AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈತರೊಂದಿಗೆ ಮಾತುಕತೆಗೆ ಸಿದ್ಧವೆಂದ ಅಮಿತ್​ ಶಾ: ಸಭೆಯ ತೀರ್ಮಾನಕ್ಕೆ ಕಾಯುತ್ತಿರುವ ಧರಣಿ ನಿರತ ರೈತರು

ಸುಮಾರು 400ಕ್ಕೂ ಹೆಚ್ಚು ರೈತರು ಉತ್ತರ ದೆಹಲಿಯ ಬುರಾರಿಯಲ್ಲಿ ಇಷ್ಟವಿಲ್ಲದಿದ್ದರೂ ಶನಿವಾರ ಒಟ್ಟುಗೂಡಿದರು ಮತ್ತು ಸರ್ಕಾರ ಶಾಂತಿಯುತವಾಗಿ ಪ್ರತಿಭಟನೆ ನಡೆಸಲು ಅವಕಾಶ ಮಾಡಿಕೊಟ್ಟ ಜಾಗದಲ್ಲಿ ಏನೇ ಸಮಸ್ಯೆ ಬಂದರು ಅವುಗಳನ್ನು ಪರಿಗಣಿಸದೆ ಕೃಷಿ ಕಾನೂನಿನ ವಿರುದ್ಧದ ಪ್ರತಿಭಟನೆಯಲ್ಲಿ ನಿರತರಾಗಿದ್ದಾರೆ.

ರೈತರೊಂದಿಗೆ ಮಾತುಕತೆಗೆ ಸಿದ್ಧವೆಂದ ಅಮಿತ್​ ಶಾ: ಸಭೆಯ ತೀರ್ಮಾನಕ್ಕೆ ಕಾಯುತ್ತಿರುವ ಧರಣಿ ನಿರತ ರೈತರು
ದೆಹಲಿ ಚಲೋ ಪ್ರತಿಭಟನೆ
preethi shettigar
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on:Nov 29, 2020 | 1:51 PM

Share

ದೆಹಲಿ: ದೆಹಲಿಯ ಕೇಂದ್ರ ಭಾಗವನ್ನು ಪ್ರವೇಶಿಸುವುದೇ ನಮ್ಮ ಗುರಿ ಎಂದು ಪಟ್ಟು ಹಿಡಿದಿರುವ ಪ್ರತಿಭಟನಾನಿರತ ರೈತರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ ಮತ್ತು ಪ್ರತಿಭಟನೆಯು ತೀವ್ರಗೊಳ್ಳುತ್ತಿದೆ. ಸದ್ಯ ಪ್ರತಿಭಟನೆಯ ನಿರ್ವಹಣೆ ಸರ್ಕಾರಕ್ಕೆ ದೊಡ್ಡ ತಲೆ ನೋವಾಗಿದೆ. ನಗರದ ಬುರಾರಿ ಮೈದಾನಕ್ಕೆ ತೆರಳುವಂತೆ ರೈತರಿಗೆ ಸರ್ಕಾರ ಸೂಚನೆ ನೀಡಿದೆ.

ಸುಮಾರು 400ಕ್ಕೂ ಹೆಚ್ಚು ರೈತರು ಉತ್ತರ ದೆಹಲಿಯ ಬುರಾರಿಯಲ್ಲಿ ಶನಿವಾರ ಒಟ್ಟುಗೂಡಿದರು. ಸರ್ಕಾರ ಶಾಂತಿಯುತವಾಗಿ ಪ್ರತಿಭಟನೆ ನಡೆಸಲು ಅವಕಾಶ ಮಾಡಿಕೊಟ್ಟ ಜಾಗದಲ್ಲಿ ಕೃಷಿ ಕಾನೂನಿನ ವಿರುದ್ಧದ ಪ್ರತಿಭಟನೆಯಲ್ಲಿ ನಿರತರಾಗಿದ್ದಾರೆ.

ದೆಹಲಿ ಚಲೋ ಪ್ರತಿಭಟನೆಯಲ್ಲಿ ನಿರತರಾಗಿರುವ ರೈತರಿಗೆ ಬುರಾರಿಯ ನಿರಂಕಾರಿ ಮೈದಾನದಲ್ಲಿ ಪ್ರತಿಭಟನೆ ಮಾಡುವಂತೆ ಈ ಹಿಂದೆ ಪೊಲೀಸರು ಸೂಚಿಸಿದ್ದರು. ಆದರೆ ಅದನ್ನು ಒಪ್ಪದ ರೈತರು ಸಿಂಘುವಿನಲ್ಲಿ ಮೂರು ದಿನಗಳಿಂದ ನೆಲೆಸಿದ್ದರು. ಇಂದು (ನ.29) ನಡೆಯಲಿರುವ ನಿರ್ಣಾಯಕ ಸಭೆಯ ಫಲಿತಾಂಶದ ನಂತರ ಮುಂದಿನ ತೀರ್ಮಾನ ತೆಗೆದುಕೊಳ್ಳುವುದಾಗಿ ಹೇಳಿದ್ದರು.

ಭಾರತೀಯ ಕಿಸಾನ್ ಯೂನಿಯನ್ ವಕ್ತಾರ ರಾಕೇಶ್ ಟಿಕೈಟ್ ‘ರಾಮ್​ಲೀಲಾ ಮೈದಾನದಲ್ಲಿ ಪ್ರತಿಭಟನೆಗಳು ನಡೆಯುತ್ತವೆ, ಹಾಗಾದರೆ ನಾವು ಖಾಸಗಿ ಸ್ಥಳವಾದ ನಿರಂಕಾರಿ ಭವನಕ್ಕೆ ಏಕೆ ಹೋಗಬೇಕು? ನಾವು ಇಂದು ಇಲ್ಲಿಯೇ ಇರುತ್ತೇವೆ’ ಎಂದು ಹೇಳಿದರು.

ದೆಹಲಿಯ ಕೇಂದ್ರ ಭಾಗಕ್ಕೆ ಸಂಪರ್ಕ ಕಲ್ಪಿಸುವ ಹಲವು ರಸ್ತೆಗಳು ಮತ್ತು ಪ್ರವೇಶ ಕೇಂದ್ರಗಳನ್ನು ಈಗಾಗಲೇ ನಿರ್ಬಂಧಿಸಿರುವುದರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರೈತರಿಗೆ ಬುರಾರಿ ಮೈದಾನಕ್ಕೆ ಸ್ಥಳಾಂತರಗೊಳ್ಳುವಂತೆ ಮನವಿ ಮಾಡಿದರು. ರೈತರು ಗೊತ್ತುಪಡಿಸಿದ ಸ್ಥಳಕ್ಕೆ ತೆರಳಿದ ಕೂಡಲೆ ಅವರೊಂದಿಗೆ ಚರ್ಚೆ ನಡೆಸಲು ಕೇಂದ್ರ ಸಿದ್ಧವಾಗಿದೆ ಎಂದು ಅಮಿತ್ ಶಾ ಹೇಳಿದ್ದರು.

ಒಂದು ಕಡೆ ರೈತರಿಗೆ ಬೆಂಬಲ ಸೂಚಿಸುತ್ತಿರುವ ರಾಜಕೀಯ ಪಕ್ಷಗಳು ಇನ್ನೊಂದು ಕಡೆ ಪ್ರತಿಭಟನೆ ತಣ್ಣಗಾಗಿಸಲು ಪ್ರಯತ್ನಿಸುತ್ತಿರುವ ಕೇಂದ್ರ ಸರ್ಕಾರ ಇವುಗಳ ನಡುವೆ ದೆಹಲಿ ಚಲೋ ರೈತರ ಪ್ರತಿಭಟನೆ ಎಲ್ಲಿಗೆ ಬಂದು ನಿಲ್ಲುತ್ತದೆ ಎನ್ನುವುದನ್ನು ಕಾದು ನೋಡಬೇಕಿದೆ.

ಇದನ್ನೂ ಓದಿ: Delhi Chalo: ಪ್ರತಿಭಟನೆ ಕೊನೆಗೊಳಿಸುವಂತೆ ರೈತರಿಗೆ ಕೇಂದ್ರ ಕೃಷಿ ಸಚಿವ ತೋಮರ್ ಮನವಿ!

Published On - 1:51 pm, Sun, 29 November 20

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?