AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್​ 19 ಲಸಿಕೆಯಿಂದ ಭಾರತದಲ್ಲಿ ಮೃತಪಟ್ಟವರು ಎಷ್ಟು ಮಂದಿ?..ಕೊನೆಗೂ ಸಂಖ್ಯೆ ದೃಢಪಡಿಸಿದ ಎಇಎಫ್​ಐ ಸಮಿತಿ

ಲಸಿಕೆಯಿಂದ ಉಂಟಾಗುವ ರಿಯಾಕ್ಷನ್​​ಗಳು ನಿರೀಕ್ಷತವೇ ಆಗಿರುತ್ತವೆ. ಲಸಿಕೆಗಳಿಂದ ಅನಾಫಿಲ್ಯಾಕ್ಸಿಸ್ ಮತ್ತಿತರ ಅಲರ್ಜಿಗಳು ಉಂಟಾಗುವುದು ಸಾಮಾನ್ಯ.

ಕೊವಿಡ್​ 19 ಲಸಿಕೆಯಿಂದ ಭಾರತದಲ್ಲಿ ಮೃತಪಟ್ಟವರು ಎಷ್ಟು ಮಂದಿ?..ಕೊನೆಗೂ ಸಂಖ್ಯೆ ದೃಢಪಡಿಸಿದ ಎಇಎಫ್​ಐ ಸಮಿತಿ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Jun 15, 2021 | 3:28 PM

Share

ಭಾರತದಲ್ಲಿ ಕೊರೊನಾ ಲಸಿಕೆ ಅಭಿಯಾನ ಜನವರಿಯಿಂದ ಶುರುವಾಗಿದೆ. ಲಸಿಕೆ ತೆಗೆದುಕೊಂಡವರಿಗೆ ಸಣ್ಣಪುಟ್ಟ ರಿಯಾಕ್ಷನ್​ ಕೂಡ ಆಗಿದೆ. ಆದರೆ ಕೊರೊನಾ ಲಸಿಕೆಯ ಅಡ್ಡಪರಿಣಾಮದಿಂದಲೇ ಯಾರಾದರೂ ಮೃತಪಟ್ಟಿದ್ದ ಬಗ್ಗೆ ಯಾವುದೇ ಸ್ಪಷ್ಟ ವರದಿ ಇರಲಿಲ್ಲ. ಆದರೆ ಇದೀಗ AEFI (Adverse event following immunization) ಕಮಿಟಿ, ಅಂದರೆ ರೋಗ ನಿರೋಧಕತೆಯ ನಂತರದ ಪ್ರತಿಕೂಲವನ್ನು ಅಧ್ಯಯನ ಮಾಡಲು ಕೇಂದ್ರ ಸರ್ಕಾರ ರಚಿಸಿದ ಸಮಿತಿ ಒಂದು ವಿಚಾರವನ್ನು ತಿಳಿಸಿದೆ. ಕೊವಿಡ್​ 19 ಲಸಿಕೆಯನ್ನು ಪಡೆದು, ಅದರ ಅಡ್ಡ ಪರಿಣಾಮದಿಂದ 68ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಲಸಿಕೆಯಿಂದ ಆದ ಮೊದಲ ಸಾವು ಇದು ಎಂದು ತಿಳಿಸಿದೆ.

ಈ ಹಿರಿಯ ವ್ಯಕ್ತಿ ಮಾರ್ಚ್​​ 8ರಂದು ಕೊವಿಡ್​ 19 ಲಸಿಕೆ ಪಡೆದಿದ್ದರು. ಅದಾದ ಬಳಿಕ ಅನಾಫಿಲ್ಯಾಕ್ಸಿಸ್​​ಗೆ ಒಳಗಾಗಿದ್ದರು. ಅನಾಫಿಲ್ಯಾಕ್ಸಿಸ್ ಮಾರಣಾಂತಿಕ ಅಲರ್ಜಿಯಾಗಿದೆ. ಮೈಮೇಲೆ ಕೆಂಪು ದದ್ದು ಏಳುವುದು, ವಾಂತಿ, ಉಸಿರಾಟದ ಸಮಸ್ಯೆಗಳು ಉಂಟಾಗುತ್ತವೆ. ಇವರಿಗೆ ಲಸಿಕೆ ತೆಗೆದುಕೊಂಡ ನಂತರ ರಿಯಾಕ್ಷನ್​ ಆಗಿದೆ. ಅದರಿಂದಲೇ ಜೀವ ಕಳೆದುಕೊಂಡಿದ್ದಾರೆ ಎಂದು AEFI ಸಮಿತಿ ಅಧ್ಯಕ್ಷ ಡಾ. ಎನ್​.ಕೆ.ಅರೋರಾ ದೃಢಪಡಿಸಿದ್ದಾಗಿ ಇಂಡಿಯಾ ಟುಡೆ ವರದಿ ಮಾಡಿದೆ.

ಕೊವಿಡ್​ 19 ಲಸಿಕೆ ಸಂಬಂಧಿತ ಇದುವರೆಗೂ ಮೂವರು ಸಾವನ್ನಪ್ಪಿದ್ದಾರೆ ಎಂದು ಅಲ್ಲಲ್ಲಿ ವರದಿಯಾಗುತ್ತಿದ್ದರೂ, ಕೇಂದ್ರ ಸರ್ಕಾರದ ಈ ಸಮಿತಿ ಒಂದೇ ಸಾವನ್ನು ದೃಢಪಡಿಸಿದೆ. ಹೀಗೆ ಲಸಿಕೆಯಿಂದ ಉಂಟಾಗುವ ರಿಯಾಕ್ಷನ್​​ಗಳು ನಿರೀಕ್ಷತವೇ ಆಗಿರುತ್ತವೆ. ಲಸಿಕೆಗಳಿಂದ ಅನಾಫಿಲ್ಯಾಕ್ಸಿಸ್ ಮತ್ತಿತರ ಅಲರ್ಜಿಗಳು ಉಂಟಾಗುವುದು ಸಾಮಾನ್ಯ. ಆದರೆ ಅವು ಕೆಲವೊಮ್ಮೆ ಮಾರಣಾಂತಿಕವಾಗಿ ಪರಿಣಮಿಸುತ್ತವೆ ಎಂದು ಸಮಿತಿ ಹೇಳಿದೆ. ಹಾಗೇ ಜನವರಿ 16 ಮತ್ತು 19ರಂದು ಲಸಿಕೆ ಪಡೆದ ಇನ್ನಿಬ್ಬರಲ್ಲೂ ಅನಾಫಿಲ್ಯಾಕ್ಸಿಸ್​ ಕಾಣಿಸಿಕೊಂಡಿತ್ತು. ಅವರನ್ನು ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ ನಂತರ ಚೇತರಿಸಿಕೊಂಡಿದ್ದಾರೆ ಎಂದೂ AEFI ವರದಿಯಲ್ಲಿ ತಿಳಿಸಿದೆ.

ಇದನ್ನೂ ಓದಿ: ವಿಶಾಖಪಟ್ಟಣದಲ್ಲೂ ಮಕ್ಕಳಿಗೆ ಕಾಡುತ್ತಿದೆ ‘ಮಿಸ್ಸಿ’ ಸಮಸ್ಯೆ, 10ಕ್ಕೂ ಅಧಿಕ ಮಕ್ಕಳಿಗೆ ಚಿಕಿತ್ಸೆ

Government has confirmed the death of old man after covid 19 vaccination

ಬೆಂಗಳೂರು ಮೆಟ್ರೋ ವಿಸ್ತರಣೆ ಬಗ್ಗೆ ದೆಹಲಿಯಲ್ಲಿ ಡಿಕೆಶಿ ಬಿಗ್ ಅಪ್ಡೇಟ್!
ಬೆಂಗಳೂರು ಮೆಟ್ರೋ ವಿಸ್ತರಣೆ ಬಗ್ಗೆ ದೆಹಲಿಯಲ್ಲಿ ಡಿಕೆಶಿ ಬಿಗ್ ಅಪ್ಡೇಟ್!
ಬಿಳಿಗಿರಿ ಟೈಗರ್ ರಿಸರ್ವ್ ಫಾರೆಸ್ಟ್‌ ಗಡಿಯಲ್ಲಿ ದೈತ್ಯ ಹುಲಿ ಪ್ರತ್ಯಕ್ಷ
ಬಿಳಿಗಿರಿ ಟೈಗರ್ ರಿಸರ್ವ್ ಫಾರೆಸ್ಟ್‌ ಗಡಿಯಲ್ಲಿ ದೈತ್ಯ ಹುಲಿ ಪ್ರತ್ಯಕ್ಷ
ಜಮೀರ್ ಅಹ್ಮದ್ ಆಪ್ತಗೆ ಲೋಕಾ ಶಾಕ್! ಎಲ್ಲೆಲ್ಲಿ ಆಸ್ತಿ, ಸಂಪತ್ತಿದೆ ಗೊತ್ತೇ?
ಜಮೀರ್ ಅಹ್ಮದ್ ಆಪ್ತಗೆ ಲೋಕಾ ಶಾಕ್! ಎಲ್ಲೆಲ್ಲಿ ಆಸ್ತಿ, ಸಂಪತ್ತಿದೆ ಗೊತ್ತೇ?
ಅಂಜನಾದ್ರಿ: ಆಂಜನೇಯನ ಗರ್ಭಗುಡಿಯಲ್ಲೇ ಸ್ವಾಮೀಜಿಗಳ ಫೈಟ್, ವಿಡಿಯೋ ವೈರಲ್
ಅಂಜನಾದ್ರಿ: ಆಂಜನೇಯನ ಗರ್ಭಗುಡಿಯಲ್ಲೇ ಸ್ವಾಮೀಜಿಗಳ ಫೈಟ್, ವಿಡಿಯೋ ವೈರಲ್
ಮಗಳನ್ನು ಮದುವೆ ಮಾಡಿಕೊಡಲಿಲ್ಲವೆಂದು ತಾಯಿಗೆ ಬೆಂಕಿ ಹಚ್ಚಿದ ಕಿರಾತಕ!
ಮಗಳನ್ನು ಮದುವೆ ಮಾಡಿಕೊಡಲಿಲ್ಲವೆಂದು ತಾಯಿಗೆ ಬೆಂಕಿ ಹಚ್ಚಿದ ಕಿರಾತಕ!
ಗಿಲ್ಲಿ ಸೂಪರ್; ಬಿಗ್ ಬಾಸ್​​ಗೆ ಬಂದು ಗಿಲ್ಲಿ ಬೆಂಬಲಿಸಿದ ಧನು ತಾಯಿ
ಗಿಲ್ಲಿ ಸೂಪರ್; ಬಿಗ್ ಬಾಸ್​​ಗೆ ಬಂದು ಗಿಲ್ಲಿ ಬೆಂಬಲಿಸಿದ ಧನು ತಾಯಿ
ಫ್ಯಾನ್ ವಾರ್ ಬಗ್ಗೆ ಮಾತನಾಡಲ್ಲ ಎಂದ ಸಾಧು ಕೋಕಿಲ
ಫ್ಯಾನ್ ವಾರ್ ಬಗ್ಗೆ ಮಾತನಾಡಲ್ಲ ಎಂದ ಸಾಧು ಕೋಕಿಲ
‘ಶಿವ ತಾಂಡವ ನೋಡಿದಂತಾಯ್ತು’; ಹೊರಬಿತ್ತು‘45’ ಚಿತ್ರದ ಮೊದಲ ವಿಮರ್ಶೆ
‘ಶಿವ ತಾಂಡವ ನೋಡಿದಂತಾಯ್ತು’; ಹೊರಬಿತ್ತು‘45’ ಚಿತ್ರದ ಮೊದಲ ವಿಮರ್ಶೆ
140 ಕೆಜಿ ಬೆಳ್ಳಿ ದೋಚಿದ್ದು ಸಿಸಿ ಕ್ಯಾಮೆರಾದಲ್ಲಿ ಸೆರೆ
140 ಕೆಜಿ ಬೆಳ್ಳಿ ದೋಚಿದ್ದು ಸಿಸಿ ಕ್ಯಾಮೆರಾದಲ್ಲಿ ಸೆರೆ
ವಿಚ್ಛೇದನ ನೋಟಿಸ್‌ ನೀಡಿದಕ್ಕೆ ಪತ್ನಿಯ ಮೇಲೆ ಗುಂಡು ಹಾರಿಸಿದ ಪತಿ
ವಿಚ್ಛೇದನ ನೋಟಿಸ್‌ ನೀಡಿದಕ್ಕೆ ಪತ್ನಿಯ ಮೇಲೆ ಗುಂಡು ಹಾರಿಸಿದ ಪತಿ