AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Air India ಏರ್ ಇಂಡಿಯಾ ಬಿಡ್ ಗೆದ್ದ ಟಾಟಾ ಸನ್ಸ್: ಮಾಧ್ಯಮ ವರದಿ ತಪ್ಪು ಎಂದ ಸರ್ಕಾರ

Tata Group: ಟಾಟಾ ಗ್ರೂಪ್ ಮತ್ತು ಸ್ಪೈಸ್ ಜೆಟ್ ಅಧ್ಯಕ್ಷ ಅಜಯ್ ಸಿಂಗ್ ತಮ್ಮ ಖಾಸಗಿ ಸಾಮರ್ಥ್ಯದಲ್ಲಿ ಸಾಲದ ಹೊರೆಯಿರುವ ಸರ್ಕಾರಿ ಸ್ವಾಮ್ಯದ ವಿಮಾನಯಾನ  ಸಂಸ್ಥೆ ಏರ್ ಇಂಡಿಯಾಕ್ಕಾಗಿ ಈ ತಿಂಗಳ ಆರಂಭದಲ್ಲಿ ಬಿಡ್ ಮಾಡಿದ್ದರು.

Air India ಏರ್ ಇಂಡಿಯಾ ಬಿಡ್ ಗೆದ್ದ ಟಾಟಾ ಸನ್ಸ್: ಮಾಧ್ಯಮ ವರದಿ ತಪ್ಪು ಎಂದ ಸರ್ಕಾರ
ಏರ್ ಇಂಡಿಯಾ
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on: Oct 01, 2021 | 2:59 PM

Share

ದೆಹಲಿ: ಏರ್ ಇಂಡಿಯಾ (Air India )ವಿಮಾನಯಾನ ಸಂಸ್ಥೆಯ ಹರಾಜು ಪ್ರಕ್ರಿಯೆಯಲ್ಲಿ ‘ಟಾಟಾ ಸನ್ಸ್‌’ (Tata Sons) ಸಲ್ಲಿಸಿರುವ ಬಿಡ್‌ ಟಾಟಾ ಗ್ರೂಪ್ ಗೆದ್ದಿದೆ ಎಂಬ ಮಾಧ್ಯಮ ವರದಿಗಳನ್ನು ಸರ್ಕಾರ ನಿರಾಕರಿಸಿದೆ. ರಾಷ್ಟ್ರೀಯ ವಾಹಕದ ನಿಯಂತ್ರಣವನ್ನು ಸರ್ಕಾರಕ್ಕೆ ಬಿಟ್ಟುಕೊಟ್ಟ ನಂತರ ಟಾಟಾ ಗ್ರೂಪ್ ಅರ್ಧ ಶತಮಾನದ ನಂತರ ಏರ್ ಇಂಡಿಯಾ ಹರಾಜು ಪ್ರಕ್ರಿಯೆಯಲ್ಲಿ ಬಿಡ್ ಗೆದ್ದಿದೆ ಎಂದು ಬ್ಲೂಮ್‌ಬರ್ಗ್ ಕ್ವಿಂಟ್ ವರದಿ ಮಾಡಿತ್ತು. “ಏರ್ ಇಂಡಿಯಾ ಷೇರು ವಿಕ್ರಯ ಪ್ರಕರಣದಲ್ಲಿ ಭಾರತ ಸರ್ಕಾರವು ಹಣಕಾಸು ಬಿಡ್‌ಗಳ ಅನುಮೋದನೆಯನ್ನು ಸೂಚಿಸಿದೆ ಎಂದಿರುವ ಮಾಧ್ಯಮ ವರದಿಗಳು ತಪ್ಪಾಗಿದೆ” ಎಂದು ಹೂಡಿಕೆ ಮತ್ತು ಸಾರ್ವಜನಿಕ ಆಸ್ತಿ ನಿರ್ವಹಣಾ ಇಲಾಖೆ ಟ್ವೀಟ್ ಮಾಡಿದೆ.

ಟಾಟಾ ಗ್ರೂಪ್ ಮತ್ತು ಸ್ಪೈಸ್ ಜೆಟ್ ಅಧ್ಯಕ್ಷ ಅಜಯ್ ಸಿಂಗ್ ತಮ್ಮ ಖಾಸಗಿ ಸಾಮರ್ಥ್ಯದಲ್ಲಿ ಸಾಲದ ಹೊರೆಯಿರುವ ಸರ್ಕಾರಿ ಸ್ವಾಮ್ಯದ ವಿಮಾನಯಾನ  ಸಂಸ್ಥೆ ಏರ್ ಇಂಡಿಯಾಕ್ಕಾಗಿ ಈ ತಿಂಗಳ ಆರಂಭದಲ್ಲಿ ಬಿಡ್ ಮಾಡಿದ್ದರು. ಡಿಸೆಂಬರ್ 2020 ರಲ್ಲಿ ಆರಂಭವಾದ ಷೇರು ಮಾರಾಟ ಪ್ರಕ್ರಿಯೆಯು ಕೊವಿಡ್–19 ಕಾರಣದಿಂದಾಗಿ ವಿಳಂಬವಾಗಿತ್ತು. ‘ಏರ್‌ ಇಂಡಿಯಾ’ ಖರೀದಿಗೆ ಆರಂಭಿಕ ಹಂತದಲ್ಲಿ ಆಸಕ್ತಿ ತೋರಿಸಿದ್ದ ಕಂಪನಿಗಳ ಪೈಕಿ ಟಾಟಾ ಸಮೂಹ ಕೂಡ ಒಂದಾಗಿದೆ. ಸಾಲದ ಸುಳಿಯಲ್ಲಿ ಸಿಲುಕಿರುವ ‘ಏರ್ ಇಂಡಿಯಾ’ ವಿಮಾನಯಾನ ಸಂಸ್ಥೆಯನ್ನು ಸ್ವಾಧೀನಪಡಿಸಿಕೊಳ್ಳಲು ನಾಲ್ಕು ಬಿಡ್ಡರ್‌ಗಳು ಸ್ಪರ್ಧಿಸಿದ್ದರು. ಆದರೆ ಟಾಟಾ ಗ್ರೂಪ್ ಮತ್ತು ಸ್ಪೈಸ್‌ಜೆಟ್ ಸಿಇಒ ಅಜಯ್ ಸಿಂಗ್ ಮಾತ್ರ ಅಂತಿಮ ಹಂತಕ್ಕೆ ಬಂದಿದ್ದರು.

ಪ್ರಧಾನಿ ಮೋದಿ ನೇತೃತ್ವದ ಸರ್ಕಾರ ಏರ್ ಇಂಡಿಯಾವನ್ನು ಮಾರಾಟ ಮಾಡುವ ಎರಡನೇ ಪ್ರಯತ್ನ ಇದಾಗಿದೆ. ಕೇಂದ್ರವು ಮಾರ್ಚ್ 2018 ರಲ್ಲಿ ಇದೇ ವಿಮಾನಯಾನ ಸಂಸ್ಥೆಯನ್ನು ಮಾರಾಟ ಮಾಡಲು ವಿಫಲ ಯತ್ನವನ್ನು ಮಾಡಿತ್ತು. ಆದಾಗ್ಯೂ, ಏರ್‌ಲೈನ್‌ನ ಹೆಚ್ಚುತ್ತಿರುವ ಸಾಲದಿಂದಾಗಿ ಏರ್ ಇಂಡಿಯಾದಲ್ಲಿ 76 ಪ್ರತಿಶತದಷ್ಟು ಷೇರುಗಳನ್ನು ಖರೀದಿಸಲು ಯಾರೂ ಮುಂದೆ ಬರಲಿಲ್ಲ.

ವರದಿಗಳ ಪ್ರಕಾರ ಏರ್ ಇಂಡಿಯಾವು 70,000 ಕೋಟಿಗೂ ಅಧಿಕ ನಷ್ಟದಲ್ಲಿದೆ ಮತ್ತು ಸರ್ಕಾರವು ಪ್ರತಿದಿನ ರಾಷ್ಟ್ರೀಯ ವಾಹಕವನ್ನು ನಡೆಸಲು ಸುಮಾರು ₹ 20 ಕೋಟಿಗಳನ್ನು ಕಳೆದುಕೊಳ್ಳುತ್ತಿದೆ. 1990 ರ ದಶಕದಲ್ಲಿ ಖಾಸಗಿ ವಿಮಾನಯಾನ ಸಂಸ್ಥೆಗಳ ಆಗಮನ ಮತ್ತು 2000 ರ ದಶಕದ ಮಧ್ಯಭಾಗದಲ್ಲಿ ಯಾವುದೇ ವಿಮಾನಯಾನ ಸಂಸ್ಥೆಗಳ ಪ್ರವೇಶವು ಒಂದು ಕಾಲದಲ್ಲಿ ಅಧಿಪತ್ಯ ಹೊಂದಿದ್ದ ಏರ್ ಇಂಡಿಯಾ ನಷ್ಟದಲ್ಲಿ ಮುಳುಗುವಂತೆ ಮಾಡಿತ್ತು.

ಇದನ್ನೂ ಓದಿ: Air India ಬಿಡ್ ಗೆದ್ದ ಟಾಟಾ ಸನ್ಸ್; ಟಾಟಾ ಕಂಪನಿ ತೆಕ್ಕೆಗೆ ಏರ್ ಇಂಡಿಯಾ?

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!