AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾಟ್ಸ್​ಆ್ಯಪ್​ ಗೌಪ್ಯತಾ ನೀತಿ ಬದಲಾವಣೆ ಕುರಿತು ವಿವರಣೆ ಕೇಳಿದ ಕೇಂದ್ರ ಸರ್ಕಾರ

ವಾಟ್ಸ್​ಆ್ಯಪ್​ ಸಂಸ್ಥೆಯ ಹೊಸ ನೀತಿಯನ್ನು ಸರ್ಕಾರ ಗಮನಿಸುತ್ತಿದೆ. ಈ ಬಗ್ಗೆ ನಾವು ವಾಟ್ಸ್​ಆ್ಯಪ್​ನಿಂದ ವಿವರಣೆಯನ್ನು ತರಿಸಿಕೊಂಡಿದ್ದು, ಸೂಕ್ತ ತನಿಖೆ ನಡೆಸಲಿದ್ದೇವೆ ಎಂದು ಸರ್ಕಾರದ ಉನ್ನತ ಮೂಲಗಳು ಮಾಹಿತಿ ನೀಡಿವೆ.

ವಾಟ್ಸ್​ಆ್ಯಪ್​ ಗೌಪ್ಯತಾ ನೀತಿ ಬದಲಾವಣೆ ಕುರಿತು ವಿವರಣೆ ಕೇಳಿದ ಕೇಂದ್ರ ಸರ್ಕಾರ
ವಾಟ್ಸ್​ಆ್ಯಪ್​
Skanda
| Edited By: |

Updated on: Jan 14, 2021 | 5:52 PM

Share

ದೆಹಲಿ: ವಾಟ್ಸ್​ಆ್ಯಪ್​ ಸಂಸ್ಥೆ ತನ್ನ ಗೌಪ್ಯತಾ ನೀತಿಗಳನ್ನು ಬದಲಾಯಿಸಲು ಹೊರಟಿರುವುದು ವಿವಾದವನ್ನು ಸೃಷ್ಟಿಸಿದೆ. ಫೆಬ್ರವರಿ 8ರ ಒಳಗೆ ತನ್ನ ಹೊಸ ನೀತಿಯನ್ನು ಒಪ್ಪಿಕೊಳ್ಳದೇ ಇದ್ದರೆ ವಾಟ್ಸ್​ಆ್ಯಪ್​ ಬಳಸುವುದು ಸಾಧ್ಯವಾಗುವುದಿಲ್ಲ ಎನ್ನುವ ಸಂಸ್ಥೆಯ ನಿಲುವಿನ ವಿರುದ್ಧ ಅನೇಕರು ತಿರುಗಿ ಬಿದ್ದಿದ್ದಾರೆ. ಇದೀಗ ಈ ಕುರಿತು ಪರಿಶೀಲನೆ ನಡೆಸಲು ಸರ್ಕಾರವೇ ಮುಂದಾಗಿದೆ.

ವಾಟ್ಸ್​ಆ್ಯಪ್​ ಸಿದ್ಧಪಡಿಸಿರುವ ಹೊಸ ಗೌಪ್ಯತಾ ನೀತಿಯ ಮೂಲಕ ಬಳಕೆದಾರರ ಮಾಹಿತಿಯನ್ನು ವಾಣಿಜ್ಯ ಉದ್ದೇಶಗಳಿಗಾಗಿ ತನ್ನ ಸಹಸಂಸ್ಥೆ ಫೇಸ್​ಬುಕ್​, ಮೆಸೆಂಜರ್​ ಮುಂತಾದವುಗಳೊಂದಿಗೆ ಹಂಚಿಕೊಳ್ಳಬಹುದಾಗಿದೆ. ಇದು ಬಳಕೆದಾರರ ಖಾಸಗಿತನಕ್ಕೆ ಧಕ್ಕೆ ಉಂಟುಮಾಡಬಹುದು ಎಂಬ ಆತಂಕ ಸೃಷ್ಟಿಯಾಗಿರುವುದರಿಂದ ಹಲವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಆದ್ದರಿಂದ ಈ ಬಗ್ಗೆ ನಾವು ವಾಟ್ಸ್​ಆ್ಯಪ್​ನಿಂದ ವಿವರಣೆಯನ್ನು ತರಿಸಿಕೊಂಡಿದ್ದು, ಸೂಕ್ತ ತನಿಖೆ ನಡೆಸಲಿದ್ದೇವೆ ಎಂದು ಸರ್ಕಾರದ ಉನ್ನತ ಮೂಲಗಳು ಮಾಹಿತಿ ನೀಡಿವೆ.

ವಾಟ್ಸ್​ಆ್ಯಪ್​ ಸಂಸ್ಥೆಯ ಹೊಸ ನೀತಿಯನ್ನು ಸರ್ಕಾರ ಗಮನಿಸುತ್ತಿದೆ. ಭಾರತದಲ್ಲಿ ದತ್ತಾಂಶ ರಕ್ಷಣೆಗಾಗಿ ಇನ್ನೂ ಕಾನೂನು ಜಾರಿಯಾಗಿಲ್ಲ. ಆದರೆ, ಅದರ ಕುರಿತಾದ ಮಸೂದೆ ಲೋಕಸಭೆಯಲ್ಲಿದೆ. ತುರ್ತಾಗಿ ಕಾನೂನು ಜಾರಿಗೊಳಿಸುವುದು ಸಾಧ್ಯವಿಲ್ಲವೆಂದರೂ ವಾಟ್ಸ್​ಆ್ಯಪ್​ ಸಂಸ್ಥೆಯ ಉದ್ದೇಶಗಳನ್ನು ವಿವಿಧ ಆಯಾಮಗಳ ಮೂಲಕ ತನಿಖೆ ಮಾಡಲಿದ್ದೇವೆ ಎಂದು ಮೂಲಗಳು ಹೇಳಿವೆ.

ಈ ಹಿಂದೆಯೂ ಕೇಮ್​ಬ್ರಿಡ್ಜ್​ ಅನಾಲಿಟಿಕಲ್​ ಡೇಟಾ ಸೋರಿಕೆ ಸೇರಿದಂತೆ ಕೆಲ ವಿಚಾರವಾಗಿ ಸರ್ಕಾರ ವಾಟ್ಸ್​ಆ್ಯಪ್​ ಮತ್ತು ಫೇಸ್​ಬುಕ್​ ಸಂಸ್ಥೆಗಳನ್ನು ತನಿಖೆ ಮಾಡಿತ್ತು. ಫೇಕ್​ ಮೆಸೇಜ್​ಗಳಿಂದಾದ ದುರಂತದ ಬಗ್ಗೆಯೂ ವಿಚಾರಣೆ ನಡೆಸಿತ್ತು. ಆದರೆ, ಆ ಸಂದರ್ಭದಲ್ಲಿ ಬಳಕೆದಾರರ ದತ್ತಾಂಶಗಳನ್ನು ನೀಡುವುದು ಸಾಧ್ಯವಿಲ್ಲ ಎಂದು ಹೇಳಿದ್ದ ಮೆಸೆಂಜರ್​ ಸರ್ಕಾರ ಕೇಳಿದ ಮಾಹಿತಿಗಳನ್ನು ಕೊಡಲು ನಿರಾಕರಿಸಿತ್ತು.

ಏನಿದು ವಾಟ್ಸಾಪ್​ ಹೊಸ ಪಾಲಿಸಿ? ನಿಮ್ಮ ಖಾಸಗಿ ಮಾಹಿತಿ ಸೋರಿಕೆ ಆಗೋದು ಇನ್ನೂ ಸುಲಭ!

ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ