AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೃಷಿ ಕಾಯ್ದೆಯಲ್ಲಿ ತಿದ್ದುಪಡಿ ಮಾಡಲು ಕೇಂದ್ರ ಸಿದ್ಧ, ಇದರರ್ಥ ಅದರಲ್ಲಿ ಸಮಸ್ಯೆ ಇದೆ ಎಂದಲ್ಲ: ನರೇಂದ್ರ ಸಿಂಗ್ ತೋಮರ್

ರೈತರ ಕಲ್ಯಾಣಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಬದ್ಧರಾಗಿದ್ದು, ರೈತರ ಆದಾಯ ದುಪ್ಪಟ್ಟು ಮಾಡಲು ಪ್ರಯತ್ನಗಳು ನಡೆಯುತ್ತಿವೆ ಎಂದು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಹೇಳಿದ್ದಾರೆ.

ಕೃಷಿ ಕಾಯ್ದೆಯಲ್ಲಿ ತಿದ್ದುಪಡಿ ಮಾಡಲು ಕೇಂದ್ರ ಸಿದ್ಧ, ಇದರರ್ಥ ಅದರಲ್ಲಿ ಸಮಸ್ಯೆ ಇದೆ ಎಂದಲ್ಲ: ನರೇಂದ್ರ ಸಿಂಗ್ ತೋಮರ್
ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on:Feb 05, 2021 | 5:12 PM

Share

ದೆಹಲಿ: ಕೇಂದ್ರ ಸರ್ಕಾರದ ಕೃಷಿ ಕಾಯ್ದೆ ವಿರುದ್ಧ ರೈತರ ಪ್ರತಿಭಟನೆ ಮುಂದುವರಿದಿದ್ದು, ಈ ಕಾಯ್ದೆಯಲ್ಲಿ ತಿದ್ದುಪಡಿ ಮಾಡಲು ಕೇಂದ್ರ ಸಿದ್ಧವಿದೆ ಎಂದು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಹೇಳಿದ್ದಾರೆ.

ಕೇಂದ್ರ ಸರ್ಕಾರ ಕೃಷಿ ಕಾಯ್ದೆಯಲ್ಲಿ ತಿದ್ದುಪಡಿ ಮಾಡಲು ಸರ್ಕಾರ ಸಿದ್ಧವಿದೆ. ಇದರರ್ಥ ಅದರಲ್ಲಿ ಸಮಸ್ಯೆ ಇದೆ ಎಂದಲ್ಲ. ಕೆಲವೊಂದು ರಾಜ್ಯಗಳಲ್ಲಿನ ಜನರಿಗೆ ಕೃಷಿ ಕಾಯ್ದೆ ಬಗ್ಗೆ ತಪ್ಪು ಮಾಹಿತಿ ರವಾನೆಯಾಗಿದೆ ಎಂದು ರಾಜ್ಯಸಭೆಯಲ್ಲಿ ಮಾತನಾಡಿದ ತೋಮರ್ ಹೇಳಿದ್ದಾರೆ.

ಕೃಷಿ ಕಾನೂನು ಜಾರಿಯಾದರೆ ರೈತರ ಕೃಷಿ ಭೂಮಿಯನ್ನು ಬೇರೆಯವರು ಕಬಳಿಸುತ್ತಾರೆ ಎಂಬ ತಪ್ಪು ಮಾಹಿತಿ ರೈತರಿಗೆ ನೀಡಲಾಗಿದೆ. ಕೃಷಿ ಕಾಯ್ದೆಯಲ್ಲಿ ಯಾವುದಾದರೊಂದು ಅಂಶ ಈ ರೀತಿ ಹೇಳುತ್ತಿದೆಯೇ ಎಂಬುದನ್ನು ನನಗೆ ತೋರಿಸಿ. ರೈತರ ಚಳವಳಿಯ ಪ್ರಮುಖ ವಿಷಯ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಆಗಿದೆ. ಉತ್ಪಾದನಾ ವೆಚ್ಚಕ್ಕಿಂತ ಶೇ 50ರಷ್ಟು ಹೆಚ್ಚಿನ ದರದಲ್ಲಿ ಇದನ್ನು ಒದಗಿಸಲಾಗುತ್ತಿದೆ. ಆತ್ಮ ನಿರ್ಭರ ಪ್ಯಾಕೇಜ್ ಅಡಿಯಲ್ಲಿ ₹ 1 ಲಕ್ಷ ಕೋಟಿ ಹಣವನ್ನು ಕೃಷಿ ಮೂಲಸೌಕರ್ಯಕ್ಕೆ ನೀಡಲಾಗಿದೆ. ಅಗತ್ಯವಿರುವಷ್ಟು ಹೂಡಿಕೆ ಕೃಷಿ ವಲಯಕ್ಕೆ ತಲುಪಿದೆ ಎಂದು ಖಾತ್ರಿ ಪಡಿಸಲು ನಾವು ಪ್ರಯತ್ನಿಸಿದ್ದೇವೆ.

ರೈತರ ಕಲ್ಯಾಣಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಬದ್ಧರಾಗಿದ್ದು, ರೈತರ ಆದಾಯ ದುಪ್ಪಟ್ಟು ಮಾಡಲು ಪ್ರಯತ್ನಗಳು ನಡೆಯುತ್ತಿವೆ. ಈ ಹಣಕಾಸು ವರ್ಷದ ಕೇಂದ್ರ ಬಜೆಟ್​ನಲ್ಲಿ ಕೇಂದ್ರ ಸರ್ಕಾರವು ಕೃಷಿ ವಲಯಕ್ಕೆ ₹ 2.83 ಲಕ್ಷ ಕೋಟಿ ಅನುದಾನ ನೀಡಿತ್ತು ಎಂದು ಕೇಂದ್ರ ಸಚಿವರು ಹೇಳಿದ್ದಾರೆ.

ಕಳೆದ 71 ದಿನಗಳಿಂದ ರೈತರು ದೆಹಲಿ ಗಡಿಭಾಗದಲ್ಲಿ ಪ್ರತಿಭಟನೆ ನಡೆಸುತ್ತಿದ್ದು, ಶನಿವಾರ ಮೂರು ಗಂಟೆಗಳ ಕಾಲ ರಾಷ್ಟ್ರೀಯ ಹೆದ್ದಾರಿ ಬಂದ್ (ಚಕ್ಕಾ ಜಾಮ್) ಮಾಡಿ ಪ್ರತಿಭಟನೆ ನಡೆಸಲಿದ್ದಾರೆ. ಚಕ್ಕಾ ಜಾಮ್ ವೇಳೆ ಹೆದ್ದಾರಿಯಲ್ಲಿ ಸಂಚಾರ ಸ್ಥಗಿತವಾಗಲಿದ್ದು, ವಾಹನದಲ್ಲಿರುವವರಿಗೆ ರೈತರು ಆಹಾರ ಮತ್ತು ನೀರು ನೀಡಲಿದ್ದಾರೆ ಎಂದು ಭಾರತೀಯ ಕಿಸಾನ್ ಸಂಘಟನೆ (ಬಿಕೆಯು) ವಕ್ತಾರ ರಾಕೇಶ್ ಟಿಕಾಯತ್ ಹೇಳಿದ್ದಾರೆ.

Chakka Jam ಮತ್ತೆ ಮೊಳಗಲಿದೆ ರೈತರ ಕಹಳೆ.. ದೇಶಾದ್ಯಂತ ನಾಳೆ ಹೈವೇಗಳು ಬಂದ್

Published On - 5:09 pm, Fri, 5 February 21

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು