AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಶಾದ್ಯಂತ ಮತ್ತೆ ಲಾಕ್​ಡೌನ್ ಇಲ್ಲ..ಸಾರ್ವಜನಿಕ ಸಾರಿಗೆಯನ್ನೂ ಸ್ಥಗಿತಗೊಳಿಸುವುದಿಲ್ಲ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್

ಕೊರೊನಾ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಹಜವಾಗಿಯೇ ಸಣ್ಣ ಉತ್ಪಾದನಾ ಘಟಕಗಳಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಆತಂಕ ಶುರುವಾಗಿದೆ. ಮತ್ತೆ ಲಾಕ್​ಡೌನ್​ ಆದರೆ ಪರಿಸ್ಥಿತಿ ಏನೆಂಬ ಭಯ ಹುಟ್ಟಿದೆ. ಅವರಲ್ಲಿನ ಆತಂಕ ದೂರ ಮಾಡುವ ಸಲುವಾಗಿ ಭಾನುವಾರ ನಿರ್ಮಲಾ ಸೀತಾರಾಮನ್​ ಅವರು ಈ ಕರೆ ಮಾಡಿದ್ದಾರೆ.

ದೇಶಾದ್ಯಂತ ಮತ್ತೆ ಲಾಕ್​ಡೌನ್ ಇಲ್ಲ..ಸಾರ್ವಜನಿಕ ಸಾರಿಗೆಯನ್ನೂ ಸ್ಥಗಿತಗೊಳಿಸುವುದಿಲ್ಲ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್
ನಿರ್ಮಲಾ ಸೀತಾರಾಮನ್
Lakshmi Hegde
|

Updated on: Apr 19, 2021 | 10:37 AM

Share

ದೆಹಲಿ: ದೇಶದಲ್ಲಿ ಕೊವಿಡ್​-19 ಸೋಂಕಿನ ಪ್ರಮಾಣ ಮಿತಿಮೀರುತ್ತಿದ್ದರೂ, ಇನ್ನೊಮ್ಮೆ ರಾಷ್ಟ್ರವ್ಯಾಪಿ ಲಾಕ್​ಡೌನ್ ಮಾಡುವ ಯೋಜನೆ ಇಲ್ಲ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ. ರಾಷ್ಟ್ರವ್ಯಾಪಿ ಸಂಪೂರ್ಣ ಲಾಕ್​ಡೌನ್ ಮಾಡುವುದಿಲ್ಲ. ಅದರ ಬದಲು ಸೋಂಕು ಹೆಚ್ಚಿರುವ ಪ್ರದೇಶವನ್ನು ಗುರುತಿಸಿ ಕಂಟೈನ್​ಮೆಂಟ್ ವಲಯಗಳನ್ನಾಗಿ ಗುರುತಿಸಲಾಗುವುದು. ಅಲ್ಲಿ ಸೋಂಕು ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ಕೊರೊನಾ ಮತ್ತೆ ಹೆಚ್ಚುತ್ತಿರುವ ಬೆನ್ನಲ್ಲೇ ನಿರ್ಮಲಾ ಸೀತಾರಾಮನ್​ ಅವರು, ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ದಿಮೆಗಳ (FISME) ಅಧ್ಯಕ್ಷ ಅನಿಮೇಶ್​ ಸಕ್ಸೇನಾರೊಂದಿಗೆ ಮಾತುಕತೆ ನಡೆಸಿದ್ದಾರೆ. ರಾಷ್ಟ್ರಾದ್ಯಂತ ಮತ್ತೆ ಲಾಕ್​ಡೌನ್ ಜಾರಿ ಮಾಡುವ ಯೋಜನೆ ಇಲ್ಲ ಎಂದು ಉದ್ಯಮ ಕ್ಷೇತ್ರಕ್ಕೆ ಭರವಸೆ ನೀಡಿದ್ದಾರೆ. ಇನ್ನು ತಮ್ಮೊಂದಿಗೆ ಹಣಕಾಸು ಸಚಿವರು ಮಾತನಾಡಿದ್ದರ ಬಗ್ಗೆ ಅನಿಮೇಶ್​ ಸಕ್ಸೇನಾ ಮಾಹಿತಿ ನೀಡಿದ್ದು, ದೇಶಾದ್ಯಂತ ಉಲ್ಬಣಗೊಳ್ಳುತ್ತಿರುವ ಕೊರೊನಾ ವೈರಸ್​ನ್ನು ಕಡಿಮೆ ಮಾಡಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್​ ಶಾ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳು, ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸುತ್ತಿದ್ದಾರೆ. ರಾಜ್ಯಗಳಲ್ಲಿ ಇರುವ ವೈದ್ಯಕೀಯ ವ್ಯವಸ್ಥೆ, ಆಕ್ಸಿಜನ್​ ಸೇರಿ ಇತರ ಸೌಕರ್ಯಗಳ ಬಗ್ಗೆ ಮೇಲ್ವಿಚಾರಣೆ ನಡೆಸುತ್ತಿದ್ದಾರೆ ಎಂದು ನಿರ್ಮಲಾ ಸೀತಾರಾಮನ್​ ತಿಳಿಸಿದ್ದಾಗಿ ಅನಿಮೇಶ್ ಸಕ್ಸೇನಾ ಹೇಳಿದ್ದಾರೆ.

ಕೊರೊನಾ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಹಜವಾಗಿಯೇ ಸಣ್ಣ ಉತ್ಪಾದನಾ ಘಟಕಗಳಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಆತಂಕ ಶುರುವಾಗಿದೆ. ಮತ್ತೆ ಲಾಕ್​ಡೌನ್​ ಆದರೆ ಪರಿಸ್ಥಿತಿ ಏನೆಂಬ ಭಯ ಹುಟ್ಟಿದೆ. ಅವರಲ್ಲಿನ ಆತಂಕ ದೂರ ಮಾಡುವ ಸಲುವಾಗಿ ಭಾನುವಾರ ನಿರ್ಮಲಾ ಸೀತಾರಾಮನ್​ ಅವರು ಈ ಕರೆ ಮಾಡಿದ್ದಾರೆ. ಅಲ್ಲದೆ, ಸಾರ್ವಜನಿಕ ಸಾರಿಗೆಯನ್ನು ಸ್ಥಗಿತಗೊಳಿಸುವುದಿಲ್ಲ ಎಂಬ ಭರವಸೆಯನ್ನೂ ನೀಡಿದ್ದಾಗಿ ಉನ್ನತ ಮೂಲಗಳು ತಿಳಿಸಿವೆ.

ಇದನ್ನೂ ಓದಿ: 30 ಜನ್ರನ್ನ ಕೊಂದು 10 ಸಾವಿರ ಜನ್ರಿಗೆ ಅಟ್ಯಾಕ್ – ಇನ್ಮುಂದೆ ಮತ್ತಷ್ಟು ಭೀಕರವಾಗಿರುತ್ತೆ ವೈರಸ್

ರಾಜಧಾನಿ ಆಸ್ಪತ್ರೆಗಳು ಎದುರಿಸ್ತಿವೆ ಆಕ್ಸಿಜನ್ ಸಿಲಿಂಡರ್​ಗಳ ಕೊರತೆ

(Government has no plan to impose nationwide Lockdown says Nirmala Sitharaman​)

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!