AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇನ್ಮುಂದೆ ಕೇಂದ್ರ ಸರ್ಕಾರದಿಂದ ರಾಜ್ಯ ಸರ್ಕಾರಗಳಿಗೆ ಇಲ್ಲ ರೆಮ್​ಡಿಸಿವಿರ್​ ಇಂಜೆಕ್ಷನ್​ ಪೂರೈಕೆ..

ಸದ್ಯ ದೇಶದಲ್ಲಿ ರೆಮ್​ಡಿಸಿವಿರ್​ನ್ನು ಬೇಡಿಕೆಗಿಂತಲೂ ಹೆಚ್ಚಿನ ಪ್ರಮಾಣದಲ್ಲಿ ಪೂರೈಕೆ ಮಾಡಲಾಗುತ್ತಿದೆ. ಕಳೆದ ಒಂದು ತಿಂಗಳಲ್ಲಿ ರೆಮ್​ಡಿಸಿವಿರ್​ ಉತ್ಪನ್ನ ಮಾಡುವ ಘಟಕಗಳ ಸಂಖ್ಯೆ 20 ರಿಂದ 60ಕ್ಕೆ ಏರಿಕೆಯಾಗಿದೆ.

ಇನ್ಮುಂದೆ ಕೇಂದ್ರ ಸರ್ಕಾರದಿಂದ ರಾಜ್ಯ ಸರ್ಕಾರಗಳಿಗೆ ಇಲ್ಲ ರೆಮ್​ಡಿಸಿವಿರ್​ ಇಂಜೆಕ್ಷನ್​ ಪೂರೈಕೆ..
ರೆಮ್​ಡಿಸಿವಿರ್​
Lakshmi Hegde
|

Updated on: May 29, 2021 | 4:22 PM

Share

ದೆಹಲಿ: ಕೇಂದ್ರ ಸರ್ಕಾರದಿಂದ ರಾಜ್ಯಗಳಿಗೆ ಮಾಡಲಾಗುತ್ತಿದ್ದ ರೆಮ್​ಡಿಸಿವಿರ್​​ ಚುಚ್ಚುಮದ್ದು ಪೂರೈಕೆಯನ್ನು ಸ್ಥಗಿತಗೊಳಿಸಲು ನಿರ್ಧರಿಸಲಾಗಿದೆ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಇಲಾಖೆ ರಾಜ್ಯ ಸಚಿವ ಮನ್ಸುಖ್​ ಮಾಂಡವಿಯಾ ತಿಳಿಸಿದ್ದಾರೆ. ಟ್ವೀಟ್ ಮಾಡಿರುವ ಅವರು, ದೇಶದಲ್ಲಿ ರೆಮ್​ಡಿಸಿವಿರ್​ ಇಂಜೆಕ್ಷನ್​ ಲಭ್ಯತೆ ಬಗ್ಗೆ ಮೇಲ್ವಿಚಾರಣೆ ಮಾಡುವಂತೆ ರಾಷ್ಟ್ರೀಯ ಔಷಧೀಯ ಬೆಲೆ ಏಜೆನ್ಸಿ ಮತ್ತು ಕೇಂದ್ರ ಔಷಧ ಪ್ರಮಾಣಿತ ನಿಯಂತ್ರಣ ಸಂಸ್ಥೆ (CDSCO)ಗೆ ಸೂಚಿಸಲಾಗಿದೆ ಎಂದೂ ಹೇಳಿದ್ದಾರೆ.

ಸದ್ಯ ದೇಶದಲ್ಲಿ ರೆಮ್​ಡಿಸಿವಿರ್​ನ್ನು ಬೇಡಿಕೆಗಿಂತಲೂ ಹೆಚ್ಚಿನ ಪ್ರಮಾಣದಲ್ಲಿ ಪೂರೈಕೆ ಮಾಡಲಾಗುತ್ತಿದೆ. ಕಳೆದ ಒಂದು ತಿಂಗಳಲ್ಲಿ ರೆಮ್​ಡಿಸಿವಿರ್​ ಉತ್ಪನ್ನ ಮಾಡುವ ಘಟಕಗಳ ಸಂಖ್ಯೆ 20 ರಿಂದ 60ಕ್ಕೆ ಏರಿಕೆಯಾಗಿದೆ. 2021ರ ಏಪ್ರಿಲ್​ 11ರ ಹೊತ್ತಿಗೆ ದಿನಕ್ಕೆ 33 ಸಾವಿರ ವಯಲ್​​ಗಳಷ್ಟು ಮಾತ್ರ ರೆಮ್​ಡಿಸಿವಿರ್​ ಉತ್ಪತ್ತಿಯಾಗುತ್ತಿತ್ತು. ಅದೀಗ ದಿನಕ್ಕೆ 3,50,000 ವಯಲ್ಸ್​ಗಳನ್ನು ಉತ್ಪನ್ನವಾಗುತ್ತಿದೆ. ಹಾಗಾಗಿ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ರೆಮ್​ಡಿಸಿವಿರ್​ ವಿತರಿಸುವುದನ್ನು ನಿಲ್ಲಿಸಲು ನಿರ್ಧರಿಸಿದ್ದೇವೆ ಎಂದು ಸಚಿವರು ಹೇಳಿಕೊಂಡಿದ್ದಾರೆ. ಇನ್ನು ತುರ್ತು ಸಂದರ್ಭ ನಿಭಾಯಿಸಲು 50 ಲಕ್ಷ ವಯಲ್​​ಗಳಷ್ಟು ರೆಮ್​ಡಿಸಿವಿರ್​ ಖರೀದಿ ಮಾಡಲು ಕೇಂದ್ರ ಸರ್ಕಾರ ನಿರ್ಧಾರ ಮಾಡಿದ್ದಾಗ್ಯೂ ತಿಳಿಸಿದ್ದಾರೆ.

ಕಳೆದ ತಿಂಗಳು ರೆಮ್​ಡಿಸಿವಿರ್​ ಇಂಜೆಕ್ಷನ್​ ಅಭಾವ ಉಂಟಾದ ಬೆನ್ನಲ್ಲೇ ಕೇಂದ್ರ ಸರ್ಕಾರ ಅದರ ಆಮದು ಸುಂಕವನ್ನು ತೆರವುಗೊಳಿಸಿತ್ತು. ಹಾಗೇ ಇಂಜೆಕ್ಷನ್​​ಗೆ ಅಗತ್ಯವಿರುವ ಕಚ್ಚಾವಸ್ತುಗಳ ಮೇಲಿನ ಸುಂಕವನ್ನೂ ಕಡಿತಗೊಳಿಸಿತ್ತು. ಕರ್ನಾಟಕ ಸೇರಿ ಹಲವು ರಾಜ್ಯಗಳಿಗೆ ಕೇಂದ್ರ ಸರ್ಕಾರವೇ ಇಂಜೆಕ್ಷನ್​ನ್ನು ಪೂರೈಕೆ ಮಾಡುತ್ತಿತ್ತು. ಇದೀಗ ಕೊವಿಡ್​ 19 ಸೋಂಕಿನ ಪ್ರಕರಣಗಳು ಕಡಿಮೆಯಾಗುತ್ತಿರುವ ಕಾರಣದಿಂದ ಇಂಜೆಕ್ಷನ್​ ಪೂರೈಕೆ ನಿಲ್ಲಿಸಲು ನಿರ್ಧರಿಸಿದ್ದಾಗಿ ಸಚಿವರು ಹೇಳಿದ್ದಾರೆ.

ಇದನ್ನೂ ಓದಿ: ಕೊವಿಡ್ ಕಡಿಮೆ ಆಗುತ್ತಿದೆ ಎಂದು ಕೈಕಟ್ಟಿ ಕೂರುವಂತಿಲ್ಲ; ಸಿಎಂ ಯಡಿಯೂರಪ್ಪ ಖಡಕ್ ಸೂಚನೆ

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜಾತ್ರೆಯಲ್ಲಿ ಯುವತಿಯರನ್ನು ಹಿಂಬಾಲಿಸಿ ಖಾಸಗಿ ಭಾಗ ಮುಟ್ಟಿ ಹಿಂಸೆ
ಜಾತ್ರೆಯಲ್ಲಿ ಯುವತಿಯರನ್ನು ಹಿಂಬಾಲಿಸಿ ಖಾಸಗಿ ಭಾಗ ಮುಟ್ಟಿ ಹಿಂಸೆ