AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇನ್ಮುಂದೆ ಕೇಂದ್ರ ಸರ್ಕಾರದಿಂದ ರಾಜ್ಯ ಸರ್ಕಾರಗಳಿಗೆ ಇಲ್ಲ ರೆಮ್​ಡಿಸಿವಿರ್​ ಇಂಜೆಕ್ಷನ್​ ಪೂರೈಕೆ..

ಸದ್ಯ ದೇಶದಲ್ಲಿ ರೆಮ್​ಡಿಸಿವಿರ್​ನ್ನು ಬೇಡಿಕೆಗಿಂತಲೂ ಹೆಚ್ಚಿನ ಪ್ರಮಾಣದಲ್ಲಿ ಪೂರೈಕೆ ಮಾಡಲಾಗುತ್ತಿದೆ. ಕಳೆದ ಒಂದು ತಿಂಗಳಲ್ಲಿ ರೆಮ್​ಡಿಸಿವಿರ್​ ಉತ್ಪನ್ನ ಮಾಡುವ ಘಟಕಗಳ ಸಂಖ್ಯೆ 20 ರಿಂದ 60ಕ್ಕೆ ಏರಿಕೆಯಾಗಿದೆ.

ಇನ್ಮುಂದೆ ಕೇಂದ್ರ ಸರ್ಕಾರದಿಂದ ರಾಜ್ಯ ಸರ್ಕಾರಗಳಿಗೆ ಇಲ್ಲ ರೆಮ್​ಡಿಸಿವಿರ್​ ಇಂಜೆಕ್ಷನ್​ ಪೂರೈಕೆ..
ರೆಮ್​ಡಿಸಿವಿರ್​
Lakshmi Hegde
|

Updated on: May 29, 2021 | 4:22 PM

Share

ದೆಹಲಿ: ಕೇಂದ್ರ ಸರ್ಕಾರದಿಂದ ರಾಜ್ಯಗಳಿಗೆ ಮಾಡಲಾಗುತ್ತಿದ್ದ ರೆಮ್​ಡಿಸಿವಿರ್​​ ಚುಚ್ಚುಮದ್ದು ಪೂರೈಕೆಯನ್ನು ಸ್ಥಗಿತಗೊಳಿಸಲು ನಿರ್ಧರಿಸಲಾಗಿದೆ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಇಲಾಖೆ ರಾಜ್ಯ ಸಚಿವ ಮನ್ಸುಖ್​ ಮಾಂಡವಿಯಾ ತಿಳಿಸಿದ್ದಾರೆ. ಟ್ವೀಟ್ ಮಾಡಿರುವ ಅವರು, ದೇಶದಲ್ಲಿ ರೆಮ್​ಡಿಸಿವಿರ್​ ಇಂಜೆಕ್ಷನ್​ ಲಭ್ಯತೆ ಬಗ್ಗೆ ಮೇಲ್ವಿಚಾರಣೆ ಮಾಡುವಂತೆ ರಾಷ್ಟ್ರೀಯ ಔಷಧೀಯ ಬೆಲೆ ಏಜೆನ್ಸಿ ಮತ್ತು ಕೇಂದ್ರ ಔಷಧ ಪ್ರಮಾಣಿತ ನಿಯಂತ್ರಣ ಸಂಸ್ಥೆ (CDSCO)ಗೆ ಸೂಚಿಸಲಾಗಿದೆ ಎಂದೂ ಹೇಳಿದ್ದಾರೆ.

ಸದ್ಯ ದೇಶದಲ್ಲಿ ರೆಮ್​ಡಿಸಿವಿರ್​ನ್ನು ಬೇಡಿಕೆಗಿಂತಲೂ ಹೆಚ್ಚಿನ ಪ್ರಮಾಣದಲ್ಲಿ ಪೂರೈಕೆ ಮಾಡಲಾಗುತ್ತಿದೆ. ಕಳೆದ ಒಂದು ತಿಂಗಳಲ್ಲಿ ರೆಮ್​ಡಿಸಿವಿರ್​ ಉತ್ಪನ್ನ ಮಾಡುವ ಘಟಕಗಳ ಸಂಖ್ಯೆ 20 ರಿಂದ 60ಕ್ಕೆ ಏರಿಕೆಯಾಗಿದೆ. 2021ರ ಏಪ್ರಿಲ್​ 11ರ ಹೊತ್ತಿಗೆ ದಿನಕ್ಕೆ 33 ಸಾವಿರ ವಯಲ್​​ಗಳಷ್ಟು ಮಾತ್ರ ರೆಮ್​ಡಿಸಿವಿರ್​ ಉತ್ಪತ್ತಿಯಾಗುತ್ತಿತ್ತು. ಅದೀಗ ದಿನಕ್ಕೆ 3,50,000 ವಯಲ್ಸ್​ಗಳನ್ನು ಉತ್ಪನ್ನವಾಗುತ್ತಿದೆ. ಹಾಗಾಗಿ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ರೆಮ್​ಡಿಸಿವಿರ್​ ವಿತರಿಸುವುದನ್ನು ನಿಲ್ಲಿಸಲು ನಿರ್ಧರಿಸಿದ್ದೇವೆ ಎಂದು ಸಚಿವರು ಹೇಳಿಕೊಂಡಿದ್ದಾರೆ. ಇನ್ನು ತುರ್ತು ಸಂದರ್ಭ ನಿಭಾಯಿಸಲು 50 ಲಕ್ಷ ವಯಲ್​​ಗಳಷ್ಟು ರೆಮ್​ಡಿಸಿವಿರ್​ ಖರೀದಿ ಮಾಡಲು ಕೇಂದ್ರ ಸರ್ಕಾರ ನಿರ್ಧಾರ ಮಾಡಿದ್ದಾಗ್ಯೂ ತಿಳಿಸಿದ್ದಾರೆ.

ಕಳೆದ ತಿಂಗಳು ರೆಮ್​ಡಿಸಿವಿರ್​ ಇಂಜೆಕ್ಷನ್​ ಅಭಾವ ಉಂಟಾದ ಬೆನ್ನಲ್ಲೇ ಕೇಂದ್ರ ಸರ್ಕಾರ ಅದರ ಆಮದು ಸುಂಕವನ್ನು ತೆರವುಗೊಳಿಸಿತ್ತು. ಹಾಗೇ ಇಂಜೆಕ್ಷನ್​​ಗೆ ಅಗತ್ಯವಿರುವ ಕಚ್ಚಾವಸ್ತುಗಳ ಮೇಲಿನ ಸುಂಕವನ್ನೂ ಕಡಿತಗೊಳಿಸಿತ್ತು. ಕರ್ನಾಟಕ ಸೇರಿ ಹಲವು ರಾಜ್ಯಗಳಿಗೆ ಕೇಂದ್ರ ಸರ್ಕಾರವೇ ಇಂಜೆಕ್ಷನ್​ನ್ನು ಪೂರೈಕೆ ಮಾಡುತ್ತಿತ್ತು. ಇದೀಗ ಕೊವಿಡ್​ 19 ಸೋಂಕಿನ ಪ್ರಕರಣಗಳು ಕಡಿಮೆಯಾಗುತ್ತಿರುವ ಕಾರಣದಿಂದ ಇಂಜೆಕ್ಷನ್​ ಪೂರೈಕೆ ನಿಲ್ಲಿಸಲು ನಿರ್ಧರಿಸಿದ್ದಾಗಿ ಸಚಿವರು ಹೇಳಿದ್ದಾರೆ.

ಇದನ್ನೂ ಓದಿ: ಕೊವಿಡ್ ಕಡಿಮೆ ಆಗುತ್ತಿದೆ ಎಂದು ಕೈಕಟ್ಟಿ ಕೂರುವಂತಿಲ್ಲ; ಸಿಎಂ ಯಡಿಯೂರಪ್ಪ ಖಡಕ್ ಸೂಚನೆ

Follow Us
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ
TV9 ರಿಯಲ್ ಎಸ್ಟೇಟ್ ಎಕ್ಸ್​ಪೋಗೆ DIG ಬೋರಲಿಂಗಯ್ಯ, ಅರುಣ್ ಯೋಗಿರಾಜ್
TV9 ರಿಯಲ್ ಎಸ್ಟೇಟ್ ಎಕ್ಸ್​ಪೋಗೆ DIG ಬೋರಲಿಂಗಯ್ಯ, ಅರುಣ್ ಯೋಗಿರಾಜ್
ಹುಬ್ಬಳ್ಳಿ ಪುಷ್ಕರಣಿ ವಿವಾದ: ಪ್ರದೀಪ್ ಶೆಟ್ಟರ್ ಅನೇಕ ನಾಯಕರಿಂದ ಪ್ರತಿಭಟನೆ
ಹುಬ್ಬಳ್ಳಿ ಪುಷ್ಕರಣಿ ವಿವಾದ: ಪ್ರದೀಪ್ ಶೆಟ್ಟರ್ ಅನೇಕ ನಾಯಕರಿಂದ ಪ್ರತಿಭಟನೆ
ಬಾಂಗ್ಲಾ ಅಕ್ರಮ ವಲಸಿಗರ ಕಾಟ; ಅರೆಸ್ಟ್ ಆದವ್ರ ಹಿನ್ನೆಲೆ ಏನು?
ಬಾಂಗ್ಲಾ ಅಕ್ರಮ ವಲಸಿಗರ ಕಾಟ; ಅರೆಸ್ಟ್ ಆದವ್ರ ಹಿನ್ನೆಲೆ ಏನು?
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ