AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈತರೊಂದಿಗೆ ಮಾತುಕತೆಗೆ ಸಿದ್ಧವೆಂದ ಅಮಿತ್​ ಶಾ: ಸಭೆಯ ತೀರ್ಮಾನಕ್ಕೆ ಕಾಯುತ್ತಿರುವ ಧರಣಿ ನಿರತ ರೈತರು

ಸುಮಾರು 400ಕ್ಕೂ ಹೆಚ್ಚು ರೈತರು ಉತ್ತರ ದೆಹಲಿಯ ಬುರಾರಿಯಲ್ಲಿ ಇಷ್ಟವಿಲ್ಲದಿದ್ದರೂ ಶನಿವಾರ ಒಟ್ಟುಗೂಡಿದರು ಮತ್ತು ಸರ್ಕಾರ ಶಾಂತಿಯುತವಾಗಿ ಪ್ರತಿಭಟನೆ ನಡೆಸಲು ಅವಕಾಶ ಮಾಡಿಕೊಟ್ಟ ಜಾಗದಲ್ಲಿ ಏನೇ ಸಮಸ್ಯೆ ಬಂದರು ಅವುಗಳನ್ನು ಪರಿಗಣಿಸದೆ ಕೃಷಿ ಕಾನೂನಿನ ವಿರುದ್ಧದ ಪ್ರತಿಭಟನೆಯಲ್ಲಿ ನಿರತರಾಗಿದ್ದಾರೆ.

ರೈತರೊಂದಿಗೆ ಮಾತುಕತೆಗೆ ಸಿದ್ಧವೆಂದ ಅಮಿತ್​ ಶಾ: ಸಭೆಯ ತೀರ್ಮಾನಕ್ಕೆ ಕಾಯುತ್ತಿರುವ ಧರಣಿ ನಿರತ ರೈತರು
ದೆಹಲಿ ಚಲೋ ಪ್ರತಿಭಟನೆ
preethi shettigar
| Edited By: |

Updated on:Nov 29, 2020 | 1:51 PM

Share

ದೆಹಲಿ: ದೆಹಲಿಯ ಕೇಂದ್ರ ಭಾಗವನ್ನು ಪ್ರವೇಶಿಸುವುದೇ ನಮ್ಮ ಗುರಿ ಎಂದು ಪಟ್ಟು ಹಿಡಿದಿರುವ ಪ್ರತಿಭಟನಾನಿರತ ರೈತರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ ಮತ್ತು ಪ್ರತಿಭಟನೆಯು ತೀವ್ರಗೊಳ್ಳುತ್ತಿದೆ. ಸದ್ಯ ಪ್ರತಿಭಟನೆಯ ನಿರ್ವಹಣೆ ಸರ್ಕಾರಕ್ಕೆ ದೊಡ್ಡ ತಲೆ ನೋವಾಗಿದೆ. ನಗರದ ಬುರಾರಿ ಮೈದಾನಕ್ಕೆ ತೆರಳುವಂತೆ ರೈತರಿಗೆ ಸರ್ಕಾರ ಸೂಚನೆ ನೀಡಿದೆ.

ಸುಮಾರು 400ಕ್ಕೂ ಹೆಚ್ಚು ರೈತರು ಉತ್ತರ ದೆಹಲಿಯ ಬುರಾರಿಯಲ್ಲಿ ಶನಿವಾರ ಒಟ್ಟುಗೂಡಿದರು. ಸರ್ಕಾರ ಶಾಂತಿಯುತವಾಗಿ ಪ್ರತಿಭಟನೆ ನಡೆಸಲು ಅವಕಾಶ ಮಾಡಿಕೊಟ್ಟ ಜಾಗದಲ್ಲಿ ಕೃಷಿ ಕಾನೂನಿನ ವಿರುದ್ಧದ ಪ್ರತಿಭಟನೆಯಲ್ಲಿ ನಿರತರಾಗಿದ್ದಾರೆ.

ದೆಹಲಿ ಚಲೋ ಪ್ರತಿಭಟನೆಯಲ್ಲಿ ನಿರತರಾಗಿರುವ ರೈತರಿಗೆ ಬುರಾರಿಯ ನಿರಂಕಾರಿ ಮೈದಾನದಲ್ಲಿ ಪ್ರತಿಭಟನೆ ಮಾಡುವಂತೆ ಈ ಹಿಂದೆ ಪೊಲೀಸರು ಸೂಚಿಸಿದ್ದರು. ಆದರೆ ಅದನ್ನು ಒಪ್ಪದ ರೈತರು ಸಿಂಘುವಿನಲ್ಲಿ ಮೂರು ದಿನಗಳಿಂದ ನೆಲೆಸಿದ್ದರು. ಇಂದು (ನ.29) ನಡೆಯಲಿರುವ ನಿರ್ಣಾಯಕ ಸಭೆಯ ಫಲಿತಾಂಶದ ನಂತರ ಮುಂದಿನ ತೀರ್ಮಾನ ತೆಗೆದುಕೊಳ್ಳುವುದಾಗಿ ಹೇಳಿದ್ದರು.

ಭಾರತೀಯ ಕಿಸಾನ್ ಯೂನಿಯನ್ ವಕ್ತಾರ ರಾಕೇಶ್ ಟಿಕೈಟ್ ‘ರಾಮ್​ಲೀಲಾ ಮೈದಾನದಲ್ಲಿ ಪ್ರತಿಭಟನೆಗಳು ನಡೆಯುತ್ತವೆ, ಹಾಗಾದರೆ ನಾವು ಖಾಸಗಿ ಸ್ಥಳವಾದ ನಿರಂಕಾರಿ ಭವನಕ್ಕೆ ಏಕೆ ಹೋಗಬೇಕು? ನಾವು ಇಂದು ಇಲ್ಲಿಯೇ ಇರುತ್ತೇವೆ’ ಎಂದು ಹೇಳಿದರು.

ದೆಹಲಿಯ ಕೇಂದ್ರ ಭಾಗಕ್ಕೆ ಸಂಪರ್ಕ ಕಲ್ಪಿಸುವ ಹಲವು ರಸ್ತೆಗಳು ಮತ್ತು ಪ್ರವೇಶ ಕೇಂದ್ರಗಳನ್ನು ಈಗಾಗಲೇ ನಿರ್ಬಂಧಿಸಿರುವುದರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರೈತರಿಗೆ ಬುರಾರಿ ಮೈದಾನಕ್ಕೆ ಸ್ಥಳಾಂತರಗೊಳ್ಳುವಂತೆ ಮನವಿ ಮಾಡಿದರು. ರೈತರು ಗೊತ್ತುಪಡಿಸಿದ ಸ್ಥಳಕ್ಕೆ ತೆರಳಿದ ಕೂಡಲೆ ಅವರೊಂದಿಗೆ ಚರ್ಚೆ ನಡೆಸಲು ಕೇಂದ್ರ ಸಿದ್ಧವಾಗಿದೆ ಎಂದು ಅಮಿತ್ ಶಾ ಹೇಳಿದ್ದರು.

ಒಂದು ಕಡೆ ರೈತರಿಗೆ ಬೆಂಬಲ ಸೂಚಿಸುತ್ತಿರುವ ರಾಜಕೀಯ ಪಕ್ಷಗಳು ಇನ್ನೊಂದು ಕಡೆ ಪ್ರತಿಭಟನೆ ತಣ್ಣಗಾಗಿಸಲು ಪ್ರಯತ್ನಿಸುತ್ತಿರುವ ಕೇಂದ್ರ ಸರ್ಕಾರ ಇವುಗಳ ನಡುವೆ ದೆಹಲಿ ಚಲೋ ರೈತರ ಪ್ರತಿಭಟನೆ ಎಲ್ಲಿಗೆ ಬಂದು ನಿಲ್ಲುತ್ತದೆ ಎನ್ನುವುದನ್ನು ಕಾದು ನೋಡಬೇಕಿದೆ.

ಇದನ್ನೂ ಓದಿ: Delhi Chalo: ಪ್ರತಿಭಟನೆ ಕೊನೆಗೊಳಿಸುವಂತೆ ರೈತರಿಗೆ ಕೇಂದ್ರ ಕೃಷಿ ಸಚಿವ ತೋಮರ್ ಮನವಿ!

Published On - 1:51 pm, Sun, 29 November 20

ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ