AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇಂದ್ರ ಸರ್ಕಾರಿ ನೌಕರರಿಗೆ ವಾರಕ್ಕೆ 4 ದಿನ- 40 ಗಂಟೆಗಳ ಕೆಲಸದ ಪದ್ಧತಿ ಪರಿಚಯಿಸುವ ಪ್ರಸ್ತಾವ ಇಲ್ಲ

ಕೇಂದ್ರ ಸರ್ಕಾರದ ಕಚೇರಿಗಳಲ್ಲಿ ವಾರಕ್ಕೆ 4 ದಿನ ಅಥವಾ 40 ಗಂಟೆಗಳ ಅವಧಿಯ ಕೆಲಸದ ಪದ್ಧತಿಯನ್ನು ಪರಿಚಯಿಸುವ ಯೋಜನೆ ಕೇಂದ್ರ ಸರ್ಕಾರಕ್ಕೆ ಇಲ್ಲ ಎಂದು ಕಾರ್ಮಿಕ ಸಚಿವ ಸಂತೋಷ್ ಗಂಗ್ವರ್ ತಿಳಿಸಿದ್ದಾರೆ.

ಕೇಂದ್ರ ಸರ್ಕಾರಿ ನೌಕರರಿಗೆ ವಾರಕ್ಕೆ 4 ದಿನ- 40 ಗಂಟೆಗಳ ಕೆಲಸದ ಪದ್ಧತಿ ಪರಿಚಯಿಸುವ ಪ್ರಸ್ತಾವ ಇಲ್ಲ
ಕೇಂದ್ರ ಕಾರ್ಮಿಕ ಸಚಿವ ಸಂತೋಷ್ ಗಂಗ್ವಾರ್
Srinivas Mata
|

Updated on: Mar 24, 2021 | 7:56 PM

Share

ಕೇಂದ್ರ ಸರ್ಕಾರಿ ಕಚೇರಿಗಳಲ್ಲಿ ವಾರಕ್ಕೆ ನಾಲ್ಕು ದಿನ ಅಥವಾ 4 ಗಂಟೆಗಳ ಕೆಲಸದ ಪದ್ಧತಿಯನ್ನು ಪರಿಚಯಿಸುವ ಯಾವುದೇ ಯೋಜನೆಯು ಕೇಂದ್ರ ಸರ್ಕಾರದ ಮುಂದೆ ಇಲ್ಲ ಎಂದು ಸರ್ಕಾರವು ಬುಧವಾರ ಸಂಸತ್​ನಲ್ಲಿ ಮಾಹಿತಿ ನೀಡಿದೆ. ಕೇಂದ್ರ ಕಾರ್ಮಿಕ ಸಚಿವರಾದ ಸಂತೋಷ್ ಗಂಗ್ವರ್ ಅವರು ಲೋಕಸಭೆಯಲ್ಲಿ ಲಿಖಿತ ಪ್ರತಿಕ್ರಿಯೆಯನ್ನು ನೀಡಿ, ಕೇಂದ್ರ ಸರ್ಕಾರಿ ಅಧಿಕಾರಿಗಳಿಗೆ ಸದ್ಯಕ್ಕೆ ವಾರಕ್ಕೆ 4 ದಿನ ಅಥವಾ ವಾರದಲ್ಲಿ 40 ಗಂಟೆಗಳ ಕೆಲಸದ ಪದ್ಧತಿಯನ್ನು ಪರಿಚಯಿಸುವ ಪ್ರಸ್ತಾವ ಇಲ್ಲ ಎಂದು ಹೇಳಿದ್ದಾರೆ.

ಸಚಿವರು ಮಾತನಾಡಿ, ಕಾರ್ಯನಿರ್ವಹಣೆ ದಿನಗಳು/ರಜಾದಿನ/ಭಾರತ ಸರ್ಕಾರದ ಆಡಳಿತ ಕಚೇರಿಗಳಲ್ಲಿನ ಕಾರ್ಯ ನಿರ್ವಹಣೆ ಅವಧಿಯನ್ನು ಆಯಾ ಕೇಂದ್ರ ವೇತನ ಆಯೋಗವು ಶಿಫಾರಸು ಮಾಡುತ್ತದೆ. ನಾಲ್ಕನೇ ವೇತನ ಆಯೋಗದ ಶಿಫಾರಸಿನ ಪ್ರಕಾರ, ವಾರದಲ್ಲಿ ಐದು ದಿನಗಳು ಮತ್ತು ದಿನಕ್ಕೆ ಎಂಟೂವರೆ ಗಂಟೆಗಳ ಕೆಲಸವನ್ನು ಭಾರತ ಸರ್ಕಾರದ ನಾಗರಿಕ ಆಡಳಿತಾತ್ಮಕ ಕಚೇರಿಗಳಲ್ಲಿ ಪರಿಚಯಿಸಲಾಗಿದೆ ಎಂದು ತಿಳಿಸಿದ್ದಾರೆ.

ಇನ್ನೂ ಮುಂದುವರಿದು ಮಾತನಾಡಿದ ಕಾರ್ಮಿಕ ಸಚಿವ ಗಂಗ್ವರ್, ಏಳನೇ ವೇತನ ಆಯೋಗದ ಶಿಫಾರಸಿನಂತೆ ಈಗಿರುವ ಸ್ಥಿತಿಯನ್ನೇ ಮುಂದುವರಿಸಿಕೊಂಡು ಹೋಗುವಂತೆ ತಿಳಿಸಲಾಗಿದೆ ಎಂದಿದ್ದಾರೆ. ಹೊಸ ಕಾರ್ಮಿಕ ಸಂಹಿತೆಯಲ್ಲಿ ವಾರದಲ್ಲಿ ನಾಲ್ಕು ದಿನ- 40 ಗಂಟೆಗಳ ಕೆಲಸದ ಪದ್ಧತಿ ಬಗ್ಗೆ ಶಿಫಾರಸು ಮಾಡಿರುವುದನ್ನು ಇಲ್ಲಿ ಸ್ಮರಿಸಬಹುದು.

ಇದನ್ನೂ ಓದಿ: New Wage Code: ಏಪ್ರಿಲ್​ನಿಂದ ನಿಮ್ಮ ಕೈಗೆ ಬರುವ ಸಂಬಳದ ಲೆಕ್ಕಾಚಾರವೇ ಆಗಲಿದೆ ಬದಲು

Follow Us
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್
ವಿಜಯನಗರ: ಮನೆಗಳಿಗೆ ಕನ್ನ ಹಾಕ್ತಿದ್ದ ಇಬ್ಬರು ಖದೀಮರು ಅರೆಸ್ಟ್
ವಿಜಯನಗರ: ಮನೆಗಳಿಗೆ ಕನ್ನ ಹಾಕ್ತಿದ್ದ ಇಬ್ಬರು ಖದೀಮರು ಅರೆಸ್ಟ್