AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾಟ್ಸ್​ಆ್ಯಪ್​ ಗೌಪ್ಯತಾ ನೀತಿ ಬದಲಾವಣೆ ಕುರಿತು ವಿವರಣೆ ಕೇಳಿದ ಕೇಂದ್ರ ಸರ್ಕಾರ

ವಾಟ್ಸ್​ಆ್ಯಪ್​ ಸಂಸ್ಥೆಯ ಹೊಸ ನೀತಿಯನ್ನು ಸರ್ಕಾರ ಗಮನಿಸುತ್ತಿದೆ. ಈ ಬಗ್ಗೆ ನಾವು ವಾಟ್ಸ್​ಆ್ಯಪ್​ನಿಂದ ವಿವರಣೆಯನ್ನು ತರಿಸಿಕೊಂಡಿದ್ದು, ಸೂಕ್ತ ತನಿಖೆ ನಡೆಸಲಿದ್ದೇವೆ ಎಂದು ಸರ್ಕಾರದ ಉನ್ನತ ಮೂಲಗಳು ಮಾಹಿತಿ ನೀಡಿವೆ.

ವಾಟ್ಸ್​ಆ್ಯಪ್​ ಗೌಪ್ಯತಾ ನೀತಿ ಬದಲಾವಣೆ ಕುರಿತು ವಿವರಣೆ ಕೇಳಿದ ಕೇಂದ್ರ ಸರ್ಕಾರ
ವಾಟ್ಸ್​ಆ್ಯಪ್​
Skanda
| Edited By: |

Updated on: Jan 14, 2021 | 5:52 PM

Share

ದೆಹಲಿ: ವಾಟ್ಸ್​ಆ್ಯಪ್​ ಸಂಸ್ಥೆ ತನ್ನ ಗೌಪ್ಯತಾ ನೀತಿಗಳನ್ನು ಬದಲಾಯಿಸಲು ಹೊರಟಿರುವುದು ವಿವಾದವನ್ನು ಸೃಷ್ಟಿಸಿದೆ. ಫೆಬ್ರವರಿ 8ರ ಒಳಗೆ ತನ್ನ ಹೊಸ ನೀತಿಯನ್ನು ಒಪ್ಪಿಕೊಳ್ಳದೇ ಇದ್ದರೆ ವಾಟ್ಸ್​ಆ್ಯಪ್​ ಬಳಸುವುದು ಸಾಧ್ಯವಾಗುವುದಿಲ್ಲ ಎನ್ನುವ ಸಂಸ್ಥೆಯ ನಿಲುವಿನ ವಿರುದ್ಧ ಅನೇಕರು ತಿರುಗಿ ಬಿದ್ದಿದ್ದಾರೆ. ಇದೀಗ ಈ ಕುರಿತು ಪರಿಶೀಲನೆ ನಡೆಸಲು ಸರ್ಕಾರವೇ ಮುಂದಾಗಿದೆ.

ವಾಟ್ಸ್​ಆ್ಯಪ್​ ಸಿದ್ಧಪಡಿಸಿರುವ ಹೊಸ ಗೌಪ್ಯತಾ ನೀತಿಯ ಮೂಲಕ ಬಳಕೆದಾರರ ಮಾಹಿತಿಯನ್ನು ವಾಣಿಜ್ಯ ಉದ್ದೇಶಗಳಿಗಾಗಿ ತನ್ನ ಸಹಸಂಸ್ಥೆ ಫೇಸ್​ಬುಕ್​, ಮೆಸೆಂಜರ್​ ಮುಂತಾದವುಗಳೊಂದಿಗೆ ಹಂಚಿಕೊಳ್ಳಬಹುದಾಗಿದೆ. ಇದು ಬಳಕೆದಾರರ ಖಾಸಗಿತನಕ್ಕೆ ಧಕ್ಕೆ ಉಂಟುಮಾಡಬಹುದು ಎಂಬ ಆತಂಕ ಸೃಷ್ಟಿಯಾಗಿರುವುದರಿಂದ ಹಲವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಆದ್ದರಿಂದ ಈ ಬಗ್ಗೆ ನಾವು ವಾಟ್ಸ್​ಆ್ಯಪ್​ನಿಂದ ವಿವರಣೆಯನ್ನು ತರಿಸಿಕೊಂಡಿದ್ದು, ಸೂಕ್ತ ತನಿಖೆ ನಡೆಸಲಿದ್ದೇವೆ ಎಂದು ಸರ್ಕಾರದ ಉನ್ನತ ಮೂಲಗಳು ಮಾಹಿತಿ ನೀಡಿವೆ.

ವಾಟ್ಸ್​ಆ್ಯಪ್​ ಸಂಸ್ಥೆಯ ಹೊಸ ನೀತಿಯನ್ನು ಸರ್ಕಾರ ಗಮನಿಸುತ್ತಿದೆ. ಭಾರತದಲ್ಲಿ ದತ್ತಾಂಶ ರಕ್ಷಣೆಗಾಗಿ ಇನ್ನೂ ಕಾನೂನು ಜಾರಿಯಾಗಿಲ್ಲ. ಆದರೆ, ಅದರ ಕುರಿತಾದ ಮಸೂದೆ ಲೋಕಸಭೆಯಲ್ಲಿದೆ. ತುರ್ತಾಗಿ ಕಾನೂನು ಜಾರಿಗೊಳಿಸುವುದು ಸಾಧ್ಯವಿಲ್ಲವೆಂದರೂ ವಾಟ್ಸ್​ಆ್ಯಪ್​ ಸಂಸ್ಥೆಯ ಉದ್ದೇಶಗಳನ್ನು ವಿವಿಧ ಆಯಾಮಗಳ ಮೂಲಕ ತನಿಖೆ ಮಾಡಲಿದ್ದೇವೆ ಎಂದು ಮೂಲಗಳು ಹೇಳಿವೆ.

ಈ ಹಿಂದೆಯೂ ಕೇಮ್​ಬ್ರಿಡ್ಜ್​ ಅನಾಲಿಟಿಕಲ್​ ಡೇಟಾ ಸೋರಿಕೆ ಸೇರಿದಂತೆ ಕೆಲ ವಿಚಾರವಾಗಿ ಸರ್ಕಾರ ವಾಟ್ಸ್​ಆ್ಯಪ್​ ಮತ್ತು ಫೇಸ್​ಬುಕ್​ ಸಂಸ್ಥೆಗಳನ್ನು ತನಿಖೆ ಮಾಡಿತ್ತು. ಫೇಕ್​ ಮೆಸೇಜ್​ಗಳಿಂದಾದ ದುರಂತದ ಬಗ್ಗೆಯೂ ವಿಚಾರಣೆ ನಡೆಸಿತ್ತು. ಆದರೆ, ಆ ಸಂದರ್ಭದಲ್ಲಿ ಬಳಕೆದಾರರ ದತ್ತಾಂಶಗಳನ್ನು ನೀಡುವುದು ಸಾಧ್ಯವಿಲ್ಲ ಎಂದು ಹೇಳಿದ್ದ ಮೆಸೆಂಜರ್​ ಸರ್ಕಾರ ಕೇಳಿದ ಮಾಹಿತಿಗಳನ್ನು ಕೊಡಲು ನಿರಾಕರಿಸಿತ್ತು.

ಏನಿದು ವಾಟ್ಸಾಪ್​ ಹೊಸ ಪಾಲಿಸಿ? ನಿಮ್ಮ ಖಾಸಗಿ ಮಾಹಿತಿ ಸೋರಿಕೆ ಆಗೋದು ಇನ್ನೂ ಸುಲಭ!

ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್