AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇಂದ್ರ ಸರ್ಕಾರಿ ನೌಕರರಿಗೆ ವಾರಕ್ಕೆ 4 ದಿನ- 40 ಗಂಟೆಗಳ ಕೆಲಸದ ಪದ್ಧತಿ ಪರಿಚಯಿಸುವ ಪ್ರಸ್ತಾವ ಇಲ್ಲ

ಕೇಂದ್ರ ಸರ್ಕಾರದ ಕಚೇರಿಗಳಲ್ಲಿ ವಾರಕ್ಕೆ 4 ದಿನ ಅಥವಾ 40 ಗಂಟೆಗಳ ಅವಧಿಯ ಕೆಲಸದ ಪದ್ಧತಿಯನ್ನು ಪರಿಚಯಿಸುವ ಯೋಜನೆ ಕೇಂದ್ರ ಸರ್ಕಾರಕ್ಕೆ ಇಲ್ಲ ಎಂದು ಕಾರ್ಮಿಕ ಸಚಿವ ಸಂತೋಷ್ ಗಂಗ್ವರ್ ತಿಳಿಸಿದ್ದಾರೆ.

ಕೇಂದ್ರ ಸರ್ಕಾರಿ ನೌಕರರಿಗೆ ವಾರಕ್ಕೆ 4 ದಿನ- 40 ಗಂಟೆಗಳ ಕೆಲಸದ ಪದ್ಧತಿ ಪರಿಚಯಿಸುವ ಪ್ರಸ್ತಾವ ಇಲ್ಲ
ಕೇಂದ್ರ ಕಾರ್ಮಿಕ ಸಚಿವ ಸಂತೋಷ್ ಗಂಗ್ವಾರ್
Srinivas Mata
|

Updated on: Mar 24, 2021 | 7:56 PM

Share

ಕೇಂದ್ರ ಸರ್ಕಾರಿ ಕಚೇರಿಗಳಲ್ಲಿ ವಾರಕ್ಕೆ ನಾಲ್ಕು ದಿನ ಅಥವಾ 4 ಗಂಟೆಗಳ ಕೆಲಸದ ಪದ್ಧತಿಯನ್ನು ಪರಿಚಯಿಸುವ ಯಾವುದೇ ಯೋಜನೆಯು ಕೇಂದ್ರ ಸರ್ಕಾರದ ಮುಂದೆ ಇಲ್ಲ ಎಂದು ಸರ್ಕಾರವು ಬುಧವಾರ ಸಂಸತ್​ನಲ್ಲಿ ಮಾಹಿತಿ ನೀಡಿದೆ. ಕೇಂದ್ರ ಕಾರ್ಮಿಕ ಸಚಿವರಾದ ಸಂತೋಷ್ ಗಂಗ್ವರ್ ಅವರು ಲೋಕಸಭೆಯಲ್ಲಿ ಲಿಖಿತ ಪ್ರತಿಕ್ರಿಯೆಯನ್ನು ನೀಡಿ, ಕೇಂದ್ರ ಸರ್ಕಾರಿ ಅಧಿಕಾರಿಗಳಿಗೆ ಸದ್ಯಕ್ಕೆ ವಾರಕ್ಕೆ 4 ದಿನ ಅಥವಾ ವಾರದಲ್ಲಿ 40 ಗಂಟೆಗಳ ಕೆಲಸದ ಪದ್ಧತಿಯನ್ನು ಪರಿಚಯಿಸುವ ಪ್ರಸ್ತಾವ ಇಲ್ಲ ಎಂದು ಹೇಳಿದ್ದಾರೆ.

ಸಚಿವರು ಮಾತನಾಡಿ, ಕಾರ್ಯನಿರ್ವಹಣೆ ದಿನಗಳು/ರಜಾದಿನ/ಭಾರತ ಸರ್ಕಾರದ ಆಡಳಿತ ಕಚೇರಿಗಳಲ್ಲಿನ ಕಾರ್ಯ ನಿರ್ವಹಣೆ ಅವಧಿಯನ್ನು ಆಯಾ ಕೇಂದ್ರ ವೇತನ ಆಯೋಗವು ಶಿಫಾರಸು ಮಾಡುತ್ತದೆ. ನಾಲ್ಕನೇ ವೇತನ ಆಯೋಗದ ಶಿಫಾರಸಿನ ಪ್ರಕಾರ, ವಾರದಲ್ಲಿ ಐದು ದಿನಗಳು ಮತ್ತು ದಿನಕ್ಕೆ ಎಂಟೂವರೆ ಗಂಟೆಗಳ ಕೆಲಸವನ್ನು ಭಾರತ ಸರ್ಕಾರದ ನಾಗರಿಕ ಆಡಳಿತಾತ್ಮಕ ಕಚೇರಿಗಳಲ್ಲಿ ಪರಿಚಯಿಸಲಾಗಿದೆ ಎಂದು ತಿಳಿಸಿದ್ದಾರೆ.

ಇನ್ನೂ ಮುಂದುವರಿದು ಮಾತನಾಡಿದ ಕಾರ್ಮಿಕ ಸಚಿವ ಗಂಗ್ವರ್, ಏಳನೇ ವೇತನ ಆಯೋಗದ ಶಿಫಾರಸಿನಂತೆ ಈಗಿರುವ ಸ್ಥಿತಿಯನ್ನೇ ಮುಂದುವರಿಸಿಕೊಂಡು ಹೋಗುವಂತೆ ತಿಳಿಸಲಾಗಿದೆ ಎಂದಿದ್ದಾರೆ. ಹೊಸ ಕಾರ್ಮಿಕ ಸಂಹಿತೆಯಲ್ಲಿ ವಾರದಲ್ಲಿ ನಾಲ್ಕು ದಿನ- 40 ಗಂಟೆಗಳ ಕೆಲಸದ ಪದ್ಧತಿ ಬಗ್ಗೆ ಶಿಫಾರಸು ಮಾಡಿರುವುದನ್ನು ಇಲ್ಲಿ ಸ್ಮರಿಸಬಹುದು.

ಇದನ್ನೂ ಓದಿ: New Wage Code: ಏಪ್ರಿಲ್​ನಿಂದ ನಿಮ್ಮ ಕೈಗೆ ಬರುವ ಸಂಬಳದ ಲೆಕ್ಕಾಚಾರವೇ ಆಗಲಿದೆ ಬದಲು

Follow Us
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ