AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರತಿವರ್ಷ ಜೂನ್ 25ರಂದು ಸಂವಿಧಾನದ ಹತ್ಯಾ ದಿನ ಆಚರಣೆ; ಅಮಿತ್ ಶಾ ಘೋಷಣೆ

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ತುರ್ತು ಪರಿಸ್ಥಿತಿ ಹೇರಿಕೆಯನ್ನು ವಿರೋಧಿಸಿ ಪ್ರತಿವರ್ಷ ಜೂನ್ 25ರಂದು ಸಂವಿಧಾನ್ ಹತ್ಯಾ ದಿವಸ್ ಆಚರಣೆ ಮಾಡಲಾಗುವುದು ಎಂದು ಘೋಷಿಸಿದೆ. 1975ರ ಜೂನ್ 25ರಂದು ಮಾಜಿ ಪ್ರಧಾನಿ ಇಂದಿರಾ ಗಾಂಧಿ ನೇತೃತ್ವದ ಕಾಂಗ್ರೆಸ್ ಸರ್ಕಾರವು ತುರ್ತು ಪರಿಸ್ಥಿತಿಯನ್ನು ಹೇರಿತು. ಇದರಿಂದ 2 ವರ್ಷಗಳ ಕಾಲ ಜನರ ನಾಗರಿಕ ಹಕ್ಕುಗಳನ್ನು ಅಮಾನತುಗೊಳಿಸಲಾಯಿತು.

ಪ್ರತಿವರ್ಷ ಜೂನ್ 25ರಂದು ಸಂವಿಧಾನದ ಹತ್ಯಾ ದಿನ ಆಚರಣೆ; ಅಮಿತ್ ಶಾ ಘೋಷಣೆ
ಅಮಿತ್ ಶಾ
ಸುಷ್ಮಾ ಚಕ್ರೆ
|

Updated on:Jul 12, 2024 | 6:42 PM

Share

ನವದೆಹಲಿ: ತುರ್ತು ಪರಿಸ್ಥಿತಿ ಹೇರಿಕೆ ವಿರೋಧಿಸಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ಮುಂದುವರಿಸಿರುವ ಕೇಂದ್ರ ಸರ್ಕಾರ, ಜೂನ್ 25ನ್ನು ಪ್ರತಿ ವರ್ಷ ‘ಸಂವಿಧಾನ್ ಹತ್ಯಾ ದಿವಸ್’ ಎಂದು ಆಚರಿಸಲಾಗುವುದು ಎಂದು ಘೋಷಿಸಿದೆ. ಈ ಬಗ್ಗೆ ಎಕ್ಸ್​ನಲ್ಲಿ ಘೋಷಣೆ ಮಾಡಿರುವ ಗೃಹ ಸಚಿವ ಅಮಿತ್ ಶಾ ಗೆಜೆಟ್ ಅಧಿಸೂಚನೆಯನ್ನು ಪೋಸ್ಟ್ ಮಾಡಿದ್ದಾರೆ. “ಜೂನ್ 25, 1975ರಂದು ಅಂದಿನ ಪ್ರಧಾನಿ ಇಂದಿರಾ ಗಾಂಧಿ ಅವರು ಸರ್ವಾಧಿಕಾರಿ ಮನಸ್ಥಿತಿಯಿಂದ ತುರ್ತು ಪರಿಸ್ಥಿತಿಯನ್ನು ಹೇರುವ ಮೂಲಕ ನಮ್ಮ ಪ್ರಜಾಪ್ರಭುತ್ವದ ಕತ್ತು ಹಿಸುಕಿದರು. ಇದರಿಂದ ತಮ್ಮ ತಪ್ಪಿಲ್ಲದಿದ್ದರೂ ಲಕ್ಷಾಂತರ ಜನರನ್ನು ಜೈಲಿಗೆ ಹಾಕಲಾಯಿತು ಮತ್ತು ಮಾಧ್ಯಮಗಳ ಧ್ವನಿಯನ್ನು ಹತ್ತಿಕ್ಕಲಾಯಿತು” ಎಂದಿದ್ದಾರೆ.

“ಭಾರತ ಸರ್ಕಾರವು ಪ್ರತಿ ವರ್ಷ ಜೂನ್ 25 ಅನ್ನು ‘ಸಂವಿಧಾನ್ ಹತ್ಯಾ ದಿವಸ್’ ಎಂದು ಆಚರಿಸಲು ಸರ್ಕಾರ ನಿರ್ಧರಿಸಿದೆ. ಈ ದಿನವು 1975 ರ ತುರ್ತು ಪರಿಸ್ಥಿತಿಯ ಅಮಾನವೀಯ ನೋವುಗಳನ್ನು ಸಹಿಸಿಕೊಂಡ ಎಲ್ಲರ ಬೃಹತ್ ಕೊಡುಗೆಗಳನ್ನು ಸ್ಮರಿಸುತ್ತದೆ ಎಂದು ಅಮಿತ್ ಶಾ ಹೇಳಿದ್ದಾರೆ.

ಇದನ್ನೂ ಓದಿ: ನರೇಂದ್ರ ಮೋದಿಗೆ ರಷ್ಯಾದ ಅತ್ಯುನ್ನತ ನಾಗರಿಕ ಗೌರವ; ಪ್ರಶಸ್ತಿಯನ್ನು ಭಾರತೀಯರಿಗೆ ಅರ್ಪಿಸಿದ ಪಿಎಂ

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಶುಕ್ರವಾರ ಅಧಿಕೃತವಾಗಿ ಜೂನ್ 25ರಂದು ‘ಸಂವಿಧಾನ ಹತ್ಯಾ ದಿವಸ್’ ಎಂದು ಆಚರಿಸಲು ನಿರ್ಧರಿಸಿದ್ದು, ಆಗಿನ ಪ್ರಧಾನಿ ಇಂದಿರಾಗಾಂಧಿಯವರ ‘ತುರ್ತು ಪರಿಸ್ಥಿತಿ’ಯಿಂದಾಗಿ ಉಂಟಾದ ಅಮಾನವೀಯ ನೋವನ್ನು ಅನುಭವಿಸಿದ ಎಲ್ಲರ ಕೊಡುಗೆಯನ್ನು ಆಚರಿಸಲು ನಿರ್ಧರಿಸಿದೆ.

ಇಂದಿರಾ ಗಾಂಧಿಯವರ ಸರ್ಕಾರವು ಜೂನ್ 25, 1975ರಂದು ಭಾರತದಲ್ಲಿ ತುರ್ತು ಪರಿಸ್ಥಿತಿಯನ್ನು ಘೋಷಿಸಿತು. ಸುಮಾರು 2 ವರ್ಷಗಳ ನಂತರ ಮಾರ್ಚ್ 21, 1977ರಂದು ಪ್ರಜಾಪ್ರಭುತ್ವವನ್ನು ಪುನಃಸ್ಥಾಪಿಸಲಾಯಿತು. ಜೂನ್ 25, 2024ರಂದು ತುರ್ತು ಪರಿಸ್ಥಿತಿಯ 50 ವರ್ಷಗಳ ನೆನಪಿಗಾಗಿ ಕರಾಳದಿನವನ್ನು ಆಚರಿಸಲಾಯಿತು.

ಇದನ್ನೂ ಓದಿ: PM Narendra Modi: ಲೋಕಸಭೆಯಲ್ಲಿ ತುರ್ತು ಪರಿಸ್ಥಿತಿ ವಿರುದ್ಧ ಧ್ವನಿಯೆತ್ತಿದ ಸ್ಪೀಕರ್​ಗೆ ಪ್ರಧಾನಿ ಮೋದಿ ಮೆಚ್ಚುಗೆ

ಜೂನ್ 24ರಂದು ಹೊಸ ಲೋಕಸಭೆಯ ಮೊದಲ ಅಧಿವೇಶನದಲ್ಲಿ ಪ್ರಧಾನಿ ನರೇಂದ್ರ ಮೋದಿ ತುರ್ತುಪರಿಸ್ಥಿತಿ ಭಾರತದ ಪ್ರಜಾಪ್ರಭುತ್ವದಲ್ಲಿ “ಕಪ್ಪು ಚುಕ್ಕೆ” ಎಂದು ಕರೆದರು. ಇದಕ್ಕೆ ವಿಪಕ್ಷಗಳು ಭಾರೀ ವಿರೋಧ ವ್ಯಕ್ತಪಡಿಸಿದ್ದರು. ಬಳಿಕ ಜಂಟಿ ಸಂಸತ್ ಅಧಿವೇಶನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಕೂಡ ತುರ್ತುಪರಿಸ್ಥಿತಿಯ ವಿರುದ್ಧ ಧ್ವನಿಯೆತ್ತಿದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:54 pm, Fri, 12 July 24

ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್