Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಂಜಾಬ್​ ರೈತರ ಬೇಡಿಕೆಗಳಿಗೆ ಭಾಗಶಃ ಒಪ್ಪಿಗೆ: ಜನವರಿ ನಾಲ್ಕಕ್ಕೆ ಮತ್ತೊಂದು ಸಭೆ

ಕನಿಷ್ಠ ಬೆಂಬಲ ಬೆಲೆ ನೀಡುವ ವಿಚಾರದಲ್ಲಿ ಸರ್ಕಾರ ಕೆಲ ಬೇಡಿಕೆಯನ್ನು ರೈತರ ಮುಂದಿಟ್ಟಿತ್ತು ಎನ್ನಲಾಗಿದೆ. ಆದರೆ, ಈ ಮೂರು ಕೃಷಿ ಕಾಯ್ದೆಯನ್ನುತೆಗೆದು ಹಾಕುವವರೆಗೆ ನಾವು ಪಟ್ಟು ಬಿಡುವುದಿಲ್ಲ ಎನ್ನುವ ಎಚ್ಚರಿಕೆಯನ್ನು ರೈತರು ನೀಡಿದ್ದಾರೆ.

ಪಂಜಾಬ್​ ರೈತರ ಬೇಡಿಕೆಗಳಿಗೆ ಭಾಗಶಃ ಒಪ್ಪಿಗೆ: ಜನವರಿ ನಾಲ್ಕಕ್ಕೆ ಮತ್ತೊಂದು ಸಭೆ
Follow us
ರಾಜೇಶ್ ದುಗ್ಗುಮನೆ
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Dec 30, 2020 | 9:34 PM

ನವದೆಹಲಿ: ರೈತರು ಹಾಗೂ ಕೇಂದ್ರ ಸರ್ಕಾರದ ನಡುವೆ ನಡೆದ ಆರನೇ ಹಂತದ ಮಾತುಕತೆಯಲ್ಲಿ ಇದೇ ಮೊದಲ ಬಾರಿಗೆ ಧನಾತ್ಮಕ ಸುದ್ದಿ ಹೊರ ಬಿದ್ದಿದೆ. ಪ್ರತಿಭಟನಾ ರೈತರ ನಾಲ್ಕು ಬೇಡಿಕೆಯಲ್ಲಿ ಎರಡು ಬೇಡಿಕೆಗೆ ಕೇಂದ್ರ ಸರ್ಕಾರ ಸಮ್ಮತಿ ನೀಡಿದೆ. ಇನ್ನೂ ಎರಡು ಬೇಡಿಕೆ ಈಡೆರುವವರೆಗೆ ನಾವು ಪ್ರತಿಭಟನೆ ಮುಂದುವರಿಸುತ್ತೇವೆ ಎಂದು ರೈತ ಸಂಘಟನೆಗಳು ಹೇಳಿವೆ.  ಜನವರಿ ನಾಲ್ಕರಂದು ರೈತರು ಹಾಗೂ ಪ್ರತಿಭಟನಾಕಾರರು ಮತ್ತೊಮ್ಮೆ ಸಭೆ ಸೇರುತ್ತಿದ್ದಾರೆ.

ವಿಜ್ಞಾನ ಭವನದಲ್ಲಿ ಇಂದು ಕೇಂದ್ರ ಸರ್ಕಾರ ಸಭೆ ಹಮ್ಮಿಕೊಂಡಿತ್ತು. 41 ರೈತ ಸಂಘಟನೆಗಳ ಪ್ರತಿನಿಧಿಗಳು ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್​, ರೈಲ್ವೆ ಸಚಿವ ಪೀಯೂಷ್​ ಗೋಯಲ್​ ಹಾಗೂ ಕೆಲ ಹಿರಿಯ ನಾಯಕರು ಸಭೆಯಲ್ಲಿ ಪಾಲ್ಗೊಂಡಿದ್ದರು. ಸಭೆ ಮುಗಿದ ನಂತರ ಮಾಧ್ಯಮದ ಜೊತೆ ಮಾತನಾಡಿದ ನರೇಂದ್ರ ಸಿಂಗ್ ತೋಮರ್, ಇಂದಿನ ಸಭೆಯಲ್ಲಿ ನಾಲ್ಕು ಅಜೆಂಡಾಗಳಿದ್ದವು. ಈ ಪೈಕಿ, ಎಲೆಕ್ಟ್ರಸಿಟಿ ಆ್ಯಕ್ಟ್​ ಹಾಗೂ ಹುಲ್ಲು ಸುಡುವವರಿಗೆ ಶಿಕ್ಷೆ ನೀಡುವ ವಿಚಾರಕ್ಕೆ ಒಪ್ಪಿಗೆ ಸೂಚಿಸಿದ್ದೇವೆ. ಈ ಮೂಲಕ ರೈತರ ಎರಡು ಬೇಡಿಕೆ ಈಡೇರಿಸಿದ್ದೇವೆ. ನಾವು ನಮ್ಮ ಮಾತುಕತೆಯನ್ನು ಮುಂದುವರಿಸುತ್ತೇವೆ. ಜನವರಿ ನಾಲ್ಕರಂದು 2 ಗಂಟೆಗೆ ಮತ್ತೊಂದು ಸಭೆ ಇದೆ. ಚರ್ಚೆಗೆ ಬಾಕಿ ಇರುವ ಮತ್ತೆರಡು ವಿಚಾರಗಳನ್ನು ಅಂದು ಬಗೆಹರಿಸಿಕೊಳ್ಳುತ್ತೇವೆ, ಎಂದಿದ್ದಾರೆ.  ಈ ಮೂಲಕ ಹೊಸ ವರ್ಷಕ್ಕೆ ರೈತರ ಪ್ರತಿಭಟನೆ ಪೂರ್ಣಗೊಳ್ಳುವ ಸೂಚನೆ ನೀಡಿದ್ದಾರೆ.

ಕನಿಷ್ಠ ಬೆಂಬಲ ಬೆಲೆ ನೀಡುವ ವಿಚಾರದಲ್ಲಿ ಸರ್ಕಾರ ಕೆಲ ಬೇಡಿಕೆಯನ್ನು ರೈತರ ಮುಂದಿಟ್ಟಿತ್ತು ಎನ್ನಲಾಗಿದೆ. ಆದರೆ, ಈ ಮೂರು ಕೃಷಿ ಕಾಯ್ದೆಯನ್ನುತೆಗೆದು ಹಾಕುವವರೆಗೆ ನಾವು ಪಟ್ಟು ಬಿಡುವುದಿಲ್ಲ ಎನ್ನುವ ಎಚ್ಚರಿಕೆಯನ್ನು ರೈತರು ನೀಡಿದ್ದಾರೆ.

ರೈತರ ಬೇಡಿಕೆ ಏನು?

ಕೇಂದ್ರದ 3 ಕೃಷಿ ಕಾಯ್ದೆಗಳನ್ನು ಕೂಡಲೇ ರದ್ದು ಮಾಡಬೇಕು. ಕೃಷಿ ಆಯೋಗದ ಶಿಫಾರಸು ಪ್ರಕಾರ ಕೃಷಿ ಉತ್ಪನ್ನದ ಬೆಂಬಲ ಬೆಲೆ ನೀಡಿಕೆಗೆ ಕಾನೂನು ಬದ್ಧ ಗ್ಯಾರಂಟಿ ನೀಡಬೇಕು. NCR ಹಾಗೂ ಸುತ್ತಲಿನ ಪ್ರದೇಶದ ವಾಯುಗುಣಮಟ್ಟ ನಿರ್ವಹಣೆ ಸುಗ್ರೀವಾಜ್ಞೆಗೆ ತಿದ್ದುಪಡಿ ತರಬೇಕು. ರೈತರಿಗೆ ಈ‌ ಕಾಯಿದೆಯಡಿ ದಂಡವನ್ನು ವಿಧಿಸಬಾರದು. ರೈತರ ಹಿತ ರಕ್ಷಣೆಗೆ ವಿದ್ಯುತ್ ತಿದ್ದುಪಡಿ ಮಸೂದೆ 2020 ಕ್ಕೆ ತಿದ್ದುಪಡಿ ತರಬೇಕು ಎನ್ನುವುದು ಪ್ರಮುಖ ಬೇಡಿಕೆಗಳಾಗಿವೆ.

ಕೃಷಿ ಕಾಯ್ದೆ ವಿರುದ್ಧ ರೈತರ ಹೋರಾಟ: 7ನೇ ಸುತ್ತಿನ ಮಾತುಕತೆಗೆ ಸರ್ಕಾರ ಸಿದ್ಧತೆ, ಇಂದಾದರೂ ಈಡೇರುತ್ತಾ ರೈತರ ಬೇಡಿಕೆಗಳು?

Published On - 8:52 pm, Wed, 30 December 20

ಪೋಷಕರಲ್ಲಿ ನಿರಾಳತೆ ಉಂಟು ಮಾಡಿದ ಸರ್ಕಾರದ ನಿರ್ಧಾರ
ಪೋಷಕರಲ್ಲಿ ನಿರಾಳತೆ ಉಂಟು ಮಾಡಿದ ಸರ್ಕಾರದ ನಿರ್ಧಾರ
ಆಟೋಗ್ರಾಫ್ ಕೇಳುವವರೆ ಇರಲಿಲ್ಲ.. ಈಗ ಕ್ಯೂ ನಿಲ್ಲುತ್ತಿದ್ದಾರೆ; ಜಿತೇಶ್
ಆಟೋಗ್ರಾಫ್ ಕೇಳುವವರೆ ಇರಲಿಲ್ಲ.. ಈಗ ಕ್ಯೂ ನಿಲ್ಲುತ್ತಿದ್ದಾರೆ; ಜಿತೇಶ್
ಸರ್ಕಾರಗಳು ನಮ್ಮ ಬವಣೆಯನ್ನು ಅರ್ಥಮಾಡಿಕೊಳ್ಳಬೇಕು: ಲಾರಿ ಮಾಲೀಕ
ಸರ್ಕಾರಗಳು ನಮ್ಮ ಬವಣೆಯನ್ನು ಅರ್ಥಮಾಡಿಕೊಳ್ಳಬೇಕು: ಲಾರಿ ಮಾಲೀಕ
ವರದಿಯಲ್ಲಿರುವ ಶಿಫಾರಸ್ಸುಗಳನ್ನು ಸರ್ಕಾರ ತಿರಸ್ಕರಿಸಬಹುದಾಗಿದೆ: ಖರ್ಗೆ
ವರದಿಯಲ್ಲಿರುವ ಶಿಫಾರಸ್ಸುಗಳನ್ನು ಸರ್ಕಾರ ತಿರಸ್ಕರಿಸಬಹುದಾಗಿದೆ: ಖರ್ಗೆ
ಮತ್ತೆ ಪೊಲೀಸರ ಬಂಧನದಲ್ಲಿ ರಜತ್, ವೈದ್ಯಕೀಯ ಪರೀಕ್ಷೆಗೆ ಕರೆದೊಯ್ದ ವಿಡಿಯೋ
ಮತ್ತೆ ಪೊಲೀಸರ ಬಂಧನದಲ್ಲಿ ರಜತ್, ವೈದ್ಯಕೀಯ ಪರೀಕ್ಷೆಗೆ ಕರೆದೊಯ್ದ ವಿಡಿಯೋ
ದಾವಣೆಗೆರೆಯಲ್ಲಿ ಮಹಿಳೆ ಮೇಲೆ ಹಲ್ಲೆ ನಡೆಸಿದವರನ್ನು ಬಿಡಲ್ಲ: ಸಿದ್ದರಾಮಯ್ಯ
ದಾವಣೆಗೆರೆಯಲ್ಲಿ ಮಹಿಳೆ ಮೇಲೆ ಹಲ್ಲೆ ನಡೆಸಿದವರನ್ನು ಬಿಡಲ್ಲ: ಸಿದ್ದರಾಮಯ್ಯ
ಲಿಂಗಾಯತ ಸಚಿವರು ಜಾತಿ ಗಣತಿ ಬಗ್ಗೆ ಸಮುದಾಯದವರೊಂದಿಗೆ ಚರ್ಚಿಸಿಲ್ಲ: ಶಾಸಕ
ಲಿಂಗಾಯತ ಸಚಿವರು ಜಾತಿ ಗಣತಿ ಬಗ್ಗೆ ಸಮುದಾಯದವರೊಂದಿಗೆ ಚರ್ಚಿಸಿಲ್ಲ: ಶಾಸಕ
ರಾಜ್ಯ ನಾಯಕರೆಲ್ಲ ಬೆಳಗಾವಿಯಲ್ಲಿದ್ದರೂ ರಮೇಶ್ ಜಾರಕಿಹೊಳಿ ನಾಪತ್ತೆ!
ರಾಜ್ಯ ನಾಯಕರೆಲ್ಲ ಬೆಳಗಾವಿಯಲ್ಲಿದ್ದರೂ ರಮೇಶ್ ಜಾರಕಿಹೊಳಿ ನಾಪತ್ತೆ!
ತಂದೆ-ತಾಯಿ ಆಸೆಯಂತೆ ಹುಟ್ಟೂರಲ್ಲಿ ದೇವಸ್ಥಾನ ಜೀರ್ಣೋದ್ಧಾರ ಮಾಡಿದ ಪ್ರಭುದೇವ
ತಂದೆ-ತಾಯಿ ಆಸೆಯಂತೆ ಹುಟ್ಟೂರಲ್ಲಿ ದೇವಸ್ಥಾನ ಜೀರ್ಣೋದ್ಧಾರ ಮಾಡಿದ ಪ್ರಭುದೇವ
ಜಿಲ್ಲೆಯ ಮುಖಂಡರನ್ನು ಮನೆಗೆ ಕರೆಸಿ ಮಾತಾಡಿದ ಮಾಜಿ ಸಚಿವ ಪಟ್ಟಣಶೆಟ್ಟಿ
ಜಿಲ್ಲೆಯ ಮುಖಂಡರನ್ನು ಮನೆಗೆ ಕರೆಸಿ ಮಾತಾಡಿದ ಮಾಜಿ ಸಚಿವ ಪಟ್ಟಣಶೆಟ್ಟಿ