AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದ ವೈವಿಧ್ಯತೆ ಸಾರಿದ ‘ಗೂಗಲ್ ಡೂಡಲ್​’; ಗಣರಾಜ್ಯೋತ್ಸವಕ್ಕೆ ಗೌರವ ಸಲ್ಲಿಸಿದ ಇಂಟರ್​ನೆಟ್​ ದೈತ್ಯ

ಈ ಡೂಡಲ್​ ಚಿತ್ರಿಸಿದ ಓಂಕಾರ್​ ಫೊಂಡೇಕರ್, ಏಕತೆಯನ್ನು ಪ್ರಧಾನವಾಗಿಟ್ಟುಕೊಂಡು ನಾನು ಡೂಡಲ್​ ಚಿತ್ರಿಸಿದ್ದೇನೆ. ಐಕ್ಯತಾ ಭಾವವನ್ನು ಪ್ರತಿಯೊಬ್ಬ ಭಾರತೀಯನೂ ಅಳವಡಿಸಿಕೊಳ್ಳಬೇಕು ಎಂಬುದೇ ನನ್ನ ಆಶಯ ಎಂದಿದ್ದಾರೆ.

ಭಾರತದ ವೈವಿಧ್ಯತೆ ಸಾರಿದ ‘ಗೂಗಲ್ ಡೂಡಲ್​’; ಗಣರಾಜ್ಯೋತ್ಸವಕ್ಕೆ ಗೌರವ ಸಲ್ಲಿಸಿದ ಇಂಟರ್​ನೆಟ್​ ದೈತ್ಯ
ಗಣರಾಜ್ಯೋತ್ಸವಕ್ಕಾಗಿ ವಿಶೇಷ ಗೂಗಲ್​ ಡೂಡಲ್​
Lakshmi Hegde
| Edited By: |

Updated on: Jan 26, 2021 | 2:22 PM

Share

ಇಂಟರ್​ನೆಟ್​ ದೈತ್ಯ ಗೂಗಲ್​ ಭಾರತದ 72ಗಣರಾಜ್ಯೋತ್ಸವಕ್ಕೆ ವಿಶೇಷ ಡೂಡಲ್​ ಮೂಲಕ ಗೌರವ ಸಲ್ಲಿಸಿದೆ. ಮುಂಬೈ ಮೂಲದ ಕಲಾವಿದ ಓಂಕಾರ್​ ಫೊಂಡೇಕರ್​ ರಚಿಸಿದ ಕೇಸರಿ-ಬಿಳಿ-ಹಸಿರು ಮಿಶ್ರಿತ ಡೂಡಲ್​ ಇದಾಗಿದ್ದು, ಭಾರತೀಯ ಸಂಸ್ಕೃತಿಯ ವೈವಿಧ್ಯತೆಯನ್ನು ಪ್ರತಿನಿಧಿಸುತ್ತಿದೆ. ಅದರಲ್ಲೂ ಮೈಸೂರು ದಸರಾ ಆನೆ ಅಂಬಾರಿಯೂ ಇರುವುದು ವಿಶೇಷ.

ಭಾರತ ಹೊಂದಿರುವಷ್ಟು ವೈವಿಧ್ಯತೆಯನ್ನು ಜಗತ್ತಿನಲ್ಲಿ ಇನ್ಯಾವ ದೇಶವೂ ಹೊಂದಿಲ್ಲ. ಇಂಥ ವೈವಿಧ್ಯ ದೇಶದಲ್ಲಿ 72 ವರ್ಷಗಳ ಹಿಂದೆ ಇದೇ ದಿನ ಸಂವಿಧಾನ ಜಾರಿಗೆ ಬಂತು. ಅದು ದೇಶದ ಸಂಕ್ರಮಣ ಕಾಲ ಎನಿಸಿತು. ಅಂದಿನಿಂದ ಇಡೀ ದೇಶ ಸಾರ್ವಭೌಮ ಗಣರಾಜ್ಯವಾಗಿ ಬದಲಾಯಿತು. ಅಂದಿನಿಂದಲೂ ಪ್ರತಿವರ್ಷ ಜನವರಿ 26ರನ್ನು ಗಣರಾಜ್ಯ ದಿನವನ್ನಾಗಿ ಆಚರಿಸಲಾಗುತ್ತದೆ.

ಈ ಬಾರಿ ಗೂಗಲ್​ ಕೂಡ ಭಾರತೀಯರೊಂದಿಗೆ ಸೇರಿ ಗಣರಾಜ್ಯೋತ್ಸವ ಆಚರಿಸಿದೆ. ಇಂದಿನ ಡೂಡಲ್​ನಲ್ಲಿ ವಿವಿಧ ರಾಜ್ಯಗಳ ನೃತ್ಯ ಪ್ರಕಾರಗಳು, ಸಂಗೀತ, ಸಾಂಪ್ರದಾಯಿಕ ಉಡುಗೆಗಳ ಚಿತ್ರವನ್ನು ಒಳಗೊಂಡಿದೆ. ಹಾಗೇ, ವ್ಯಕ್ತಿಯೊಬ್ಬ ಕ್ರಿಕೆಟ್​ ಆಡುತ್ತಿರುವುದು, ಸಿನಿಮಾ ನಿರ್ದೇಶಕ ಕ್ಯಾಮರಾ ಹಿಡಿದುಕೊಂಡಿರುವ ಚಿತ್ರವನ್ನೂ ನೋಡಬಹುದು.

ಈ ಡೂಡಲ್​ ಚಿತ್ರಿಸಿದ ಓಂಕಾರ್​ ಫೊಂಡೇಕರ್, ಏಕತೆಯನ್ನು ಪ್ರಧಾನವಾಗಿಟ್ಟುಕೊಂಡು ನಾನು ಡೂಡಲ್​ ಚಿತ್ರಿಸಿದ್ದೇನೆ. ಐಕ್ಯತಾ ಭಾವವನ್ನು ಪ್ರತಿಯೊಬ್ಬ ಭಾರತೀಯನೂ ಅಳವಡಿಸಿಕೊಳ್ಳಬೇಕು ಎಂಬುದೇ ನನ್ನ ಆಶಯ. ಜಾಗತಿಕ ವೇದಿಕೆಯಾದ ಗೂಗಲ್​ ಡೂಡಲ್​ನಲ್ಲಿ ಭಾರತ ಏಕತೆಯನ್ನು ಚಿತ್ರಿಸಲು ಅವಕಾಶ ಸಿಕ್ಕಿದ್ದಕ್ಕೆ ತುಂಬ ಖುಷಿಯಾಗುತ್ತಿದೆ ಎಂದೂ ಹೇಳಿದ್ದಾರೆ.

72ನೇ ಗಣರಾಜ್ಯೋತ್ಸವ ಸಂಭ್ರಮ: ರಾಜಪಥ್‌ನಲ್ಲಿ ರಾಷ್ಟ್ರಪತಿ ಕೋವಿಂದ್‌ರಿಂದ ಧ್ವಜಾರೋಹಣ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!