AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಶದ ಪ್ರತಿಯೊಬ್ಬರಿಗೂ 4000 ರೂ.ನೀಡಲಿದೆಯಾ ಕೇಂದ್ರ ಸರ್ಕಾರ? -ವೈರಲ್ ಆಗುತ್ತಿರುವ ಸಂದೇಶದ ಹಿಂದಿನ ಸತ್ಯ ಇಲ್ಲಿದೆ

ಜೂ.28ರಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್​ ಕೊವಿಡ್​ 19 ಪರಿಹಾರಕ್ಕಾಗಿ ಒಟ್ಟು 8 ಹೊಸ ಯೋಜನೆಗಳನ್ನು ಘೋಷಿಸಿದ್ದರು. ಅದರ ಬೆನ್ನಲ್ಲೇ ಈ ಸಂದೇಶ ವೈರಲ್​ ಆಗುತ್ತಿದೆ.

ದೇಶದ ಪ್ರತಿಯೊಬ್ಬರಿಗೂ 4000 ರೂ.ನೀಡಲಿದೆಯಾ ಕೇಂದ್ರ ಸರ್ಕಾರ? -ವೈರಲ್ ಆಗುತ್ತಿರುವ ಸಂದೇಶದ ಹಿಂದಿನ ಸತ್ಯ ಇಲ್ಲಿದೆ
ಪ್ರಾತಿನಿಧಿಕ ಚಿತ್ರ
TV9 Web
| Updated By: Lakshmi Hegde|

Updated on:Jul 03, 2021 | 9:22 AM

Share

ಕೊವಿಡ್​ 19 ಪರಿಹಾರ ನಿಧಿಯಡಿ ಕೇಂದ್ರ ಸರ್ಕಾರ ದೇಶದ ಪ್ರತಿಯೊಬ್ಬರಿಗೂ 4000 ರೂಪಾಯಿ ನೀಡುತ್ತಿದೆ..ಹೀಗೊಂದು ವಾಟ್ಸ್​ ಆ್ಯಪ್​ ಸಂದೇಶ ನಿಮಗೂ ಬಂದಿದ್ದರೆ ಅಥವಾ ಫೇಸ್​ಬುಕ್​​ ಸೇರಿ ಇನ್ಯಾವುದೇ ಸೋಷಿಯಲ್​ ಮೀಡಿಯಾ ಫ್ಲಾಟ್​ಫಾರಂನಲ್ಲಿ ನೀವು ಇದನ್ನು ಓದಿದ್ದರೆ ಅದನ್ನು ಅಲ್ಲೇ ನಿರ್ಲಕ್ಷಿಸಿಬಿಡಿ. ಯಾಕೆಂದರೆ ಇದು ಸತ್ಯವಲ್ಲ. ಕೇಂದ್ರ ಸರ್ಕಾರ ಇಂಥ ಹಣಕಾಸು ನೆರವಿನ ಯಾವುದೇ ನಿರ್ಧಾರವನ್ನೂ ಘೋಷಿಸಿಲ್ಲ ಎಂದು ಪಿಐಬಿ (ಪ್ರೆಸ್​ ಇನ್​ಫಾರ್ಮೇಶನ್​ ಬ್ಯೂರೋ) ಟ್ವೀಟ್ ಮಾಡಿದೆ.

ಜೂ.28ರಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್​ ಕೊವಿಡ್​ 19 ಪರಿಹಾರಕ್ಕಾಗಿ ಒಟ್ಟು 8 ಹೊಸ ಯೋಜನೆಗಳನ್ನು ಘೋಷಿಸಿದ್ದರು. ಕೊವಿಡ್​ 19 ನಿಂದ ಸಮಸ್ಯೆಗೊಳಗಾದವರಿಗೆ 1.1 ಲಕ್ಷ ಕೋಟಿ ಸಾಲ ಖಾತರಿ ಯೋಜನೆ ಮತ್ತು ಕಳೆದ ವರ್ಷ ಅನುಷ್ಠಾನಕ್ಕೆ ತರಲಾದ ಆತ್ಮನಿರ್ಭರ ಭಾರತದಡಿ ಇರುವ ತುರ್ತು ಕ್ರೆಡಿಟ್​ ಲೈನ್​ ಗ್ಯಾರಂಟಿ ಸ್ಕೀಮ್​​ನಡಿ 1.5 ಲಕ್ಷ ಕೋಟಿ ರೂಪಾಯಿ ಮೀಸಲಿಡಲಾಗುವುದು ಎಂದು ನಿರ್ಮಲಾ ಸೀತಾರಾಮನ್​ ತಿಳಿಸಿದ್ದರು. ಹೀಗೆ ಹಣಕಾಸು ಮಂತ್ರಿ ಕೊವಿಡ್ 19 ಹೊಸ ಪ್ಯಾಕೇಜ್​ ಘೋಷಣೆ ಮಾಡಿದ ಬೆನ್ನಲ್ಲೇ ಹೀಗೊಂದು ತಪ್ಪು ಮಾಹಿತಿ ಹರಡಲು ಶುರುವಾಗಿತ್ತು.

ಹಾಗೇ ಕೊರೊನಾ ಮೂರನೇ ಅಲೆ ನಿಯಂತ್ರಣ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಜುಲೈ 1ರಿಂದ 31ರವರೆಗೆ ದೇಶಾದ್ಯಂತ ಲಾಕ್​ಡೌನ್​ ಹೇರಲಿದ್ದಾರೆ ಎಂಬ ಪೋಸ್ಟ್​ ಕೂಡ ಸೋಷಿಯಲ್ ಮೀಡಿಯಾಗಳಲ್ಲಿ ವೈರಲ್ ಆಗಿತ್ತು. ಅದೂ ಕೂಡ ಸುಳ್ಳು. ಮೋದಿ ನೇತೃತ್ವದ ಕೇಂದ್ರ ಸರ್ಕಾರ ಅಂಥ ಕ್ರಮ ಕೈಗೊಳ್ಳುವ ನಿರ್ಧಾರವನ್ನು ಪ್ರಕಟಿಸಿಲ್ಲ ಎಂದೂ ಪಿಐಬಿ ಟ್ವೀಟ್ ಮಾಡಿದೆ.

ಇದನ್ನೂ ಓದಿ:ಬಾಹುಬಲಿಯೂ ಮಾಡಿರದ ದಾಖಲೆಯನ್ನು ಮಾಡಿದ ‘ಕೆಜಿಎಫ್​ 2’; ಇಲ್ಲಿದೆ ಪಕ್ಕಾ ಲೆಕ್ಕ

Government giving 4000 Rs to all under Covid scheme check here to Know trouth behind this message

Published On - 9:21 am, Sat, 3 July 21

ಜುಲೈ 14 ರಂದು ಸೇತುವೆಯನ್ನು ಉದ್ಘಾಟಿಸಲಿರುವ ಕೇಂದ್ರ ಸಚಿವ ಗಡ್ಕರಿ
ಜುಲೈ 14 ರಂದು ಸೇತುವೆಯನ್ನು ಉದ್ಘಾಟಿಸಲಿರುವ ಕೇಂದ್ರ ಸಚಿವ ಗಡ್ಕರಿ
ಹರಿಪ್ರಸಾದ್​ರ ಪಕ್ಷಕ್ಕೆ ಮಹಿಳಾ ಸಿಎಂ ಮಾಡುವ ಯೋಗ್ಯತೆ ಇಲ್ಲ: ಅಧ್ಯಕ್ಷೆ
ಹರಿಪ್ರಸಾದ್​ರ ಪಕ್ಷಕ್ಕೆ ಮಹಿಳಾ ಸಿಎಂ ಮಾಡುವ ಯೋಗ್ಯತೆ ಇಲ್ಲ: ಅಧ್ಯಕ್ಷೆ
ಕಾಂಗ್ರೆಸ್ ಪಕ್ಷ ಸೇರುವ ಬಗ್ಗೆ ಮಾಧುಸ್ವಾಮಿಯಿಂದ ಗೊಂದಲಮಯ ಹೇಳಿಕೆ
ಕಾಂಗ್ರೆಸ್ ಪಕ್ಷ ಸೇರುವ ಬಗ್ಗೆ ಮಾಧುಸ್ವಾಮಿಯಿಂದ ಗೊಂದಲಮಯ ಹೇಳಿಕೆ
ಅಮೆರಿಕದಲ್ಲಿ ತಮಗೆ ಚಿಕಿತ್ಸೆ ನೀಡಿದ ವೈದ್ಯರಿಗೆ ಸನ್ಮಾನ ಮಾಡಿದ ಶಿವಣ್ಣ
ಅಮೆರಿಕದಲ್ಲಿ ತಮಗೆ ಚಿಕಿತ್ಸೆ ನೀಡಿದ ವೈದ್ಯರಿಗೆ ಸನ್ಮಾನ ಮಾಡಿದ ಶಿವಣ್ಣ
VIDEO: ಮಿಂಚಿನ ದಾಳಿ ಸಂಘಟಿಸಿದ ಬುಮ್ರಾಗೆ ಸಿಕ್ಕ ಸ್ವಾಗತ ಹೇಗಿತ್ತು ನೋಡಿ
VIDEO: ಮಿಂಚಿನ ದಾಳಿ ಸಂಘಟಿಸಿದ ಬುಮ್ರಾಗೆ ಸಿಕ್ಕ ಸ್ವಾಗತ ಹೇಗಿತ್ತು ನೋಡಿ
ಅಧಿಕಾರ ಯಾವತ್ತಿಗೂ ಶಾಶ್ವತವಲ್ಲ, ನಿರೀಕ್ಷಿಸಿದ್ದೆಲ್ಲ ನಡೆಯಲ್ಲ: ತನ್ವೀರ್
ಅಧಿಕಾರ ಯಾವತ್ತಿಗೂ ಶಾಶ್ವತವಲ್ಲ, ನಿರೀಕ್ಷಿಸಿದ್ದೆಲ್ಲ ನಡೆಯಲ್ಲ: ತನ್ವೀರ್
ಬಲಾಬಲ ಪ್ರದರ್ಶಿಸುವ ಅವಶ್ಯಕತೆ ಡಿಕೆ ಶಿವಕುಮಾರ್ ಅವರಿಗಿಲ್ಲ: ಡಿಕೆ ಸುರೇಶ್
ಬಲಾಬಲ ಪ್ರದರ್ಶಿಸುವ ಅವಶ್ಯಕತೆ ಡಿಕೆ ಶಿವಕುಮಾರ್ ಅವರಿಗಿಲ್ಲ: ಡಿಕೆ ಸುರೇಶ್
ಪೊಲಾರ್ಡ್, ಪೂರನ್ ಸಿಡಿಲಬ್ಬರ: ಫೈನಲ್​ಗೆ MI ಪಡೆ
ಪೊಲಾರ್ಡ್, ಪೂರನ್ ಸಿಡಿಲಬ್ಬರ: ಫೈನಲ್​ಗೆ MI ಪಡೆ
ಶಿವಣ್ಣನಿಗೆ ವಿಶ್ ಮಾಡಲು ಚಿಕ್ಕಮಗಳೂರಿನಿಂದ ಬಂದ ಕಾಫಿ ನಾಡು ಚಂದು
ಶಿವಣ್ಣನಿಗೆ ವಿಶ್ ಮಾಡಲು ಚಿಕ್ಕಮಗಳೂರಿನಿಂದ ಬಂದ ಕಾಫಿ ನಾಡು ಚಂದು
ಆರೋಗ್ಯವಂತ ಬಾಣಂತಿಯರ ಹಾಲನ್ನು ಮಾತ್ರ ಸಂಗ್ರಹಿಸಲಾಗುತ್ತದೆ: ವೈದ್ಯಾಧಿಕಾರಿ
ಆರೋಗ್ಯವಂತ ಬಾಣಂತಿಯರ ಹಾಲನ್ನು ಮಾತ್ರ ಸಂಗ್ರಹಿಸಲಾಗುತ್ತದೆ: ವೈದ್ಯಾಧಿಕಾರಿ