ಗೋರಖ್ಪುರ: ಉತ್ತರ ಪ್ರದೇಶದ ಗೋರಖ್ಪುರದ ಹೋಟೆಲ್ನಲ್ಲಿ ಪೊಲೀಸರ ದಾಳಿ ವೇಳೆ ಕಾನ್ಪುರ ಮೂಲದ ಉದ್ಯಮಿ ಮನೀಶ್ ಗುಪ್ತ ನಿಗೂಢ ರೀತಿಯಲ್ಲಿ ಸಾವನ್ನಪ್ಪಿದ್ದರು. ಪೊಲೀಸರಿಂದಲೇ ನನ್ನ ಗಂಡ ಸಾವನ್ನಪ್ಪಿದ್ದು ಎಂದು ಆ ಉದ್ಯಮಿಯ ಹೆಂಡತಿ ವಿಡಿಯೋದಲ್ಲಿ ಆರೋಪಿಸಿದ್ದರು. ಇದಾದ ಬಳಿಕ ಉತ್ತರ ಪ್ರದೇಶದ ಸರ್ಕಾರ ಹಾಗೂ ಪೊಲೀಸರ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಈ ಘಟನೆಗೆ ಸಂಬಂಧಿಸಿದಂತೆ 6 ಪೊಲೀಸರನ್ನು ಅಮಾನತು ಮಾಡಲಾಗಿದೆ. ಇಂದು ಉದ್ಯಮಿಯ ಹೆಂಡತಿ, ಮನೆಯವರನ್ನು ಭೇಟಿ ಮಾಡಿದ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಉದ್ಯಮಿಯ ಪತ್ನಿಗೆ ಉದ್ಯೋಗ ನೀಡುವ ಭರವಸೆ ನೀಡಿದ್ದಾರೆ. ಹಾಗೇ, 10 ಲಕ್ಷ ರೂ. ಪರಿಹಾರ ನೀಡುವುದಾಗಿಯೂ ಘೋಷಿಸಿದ್ದಾರೆ.
ಗೋರಖ್ಪುರ ಪೊಲೀಸ್ ದಾಳಿ ಪ್ರಕರಣದಲ್ಲಿ ಉದ್ಯಮಿ ಸಾವನ್ನಪ್ಪಿದ ಕೇಸ್ಗೆ ಸಂಬಂಧಿಸಿದಂತೆ ಅಮಾನತುಗೊಂಡಿರುವ ಆರು ಪೊಲೀಸರ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೂಚನೆ ನೀಡಿದ್ದಾರೆ. ಅಮಾನತುಗೊಂಡಿರುವ ಆರು ಮಂದಿ ಪೊಲೀಸ್ ಸಿಬ್ಬಂದಿ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಹಾಗೂ ಅವರ ವಿರುದ್ಧ ಕಠಿಣ ಕ್ರಮ ಜರುಗಿಸುವಂತೆ ಸಿಎಂ ಯೋಗಿ ಆದಿತ್ಯನಾಥ್ ಸೂಚಿಸಿದ್ದಾರೆ.
थाना रामगढ़ताल पुलिस द्वारा संदिग्ध व्यक्तियों की चेकिंग के दौरान होटल में हुई घटना के सम्बन्ध में वरिष्ठ पुलिस अधीक्षक गोरखपुर द्वारा दी गयी वीडियो बाइट।@IPS_VipinTada @dgpup @AdgGkr @kumararunmunna @SATISHP2010 @bstvlive @Live_Hindustan @AmarUjalaNews pic.twitter.com/ygRs8gDDJT
— GORAKHPUR POLICE (@gorakhpurpolice) September 28, 2021
ಸೆ. 28ರಂದು ರಾತ್ರಿ ಗೋರಖ್ಪುರದ ಹೋಟೆಲ್ ಮೇಲೆ ಪೊಲೀಸರ ರೇಡ್ ಮಾಡಿದ್ದರು. ಅದಾದ ಬಳಿಕ ಹೋಟೆಲ್ನಲ್ಲಿ 38 ವರ್ಷದ ಪ್ರಾಪರ್ಟಿ ಡೀಲರ್ ಮನೀಶ್ ಗುಪ್ತ ಅವರು ಗಂಭೀರವಾಗಿ ಗಾಯಗೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಅವರು ಸಾವನ್ನಪ್ಪಿದ್ದರು. ಪೊಲೀಸರೇ ನನ್ನ ಗಂಡನನ್ನು ಕೊಂದಿದ್ದಾರೆ ಎಂದು ಉದ್ಯಮಿಯ ಹೆಂಡತಿ ಆರೋಪಿಸಿದ್ದರು. ಆದರೆ, ಪೊಲೀಸ್ ದಾಳಿ ವೇಳೆ ತಪ್ಪಿಸಿಕೊಳ್ಳಲು ಕೆಳಗೆ ಹಾರಿದಾಗ ಗಾಯವಾಗಿ ಅವರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದರು. ಈ ನಿಗೂಢ ಸಾವು ಭಾರೀ ಚರ್ಚೆಗೆ ಕಾರಣವಾಗಿತ್ತು.
गोरखपुर में पुलिस की बर्बरता ने एक युवा व्यापारी की जान ले ली। ये बहुत ही दुखद और निंदनीय है।
उप्र की भाजपा सरकार ने एनकाउंटर की जिस हिंसक संस्कृति को जन्म दिया है, ये उसी का दुष्परिणाम है।
संलिप्त लोगों पर हत्या का मुक़दमा चले और उप्र को हिंसा में धकेलनेवाले इस्तीफ़ा दें। pic.twitter.com/luhjqRTIar
— Akhilesh Yadav (@yadavakhilesh) September 28, 2021
ಮನೀಶ್ ಗುಪ್ತ ಮತ್ತು ಅವರ ಸ್ನೇಹಿತರು ಕಾರ್ಯದ ನಿಮಿತ್ತ ಆಗಮಿಸಿದ್ದು ಹೋಟೆಲ್ ನಲ್ಲಿ ತಂಗಿದ್ದರು. ಪೊಲೀಸರೇ ಥಳಿಸಿ ಅವರನ್ನು ಕೊಂದಿದ್ದಾರೆ ಎಂಬ ಆರೋಪ ಬಂದಿದ್ದರಿಂದ ಮನೀಶ್ ಗುಪ್ತ ಅವರ ಹೆಂಡತಿ ನೀಡಿದ ದೂರಿನ ಅನ್ವಯ 6 ಪೊಲೀಸರನ್ನು ಕೊಲೆ ಆರೋಪದಲ್ಲಿ ಅಮಾನತು ಮಾಡಲಾಗಿತ್ತು.
ಇದನ್ನೂ ಓದಿ: Crime News: ಹಾಡಹಗಲೇ ಕಾಲೇಜು ಯುವತಿಯ ಕುತ್ತಿಗೆ ಸೀಳಿ ಕೊಲೆ; ಪ್ರೇಮ ವೈಫಲ್ಯದ ಶಂಕೆ
Murder: ದಾವಣಗೆರೆ; ಅಕ್ರಮ ಸಂಬಂಧ ಮುಚ್ಚಿಡಲು ಪ್ರಿಯಕರನ ಜೊತೆ ಸೇರಿ ಹೆಂಡತಿಯಿಂದಲೇ ಗಂಡನ ಕೊಲೆ