AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಿವುಡ ಮತ್ತು ಮೂಕರ ಶಾಲೆಗೆ ಭೇಟಿ ನೀಡಿದ ಯುಪಿ ಸಿಎಂ ಯೋಗಿ ಆದಿತ್ಯನಾಥ್

ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮಾತನಾಡಿ, 'ಹಾಸ್ಟೆಲ್ ನಿರ್ಮಿಸುವ ಮೂಲಕ ಈ ಶಾಲೆಯನ್ನು ವಸತಿ ಶಾಲೆಮಾಡಬೇಕು. ಇದರಿಂದ ಆರ್ಥಿಕವಾಗಿ ದುರ್ಬಲ ಕುಟುಂಬಗಳ ವಿಕಲಚೇತನ ಮಕ್ಕಳಿಗೆ ಸಾಕಷ್ಟು ಪರಿಹಾರ ಸಿಗುತ್ತದೆ. ಅವರ ಪ್ರತಿಭೆ ಬೆಳೆಯುತ್ತದೆ, ಮಕ್ಕಳಿಗೆ ವಸತಿ ಶಾಲೆಯಲ್ಲಿ ಸುರಕ್ಷಿತ ವಾತಾವರಣವನ್ನು ನೀಡಲಾಗುವುದು. ಹಾಗೆಯೇ ಸಂಚಾರಕ್ಕಾಗಿ ಒಂದು ರಸ್ತೆ ನಿರ್ಮಿಸಬೇಕು ಎಂದು ಹೇಳಿದ್ದಾರೆ.

ಕಿವುಡ ಮತ್ತು ಮೂಕರ ಶಾಲೆಗೆ ಭೇಟಿ ನೀಡಿದ ಯುಪಿ ಸಿಎಂ ಯೋಗಿ ಆದಿತ್ಯನಾಥ್
ಯೋಗಿ ಆದಿತ್ಯನಾಥ್
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on: Sep 18, 2023 | 3:05 PM

Share

ಗೋರಖ್‌ಪುರ: ಉತ್ತರ ಪ್ರದೇಶದ (Uttar Pradesh) ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ (Yogi Adityanath) ಅವರು ಇಂದು (ಸೋಮವಾರ) ಗೋರಖ್‌ಪುರದಲ್ಲಿ (Gorakhpur) ತಂಗಿದ್ದ ಸಂದರ್ಭದಲ್ಲಿ ಹುಮಾಯೂನ್‌ಪುರದಲ್ಲಿರುವ ಸರ್ಕಾರಿ ಕಿವುಡ ಮತ್ತು ಮೂಕ ಶಾಲೆಯಲ್ಲಿ ಓದುತ್ತಿರುವ ಮಕ್ಕಳನ್ನು ಭೇಟಿಯಾಗಿದ್ದಾರೆ. ಸಿಎಂ ಯೋಗಿ ಅವರನ್ನು ಕಂಡ ಮೂಕ ಹಾಗೂ ಶ್ರವಣದೋಷವುಳ್ಳ ಮಕ್ಕಳ ಸಂತಸಕ್ಕೆ ಮಿತಿಯೇ ಇರಲಿಲ್ಲ. ಮಕ್ಕಳ ಈ ಮನದಾಳದ ಉತ್ಸಾಹ ನೋಡಿ ಸಿಎಂ ಯೋಗಿ ಕೂಡ ಭಾವುಕರಾದರು.

ಈ ವೇಳೆ ಸಿಎಂ ಯೋಗಿ ಆದಿತ್ಯನಾಥ್ ಹಾಗೂ ಕಿವುಡ ಮತ್ತು ಮೂಕ ಅಂಗವಿಕಲ ಮಕ್ಕಳ ನಡುವೆ ಭಾವಾನುವಾದಗಳ ವಿನಿಮಯದ ಅವಿಸ್ಮರಣೀಯ ದೃಶ್ಯ ಕಂಡುಬಂತು. ಸಿಎಂ ಅವರ ಮಾತುಗಳ ಸಂವಹನ ಈ ಮಕ್ಕಳನ್ನು ಭಾವುಕರನ್ನಾಗಿಸಿತು. ಸಿಎಂ ಪದಗಳ ಮೂಲಕವೂ ಸಂವಹನ ನಡೆಸಿದ್ದು, ಅದನ್ನು ಶಿಕ್ಷಕರು ಸಂಜ್ಞೆಗಳ ಮೂಲಕ ಮಕ್ಕಳಿಗೆ ವಿವರಿಸಿದರು.

ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಮಕ್ಕಳೇ ಆಯೋಜಿಸಿದ್ದ ವಸ್ತುಪ್ರದರ್ಶನವನ್ನು ವೀಕ್ಷಿಸಿದರು. ಮಕ್ಕಳ ಕೌಶಲ್ಯವನ್ನು ಸಿಎಂ ಯೋಗಿ ಮುಕ್ತಕಂಠದಿಂದ ಶ್ಲಾಘಿಸಿದರು. ಇದೇ ಸಂದರ್ಭದಲ್ಲಿ ಶಾಲಾ ಆವರಣ ಹಾಗೂ ತರಗತಿ ಕೊಠಡಿಗಳಿಗೆ ತೆರಳಿ ಅಲ್ಲಿನ ವ್ಯವಸ್ಥೆಗಳನ್ನು ಪರಿಶೀಲಿಸಿದ್ದಾರೆ.

ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮಾತನಾಡಿ, ‘ಹಾಸ್ಟೆಲ್ ನಿರ್ಮಿಸುವ ಮೂಲಕ ಈ ಶಾಲೆಯನ್ನು ವಸತಿ ಶಾಲೆಮಾಡಬೇಕು. ಇದರಿಂದ ಆರ್ಥಿಕವಾಗಿ ದುರ್ಬಲ ಕುಟುಂಬಗಳ ವಿಕಲಚೇತನ ಮಕ್ಕಳಿಗೆ ಸಾಕಷ್ಟು ಪರಿಹಾರ ಸಿಗುತ್ತದೆ. ಅವರ ಪ್ರತಿಭೆ ಬೆಳೆಯುತ್ತದೆ, ಮಕ್ಕಳಿಗೆ ವಸತಿ ಶಾಲೆಯಲ್ಲಿ ಸುರಕ್ಷಿತ ವಾತಾವರಣವನ್ನು ನೀಡಲಾಗುವುದು. ಹಾಗೆಯೇ ಸಂಚಾರಕ್ಕಾಗಿ ಒಂದು ರಸ್ತೆ ನಿರ್ಮಿಸಬೇಕು ಎಂದು ಹೇಳಿದ್ದಾರೆ.

ಇದನ್ನೂ ಓದಿ: ನೀವು ನಿಮ್ಮ ರಾಜಕೀಯ ವಿಧಾನವನ್ನು ಬದಲಿಸಿಕೊಳ್ಳಿ: ಸಂಸತ್ ಅಧಿವೇಶನದಲ್ಲಿ ಮಲ್ಲಿಕಾರ್ಜುನ ಖರ್ಗೆ

ಈ ಹಿಂದೆ ಕಟ್ಟಡ ಶಿಥಿಲಗೊಂಡಿತ್ತು, ಇಲ್ಲಿ ಸರ್ಕಾರ ಹೊಸ ಕಟ್ಟಡ ನಿರ್ಮಿಸಿದೆ ಎಂದು ಸಿಎಂ ಯೋಗಿ ಹೇಳಿದರುಪ್ರಧಾನಿ ನರೇಂದ್ರ ಮೋದಿ ಅವರು ಎಲ್ಲಾ ಅಂಗವಿಕಲರಿಗೆ ಅಂಗವಿಕಲರ ಬದಲಿಗೆ ದಿವ್ಯಾಂಗ ಎಂದು ಹೆಸರಿಸುವ ಮೂಲಕ ಅವರ ಜೀವನದಲ್ಲಿ ಬದಲಾವಣೆ ತರಲು ಶ್ರಮಿಸಿದ್ದಾರೆ, ಪ್ರಧಾನಿ ಮೋದಿಯವರ ಮಾರ್ಗದರ್ಶನದಲ್ಲಿ ರಾಜ್ಯ ಸರ್ಕಾರ ದಿವ್ಯಾಂಗ ಜನರ ಅಭಿವೃದ್ಧಿಗಾಗಿ ಕೆಲಸಗಳನ್ನು ಮಾಡುತ್ತಿದೆ ಎಂದು ಅವರು ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ