AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೂಗಲ್​ ಪೇ ಬಳಕೆದಾರರಿಗೊಂದು ಗುಡ್​ನ್ಯೂಸ್; ಯುಎಸ್​ನಲ್ಲಿದ್ದುಕೊಂಡು, ಭಾರತದಲ್ಲಿದ್ದವರಿಗೂ ಹಣ ವರ್ಗಾವಣೆ ಮಾಡಬಹುದು !

ಕಳೆದ ನವೆಂಬರ್​ನಲ್ಲಿ ಗೂಗಲ್​ ತನ್ನ ಡಿಜಿಟಲ್​ ಪೇಮೆಂಟ್ ಆ್ಯಪ್​ ಗೂಗಲ್​ ಪೇ ಯನ್ನು ಯುಎಸ್​​ನಲ್ಲಿ ಅಪ್​​ಡೇಟ್ ಮಾಡಿತ್ತು.

ಗೂಗಲ್​ ಪೇ ಬಳಕೆದಾರರಿಗೊಂದು ಗುಡ್​ನ್ಯೂಸ್; ಯುಎಸ್​ನಲ್ಲಿದ್ದುಕೊಂಡು, ಭಾರತದಲ್ಲಿದ್ದವರಿಗೂ ಹಣ ವರ್ಗಾವಣೆ ಮಾಡಬಹುದು !
ಗೂಗಲ್​ ಪೇ ಚಿತ್ರ
Lakshmi Hegde
|

Updated on: May 12, 2021 | 6:39 PM

Share

ಡಿಜಿಟಲ್​ ಪಾವತಿ ಸಂಸ್ಥೆಯಾದ ಗೂಗಲ್ ಪೇ ಇದೀಗ ಮಹತ್ವದ ಹೆಜ್ಜೆ ಇಟ್ಟಿದೆ. ವೈಸ್​ ಮತ್ತು ವೆಸ್ಟರ್ನ್ ಯೂನಿಯನ್ ಕಂಪನಿಗಳ ಸಹಯೋಗದೊಂದಿಗೆ ಅಂತಾರಾಷ್ಟ್ರೀಯ ಮಟ್ಟದ ಹಣ ವರ್ಗಾವಣೆ ವ್ಯವಸ್ಥೆಯನ್ನು ಶುರು ಮಾಡಿದೆ. ಇದೀಗ ನೀವು ಭಾರತದಲ್ಲಿದ್ದರೂ, ಅಮೆರಿಕದಲ್ಲಿ ಇದ್ದವರಿಂದ ಗೂಗಲ್ ಪೇ ಮೂಲಕ ಹಣ ಸ್ವೀಕರಿಸಬಹುದಾಗಿದೆ. ಇದೇ ಅವಕಾಶ ಸಿಂಗಪೂರ್​ ದೇಶದವರಿಗೂ ಅನ್ವಯ ಆಗಲಿದೆ.

ಗೂಗಲ್​ ಪೇನಲ್ಲಿ ಹಣ ರವಾನೆ ವ್ಯವಸ್ಥೆಯನ್ನು ವಿಸ್ತರಿಸಲು, ಇದರ ಕಾರ್ಯಕ್ಷಮತೆಯನ್ನು ಹೆಚ್ಚಿಸಲಾಗಿದೆ. ಈ ವರ್ಷದ ಅಂತ್ಯದೊಳಗೆ ಅಮೆರಿಕದಲ್ಲಿರುವ ಗೂಗಲ್​ ಪೇ ಬಳಕೆದಾರರು ವೆಸ್ಟರ್ನ್ ಯೂನಿಯನ್ ಕಂಪನಿ ಮೂಲಕ 200ಕ್ಕೂ ಹೆಚ್ಚು ದೇಶಗಳಿಗೆ ಮತ್ತು ವೈಸ್ ಮೂಲಕ 80ಕ್ಕೂ ಹೆಚ್ಚು ರಾಷ್ಟ್ರಗಳಲ್ಲಿರುವ ಜನರಿಗೆ ಹಣ ವರ್ಗಾಯಿಸಬಹುದು ಎಂದು ಗೂಗಲ್ ನಿರೀಕ್ಷೆ ಮಾಡಿದೆ.

ಯುಎಸ್​ನಲ್ಲಿರುವ ಗೂಗಲ್ ಪೇ ಬಳಕೆದಾರರು ಭಾರತದಲ್ಲಿರುವ ಜನರಿಗೆ ಹೇಗೆ ಹಣಕಳಿಸಬಹುದು ಎಂಬುದು ಸಹಜವಾಗಿಯೇ ಏಳುವ ಪ್ರಶ್ನೆ. ಜೂನ್​ 16ರವರೆಗೆ ವೆಸ್ಟರ್ನ್ ಯೂನಿಯನ್​ ಕಂಪನಿ ಉಚಿತ ಅನಿಯಮಿತವಾಗಿ ಗೂಗಲ್​ ಪೇ ಮೂಲಕ ಹಣ ವರ್ಗಾವಣೆಗೆ ಅವಕಾಶ ನೀಡಿದೆ. ಹಾಗೇ, ವೈಸ್​ ಇಂದಿನಿಂದ ಜೂ.16ರವರೆಗೆ ತನ್ನ ಹೊಸ ಗ್ರಾಹಕರಿಗೆ 500 ಡಾಲರ್​​ವರೆಗಿನ ವರ್ಗಾವಣೆಯನ್ನು ಉಚಿತವಾಗಿ ಮಾಡಲು ಅವಕಾಶ ನೀಡಿದೆ.

ಗೂಗಲ್ ಆ್ಯಪ್ ಬಳಕೆದಾರರು ಹೀಗೆ ಮಾಡಬೇಕು ಮೊದಲು ಗೂಗಲ್ ಪೇ ಆ್ಯಪ್ ಓಪನ್ ಮಾಡಬೇಕು ಅದರಲ್ಲಿ ಪೇ ಎಂಬಲ್ಲಿ ಕ್ಲಿಕ್ ಮಾಡಿ. ನಂತರ ಅಲ್ಲಿ ವೆಸ್ಟರ್ನ್​ ಯೂನಿಯನ್ ಮತ್ತು ವೈಸ್​ ಎರಡರಲ್ಲಿ ಒಂದನ್ನು ಆಯ್ಕೆ ಮಾಡಿಕೊಳ್ಳಿ. ಆಯ್ಕೆ ಮಾಡಿದ ನಂತರ ಸ್ಕ್ರೀನ್ ಮೇಲೆ ಕಾಣಿಸುವ ನಿಯಮಗಳನ್ನು ಅನುಸರಿಸಿ, ನಿಮ್ಮ ಟ್ರಾನ್ಸಾಕ್ಷನ್​ ಪೂರ್ಣಗೊಳಿಸಿ.

ಕಳೆದ ನವೆಂಬರ್​ನಲ್ಲಿ ಗೂಗಲ್​ ತನ್ನ ಡಿಜಿಟಲ್​ ಪೇಮೆಂಟ್ ಆ್ಯಪ್​ ಗೂಗಲ್​ ಪೇ ಯನ್ನು ಯುಎಸ್​​ನಲ್ಲಿ ಅಪ್​​ಡೇಟ್ ಮಾಡಿತ್ತು. ಆ್ಯಂಡ್ರಾಯ್ಡ್​ ಮತ್ತು ಆ್ಯಪಲ್​ ಬಳಕೆದಾರರಿಬ್ಬರಿಗೂ ಈ ಅಪ್​ಡೇಟೆಡ್ ವರ್ಷನ್ ಬಳಕೆಗೆ ಅವಕಾಶ ಮಾಡಿಕೊಡಲಾಗಿತ್ತು.

ಇದನ್ನೂ ಓದಿ:  ಐಪಿಎಲ್​ ನಡೆದಿದ್ದರೆ ಆರ್ಸಿಬಿ ಚಾಂಪಿಯನ್ ಪಟ್ಟಕ್ಕೇರುತ್ತಿತ್ತು; ರೆಡ್ಡಿಟ್ ಬಳಕೆದಾರನ ದತ್ತಾಂಶ ವಿಶ್ಲೇಷಣಾ ಪಲಿತಾಂಶ

ಶೀಘ್ರವೇ 2 ಮತ್ತು 3ನೇ ಹಂತದ ಪ್ರಯೋಗ ಆರಂಭಿಸುತ್ತೇವೆ: ಏಮ್ಸ್ ವೈದ್ಯಕೀಯ ವಿಭಾಗದ ಡಾ.ಸಂಜೀವ್ ಸಿನ್ಹಾ

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ