AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾಟ್ಸ್​ಆ್ಯಪ್​ ಗೌಪ್ಯತಾ ನೀತಿ ಬದಲಾವಣೆ ಕುರಿತು ವಿವರಣೆ ಕೇಳಿದ ಕೇಂದ್ರ ಸರ್ಕಾರ

ವಾಟ್ಸ್​ಆ್ಯಪ್​ ಸಂಸ್ಥೆಯ ಹೊಸ ನೀತಿಯನ್ನು ಸರ್ಕಾರ ಗಮನಿಸುತ್ತಿದೆ. ಈ ಬಗ್ಗೆ ನಾವು ವಾಟ್ಸ್​ಆ್ಯಪ್​ನಿಂದ ವಿವರಣೆಯನ್ನು ತರಿಸಿಕೊಂಡಿದ್ದು, ಸೂಕ್ತ ತನಿಖೆ ನಡೆಸಲಿದ್ದೇವೆ ಎಂದು ಸರ್ಕಾರದ ಉನ್ನತ ಮೂಲಗಳು ಮಾಹಿತಿ ನೀಡಿವೆ.

ವಾಟ್ಸ್​ಆ್ಯಪ್​ ಗೌಪ್ಯತಾ ನೀತಿ ಬದಲಾವಣೆ ಕುರಿತು ವಿವರಣೆ ಕೇಳಿದ ಕೇಂದ್ರ ಸರ್ಕಾರ
ವಾಟ್ಸ್​ಆ್ಯಪ್​
Skanda
| Edited By: ರಶ್ಮಿ ಕಲ್ಲಕಟ್ಟ|

Updated on: Jan 14, 2021 | 5:52 PM

Share

ದೆಹಲಿ: ವಾಟ್ಸ್​ಆ್ಯಪ್​ ಸಂಸ್ಥೆ ತನ್ನ ಗೌಪ್ಯತಾ ನೀತಿಗಳನ್ನು ಬದಲಾಯಿಸಲು ಹೊರಟಿರುವುದು ವಿವಾದವನ್ನು ಸೃಷ್ಟಿಸಿದೆ. ಫೆಬ್ರವರಿ 8ರ ಒಳಗೆ ತನ್ನ ಹೊಸ ನೀತಿಯನ್ನು ಒಪ್ಪಿಕೊಳ್ಳದೇ ಇದ್ದರೆ ವಾಟ್ಸ್​ಆ್ಯಪ್​ ಬಳಸುವುದು ಸಾಧ್ಯವಾಗುವುದಿಲ್ಲ ಎನ್ನುವ ಸಂಸ್ಥೆಯ ನಿಲುವಿನ ವಿರುದ್ಧ ಅನೇಕರು ತಿರುಗಿ ಬಿದ್ದಿದ್ದಾರೆ. ಇದೀಗ ಈ ಕುರಿತು ಪರಿಶೀಲನೆ ನಡೆಸಲು ಸರ್ಕಾರವೇ ಮುಂದಾಗಿದೆ.

ವಾಟ್ಸ್​ಆ್ಯಪ್​ ಸಿದ್ಧಪಡಿಸಿರುವ ಹೊಸ ಗೌಪ್ಯತಾ ನೀತಿಯ ಮೂಲಕ ಬಳಕೆದಾರರ ಮಾಹಿತಿಯನ್ನು ವಾಣಿಜ್ಯ ಉದ್ದೇಶಗಳಿಗಾಗಿ ತನ್ನ ಸಹಸಂಸ್ಥೆ ಫೇಸ್​ಬುಕ್​, ಮೆಸೆಂಜರ್​ ಮುಂತಾದವುಗಳೊಂದಿಗೆ ಹಂಚಿಕೊಳ್ಳಬಹುದಾಗಿದೆ. ಇದು ಬಳಕೆದಾರರ ಖಾಸಗಿತನಕ್ಕೆ ಧಕ್ಕೆ ಉಂಟುಮಾಡಬಹುದು ಎಂಬ ಆತಂಕ ಸೃಷ್ಟಿಯಾಗಿರುವುದರಿಂದ ಹಲವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಆದ್ದರಿಂದ ಈ ಬಗ್ಗೆ ನಾವು ವಾಟ್ಸ್​ಆ್ಯಪ್​ನಿಂದ ವಿವರಣೆಯನ್ನು ತರಿಸಿಕೊಂಡಿದ್ದು, ಸೂಕ್ತ ತನಿಖೆ ನಡೆಸಲಿದ್ದೇವೆ ಎಂದು ಸರ್ಕಾರದ ಉನ್ನತ ಮೂಲಗಳು ಮಾಹಿತಿ ನೀಡಿವೆ.

ವಾಟ್ಸ್​ಆ್ಯಪ್​ ಸಂಸ್ಥೆಯ ಹೊಸ ನೀತಿಯನ್ನು ಸರ್ಕಾರ ಗಮನಿಸುತ್ತಿದೆ. ಭಾರತದಲ್ಲಿ ದತ್ತಾಂಶ ರಕ್ಷಣೆಗಾಗಿ ಇನ್ನೂ ಕಾನೂನು ಜಾರಿಯಾಗಿಲ್ಲ. ಆದರೆ, ಅದರ ಕುರಿತಾದ ಮಸೂದೆ ಲೋಕಸಭೆಯಲ್ಲಿದೆ. ತುರ್ತಾಗಿ ಕಾನೂನು ಜಾರಿಗೊಳಿಸುವುದು ಸಾಧ್ಯವಿಲ್ಲವೆಂದರೂ ವಾಟ್ಸ್​ಆ್ಯಪ್​ ಸಂಸ್ಥೆಯ ಉದ್ದೇಶಗಳನ್ನು ವಿವಿಧ ಆಯಾಮಗಳ ಮೂಲಕ ತನಿಖೆ ಮಾಡಲಿದ್ದೇವೆ ಎಂದು ಮೂಲಗಳು ಹೇಳಿವೆ.

ಈ ಹಿಂದೆಯೂ ಕೇಮ್​ಬ್ರಿಡ್ಜ್​ ಅನಾಲಿಟಿಕಲ್​ ಡೇಟಾ ಸೋರಿಕೆ ಸೇರಿದಂತೆ ಕೆಲ ವಿಚಾರವಾಗಿ ಸರ್ಕಾರ ವಾಟ್ಸ್​ಆ್ಯಪ್​ ಮತ್ತು ಫೇಸ್​ಬುಕ್​ ಸಂಸ್ಥೆಗಳನ್ನು ತನಿಖೆ ಮಾಡಿತ್ತು. ಫೇಕ್​ ಮೆಸೇಜ್​ಗಳಿಂದಾದ ದುರಂತದ ಬಗ್ಗೆಯೂ ವಿಚಾರಣೆ ನಡೆಸಿತ್ತು. ಆದರೆ, ಆ ಸಂದರ್ಭದಲ್ಲಿ ಬಳಕೆದಾರರ ದತ್ತಾಂಶಗಳನ್ನು ನೀಡುವುದು ಸಾಧ್ಯವಿಲ್ಲ ಎಂದು ಹೇಳಿದ್ದ ಮೆಸೆಂಜರ್​ ಸರ್ಕಾರ ಕೇಳಿದ ಮಾಹಿತಿಗಳನ್ನು ಕೊಡಲು ನಿರಾಕರಿಸಿತ್ತು.

ಏನಿದು ವಾಟ್ಸಾಪ್​ ಹೊಸ ಪಾಲಿಸಿ? ನಿಮ್ಮ ಖಾಸಗಿ ಮಾಹಿತಿ ಸೋರಿಕೆ ಆಗೋದು ಇನ್ನೂ ಸುಲಭ!

Follow Us
ದಕ್ಷಿಣ ಕನ್ನಡದಲ್ಲಿ ಭಾರಿ ಮಳೆ: ಶಾಲೆ, ಕಾಲೇಜುಗಳಿಗೆ ರಜೆ
ದಕ್ಷಿಣ ಕನ್ನಡದಲ್ಲಿ ಭಾರಿ ಮಳೆ: ಶಾಲೆ, ಕಾಲೇಜುಗಳಿಗೆ ರಜೆ
ಮೇಷಕ್ಕೆ ಹೂಡಿಕೆಯಲ್ಲಿ ಲಾಭ, ವೃಷಭಕ್ಕೆ ಉದ್ಯೋಗದಲ್ಲಿ ಸ್ಥಾನ ಪಲ್ಲಟದ ಯೋಗ
ಮೇಷಕ್ಕೆ ಹೂಡಿಕೆಯಲ್ಲಿ ಲಾಭ, ವೃಷಭಕ್ಕೆ ಉದ್ಯೋಗದಲ್ಲಿ ಸ್ಥಾನ ಪಲ್ಲಟದ ಯೋಗ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್
ಸಿಬ್ಬಂದಿಗೆ ಬ್ಯಾಂಕ್ ಮ್ಯಾನೇಜರ್ ಕಿರುಕುಳ ಆರೋಪ
ಸಿಬ್ಬಂದಿಗೆ ಬ್ಯಾಂಕ್ ಮ್ಯಾನೇಜರ್ ಕಿರುಕುಳ ಆರೋಪ