AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಡಿಗೆ ತಾಯ್ತನದ ಮೂಲಕ ಮಗುವನ್ನು ಪಡೆಯುವ ಮಹಿಳೆಗೆ 6 ತಿಂಗಳ ಹೆರಿಗೆ ರಜೆ

ಬಾಡಿಗೆ ತಾಯ್ತನದ ಮೂಲಕ ಮಗುವನ್ನು ಪಡೆದರೂ ಅವರಿಗೆ 6 ತಿಂಗಳುಗಳ ಹೆರಿಗೆ ರಜೆ ನೀಡಲಾಗುತ್ತದೆ. ಒಂದೊಮ್ಮೆ ರಜೆ ಪಡೆಯುವ ಮಹಿಳೆ ಕೇಂದ್ರ ಸರ್ಕಾರಿ ನೌಕರರಾಗಿದ್ದರೆ 180 ದಿನ ಅಂದರೆ, 6 ತಿಂಗಳು ರಜೆ ಪಡೆಯುವ ಅವಕಾಶವನ್ನು ಕೇಂದ್ರ ಸರ್ಕಾರ ನೀಡಿದೆ.

ಬಾಡಿಗೆ ತಾಯ್ತನದ ಮೂಲಕ ಮಗುವನ್ನು ಪಡೆಯುವ ಮಹಿಳೆಗೆ 6 ತಿಂಗಳ ಹೆರಿಗೆ ರಜೆ
ಮಗು
Follow us
ನಯನಾ ರಾಜೀವ್
|

Updated on: Jun 24, 2024 | 2:16 PM

ಇನ್ಮುಂದೆ ಬಾಡಿಗೆ ತಾಯ್ತನದ ಮೂಲಕ ಮಗುವನ್ನು ಪಡೆಯುವ ಮಹಿಳೆಗೂ 6 ತಿಂಗಳುಗಳ ಹೆರಿಗೆ ರಜೆ(Maternity Leave) ನೀಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಒಂದೊಮ್ಮೆ ರಜೆ ಪಡೆಯುವ ಮಹಿಳೆ ಕೇಂದ್ರ ಸರ್ಕಾರಿ ನೌಕರರಾಗಿದ್ದರೆ 180 ದಿನ ಅಂದರೆ, 6 ತಿಂಗಳು ರಜೆ ಪಡೆಯುವ ಅವಕಾಶವನ್ನು ಕೇಂದ್ರ ಸರ್ಕಾರ ಕಲ್ಪಿಸಿದೆ.

ಕೇಂದ್ರ ಸರ್ಕಾರವು 50 ವರ್ಷಗಳ ಹಿಂದಿನ ನಿಯಮಕ್ಕೆ ತಿದ್ದುಪಡಿ ಘೋಷಿಸಿದೆ. ಮಹಿಳಾ ಸರ್ಕಾರಿ ನೌಕರರು 180 ದಿನಗಳ ಹೆರಿಗೆ ರಜೆ ತೆಗೆದುಕೊಳ್ಳಬಹುದು. ಕೇಂದ್ರ ನಾಗರಿಕ ಸೇವೆಗಳ (ರಜೆ) ನಿಯಮಗಳು, 1972 ರಲ್ಲಿ ಮಾಡಲಾದ ಬದಲಾವಣೆಗಳ ಪ್ರಕಾರ, ಪಾಲನಾ ತಾಯಿ (ಬಾಡಿಗೆಯ ಮೂಲಕ ಜನಿಸಿದ ಮಗುವನ್ನು ಪಡೆದಿರುವ ತಾಯಿ) ಪಾಲಕ ತಂದೆ ಹೆರಿಗೆಯಾಗಿ 6 ತಿಂಗಳೊಳಗೆ 15 ದಿನಗಳ ಪಿತೃತ್ವ ರಜೆಯನ್ನೂ ಕೂಡ ಪಡೆಯಬಹುದು.

ಬಾಡಿಗೆ ತಾಯ್ತನದ ಮೂಲಕ ಮಗು ಜನಿಸಿದರೆ ಮಹಿಳಾ ಸರ್ಕಾರಿ ಉದ್ಯೋಗಿಗಳಿಗೆ ಹೆರಿಗೆ ರಜೆ ನೀಡಬೇಕೆಂಬ ನಿಯಮವಿರಲಿಲ್ಲ.

ಬಾಡಿಗೆ ತಾಯ್ತನ ಎಂದರೇನು? ಮಕ್ಕಳಾಗದ ದಂಪತಿಗಾಗಿ ಬೇರೊಬ್ಬ ಮಹಿಳೆ ಗರ್ಭ ಧರಿಸಿ, ಮಕ್ಕಳಾಗದವರಿಗೆ ಮಗುವನ್ನು ಹೆತ್ತುಕೊಡುವ ಪ್ರಕ್ರಿಯೆಯನ್ನೇ ಬಾಡಿಗೆ ತಾಯ್ತನ ಎಂದು ಕರೆಯುತ್ತಾರೆ. ಬಾಡಿಗೆ ತಾಯಿಯ ಅಂಡಾಣು, ಮಗುವನ್ನು ಪಡೆಯಲು ಬಯಸಿದ ವ್ಯಕ್ತಿ ಅಥವಾ ವೀರ್ಯ ದಾನಿಯಿಂದ ಪಡೆದ ವೀರ್ಯವನ್ನು ಬಳಸಿ ಮಗುವನ್ನು ಪಡೆಯುತ್ತಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಬೆಂಗಳೂರಿನ ದೊಡ್ಡಕಲ್ಲಸಂದ್ರ ರಸ್ತೆಯ ದುಸ್ಥಿತಿ: ವಿಡಿಯೋ ಮಾಡಿ ತೋರಿಸಿದ ನಟ
ಬೆಂಗಳೂರಿನ ದೊಡ್ಡಕಲ್ಲಸಂದ್ರ ರಸ್ತೆಯ ದುಸ್ಥಿತಿ: ವಿಡಿಯೋ ಮಾಡಿ ತೋರಿಸಿದ ನಟ
ಕಮಲ್ ಹಾಸನ್ ಆಡಿದ್ದು ದುರಹಂಕಾರದ ಮಾತು: ವಾಟಾಳ್ ನಾಗರಾಜ್
ಕಮಲ್ ಹಾಸನ್ ಆಡಿದ್ದು ದುರಹಂಕಾರದ ಮಾತು: ವಾಟಾಳ್ ನಾಗರಾಜ್
ತಮಿಳು ಕನ್ನಡದ ತಾಯಿ ಭಾಷೆ ಅಲ್ಲ: ಕಮಲ್ ಹೇಳಿಕೆಗೆ ನಾಗತಿಹಳ್ಳಿ ವಿರೋಧ
ತಮಿಳು ಕನ್ನಡದ ತಾಯಿ ಭಾಷೆ ಅಲ್ಲ: ಕಮಲ್ ಹೇಳಿಕೆಗೆ ನಾಗತಿಹಳ್ಳಿ ವಿರೋಧ
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ