AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇಂದ್ರ ಸರ್ಕಾರಿ ನೌಕರರಿಗೆ ವಾರಕ್ಕೆ 4 ದಿನ- 40 ಗಂಟೆಗಳ ಕೆಲಸದ ಪದ್ಧತಿ ಪರಿಚಯಿಸುವ ಪ್ರಸ್ತಾವ ಇಲ್ಲ

ಕೇಂದ್ರ ಸರ್ಕಾರದ ಕಚೇರಿಗಳಲ್ಲಿ ವಾರಕ್ಕೆ 4 ದಿನ ಅಥವಾ 40 ಗಂಟೆಗಳ ಅವಧಿಯ ಕೆಲಸದ ಪದ್ಧತಿಯನ್ನು ಪರಿಚಯಿಸುವ ಯೋಜನೆ ಕೇಂದ್ರ ಸರ್ಕಾರಕ್ಕೆ ಇಲ್ಲ ಎಂದು ಕಾರ್ಮಿಕ ಸಚಿವ ಸಂತೋಷ್ ಗಂಗ್ವರ್ ತಿಳಿಸಿದ್ದಾರೆ.

ಕೇಂದ್ರ ಸರ್ಕಾರಿ ನೌಕರರಿಗೆ ವಾರಕ್ಕೆ 4 ದಿನ- 40 ಗಂಟೆಗಳ ಕೆಲಸದ ಪದ್ಧತಿ ಪರಿಚಯಿಸುವ ಪ್ರಸ್ತಾವ ಇಲ್ಲ
ಕೇಂದ್ರ ಕಾರ್ಮಿಕ ಸಚಿವ ಸಂತೋಷ್ ಗಂಗ್ವಾರ್
Srinivas Mata
|

Updated on: Mar 24, 2021 | 7:56 PM

Share

ಕೇಂದ್ರ ಸರ್ಕಾರಿ ಕಚೇರಿಗಳಲ್ಲಿ ವಾರಕ್ಕೆ ನಾಲ್ಕು ದಿನ ಅಥವಾ 4 ಗಂಟೆಗಳ ಕೆಲಸದ ಪದ್ಧತಿಯನ್ನು ಪರಿಚಯಿಸುವ ಯಾವುದೇ ಯೋಜನೆಯು ಕೇಂದ್ರ ಸರ್ಕಾರದ ಮುಂದೆ ಇಲ್ಲ ಎಂದು ಸರ್ಕಾರವು ಬುಧವಾರ ಸಂಸತ್​ನಲ್ಲಿ ಮಾಹಿತಿ ನೀಡಿದೆ. ಕೇಂದ್ರ ಕಾರ್ಮಿಕ ಸಚಿವರಾದ ಸಂತೋಷ್ ಗಂಗ್ವರ್ ಅವರು ಲೋಕಸಭೆಯಲ್ಲಿ ಲಿಖಿತ ಪ್ರತಿಕ್ರಿಯೆಯನ್ನು ನೀಡಿ, ಕೇಂದ್ರ ಸರ್ಕಾರಿ ಅಧಿಕಾರಿಗಳಿಗೆ ಸದ್ಯಕ್ಕೆ ವಾರಕ್ಕೆ 4 ದಿನ ಅಥವಾ ವಾರದಲ್ಲಿ 40 ಗಂಟೆಗಳ ಕೆಲಸದ ಪದ್ಧತಿಯನ್ನು ಪರಿಚಯಿಸುವ ಪ್ರಸ್ತಾವ ಇಲ್ಲ ಎಂದು ಹೇಳಿದ್ದಾರೆ.

ಸಚಿವರು ಮಾತನಾಡಿ, ಕಾರ್ಯನಿರ್ವಹಣೆ ದಿನಗಳು/ರಜಾದಿನ/ಭಾರತ ಸರ್ಕಾರದ ಆಡಳಿತ ಕಚೇರಿಗಳಲ್ಲಿನ ಕಾರ್ಯ ನಿರ್ವಹಣೆ ಅವಧಿಯನ್ನು ಆಯಾ ಕೇಂದ್ರ ವೇತನ ಆಯೋಗವು ಶಿಫಾರಸು ಮಾಡುತ್ತದೆ. ನಾಲ್ಕನೇ ವೇತನ ಆಯೋಗದ ಶಿಫಾರಸಿನ ಪ್ರಕಾರ, ವಾರದಲ್ಲಿ ಐದು ದಿನಗಳು ಮತ್ತು ದಿನಕ್ಕೆ ಎಂಟೂವರೆ ಗಂಟೆಗಳ ಕೆಲಸವನ್ನು ಭಾರತ ಸರ್ಕಾರದ ನಾಗರಿಕ ಆಡಳಿತಾತ್ಮಕ ಕಚೇರಿಗಳಲ್ಲಿ ಪರಿಚಯಿಸಲಾಗಿದೆ ಎಂದು ತಿಳಿಸಿದ್ದಾರೆ.

ಇನ್ನೂ ಮುಂದುವರಿದು ಮಾತನಾಡಿದ ಕಾರ್ಮಿಕ ಸಚಿವ ಗಂಗ್ವರ್, ಏಳನೇ ವೇತನ ಆಯೋಗದ ಶಿಫಾರಸಿನಂತೆ ಈಗಿರುವ ಸ್ಥಿತಿಯನ್ನೇ ಮುಂದುವರಿಸಿಕೊಂಡು ಹೋಗುವಂತೆ ತಿಳಿಸಲಾಗಿದೆ ಎಂದಿದ್ದಾರೆ. ಹೊಸ ಕಾರ್ಮಿಕ ಸಂಹಿತೆಯಲ್ಲಿ ವಾರದಲ್ಲಿ ನಾಲ್ಕು ದಿನ- 40 ಗಂಟೆಗಳ ಕೆಲಸದ ಪದ್ಧತಿ ಬಗ್ಗೆ ಶಿಫಾರಸು ಮಾಡಿರುವುದನ್ನು ಇಲ್ಲಿ ಸ್ಮರಿಸಬಹುದು.

ಇದನ್ನೂ ಓದಿ: New Wage Code: ಏಪ್ರಿಲ್​ನಿಂದ ನಿಮ್ಮ ಕೈಗೆ ಬರುವ ಸಂಬಳದ ಲೆಕ್ಕಾಚಾರವೇ ಆಗಲಿದೆ ಬದಲು

ಗಂಭೀರವಾಗಿ ಗಾಯಗೊಂಡು ಅರ್ಧಕ್ಕೆ ಬ್ಯಾಟಿಂಗ್‌ ನಿಲ್ಲಿಸಿದ ರಿಷಭ್ ಪಂತ್
ಗಂಭೀರವಾಗಿ ಗಾಯಗೊಂಡು ಅರ್ಧಕ್ಕೆ ಬ್ಯಾಟಿಂಗ್‌ ನಿಲ್ಲಿಸಿದ ರಿಷಭ್ ಪಂತ್
8 ವರ್ಷಗಳ ನಂತರ ವಿಕೆಟ್ ಪಡೆದ ಇಂಗ್ಲೆಂಡ್ ಬೌಲರ್
8 ವರ್ಷಗಳ ನಂತರ ವಿಕೆಟ್ ಪಡೆದ ಇಂಗ್ಲೆಂಡ್ ಬೌಲರ್
ಮೊದಲು ನನಗೆ ಬಾಸ್ ಅಂತಿದ್ರು, ಈಗ ಯಶ್​ಗೆ ಬಾಸ್ ಅಂತಾರೆ: ಪುಷ್ಪ
ಮೊದಲು ನನಗೆ ಬಾಸ್ ಅಂತಿದ್ರು, ಈಗ ಯಶ್​ಗೆ ಬಾಸ್ ಅಂತಾರೆ: ಪುಷ್ಪ
ಇಂದು ಅರಂಭಿಸಿದ್ದ ಪ್ರತಿಭಟನೆಯನ್ನು ವಾಪಸ್ಸು ಪಡೆದ ಸಣ್ಣ ವ್ಯಾಪಾರಿಗಳು
ಇಂದು ಅರಂಭಿಸಿದ್ದ ಪ್ರತಿಭಟನೆಯನ್ನು ವಾಪಸ್ಸು ಪಡೆದ ಸಣ್ಣ ವ್ಯಾಪಾರಿಗಳು
ಶೌಚಾಲಯದ ಸಿಬ್ಬಂದಿ ನೀಡುವ ಮಾಹಿತಿ ನಿಖರವಾಗಿಲ್ಲ, ಅಸ್ಪಷ್ಟ
ಶೌಚಾಲಯದ ಸಿಬ್ಬಂದಿ ನೀಡುವ ಮಾಹಿತಿ ನಿಖರವಾಗಿಲ್ಲ, ಅಸ್ಪಷ್ಟ
ಆಂಧ್ರದ ಅಮಲಾಪುರಂನಲ್ಲಿ 4 ಕೋಳಿಗಳನ್ನು ನುಂಗಿದ 6 ಅಡಿ ಉದ್ದದ ನಾಗರಹಾವು
ಆಂಧ್ರದ ಅಮಲಾಪುರಂನಲ್ಲಿ 4 ಕೋಳಿಗಳನ್ನು ನುಂಗಿದ 6 ಅಡಿ ಉದ್ದದ ನಾಗರಹಾವು
ಯಡಿಯೂರಪ್ಪ, ವಿಜಯೇಂದ್ರ ರೈತನ ಮಕ್ಕಳಾದ್ರೆ ನಾವು ಎಮ್ಮೆಯ ಮಕ್ಕಳೇ? ಯತ್ನಾಳ್
ಯಡಿಯೂರಪ್ಪ, ವಿಜಯೇಂದ್ರ ರೈತನ ಮಕ್ಕಳಾದ್ರೆ ನಾವು ಎಮ್ಮೆಯ ಮಕ್ಕಳೇ? ಯತ್ನಾಳ್
ಸಣ್ಣ ವ್ಯಾಪಾರಿಗಳಿಂದ ತೆರಿಗೆ ವಸೂಲಿ ಮಾಡಲ್ಲ: ಸಿಎಂ ಸ್ಪಷ್ಟನೆ
ಸಣ್ಣ ವ್ಯಾಪಾರಿಗಳಿಂದ ತೆರಿಗೆ ವಸೂಲಿ ಮಾಡಲ್ಲ: ಸಿಎಂ ಸ್ಪಷ್ಟನೆ
ಫೋಟೋ ತೆಗೆಸಿಕೊಂಡವರ ಹಿನ್ನೆಲೆ ನನಗೆ ಹೇಗೆ ಗೊತ್ತಾಗುತ್ತದೆ: ಬಸವರಾಜ
ಫೋಟೋ ತೆಗೆಸಿಕೊಂಡವರ ಹಿನ್ನೆಲೆ ನನಗೆ ಹೇಗೆ ಗೊತ್ತಾಗುತ್ತದೆ: ಬಸವರಾಜ
‘ಕೊತ್ತಲವಾಡಿ’ ಬಜೆಟ್ ಎಷ್ಟು? ಕಾಟನ್ ಸೀರೆ ಉದಾಹರಣೆ ಕೊಟ್ಟ ಯಶ್ ತಾಯಿ
‘ಕೊತ್ತಲವಾಡಿ’ ಬಜೆಟ್ ಎಷ್ಟು? ಕಾಟನ್ ಸೀರೆ ಉದಾಹರಣೆ ಕೊಟ್ಟ ಯಶ್ ತಾಯಿ