ಗೋಪಾಲ್ ಖೇಮ್ಕಾ ಕೊಲೆ ಪ್ರಕರಣ: ಆರೋಪಿ ವಿಕಾಸ್ ಪೊಲೀಸ್ ಎನ್​ಕೌಂಟರ್​​ನಲ್ಲಿ ಹತ್ಯೆ

Gopal Khemka murder accused Vikas shot dead: ಉದ್ಯಮಿ ಗೋಪಾಲ್ ಖೇಮ್ಕಾ ಕೊಲೆ ಆರೋಪಿ ವಿಕಾಸ್ ಎಂಬಾತ ಕಳೆದ ರಾತ್ರಿ ಪೊಲೀಸ್ ಎನ್​ಕೌಂಟರ್​​ನಲ್ಲಿ ಹತ್ಯೆಯಾಗಿದ್ದಾನೆ. ರೇಡ್ ಮಾಡಲು ಬಂದ ಪೊಲೀಸರ ಮೇಲೆ ವಿಕಾಸ್ ಅಲಿಯಾಸ್ ರಾಜಾ ಗುಂಡು ಹಾರಿಸಿದಾಗ, ಪೊಲೀಸರು ಪ್ರತಿದಾಳಿ ನಡೆಸಿ ಆತನನ್ನು ಹತ್ಯೆ ಮಾಡಿದ್ಧಾರೆ. ಖೇಮ್ಕಾ ಹತ್ಯೆಯಲ್ಲಿ ವಿಕಾಸ್ ನೇರ ಭಾಗಿಯಾಗಿರುವ ಆರೋಪ ಇದೆ.

ಗೋಪಾಲ್ ಖೇಮ್ಕಾ ಕೊಲೆ ಪ್ರಕರಣ: ಆರೋಪಿ ವಿಕಾಸ್ ಪೊಲೀಸ್ ಎನ್​ಕೌಂಟರ್​​ನಲ್ಲಿ ಹತ್ಯೆ
ಗೋಪಾಲ್ ಖೇಮ್ಕಾ ಹತ್ಯೆ

Updated on: Jul 08, 2025 | 1:54 PM

ಪಟ್ನಾ, ಜುಲೈ 8: ಬಿಹಾರದ ಉದ್ಯಮಿ ಗೋಪಾಲ್ ಖೇಮ್ಕಾ ಹತ್ಯೆ ಪ್ರಕರಣದ ಆರೋಪಿ ವಿಕಾಸ್ (Vikas) ಅಲಿಯಾಸ್ ರಾಜಾ ಎಂಬಾತ ಪೊಲೀಸ್ ಎನ್​​ಕೌಂಟರ್​​ನಲ್ಲಿ ಹತ್ಯೆಯಾಗಿದ್ದಾನೆ. ಇಂದು ಮಂಗಳವಾರ ಮುಂಜಾನೆ ವೇಳೆ (ರಾತ್ರಿ 2:45) ಈ ಘಟನೆ ನಡೆದಿರುವುದು ವರದಿಯಾಗಿದೆ. ಗೋಪಾಲ್ ಖೇಮ್ಕಾ ಹತ್ಯೆ ಪ್ರಕರಣದ (Gopal Khemka murder case) ತನಿಖೆ ನಡೆಸುತ್ತಿರುವ ಎಸ್​​ಐಟಿ ಹಾಗೂ ಎಸ್​ಟಿಎಫ್ ತಂಡಗಳ ಪೊಲೀಸರು ರೇಡ್ ನಡೆಸುವಾಗ ಈ ಎನ್​​ಕೌಂಟರ್ ಸಂಭವಿಸಿದೆ ಎನ್ನಲಾಗಿದೆ.

ರೇಡ್ ಮಾಡಲು ಬಂದ ಪೊಲೀಸರ ಮೇಲೆ ವಿಕಾಸ್ ಗುಂಡಿನ ದಾಳಿ ನಡೆಸಲು ಮುಂದಾಗಿದ್ದ. ಇದಕ್ಕೆ ಪ್ರತಿಯಾಗಿ ಪೊಲೀಸರೂ ಫೈರಿಂಗ್ ನಡೆಸಿದ್ದಾರೆ. ಈ ವೇಳೆ, ಗುಂಡೇಟು ಬಿದ್ದು ಆರೋಪಿ ವಿಕಾಸ್ ಸ್ಥಳದಲ್ಲೇ ಸತ್ತಿದ್ದಾನೆ. ಸ್ಥಳದಿಂದ ಒಂದು ಪಿಸ್ತೂಲ್, ಒಂದು ಬುಲೆಟ್ ಮತ್ತು ಕಾರ್ಟ್ರಿಡ್ಜ್ ಅನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.

ಇದನ್ನೂ ಓದಿ: ಅಮೆರಿಕದಲ್ಲಿ ಭೀಕರ ಕಾರ್ ಅಪಘಾತ; ಭಾರತ ಮೂಲದ ಒಂದೇ ಕುಟುಂಬದ ನಾಲ್ವರ ಸಾವು

ಇದನ್ನೂ ಓದಿ
ಪಾಕಿಸ್ತಾನ ಸೇನೆಯ ಏಜೆಂಟ್ ಆಗಿದ್ದೆ; ತಹವ್ವೂರ್ ರಾಣಾ ಬಿಚ್ಚಿಟ್ಟ ಸತ್ಯಗಳಿವು
ಉದ್ಯಮಿ ಕೊಲೆ ಮಾಡಿ ಅಂತ್ಯಸಂಸ್ಕಾರಕ್ಕೆ ಬಂದಿದ್ದ ಹಂತಕ, ಅಲ್ಲೇ ಅರೆಸ್ಟ್​
ಕುಡಿದ ಮತ್ತಿನಲ್ಲಿ ವಾಗ್ವಾದ, ಬಿಜೆಪಿ ನಾಯಕನ ಸಹೋದರನಿಗೆ ಗುಂಡಿಕ್ಕಿ ಹತ್ಯೆ
ಬಿಜೆಪಿ ನಾಯಕ ಗೋಪಾಲ್ ಖೇಮ್ಕಾ ಮೇಲೆ ಗುಂಡಿನ ದಾಳಿ

ಈ ವ್ಯಕ್ತಿ ಅಕ್ರಮ ಶಸ್ತ್ರಾಸ್ತ್ರಗಳನ್ನು ತಯಾರಿಸುವ ಮತ್ತು ಮಾರುವ ದಂಧೆ ನಡೆಸುತ್ತಿದ್ದ ಎನ್ನಲಾಗಿದೆ. ಇದು ಪೊಲೀಸರು ನೀಡಿರುವ ಮಾಹಿತಿಯಾಗಿದೆ. ವಿಕಾಸ್​​ನ ಮೃತದೇಹವನ್ನು ಪೋಸ್ಟ್ ಮಾರ್ಟಮ್ ಪರೀಕ್ಷೆಗೆ ನಳಂದ ಮೆಡಿಕಲ್ ಕಾಲೇಜಿಗೆ ಕಳುಹಿಸಲಾಗಿದೆ.

ಜುಲೈ 4, ಶುಕ್ರವಾರದಂದು ಬಿಹಾರ ರಾಜಧಾನಿ ಪಟ್ನಾ ನಗರದಲ್ಲಿ ಗೋಪಾಲ್ ಖೇಮ್ಕಾ ಅವರನ್ನು ಗುಂಡಿಟ್ಟು ಹತ್ಯೆ ಮಾಡಲಾಗಿತ್ತು. ಗಾಂಧಿ ಮೈದಾನ್ ಪೊಲೀಸ್ ಸ್ಟೇಷನ್ ವ್ಯಾಪ್ತಿಯಲ್ಲಿ, ಅವರ ಮನೆ ಹೊರಗೆ ಆ ಘಟನೆ ನಡೆದಿತ್ತು. ಖೇಮ್ಕಾ ಅವರು ತಮ್ಮ ಮನೆಯ ಗೇಟ್ ಬಳಿ ಕಾರಿನಲ್ಲಿ ಬಂದ ಕೂಡಲೇ ಅಲ್ಲೇ ಕಾದಿದ್ದ ಹೆಲ್ಮೆಟ್​ಧಾರಿ ವ್ಯಕ್ತಿಯೊಬ್ಬ ಗುಂಡಿನ ದಾಳಿ ಮಾಡಿದ್ದ. ಬೈಕ್​​ನಲ್ಲಿ ಬಂದಿದ್ದ ಆತ ಕೂಡಲೇ ಅಲ್ಲಿಂದ ಪರಾರಿಯಾಗಿದ್ದ.

ಗೋಪಾಲ್ ಖೇಮ್ಕಾ ಬಿಜೆಪಿ ಪಕ್ಷಕ್ಕೆ ನಿಕಟವಾಗಿದ್ದರು. ಮಗಧ್ ಆಸ್ಪತ್ರೆಯ ಮಾಲೀಕರಾಗಿದ್ದ ಖೇಮ್ಕಾ, ಹಲವು ಸಾಮಾಜಿಕ ಸಂಘಟನೆಗಳೊಂದಿಗೆ ಜೋಡಿಸಿಕೊಂಡಿದ್ದರು.

ಇದನ್ನೂ ಓದಿ: ಮಹಾರಾಷ್ಟ್ರದಲ್ಲಿ ಭಾಷಾ ಕಿಡಿ; ಎಂಎನ್​ಎಸ್​​​ನಿಂದ ಇಂದು ಮೆರವಣಿಗೆ; ಕಾರ್ಯಕರ್ತರನ್ನು ವಶಕ್ಕೆ ಪಡೆದ ಪೊಲೀಸ್

ಆರೇಳು ವರ್ಷದ ಹಿಂದೆ (2018ರ ಡಿಸೆಂಬರ್ 20) ಗೋಪಾಲ್ ಖೇಮ್ಕಾ ಅವರ ಮಗ ಗುಂಜನ್ ಖೇಮ್ಕಾ ಅವರನ್ನೂ ಹಾಜಿಪುರ್ ಇಂಡಸ್ಟ್ರಿಯಲ್ ಏರಿಯಾದಲ್ಲಿ ಗುಂಡಿಟ್ಟು ಹತ್ಯೆ ಮಾಡಲಾಗಿತ್ತು.

ಈ ಕೊಲೆ ಪ್ರಕರಣ ಸಂಬಂಧ ಪೊಲೀಸರು ಇಬ್ಬರು ವ್ಯಕ್ತಿಗಳನ್ನು ಕಸ್ಟಡಿಗೆ ತೆಗೆದುಕೊಂಡಿದ್ದಾರೆ. ಹತ್ಯೆ ಮಾಡಲು ಶೂಟರ್​​ಗೆ ಕಾಂಟ್ರಾಕ್ಟ್ ಕೊಟ್ಟ ಆರೋಪ ಇರುವ ಒಬ್ಬ ವ್ಯಕ್ತಿಯೂ ಕಸ್ಟಡಿಯಲ್ಲಿದ್ದಾನೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 12:56 pm, Tue, 8 July 25

Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
Follow Us