AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಶದ ಪ್ರತಿಯೊಬ್ಬರಿಗೂ 4000 ರೂ.ನೀಡಲಿದೆಯಾ ಕೇಂದ್ರ ಸರ್ಕಾರ? -ವೈರಲ್ ಆಗುತ್ತಿರುವ ಸಂದೇಶದ ಹಿಂದಿನ ಸತ್ಯ ಇಲ್ಲಿದೆ

ಜೂ.28ರಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್​ ಕೊವಿಡ್​ 19 ಪರಿಹಾರಕ್ಕಾಗಿ ಒಟ್ಟು 8 ಹೊಸ ಯೋಜನೆಗಳನ್ನು ಘೋಷಿಸಿದ್ದರು. ಅದರ ಬೆನ್ನಲ್ಲೇ ಈ ಸಂದೇಶ ವೈರಲ್​ ಆಗುತ್ತಿದೆ.

ದೇಶದ ಪ್ರತಿಯೊಬ್ಬರಿಗೂ 4000 ರೂ.ನೀಡಲಿದೆಯಾ ಕೇಂದ್ರ ಸರ್ಕಾರ? -ವೈರಲ್ ಆಗುತ್ತಿರುವ ಸಂದೇಶದ ಹಿಂದಿನ ಸತ್ಯ ಇಲ್ಲಿದೆ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Jul 03, 2021 | 9:22 AM

Share

ಕೊವಿಡ್​ 19 ಪರಿಹಾರ ನಿಧಿಯಡಿ ಕೇಂದ್ರ ಸರ್ಕಾರ ದೇಶದ ಪ್ರತಿಯೊಬ್ಬರಿಗೂ 4000 ರೂಪಾಯಿ ನೀಡುತ್ತಿದೆ..ಹೀಗೊಂದು ವಾಟ್ಸ್​ ಆ್ಯಪ್​ ಸಂದೇಶ ನಿಮಗೂ ಬಂದಿದ್ದರೆ ಅಥವಾ ಫೇಸ್​ಬುಕ್​​ ಸೇರಿ ಇನ್ಯಾವುದೇ ಸೋಷಿಯಲ್​ ಮೀಡಿಯಾ ಫ್ಲಾಟ್​ಫಾರಂನಲ್ಲಿ ನೀವು ಇದನ್ನು ಓದಿದ್ದರೆ ಅದನ್ನು ಅಲ್ಲೇ ನಿರ್ಲಕ್ಷಿಸಿಬಿಡಿ. ಯಾಕೆಂದರೆ ಇದು ಸತ್ಯವಲ್ಲ. ಕೇಂದ್ರ ಸರ್ಕಾರ ಇಂಥ ಹಣಕಾಸು ನೆರವಿನ ಯಾವುದೇ ನಿರ್ಧಾರವನ್ನೂ ಘೋಷಿಸಿಲ್ಲ ಎಂದು ಪಿಐಬಿ (ಪ್ರೆಸ್​ ಇನ್​ಫಾರ್ಮೇಶನ್​ ಬ್ಯೂರೋ) ಟ್ವೀಟ್ ಮಾಡಿದೆ.

ಜೂ.28ರಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್​ ಕೊವಿಡ್​ 19 ಪರಿಹಾರಕ್ಕಾಗಿ ಒಟ್ಟು 8 ಹೊಸ ಯೋಜನೆಗಳನ್ನು ಘೋಷಿಸಿದ್ದರು. ಕೊವಿಡ್​ 19 ನಿಂದ ಸಮಸ್ಯೆಗೊಳಗಾದವರಿಗೆ 1.1 ಲಕ್ಷ ಕೋಟಿ ಸಾಲ ಖಾತರಿ ಯೋಜನೆ ಮತ್ತು ಕಳೆದ ವರ್ಷ ಅನುಷ್ಠಾನಕ್ಕೆ ತರಲಾದ ಆತ್ಮನಿರ್ಭರ ಭಾರತದಡಿ ಇರುವ ತುರ್ತು ಕ್ರೆಡಿಟ್​ ಲೈನ್​ ಗ್ಯಾರಂಟಿ ಸ್ಕೀಮ್​​ನಡಿ 1.5 ಲಕ್ಷ ಕೋಟಿ ರೂಪಾಯಿ ಮೀಸಲಿಡಲಾಗುವುದು ಎಂದು ನಿರ್ಮಲಾ ಸೀತಾರಾಮನ್​ ತಿಳಿಸಿದ್ದರು. ಹೀಗೆ ಹಣಕಾಸು ಮಂತ್ರಿ ಕೊವಿಡ್ 19 ಹೊಸ ಪ್ಯಾಕೇಜ್​ ಘೋಷಣೆ ಮಾಡಿದ ಬೆನ್ನಲ್ಲೇ ಹೀಗೊಂದು ತಪ್ಪು ಮಾಹಿತಿ ಹರಡಲು ಶುರುವಾಗಿತ್ತು.

ಹಾಗೇ ಕೊರೊನಾ ಮೂರನೇ ಅಲೆ ನಿಯಂತ್ರಣ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಜುಲೈ 1ರಿಂದ 31ರವರೆಗೆ ದೇಶಾದ್ಯಂತ ಲಾಕ್​ಡೌನ್​ ಹೇರಲಿದ್ದಾರೆ ಎಂಬ ಪೋಸ್ಟ್​ ಕೂಡ ಸೋಷಿಯಲ್ ಮೀಡಿಯಾಗಳಲ್ಲಿ ವೈರಲ್ ಆಗಿತ್ತು. ಅದೂ ಕೂಡ ಸುಳ್ಳು. ಮೋದಿ ನೇತೃತ್ವದ ಕೇಂದ್ರ ಸರ್ಕಾರ ಅಂಥ ಕ್ರಮ ಕೈಗೊಳ್ಳುವ ನಿರ್ಧಾರವನ್ನು ಪ್ರಕಟಿಸಿಲ್ಲ ಎಂದೂ ಪಿಐಬಿ ಟ್ವೀಟ್ ಮಾಡಿದೆ.

ಇದನ್ನೂ ಓದಿ:ಬಾಹುಬಲಿಯೂ ಮಾಡಿರದ ದಾಖಲೆಯನ್ನು ಮಾಡಿದ ‘ಕೆಜಿಎಫ್​ 2’; ಇಲ್ಲಿದೆ ಪಕ್ಕಾ ಲೆಕ್ಕ

Government giving 4000 Rs to all under Covid scheme check here to Know trouth behind this message

Published On - 9:21 am, Sat, 3 July 21

Follow Us
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​