಲು ನಿಲ್ದಾಣ(Railway Station)ದಲ್ಲಿ ರೈಲನ್ನು ನಿಲ್ಲಿಸಲಾಯಿತು.

ಲೋಕೊ ಪೈಲಟ್​ ಇಲ್ಲದೆ ಓಡುತ್ತಿರುವ ರೈಲಿನ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ. ರೈಲಿನ ಪ್ರಯಾಣಿಕರ ಬಗ್ಗೆ ಹೆಚ್ಚಿನ ಮಾಹಿತಿಯನ್ನು ರೈಲ್ವೆ ಇನ್ನೂ ಬಿಡುಗಡೆ ಮಾಡಿಲ್ಲ. ಕಥುವಾ ನಿಲ್ದಾಣದಲ್ಲಿ ನಿಲುಗಡೆಯಲ್ಲಿದ್ದ ಸರಕು ರೈಲು ಹಠಾತ್ತನೆ ಪಠಾಣ್‌ಕೋಟ್ ಕಡೆಗೆ ಇಳಿಜಾರಾದ ಕಾರಣ ಚಾಲಕ ಇಲ್ಲದೆ ಓಡಲು ಪ್ರಾರಂಭಿಸಿತು. ಮುಕೇರಿಯನ್ ಪಂಜಾಬ್‌ನ ಉಚ್ಚಿ ಬಸ್ಸಿ ಬಳಿ ರೈಲನ್ನು ನಿಲ್ಲಿಸಲಾಗಿದೆ. ಈ ವಿಷಯದ ಬಗ್ಗೆ ವಿಚಾರಣೆಯನ್ನು ಪ್ರಾರಂಭಿಸಲಾಗಿದೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.

ರೈಲಿನ ವಿಡಿಯೋ

ಭಾನುವಾರ ಬೆಳಗ್ಗೆ 7.10ರ ಸುಮಾರಿಗೆ ಈ ಘಟನೆ ನಡೆದಿದೆ. ಲೋಕೊ ಪೈಲಟ್​ ಜಮ್ಮುವಿನ ಕಥುವಾದಲ್ಲಿ ಗೂಡ್ಸ್​ ರೈಲು ಸಂಖ್ಯೆ 14806 ಆರ್ ಅನ್ನು ನಿಲ್ಲಿಸಿದ್ದರು. ಬಳಿಕ ಚಾಲಕ ಹ್ಯಾಂಡ್‌ಬ್ರೇಕ್‌ ಹಾಕದೆ ರೈಲಿನಿಂದ ಇಳಿದು ಟೀ ಕುಡಿಯಲು ತೆರಳಿದ್ದರು. ಏತನ್ಮಧ್ಯೆ, ರೈಲು ಇದ್ದಕ್ಕಿದ್ದಂತೆ ಚಲಿಸಲು ಪ್ರಾರಂಭಿಸಿತು ಮತ್ತು ಅಂತಿಮವಾಗಿ ವೇಗವನ್ನು ಪಡೆದ ನಂತರ ಓಡಲು ಪ್ರಾರಂಭಿಸಿತು. ಆದರೆ, ರೈಲು ಜಾಲದಲ್ಲಿ ಇಳಿಜಾರಿನ ಕಾರಣ ರೈಲು ಚಲಿಸಲು ಪ್ರಾರಂಭಿಸಿತ್ತು ಎಂದು ಹೇಳಿದ್ದಾರೆ.

ಮತ್ತಷ್ಟು ಓದಿ: ರೈಲಿನಲ್ಲಿ ಬೆಂಕಿ ಹೊತ್ತಿಸುವ ವಸ್ತುಗಳನ್ನು ಸಾಗಿಸದಂತೆ ಪ್ರಯಾಣಿಕರಿಗೆ ನೈಋತ್ಯ ರೈಲ್ವೆ ಮನವಿ

ಲೊಕೊ ಪೈಲಟ್ ಅಥವಾ ಇತರ ಯಾವುದೇ ರೈಲ್ವೇ ಅಧಿಕಾರಿ ವಿರುದ್ಧ ಯಾವುದೇ ಕ್ರಮ ಕೈಗೊಂಡಿರುವ ಬಗ್ಗೆ ವರದಿಯಾಗಿಲ್ಲ. ಆದಾಗ್ಯೂ, ಘಟನೆಗೆ ನಿಖರವಾದ ಕಾರಣವನ್ನು ನಿರ್ಧರಿಸಲು ಈ ವಿಷಯದಲ್ಲಿ ತನಿಖೆಯನ್ನು ಪ್ರಾರಂಭಿಸಲಾಗಿದೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 12:33 pm, Sun, 25 February 24

ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?