ಅಭಿವೃದ್ಧಿ ಹೊಂದಿದ ಭಾರತದ ಸಂಕಲ್ಪದಲ್ಲಿ ಜನರಿಗೆ ನಂಬಿಕೆ ಇದೆ: ದ್ರೌಪದಿ ಮುರ್ಮು

ರಾಷ್ಟ್ರಪತಿ ದ್ರೌಪದಿ ಮುರ್ಮು ಗುರುವಾರ ಲೋಕಸಭೆ ಮತ್ತು ರಾಜ್ಯಸಭೆಯ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಿದರು ಮತ್ತು ಹೊಸದಾಗಿ ಆಯ್ಕೆಯಾದ ಎಲ್ಲ ಸಂಸದರನ್ನು ಅಭಿನಂದಿಸಿದರು. ಇಡೀ ದೇಶದಲ್ಲಿ ಲೋಕಸಭೆ ಚುನಾವಣೆ ಚರ್ಚೆಯಾಗುತ್ತಿದೆ. ಜನರು ಸತತ ಮೂರನೇ ಬಾರಿಗೆ ಸ್ಥಿರ ಸರ್ಕಾರವನ್ನು ಆಯ್ಕೆ ಮಾಡಿದ್ದಾರೆ ಎಂದು ಜಗತ್ತು ಗಮನಿಸುತ್ತಿದೆ. ಜನರು ಮೂರನೇ ಬಾರಿಗೆ ಸರ್ಕಾರದ ಮೇಲೆ ವಿಶ್ವಾಸ ತೋರಿದ್ದಾರೆ ಎಂದರು.

ಅಭಿವೃದ್ಧಿ ಹೊಂದಿದ ಭಾರತದ ಸಂಕಲ್ಪದಲ್ಲಿ ಜನರಿಗೆ ನಂಬಿಕೆ ಇದೆ: ದ್ರೌಪದಿ ಮುರ್ಮು
ದ್ರೌಪದಿ ಮುರ್ಮು

Updated on: Jun 27, 2024 | 11:29 AM

ಅಭಿವೃದ್ಧಿ ಹೊಂದಿದ ಭಾರತದ ಸಂಕಲ್ಪದಲ್ಲಿ ಜನರಿಗೆ ನಂಬಿಕೆ ಇದೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು(Droupadi Murmu) ಹೇಳಿದ್ದಾರೆ. ಸಂಸತ್ತಿನಲ್ಲಿ ಇಂದು ನಡೆದ ಜಂಟಿ ಅಧಿವೇಶನದಲ್ಲಿ ಮುರ್ಮು ಮಾತನಾಡಿ, ಕೆಲವೇ ಜನರಿಗೆ ದೇಶ ಸೇವೆ ಮಾಡುವ ಮತ್ತು ಜನರ ಸೇವೆ ಮಾಡುವ ಅವಕಾಶ ಸಿಗುತ್ತದೆ. ಮತದಾರರ ವಿಶ್ವಾಸ ಗಳಿಸಿ ನೀವೆಲ್ಲರೂ ಇಲ್ಲಿಗೆ ಬಂದಿದ್ದೀರಿ,18ನೇ ಲೋಕಸಭೆಗೆ ಹೊಸದಾಗಿ ಆಯ್ಕೆಯಾದ ಎಲ್ಲ ಸದಸ್ಯರಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳು ಎಂದು ಹೇಳಿದರು. ಹತ್ತು ವರ್ಷಗಳಲ್ಲಿ ಮಾಡಿರುವ ಬದಲಾವಣೆಯಿಂದ ಇದೆಲ್ಲ ಸಾಧ್ಯವಾಗಿದೆ. ಭಾರತವನ್ನು ಮೂರನೇ ಆರ್ಥಿಕತೆಯನ್ನಾಗಿ ಮಾಡುವಲ್ಲಿ ಸರ್ಕಾರ ತೊಡಗಿಸಿಕೊಂಡಿದೆ.

ಪ್ರಸ್ತುತ ದಿನಗಳಲ್ಲಿ ಸಾವಯವ ಉತ್ಪನ್ನಗಳಿಗೆ ವಿಶ್ವದಲ್ಲಿ ವೇಗವಾಗಿ ಬೇಡಿಕೆ ಹೆಚ್ಚುತ್ತಿದೆ. ಈ ಬೇಡಿಕೆಯನ್ನು ಪೂರೈಸಲು ಭಾರತೀಯ ರೈತರು ಅಪಾರ ಸಾಮರ್ಥ್ಯವನ್ನು ಹೊಂದಿದ್ದಾರೆ. ಸರ್ಕಾರ ಖಾರಿಫ್ ಬೆಳೆಗಳ ಎಂಎಸ್‌ಪಿಯನ್ನೂ ಹೆಚ್ಚಿಸಿದೆ. ನಾವು ಹೆಚ್ಚು ಹೆಚ್ಚು ಸ್ವಾವಲಂಬಿಗಳಾಗಬೇಕು ಎಂಬ ಕಲ್ಪನೆಯನ್ನು ಇಟ್ಟುಕೊಂಡು ನೀತಿಯನ್ನು ರೂಪಿಸಲಾಗಿದೆ ಎಂದರು.

ಸರ್ಕಾರ ಎಲ್ಲಾ ಕ್ಷೇತ್ರಗಳ ಬಲವರ್ಧನೆಯಲ್ಲಿ ನಿರತವಾಗಿದೆ. ಕಳೆದ ಹತ್ತು ವರ್ಷಗಳಲ್ಲಿ ಗ್ರಾಮೀಣ ಆರ್ಥಿಕತೆಗೆ ಒತ್ತು ನೀಡಲಾಗಿದೆ ಎಂದು ತಿಳಿಸಿದ್ದಾರೆ. ಇಡೀ ದೇಶದಲ್ಲಿ ಲೋಕಸಭೆ ಚುನಾವಣೆ ಚರ್ಚೆಯಾಗುತ್ತಿದೆ. ಜನರು ಸತತ ಮೂರನೇ ಬಾರಿಗೆ ಸ್ಥಿರ ಸರ್ಕಾರವನ್ನು ಆಯ್ಕೆ ಮಾಡಿದ್ದಾರೆ ಎಂದು ಜಗತ್ತು ಗಮನಿಸುತ್ತಿದೆ. ಜನರು ಮೂರನೇ ಬಾರಿಗೆ ಸರ್ಕಾರದ ಮೇಲೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಮತ್ತಷ್ಟು ಓದಿ: Parliament Session: ಲೋಕಸಭೆ, ರಾಜ್ಯಸಭೆ ಜಂಟಿ ಅಧಿವೇಶನ ಉದ್ದೇಶಿಸಿ ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಷಣ

18ನೇ ಲೋಕಸಭೆಯ ಮೊದಲ ಅಧಿವೇಶನ ಸೋಮವಾರ ಆರಂಭವಾಗಿದ್ದು, ರಾಜ್ಯಸಭೆಯ 264ನೇ ಅಧಿವೇಶನ ಜೂನ್ 27ರಂದು ಆರಂಭವಾಗಲಿದೆ. ಸಂವಿಧಾನದ 87 ನೇ ವಿಧಿಯ ಪ್ರಕಾರ, ಪ್ರತಿ ಲೋಕಸಭೆ ಚುನಾವಣೆಯ ನಂತರ ಅಧಿವೇಶನದ ಆರಂಭದಲ್ಲಿ ಸಂಸತ್ತಿನ ಜಂಟಿ ಅಧಿವೇಶನವನ್ನು ಉದ್ದೇಶಿಸಿ ರಾಷ್ಟ್ರಪತಿ ಭಾಷಣ ಮಾಡಬೇಕಾಗುತ್ತದೆ.

ಪ್ರತಿ ವರ್ಷ ಸಂಸತ್ತಿನ ಮೊದಲ ಅಧಿವೇಶನದಲ್ಲಿ ರಾಷ್ಟ್ರಪತಿಗಳು ಉಭಯ ಸದನಗಳ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಭಾಷಣ ಮಾಡುತ್ತಾರೆ. ರಾಷ್ಟ್ರಪತಿ  ಭಾಷಣದ ಮೂಲಕ ಸರ್ಕಾರವು ತನ್ನ ಕಾರ್ಯಕ್ರಮಗಳು ಮತ್ತು ನೀತಿಗಳನ್ನು ವಿವರಿಸುತ್ತದೆ. ಇದು ಹಿಂದಿನ ವರ್ಷದಲ್ಲಿ ಸರ್ಕಾರ ಕೈಗೊಂಡ ಕ್ರಮಗಳು ಮತ್ತು ಮುಂಬರುವ ವರ್ಷದ ಆದ್ಯತೆಗಳನ್ನು ಎತ್ತಿ ತೋರಿಸುತ್ತದೆ.

ಮುರ್ಮು ಅವರು ಕಳೆದ 10 ವರ್ಷಗಳಲ್ಲಿ ಮೋದಿ ಸರ್ಕಾರದ ನೀತಿಗಳ ಅವಲೋಕನವನ್ನು ನೀಡುವ ನಿರೀಕ್ಷೆಯಿದೆ, ಆರ್ಥಿಕತೆ, ರಕ್ಷಣೆ, ಆರೋಗ್ಯ, ಶಿಕ್ಷಣ ಮತ್ತು ಸಾಮಾಜಿಕ ಕಲ್ಯಾಣ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿನ ಸಾಧನೆಗಳನ್ನು ಒಳಗೊಂಡಿದೆ.

NEET-UG ಅಕ್ರಮಗಳು, UGC-NET ರದ್ದತಿ, ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕ ದಾಳಿಗಳು, ದೇಶದಲ್ಲಿ ರೈಲು ಅಪಘಾತಗಳು ಮತ್ತು ಅಗತ್ಯ ವಸ್ತುಗಳ ಬೆಲೆ ಏರಿಕೆಯಂತಹ ಹಲವಾರು ವಿಷಯಗಳ ಕುರಿತು ಚರ್ಚೆ ನಡೆಯುವ ಸಾಧ್ಯತೆ ಇದೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us