AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Google ನಿಂದ ಭಾರತದಲ್ಲಿ ಮತ್ತೂ ಒಂದು ಬೃಹತ್​ ಹೂಡಿಕೆ, ಎಲ್ಲಿ?

ಭಾರತದಲ್ಲಿ ಬರೋಬ್ಬರಿ 75,000 ಸಾವಿರ ಕೋಟಿ ಹೂಡಲು ಮುಂದಾಗಿರುವ ಡಿಜಿಟಲ್​ ಲೋಕದ ದಿಗ್ಗಜ ಗೂಗಲ್ ಇದೀಗ ಮತ್ತೂ ಒಂದು ಬೃಹತ್​ ಹೂಡಿಕೆಗೆ ಮುಂದಾಗಿದೆ. ಹೌದು, ಉನ್ನತ ಮೂಲಗಳ ಪ್ರಕಾರ ಗೂಗಲ್ ಇದೀಗ ಮುಕೇಶ್​ ಅಂಬಾನಿ ಒಡೆತನದ ರಿಲಯನ್ಸ್​ ಡಿಜಿಟಲ್​ ಕಂಪನಿಯಲ್ಲಿ ಬರೋಬ್ಬರಿ 4 ಬಿಲಿಯನ್​ ಡಾಲರ್ ( 30,000 ಕೋ.ಟಿ ರೂ)​ ಹೂಡಿಕೆ ಮಾಡಲು ಮುಂದಾಗಿದೆ. ಆದರೆ, ಈ ಬಗ್ಗೆ ಗೂಗಲ್​ ಹಾಗೂ ರಿಲಯನ್ಸ್ ಸಂಸ್ಥೆ ಪ್ರತಿಕ್ರಿಯೆ ನೀಡಲು ನಿರಾಕರಿಸಿವೆ. ಆದ್ರೆ ಮೂಲಗಳ ಪ್ರಕಾರ ಉಭಯ ಕಂಪನಿಗಳೂ […]

Google ನಿಂದ ಭಾರತದಲ್ಲಿ ಮತ್ತೂ ಒಂದು ಬೃಹತ್​ ಹೂಡಿಕೆ, ಎಲ್ಲಿ?
ಪ್ರಾತಿನಿಧಿಕ ಚಿತ್ರ
KUSHAL V
|

Updated on:Jul 14, 2020 | 5:48 PM

Share

ಭಾರತದಲ್ಲಿ ಬರೋಬ್ಬರಿ 75,000 ಸಾವಿರ ಕೋಟಿ ಹೂಡಲು ಮುಂದಾಗಿರುವ ಡಿಜಿಟಲ್​ ಲೋಕದ ದಿಗ್ಗಜ ಗೂಗಲ್ ಇದೀಗ ಮತ್ತೂ ಒಂದು ಬೃಹತ್​ ಹೂಡಿಕೆಗೆ ಮುಂದಾಗಿದೆ.

ಹೌದು, ಉನ್ನತ ಮೂಲಗಳ ಪ್ರಕಾರ ಗೂಗಲ್ ಇದೀಗ ಮುಕೇಶ್​ ಅಂಬಾನಿ ಒಡೆತನದ ರಿಲಯನ್ಸ್​ ಡಿಜಿಟಲ್​ ಕಂಪನಿಯಲ್ಲಿ ಬರೋಬ್ಬರಿ 4 ಬಿಲಿಯನ್​ ಡಾಲರ್ ( 30,000 ಕೋ.ಟಿ ರೂ)​ ಹೂಡಿಕೆ ಮಾಡಲು ಮುಂದಾಗಿದೆ. ಆದರೆ, ಈ ಬಗ್ಗೆ ಗೂಗಲ್​ ಹಾಗೂ ರಿಲಯನ್ಸ್ ಸಂಸ್ಥೆ ಪ್ರತಿಕ್ರಿಯೆ ನೀಡಲು ನಿರಾಕರಿಸಿವೆ. ಆದ್ರೆ ಮೂಲಗಳ ಪ್ರಕಾರ ಉಭಯ ಕಂಪನಿಗಳೂ ಈ ಹೂಡಿಕೆ ವಿಚಾರವಾಗಿ ಬಹುತೇಕ ಕೊನೆಯ ಘಟ್ಟದಲ್ಲಿವೆ ಎಂದು ತಿಳಿಸಿದ್ದಾರೆ.

ಈಗಾಗಲೇ ಫೇಸ್​ಬುಕ್​ ಸೇರಿದಂತೆ ಇನ್ನೂ ಕೆಲ ವಿದೇಶಿ ಕಂಪನಿಗಳು ರಿಲಯನ್ಸ್ ಸಂಸ್ಥೆಯಲ್ಲಿ ಸರಿಸುಮಾರು 15.64 ಬಿಲಿಯನ್​ ಡಾಲರ್​ನಷ್ಟು ಹೂಡಿಕೆ ಮಾಡಿ ಪಾಲು ಪಡೆದಿವೆ. ಇದೀಗ ಡಿಜಿಟಲ್​ ದಿಗ್ಗಜ ಗೂಗಲ್​ ಸಹ ಹೂಡಿಕೆಗೆ ಮುಂದಾಗಿರೋದು ಎಲ್ಲರ ಕುತೂಹಲವನ್ನ ಮತ್ತಷ್ಟು ಕೆರಳಿಸಿದೆ. ಕೊರೊನಾ ಆರ್ಥಿಕ ಸಂಕಷ್ಟ ಕಾಲದಲ್ಲಿ ಇದು ಭಾರತ ಆರ್ಥಿಕತೆಗೆ ನೆರವಾಗಲಿದೆ ಎಂದು ಆಶಿಸಲಾಗಿದೆ.

ಭಾರತದಲ್ಲಿ ಒಟ್ಟು 1 ಲಕ್ಷ ಕೋಟಿ ರೂ ಹೂಡಿಕೆ, ಜೈ ಹೋ ಸುಂದರ್​ ಪಿಚೈ! ಅಂದ್ರೆ, ಕೊರೊನಾದಂತಹ ಸಂಕಷ್ಟ ಕಾಲದಲ್ಲಿ.. ನಿನ್ನೆಯ 75 ಸಾವಿರ ಕೋಟಿ ರೂ ಮತ್ತು ಈಗಿನ 30  ಸಾವಿರ ಕೋಟಿ ಅಂದ್ರೆ 1 ಲಕ್ಷ ಕೋಟಿ ರೂಪಾಯಿಯನ್ನು ಗೂಗಲ್ ಕಂಪನಿ ಭಾರತದಲ್ಲಿ ಹೂಡಿಕೆ ಮಾಡಲಿದೆ. ತನ್ಮೂಲಕ ಗೂಗಲ್ ಸಿಇಒ, ಚೆನ್ನೈ ಮೂಲದ ಸುಂದರ್ ಪಿಚೈ ದೇಶ ಪ್ರೇಮ ತೋರಿರುವುದು ಭಾರೀ ಪ್ರಶಂಸೆಗೆ ಗುರಿಯಾಗಿದೆ.

Published On - 5:33 pm, Tue, 14 July 20

‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?