AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಣ್ಣ ಉದ್ಯಮಗಳಿಗೆ ಉತ್ತೇಜನ ನೀಡಲು ಟೆಲಿಕಾಂ ವಲಯಕ್ಕೆ ಪಿಎಲ್ಐ ಯೋಜನೆ ವಿಸ್ತರಣೆ: ರವಿಶಂಕರ್ ಪ್ರಸಾದ್

Cabinet Briefing: ಮೊಬೈಲ್ ಉತ್ಪಾದನೆಯಲ್ಲಿ ಭಾರತದ ಜಗತ್ತಿನ ಎರಡನೇ ದೊಡ್ಡ ದೇಶವಾಗಿದೆ. ಇದೇ ರೀತಿಯಲ್ಲಿ ಉತ್ಪಾದನೆ ಆಧಾರಿತ ಪ್ರೋತ್ಸಾಹ ಧನ ಯೋಜನೆಯನ್ನು ಶುರು ಮಾಡಲಾಗಿದೆ.

ಸಣ್ಣ ಉದ್ಯಮಗಳಿಗೆ ಉತ್ತೇಜನ ನೀಡಲು ಟೆಲಿಕಾಂ ವಲಯಕ್ಕೆ ಪಿಎಲ್ಐ ಯೋಜನೆ ವಿಸ್ತರಣೆ: ರವಿಶಂಕರ್ ಪ್ರಸಾದ್
ರವಿ ಶಂಕರ್ ಪ್ರಸಾದ್
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on:Feb 17, 2021 | 4:41 PM

Share

ದೆಹಲಿ: ಕೇಂದ್ರ ಸಚಿವ ಸಂಪುಟವು ಭಾರತದ ಉತ್ಪಾದನಾ ಸಾಮರ್ಥ್ಯ ಮತ್ತು ರಫ್ತು ಉತ್ತೇಜನಕ್ಕಾಗಿ ಟೆಲಿಕಾಂ ಮತ್ತು ನೆಟ್​ವರ್ಕಿಂಗ್ ಉತ್ಪನ್ನಗಳಿಗೆ ₹12,195 ಕೋಟಿ ಮೌಲ್ಯದ ಉತ್ಪಾದನೆ ಆಧಾರಿತ ಪ್ರೋತ್ಸಾಹ ಧನ (production linked incentive – PLI) ನೀಡಲು ಅನುಮತಿ ನೀಡಿದೆ. ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್, ಸೃತಿ ಇರಾನಿ ಮತ್ತು ರವಿಶಂಕರ್ ಪ್ರಸಾದ್ ಅವರು ಬುಧವಾರ ಸಚಿವ ಸಂಪುಟದ ತೀರ್ಮಾನಗಳ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಈ  ಮಾಹಿತಿ ನೀಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮೊದಲಿಗೆ ಮಾತನಾಡಿದ ಕೇಂದ್ರ ಟೆಲಿಕಾಂ ಸಚಿವ ರವಿಶಂಕರ್ ಪ್ರಸಾದ್, ಭಾರತವು ಉತ್ಪಾದನಾ ಹಬ್ ಆಗಬೇಕು ಎಂಬ ಆಶಯವನ್ನುನಾವು ಹೊಂದಿದ್ದೇವೆ ಎಂದು ಹೇಳಿದ್ದಾರೆ.

ಎಲೆಕ್ಟ್ರಾನಿಕ್ ಉತ್ಪಾದನೆಯನ್ನು ನಾವು ಸಾಕಷ್ಟು ಪ್ರಚಾರ ಮಾಡಿದ್ದೇವೆ. 2014ರಲ್ಲಿ ಮೊಬೈಲ್ ಫೋನ್ ಉತ್ಪಾದನಾ ಘಟಕ ಎರಡು ಇತ್ತು, ಈಗ 270 ಆಗಿದೆ. ಮೊಬೈಲ್ ಉತ್ಪಾದನೆಯಲ್ಲಿ ಭಾರತ ಜಗತ್ತಿನ ಎರಡನೇ ದೊಡ್ಡ ದೇಶವಾಗಿದೆ. ಇದೇ ರೀತಿಯಲ್ಲಿ ಉತ್ಪಾದನೆ ಆಧಾರಿತ ಪ್ರೋತ್ಸಾಹ ಧನ ಯೋಜನೆಯನ್ನು ಶುರು ಮಾಡಲಾಗಿದೆ. ಉತ್ಪಾದನೆ ಆಧಾರಿತ ಪ್ರೋತ್ಸಾಹ ಧನ​ದ ಅರ್ಥ ಏನೆಂದರೆ ಮೊದಲು ಉದ್ಯೋಗ ಸೃಷ್ಟಿಸುವುದು ಮತ್ತು ಉತ್ಪಾದನೆ ಮಾಡುವುದಾಗಿದೆ. ಸರಳವಾಗಿ ಹೇಳುವುದಾದರೆ ರಫ್ತು ಮಾಡಿ, ಉದ್ಯೋಗ ಸೃಷ್ಟಿ ಮಾಡಿ ಆಮೇಲೆ  ಪ್ರೋತ್ಸಾಹಧನ ನೀಡುವುದು ಎಂಬುದಾಗಿದೆ. ₹50,000 ಕೋಟಿ ಮೌಲ್ಯದ ಆಮದನ್ನು ಕಡಿಮೆ ಮಾಡಲು ಮತ್ತು ಕಿರು, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗೆ (ಎಂಎಸ್ಎಂಇ) ಉತ್ತೇಜನ ನೀಡಲು ಉತ್ಪಾದನೆ ಆಧಾರಿತ ಪ್ರೋತ್ಸಾಹ ಧನ (PLI) ಯೋಜನೆಯನ್ನು ಕೇಂದ್ರ ಸರ್ಕಾರ ಟೆಲಿಕಾಂ ಉಪಕರಣಗಳ ವಲಯಕ್ಕೂ ವಿಸ್ತರಿಸಿದೆ.

ಟೆಲಿಕಾಂ ಉಪಕರಣ ವಲಯಕ್ಕಿರುವ ಪಿಎಲ್ಐ ಯೋಜನೆಯ ಪರಿಣಾಮ ಮುಂದಿನ 5 ವರ್ಷಗಳಲ್ಲಿ ಈ ವಲಯದಲ್ಲಿ ₹ 2,44,200 ಕೋಟಿ ಮೌಲ್ಯದ ಉತ್ಪಾದನೆ ಏರಿಕೆ, ₹ 1,95,360 ಕೋಟಿ ಮೌಲ್ಯದ ರಫ್ತು, ₹ 40,000 ಹೊಸ ಉದ್ಯೋಗ ಮತ್ತು ₹ 17,000 ಕೋಟಿ ಮೌಲ್ಯದ ತೆರಿಗೆ ಆದಾಯದ ನಿರೀಕ್ಷೆ ಹೊಂದಿದೆ ಎಂದು ಸಚಿವರು ಹೇಳಿದ್ದಾರೆ.

ಇದನ್ನೂ ಓದಿ: ದತ್ತಾಂಶ ಸುರಕ್ಷತಾ ಕಾನೂನು ರೂಪಿಸುತ್ತೇವೆ: ಮಾಹಿತಿ ತಂತ್ರಜ್ಞಾನ ಸಚಿವ ರವಿ ಶಂಕರ್ ಪ್ರಸಾದ್

₹50,000 ಕೋಟಿಗಿಂತಲೂ ಹೆಚ್ಚು ಮೌಲ್ಯದ ಟೆಲಿಕಾಂ ಉಪಕರಣಗಳನ್ನು ಆಮದನ್ನು ಸರಿದೂಗಿಸಲು, ಮೇಡ್ ಇನ್ ಇಂಡಿಯಾ ವಸ್ತುಗಳನ್ನು ದೇಶೀಯ ಮಾರುಕಟ್ಟೆಯಲ್ಲಿ ಮಾರಲು ಮತ್ತು ರಫ್ತು  ಬಲಪಡಿಸಲು ಈ ಯೋಜನೆ ಸಹಕಾರಿ ಆಗಿದೆ. ಮೊಬೈಲ್ ಫೋನ್ ಉತ್ಪಾದನೆ ಮತ್ತು ಎಲೆಕ್ಟ್ರಾನಿಕ್ ಬಿಡಿಭಾಗಗಳ ಘಟಕಗಳಲ್ಲಿ ಹೂಡಿಕೆಯನ್ನು ಆಕರ್ಷಿಸುವುದಕ್ಕಾಗಿ ಸರ್ಕಾರವು ಕಳೆದ ವರ್ಷಾಂತ್ಯದಲ್ಲಿ ದೊಡ್ಡ ಪ್ರಮಾಣದ ಎಲೆಕ್ಟ್ಪಾನಿಕ್ ಸರಕು ತಯಾರಿಕರಿಗೆ ₹ 50,000 ಕೋಟಿ ಮೌಲ್ಯದ ಪಿಎಲ್ಐ ಯೋಜನೆಯನ್ನು ರೂಪಿಸಿತ್ತು.

Published On - 4:22 pm, Wed, 17 February 21

Follow Us
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?