AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಮಿಕ್ರಾನ್ ಎಚ್ಚರಿಕೆ: ಜನವರಿ 31ರವರೆಗೆ ಪುನಾರಂಭವಾಗಲ್ಲ ಅಂತರರಾಷ್ಟ್ರೀಯ ವಿಮಾನಗಳು

ಹಲವಾರು ರಾಷ್ಟ್ರಗಳಲ್ಲಿ ಹೊಸ 'ಒಮಿಕ್ರಾನ್' ರೂಪಾಂತರಿ ಏಕಾಏಕಿ ಹೊರಹೊಮ್ಮಿದ್ದು ದೇಶವು ಈಗ ಅಂತಾರಾಷ್ಟ್ರೀಯ ವಿಮಾನಗಳ ಪುನರಾರಂಭದ ಯೋಜನೆಗಳಿಗೆ ಬ್ರೇಕ್ ಹಾಕಿದೆ. 

ಒಮಿಕ್ರಾನ್ ಎಚ್ಚರಿಕೆ: ಜನವರಿ 31ರವರೆಗೆ ಪುನಾರಂಭವಾಗಲ್ಲ ಅಂತರರಾಷ್ಟ್ರೀಯ ವಿಮಾನಗಳು
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Dec 09, 2021 | 7:45 PM

Share

ದೆಹಲಿ: ಕೊರೊನಾವೈರಸ್ (coronavirus) ಹೊಸ ರೂಪಾಂತರಿ ಒಮಿಕ್ರಾನ್ ರೂಪಾಂತರದ (Omicron variant)  ಎಚ್ಚರಿಕೆಯ ಮಧ್ಯೆ ಸರ್ಕಾರವು ನಿಗದಿತ ಅಂತರರಾಷ್ಟ್ರೀಯ ವಾಣಿಜ್ಯ ವಿಮಾನಗಳ ಮೇಲಿನ ನಿರ್ಬಂಧವನ್ನು ಜನವರಿ 31 ರವರೆಗೆ ವಿಸ್ತರಿಸಿದೆ. ಅಂತಾರಾಷ್ಟ್ರೀಯ ವಿಮಾನಯಾನ (international flights) ಡಿಸೆಂಬರ್ 15 ರಿಂದ ಪುನಾರಂಭಗೊಳ್ಳಲಿದೆ ಎಂದು ಈ ಹಿಂದೆ ಹೇಳಲಾಗಿತ್ತು. ಆದಾಗ್ಯೂ, ಹಲವಾರು ರಾಷ್ಟ್ರಗಳಲ್ಲಿ ಹೊಸ ‘ಒಮಿಕ್ರಾನ್’ ರೂಪಾಂತರಿ ಏಕಾಏಕಿ ಹೊರಹೊಮ್ಮಿದ್ದು ದೇಶವು ಈಗ ಅಂತಾರಾಷ್ಟ್ರೀಯ ವಿಮಾನಗಳ ಪುನರಾರಂಭದ ಯೋಜನೆಗಳಿಗೆ ಬ್ರೇಕ್ ಹಾಕಿದೆ.  ಅಂತರಾಷ್ಟ್ರೀಯ ವಿಮಾನಗಳ ಮೇಲಿನ ನಿರ್ಬಂಧ ವಿಸ್ತರಿಸಿರುವ  ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ (DGCA) ಈ  ಬಗ್ಗೆ ಹೊರಡಿಸಿದ ಸುತ್ತೋಲೆಯಲ್ಲಿ ಈ ನಿರ್ಬಂಧವು ಅಂತರರಾಷ್ಟ್ರೀಯ ಎಲ್ಲಾ ಸರಕು ಕಾರ್ಯಾಚರಣೆಗಳಿಗೆ ಮತ್ತು ನಿರ್ದಿಷ್ಟವಾಗಿ ಅನುಮೋದಿಸಲಾದ ಹಾರಾಟಕ್ಕೆ ಅನ್ವಯಿಸುವುದಿಲ್ಲ ಎಂದು ಹೇಳಿದೆ. ಕೇಸ್-ಟು-ಕೇಸ್ ಆಧಾರದ ಮೇಲೆ ಆಯ್ದ ಮಾರ್ಗಗಳಲ್ಲಿ ಅಂತರರಾಷ್ಟ್ರೀಯ ವಿಮಾನಗಳನ್ನು ಅನುಮತಿಸಬಹುದು ಎಂದು ಅದು ಹೇಳಿದೆ. ಒಮಿಕ್ರಾನ್ ರೂಪಾಂತರವು ಪ್ರಪಂಚದಾದ್ಯಂತ ಅಂತರಾಷ್ಟ್ರೀಯ ಪ್ರಯಾಣದ ಬಗ್ಗೆ ಕಾಳಜಿಯ ಹೊಸ ಅಲೆಯನ್ನು ಹುಟ್ಟುಹಾಕಿದೆ. ಇದು ಹಲವಾರು ರಾಷ್ಟ್ರಗಳಿಂದ ಹೊಸ ಪ್ರಯಾಣ ಕ್ರಮಗಳನ್ನು ಹೇರಲು ಕಾರಣವಾಗಿದೆ.

ದೆಹಲಿ ವಿಮಾನ ನಿಲ್ದಾಣದ ಅಧಿಕಾರಿಗಳು “ಅಪಾಯದಲ್ಲಿರುವ” ದೇಶಗಳಿಂದ ಆಗಮಿಸುವ ಮತ್ತು ಅವರ ಕಡ್ಡಾಯ ಕೊವಿಡ್ ಪರೀಕ್ಷೆಯನ್ನು ಮುಂಚಿತವಾಗಿ ಕಾಯ್ದಿರಿಸಿದ ಪ್ರಯಾಣಿಕರಿಗಾಗಿ 20 ಮೀಸಲಾದ ಕೌಂಟರ್‌ಗಳನ್ನು ಸ್ಥಾಪಿಸಿದ್ದಾರೆ. ಹೊಸ ಪ್ರಯಾಣ ಮಾರ್ಗಸೂಚಿಗಳ ಅನುಷ್ಠಾನದ ನಂತರ ಟರ್ಮಿನಲ್‌ನಲ್ಲಿ ಜನಸಂದಣಿ ಇದೆ ಎಂದು ಹಲವಾರು ಪ್ರಯಾಣಿಕರು ದೂರಿದ ನಂತರ ಇದು ಸಂಭವಿಸಿದೆ.

ಒಮಿಕ್ರಾನ್ ಎಚ್ಚರಿಕೆಯ ನಡುವೆ ಕಳೆದ ವಾರ ಹೊರಡಿಸಲಾದ ಆರೋಗ್ಯ ಸಚಿವಾಲಯದ ಮಾರ್ಗಸೂಚಿಗಳ ಪ್ರಕಾರ, “ಅಪಾಯದಲ್ಲಿರುವ” ದೇಶಗಳಿಂದ ಬರುವ ಎಲ್ಲಾ ಪ್ರಯಾಣಿಕರು ಕಡ್ಡಾಯವಾಗಿ ಪಿಸಿಆರ್ ಪರೀಕ್ಷೆಗೆ ಒಳಗಾಗಬೇಕು. ಇತರ ದೇಶಗಳಿಂದ ಬರುವ ಶೇಕಡಾ ಐದು ಪ್ರಯಾಣಿಕರು ಸಹ ಪರೀಕ್ಷೆಗೊಳಗಾಗಬೇಕಾಗುತ್ತದೆ. ಕೊರೊನಾವೈರಸ್ ಕಾರಣದಿಂದಮಾರ್ಚ್ 2020 ರಲ್ಲಿ ವಾಣಿಜ್ಯ ಅಂತರರಾಷ್ಟ್ರೀಯ ವಿಮಾನಯಾನಗಳನ್ನು ಸ್ಥಗಿತಗೊಳಿಸಲಾಯಿತು ಮತ್ತು 20 ತಿಂಗಳ ವಿರಾಮದ ನಂತರ ಡಿಸೆಂಬರ್ 15 ರಿಂದ ಪುನರಾರಂಭಿಸುವುದಾಗಿ ಸರ್ಕಾರ ನವೆಂಬರ್ 26 ರಂದು ಘೋಷಿಸಿತು.

ಇದನ್ನೂ ಓದಿ:  ಒಮಿಕ್ರಾನ್ ಪ್ರತಿರಕ್ಷಣಾ ಪ್ರತಿಕ್ರಿಯೆಯನ್ನು ಹೆಚ್ಚು ಮಂದಗೊಳಿಸುತ್ತದೆ: ಅಧ್ಯಯನ ವರದಿ

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ