AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರತಿವರ್ಷ ಜೂನ್ 25ರಂದು ಸಂವಿಧಾನದ ಹತ್ಯಾ ದಿನ ಆಚರಣೆ; ಅಮಿತ್ ಶಾ ಘೋಷಣೆ

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ತುರ್ತು ಪರಿಸ್ಥಿತಿ ಹೇರಿಕೆಯನ್ನು ವಿರೋಧಿಸಿ ಪ್ರತಿವರ್ಷ ಜೂನ್ 25ರಂದು ಸಂವಿಧಾನ್ ಹತ್ಯಾ ದಿವಸ್ ಆಚರಣೆ ಮಾಡಲಾಗುವುದು ಎಂದು ಘೋಷಿಸಿದೆ. 1975ರ ಜೂನ್ 25ರಂದು ಮಾಜಿ ಪ್ರಧಾನಿ ಇಂದಿರಾ ಗಾಂಧಿ ನೇತೃತ್ವದ ಕಾಂಗ್ರೆಸ್ ಸರ್ಕಾರವು ತುರ್ತು ಪರಿಸ್ಥಿತಿಯನ್ನು ಹೇರಿತು. ಇದರಿಂದ 2 ವರ್ಷಗಳ ಕಾಲ ಜನರ ನಾಗರಿಕ ಹಕ್ಕುಗಳನ್ನು ಅಮಾನತುಗೊಳಿಸಲಾಯಿತು.

ಪ್ರತಿವರ್ಷ ಜೂನ್ 25ರಂದು ಸಂವಿಧಾನದ ಹತ್ಯಾ ದಿನ ಆಚರಣೆ; ಅಮಿತ್ ಶಾ ಘೋಷಣೆ
ಅಮಿತ್ ಶಾ
ಸುಷ್ಮಾ ಚಕ್ರೆ
|

Updated on:Jul 12, 2024 | 6:42 PM

Share

ನವದೆಹಲಿ: ತುರ್ತು ಪರಿಸ್ಥಿತಿ ಹೇರಿಕೆ ವಿರೋಧಿಸಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ಮುಂದುವರಿಸಿರುವ ಕೇಂದ್ರ ಸರ್ಕಾರ, ಜೂನ್ 25ನ್ನು ಪ್ರತಿ ವರ್ಷ ‘ಸಂವಿಧಾನ್ ಹತ್ಯಾ ದಿವಸ್’ ಎಂದು ಆಚರಿಸಲಾಗುವುದು ಎಂದು ಘೋಷಿಸಿದೆ. ಈ ಬಗ್ಗೆ ಎಕ್ಸ್​ನಲ್ಲಿ ಘೋಷಣೆ ಮಾಡಿರುವ ಗೃಹ ಸಚಿವ ಅಮಿತ್ ಶಾ ಗೆಜೆಟ್ ಅಧಿಸೂಚನೆಯನ್ನು ಪೋಸ್ಟ್ ಮಾಡಿದ್ದಾರೆ. “ಜೂನ್ 25, 1975ರಂದು ಅಂದಿನ ಪ್ರಧಾನಿ ಇಂದಿರಾ ಗಾಂಧಿ ಅವರು ಸರ್ವಾಧಿಕಾರಿ ಮನಸ್ಥಿತಿಯಿಂದ ತುರ್ತು ಪರಿಸ್ಥಿತಿಯನ್ನು ಹೇರುವ ಮೂಲಕ ನಮ್ಮ ಪ್ರಜಾಪ್ರಭುತ್ವದ ಕತ್ತು ಹಿಸುಕಿದರು. ಇದರಿಂದ ತಮ್ಮ ತಪ್ಪಿಲ್ಲದಿದ್ದರೂ ಲಕ್ಷಾಂತರ ಜನರನ್ನು ಜೈಲಿಗೆ ಹಾಕಲಾಯಿತು ಮತ್ತು ಮಾಧ್ಯಮಗಳ ಧ್ವನಿಯನ್ನು ಹತ್ತಿಕ್ಕಲಾಯಿತು” ಎಂದಿದ್ದಾರೆ.

“ಭಾರತ ಸರ್ಕಾರವು ಪ್ರತಿ ವರ್ಷ ಜೂನ್ 25 ಅನ್ನು ‘ಸಂವಿಧಾನ್ ಹತ್ಯಾ ದಿವಸ್’ ಎಂದು ಆಚರಿಸಲು ಸರ್ಕಾರ ನಿರ್ಧರಿಸಿದೆ. ಈ ದಿನವು 1975 ರ ತುರ್ತು ಪರಿಸ್ಥಿತಿಯ ಅಮಾನವೀಯ ನೋವುಗಳನ್ನು ಸಹಿಸಿಕೊಂಡ ಎಲ್ಲರ ಬೃಹತ್ ಕೊಡುಗೆಗಳನ್ನು ಸ್ಮರಿಸುತ್ತದೆ ಎಂದು ಅಮಿತ್ ಶಾ ಹೇಳಿದ್ದಾರೆ.

ಇದನ್ನೂ ಓದಿ: ನರೇಂದ್ರ ಮೋದಿಗೆ ರಷ್ಯಾದ ಅತ್ಯುನ್ನತ ನಾಗರಿಕ ಗೌರವ; ಪ್ರಶಸ್ತಿಯನ್ನು ಭಾರತೀಯರಿಗೆ ಅರ್ಪಿಸಿದ ಪಿಎಂ

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಶುಕ್ರವಾರ ಅಧಿಕೃತವಾಗಿ ಜೂನ್ 25ರಂದು ‘ಸಂವಿಧಾನ ಹತ್ಯಾ ದಿವಸ್’ ಎಂದು ಆಚರಿಸಲು ನಿರ್ಧರಿಸಿದ್ದು, ಆಗಿನ ಪ್ರಧಾನಿ ಇಂದಿರಾಗಾಂಧಿಯವರ ‘ತುರ್ತು ಪರಿಸ್ಥಿತಿ’ಯಿಂದಾಗಿ ಉಂಟಾದ ಅಮಾನವೀಯ ನೋವನ್ನು ಅನುಭವಿಸಿದ ಎಲ್ಲರ ಕೊಡುಗೆಯನ್ನು ಆಚರಿಸಲು ನಿರ್ಧರಿಸಿದೆ.

ಇಂದಿರಾ ಗಾಂಧಿಯವರ ಸರ್ಕಾರವು ಜೂನ್ 25, 1975ರಂದು ಭಾರತದಲ್ಲಿ ತುರ್ತು ಪರಿಸ್ಥಿತಿಯನ್ನು ಘೋಷಿಸಿತು. ಸುಮಾರು 2 ವರ್ಷಗಳ ನಂತರ ಮಾರ್ಚ್ 21, 1977ರಂದು ಪ್ರಜಾಪ್ರಭುತ್ವವನ್ನು ಪುನಃಸ್ಥಾಪಿಸಲಾಯಿತು. ಜೂನ್ 25, 2024ರಂದು ತುರ್ತು ಪರಿಸ್ಥಿತಿಯ 50 ವರ್ಷಗಳ ನೆನಪಿಗಾಗಿ ಕರಾಳದಿನವನ್ನು ಆಚರಿಸಲಾಯಿತು.

ಇದನ್ನೂ ಓದಿ: PM Narendra Modi: ಲೋಕಸಭೆಯಲ್ಲಿ ತುರ್ತು ಪರಿಸ್ಥಿತಿ ವಿರುದ್ಧ ಧ್ವನಿಯೆತ್ತಿದ ಸ್ಪೀಕರ್​ಗೆ ಪ್ರಧಾನಿ ಮೋದಿ ಮೆಚ್ಚುಗೆ

ಜೂನ್ 24ರಂದು ಹೊಸ ಲೋಕಸಭೆಯ ಮೊದಲ ಅಧಿವೇಶನದಲ್ಲಿ ಪ್ರಧಾನಿ ನರೇಂದ್ರ ಮೋದಿ ತುರ್ತುಪರಿಸ್ಥಿತಿ ಭಾರತದ ಪ್ರಜಾಪ್ರಭುತ್ವದಲ್ಲಿ “ಕಪ್ಪು ಚುಕ್ಕೆ” ಎಂದು ಕರೆದರು. ಇದಕ್ಕೆ ವಿಪಕ್ಷಗಳು ಭಾರೀ ವಿರೋಧ ವ್ಯಕ್ತಪಡಿಸಿದ್ದರು. ಬಳಿಕ ಜಂಟಿ ಸಂಸತ್ ಅಧಿವೇಶನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಕೂಡ ತುರ್ತುಪರಿಸ್ಥಿತಿಯ ವಿರುದ್ಧ ಧ್ವನಿಯೆತ್ತಿದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:54 pm, Fri, 12 July 24

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ