ಗೋಪಾಲ್ ಖೇಮ್ಕಾ ಕೊಲೆ ಪ್ರಕರಣ: ಆರೋಪಿ ವಿಕಾಸ್ ಪೊಲೀಸ್ ಎನ್​ಕೌಂಟರ್​​ನಲ್ಲಿ ಹತ್ಯೆ

Gopal Khemka murder accused Vikas shot dead: ಉದ್ಯಮಿ ಗೋಪಾಲ್ ಖೇಮ್ಕಾ ಕೊಲೆ ಆರೋಪಿ ವಿಕಾಸ್ ಎಂಬಾತ ಕಳೆದ ರಾತ್ರಿ ಪೊಲೀಸ್ ಎನ್​ಕೌಂಟರ್​​ನಲ್ಲಿ ಹತ್ಯೆಯಾಗಿದ್ದಾನೆ. ರೇಡ್ ಮಾಡಲು ಬಂದ ಪೊಲೀಸರ ಮೇಲೆ ವಿಕಾಸ್ ಅಲಿಯಾಸ್ ರಾಜಾ ಗುಂಡು ಹಾರಿಸಿದಾಗ, ಪೊಲೀಸರು ಪ್ರತಿದಾಳಿ ನಡೆಸಿ ಆತನನ್ನು ಹತ್ಯೆ ಮಾಡಿದ್ಧಾರೆ. ಖೇಮ್ಕಾ ಹತ್ಯೆಯಲ್ಲಿ ವಿಕಾಸ್ ನೇರ ಭಾಗಿಯಾಗಿರುವ ಆರೋಪ ಇದೆ.

ಗೋಪಾಲ್ ಖೇಮ್ಕಾ ಕೊಲೆ ಪ್ರಕರಣ: ಆರೋಪಿ ವಿಕಾಸ್ ಪೊಲೀಸ್ ಎನ್​ಕೌಂಟರ್​​ನಲ್ಲಿ ಹತ್ಯೆ
ಗೋಪಾಲ್ ಖೇಮ್ಕಾ ಹತ್ಯೆ

Updated on: Jul 08, 2025 | 1:54 PM

ಪಟ್ನಾ, ಜುಲೈ 8: ಬಿಹಾರದ ಉದ್ಯಮಿ ಗೋಪಾಲ್ ಖೇಮ್ಕಾ ಹತ್ಯೆ ಪ್ರಕರಣದ ಆರೋಪಿ ವಿಕಾಸ್ (Vikas) ಅಲಿಯಾಸ್ ರಾಜಾ ಎಂಬಾತ ಪೊಲೀಸ್ ಎನ್​​ಕೌಂಟರ್​​ನಲ್ಲಿ ಹತ್ಯೆಯಾಗಿದ್ದಾನೆ. ಇಂದು ಮಂಗಳವಾರ ಮುಂಜಾನೆ ವೇಳೆ (ರಾತ್ರಿ 2:45) ಈ ಘಟನೆ ನಡೆದಿರುವುದು ವರದಿಯಾಗಿದೆ. ಗೋಪಾಲ್ ಖೇಮ್ಕಾ ಹತ್ಯೆ ಪ್ರಕರಣದ (Gopal Khemka murder case) ತನಿಖೆ ನಡೆಸುತ್ತಿರುವ ಎಸ್​​ಐಟಿ ಹಾಗೂ ಎಸ್​ಟಿಎಫ್ ತಂಡಗಳ ಪೊಲೀಸರು ರೇಡ್ ನಡೆಸುವಾಗ ಈ ಎನ್​​ಕೌಂಟರ್ ಸಂಭವಿಸಿದೆ ಎನ್ನಲಾಗಿದೆ.

ರೇಡ್ ಮಾಡಲು ಬಂದ ಪೊಲೀಸರ ಮೇಲೆ ವಿಕಾಸ್ ಗುಂಡಿನ ದಾಳಿ ನಡೆಸಲು ಮುಂದಾಗಿದ್ದ. ಇದಕ್ಕೆ ಪ್ರತಿಯಾಗಿ ಪೊಲೀಸರೂ ಫೈರಿಂಗ್ ನಡೆಸಿದ್ದಾರೆ. ಈ ವೇಳೆ, ಗುಂಡೇಟು ಬಿದ್ದು ಆರೋಪಿ ವಿಕಾಸ್ ಸ್ಥಳದಲ್ಲೇ ಸತ್ತಿದ್ದಾನೆ. ಸ್ಥಳದಿಂದ ಒಂದು ಪಿಸ್ತೂಲ್, ಒಂದು ಬುಲೆಟ್ ಮತ್ತು ಕಾರ್ಟ್ರಿಡ್ಜ್ ಅನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.

ಇದನ್ನೂ ಓದಿ: ಅಮೆರಿಕದಲ್ಲಿ ಭೀಕರ ಕಾರ್ ಅಪಘಾತ; ಭಾರತ ಮೂಲದ ಒಂದೇ ಕುಟುಂಬದ ನಾಲ್ವರ ಸಾವು

ಇದನ್ನೂ ಓದಿ
ಪಾಕಿಸ್ತಾನ ಸೇನೆಯ ಏಜೆಂಟ್ ಆಗಿದ್ದೆ; ತಹವ್ವೂರ್ ರಾಣಾ ಬಿಚ್ಚಿಟ್ಟ ಸತ್ಯಗಳಿವು
ಉದ್ಯಮಿ ಕೊಲೆ ಮಾಡಿ ಅಂತ್ಯಸಂಸ್ಕಾರಕ್ಕೆ ಬಂದಿದ್ದ ಹಂತಕ, ಅಲ್ಲೇ ಅರೆಸ್ಟ್​
ಕುಡಿದ ಮತ್ತಿನಲ್ಲಿ ವಾಗ್ವಾದ, ಬಿಜೆಪಿ ನಾಯಕನ ಸಹೋದರನಿಗೆ ಗುಂಡಿಕ್ಕಿ ಹತ್ಯೆ
ಬಿಜೆಪಿ ನಾಯಕ ಗೋಪಾಲ್ ಖೇಮ್ಕಾ ಮೇಲೆ ಗುಂಡಿನ ದಾಳಿ

ಈ ವ್ಯಕ್ತಿ ಅಕ್ರಮ ಶಸ್ತ್ರಾಸ್ತ್ರಗಳನ್ನು ತಯಾರಿಸುವ ಮತ್ತು ಮಾರುವ ದಂಧೆ ನಡೆಸುತ್ತಿದ್ದ ಎನ್ನಲಾಗಿದೆ. ಇದು ಪೊಲೀಸರು ನೀಡಿರುವ ಮಾಹಿತಿಯಾಗಿದೆ. ವಿಕಾಸ್​​ನ ಮೃತದೇಹವನ್ನು ಪೋಸ್ಟ್ ಮಾರ್ಟಮ್ ಪರೀಕ್ಷೆಗೆ ನಳಂದ ಮೆಡಿಕಲ್ ಕಾಲೇಜಿಗೆ ಕಳುಹಿಸಲಾಗಿದೆ.

ಜುಲೈ 4, ಶುಕ್ರವಾರದಂದು ಬಿಹಾರ ರಾಜಧಾನಿ ಪಟ್ನಾ ನಗರದಲ್ಲಿ ಗೋಪಾಲ್ ಖೇಮ್ಕಾ ಅವರನ್ನು ಗುಂಡಿಟ್ಟು ಹತ್ಯೆ ಮಾಡಲಾಗಿತ್ತು. ಗಾಂಧಿ ಮೈದಾನ್ ಪೊಲೀಸ್ ಸ್ಟೇಷನ್ ವ್ಯಾಪ್ತಿಯಲ್ಲಿ, ಅವರ ಮನೆ ಹೊರಗೆ ಆ ಘಟನೆ ನಡೆದಿತ್ತು. ಖೇಮ್ಕಾ ಅವರು ತಮ್ಮ ಮನೆಯ ಗೇಟ್ ಬಳಿ ಕಾರಿನಲ್ಲಿ ಬಂದ ಕೂಡಲೇ ಅಲ್ಲೇ ಕಾದಿದ್ದ ಹೆಲ್ಮೆಟ್​ಧಾರಿ ವ್ಯಕ್ತಿಯೊಬ್ಬ ಗುಂಡಿನ ದಾಳಿ ಮಾಡಿದ್ದ. ಬೈಕ್​​ನಲ್ಲಿ ಬಂದಿದ್ದ ಆತ ಕೂಡಲೇ ಅಲ್ಲಿಂದ ಪರಾರಿಯಾಗಿದ್ದ.

ಗೋಪಾಲ್ ಖೇಮ್ಕಾ ಬಿಜೆಪಿ ಪಕ್ಷಕ್ಕೆ ನಿಕಟವಾಗಿದ್ದರು. ಮಗಧ್ ಆಸ್ಪತ್ರೆಯ ಮಾಲೀಕರಾಗಿದ್ದ ಖೇಮ್ಕಾ, ಹಲವು ಸಾಮಾಜಿಕ ಸಂಘಟನೆಗಳೊಂದಿಗೆ ಜೋಡಿಸಿಕೊಂಡಿದ್ದರು.

ಇದನ್ನೂ ಓದಿ: ಮಹಾರಾಷ್ಟ್ರದಲ್ಲಿ ಭಾಷಾ ಕಿಡಿ; ಎಂಎನ್​ಎಸ್​​​ನಿಂದ ಇಂದು ಮೆರವಣಿಗೆ; ಕಾರ್ಯಕರ್ತರನ್ನು ವಶಕ್ಕೆ ಪಡೆದ ಪೊಲೀಸ್

ಆರೇಳು ವರ್ಷದ ಹಿಂದೆ (2018ರ ಡಿಸೆಂಬರ್ 20) ಗೋಪಾಲ್ ಖೇಮ್ಕಾ ಅವರ ಮಗ ಗುಂಜನ್ ಖೇಮ್ಕಾ ಅವರನ್ನೂ ಹಾಜಿಪುರ್ ಇಂಡಸ್ಟ್ರಿಯಲ್ ಏರಿಯಾದಲ್ಲಿ ಗುಂಡಿಟ್ಟು ಹತ್ಯೆ ಮಾಡಲಾಗಿತ್ತು.

ಈ ಕೊಲೆ ಪ್ರಕರಣ ಸಂಬಂಧ ಪೊಲೀಸರು ಇಬ್ಬರು ವ್ಯಕ್ತಿಗಳನ್ನು ಕಸ್ಟಡಿಗೆ ತೆಗೆದುಕೊಂಡಿದ್ದಾರೆ. ಹತ್ಯೆ ಮಾಡಲು ಶೂಟರ್​​ಗೆ ಕಾಂಟ್ರಾಕ್ಟ್ ಕೊಟ್ಟ ಆರೋಪ ಇರುವ ಒಬ್ಬ ವ್ಯಕ್ತಿಯೂ ಕಸ್ಟಡಿಯಲ್ಲಿದ್ದಾನೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 12:56 pm, Tue, 8 July 25