AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಸ್ಮಾನಿಯಾ ವಿವಿಯಲ್ಲಿ ಹಾಸ್ಟೆಲ್‌ ನಿರ್ಮಾಣಕ್ಕೆ ಕೇಂದ್ರ ಸರ್ಕಾರದಿಂದ 7.5 ಕೋಟಿ ರೂ. ಬಿಡುಗಡೆ

ಶೇ.100ರಷ್ಟು ಕೇಂದ್ರ ಸರ್ಕಾರದ ನಿಧಿಯಿಂದ ನಿರ್ಮಾಣವಾಗಲಿರುವ ಉಸ್ಮಾನಿಯಾ ವಿಶ್ವವಿದ್ಯಾಲಯದ ಹಾಸ್ಟೆಲ್‌ಗಳನ್ನು ಪ್ರತಿಯೊಂದಕ್ಕೆ ರೂ. 14.60 ಕೋಟಿ ಮತ್ತು ಸುಮಾರು ರೂ. 30 ಕೋಟಿ ವೆಚ್ಚದಲ್ಲಿ 2 ವಸತಿ ನಿಲಯಗಳನ್ನು ನಿರ್ಮಿಸಲಾಗುವುದು.

ಉಸ್ಮಾನಿಯಾ ವಿವಿಯಲ್ಲಿ ಹಾಸ್ಟೆಲ್‌ ನಿರ್ಮಾಣಕ್ಕೆ ಕೇಂದ್ರ ಸರ್ಕಾರದಿಂದ 7.5 ಕೋಟಿ ರೂ. ಬಿಡುಗಡೆ
ಉಸ್ಮಾನಿಯಾ ವಿಶ್ವವಿದ್ಯಾನಿಲಯ
ಸುಷ್ಮಾ ಚಕ್ರೆ
|

Updated on: Oct 07, 2023 | 6:59 PM

Share

ನವದೆಹಲಿ: ಕೇಂದ್ರ ಸರ್ಕಾರ ಉಸ್ಮಾನಿಯಾ ವಿಶ್ವವಿದ್ಯಾಲಯದಲ್ಲಿ ಹಾಸ್ಟೆಲ್ ನಿರ್ಮಾಣಕ್ಕೆ 7.5 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿದೆ. ಈ ವಿಶ್ವ ವಿದ್ಯಾಲಯದ ವಿದ್ಯಾರ್ಥಿನಿಯರು ಮತ್ತು ವಿದ್ಯಾರ್ಥಿಗಳಿಗಾಗಿ 2 ಪ್ರತ್ಯೇಕ ಹಾಸ್ಟೆಲ್‌ಗಳನ್ನು ನಿರ್ಮಿಸಲು ಮೊದಲ ಕಂತಿನ ಹಣವನ್ನು ಬಿಡುಗಡೆ ಮಾಡಲಾಗಿದೆ. ಈ ಹಾಸ್ಟೆಲ್ ನಿರ್ಮಾಣಕ್ಕೆ ಒಟ್ಟು 30 ಕೋಟಿ ರೂ. ನೀಡಲು ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ. ಕೇಂದ್ರ ಸಂಸ್ಕೃತಿ, ಪ್ರವಾಸೋದ್ಯಮ ಸಚಿವ ಕಿಶನ್ ರೆಡ್ಡಿ ಇತ್ತೀಚೆಗೆ ಉಸ್ಮಾನಿಯಾ ವಿಶ್ವವಿದ್ಯಾಲಯಕ್ಕೆ ಭೇಟಿ ನೀಡಿದ್ದರು. ಅಲ್ಲಿ ವಿದ್ಯಾರ್ಥಿಗಳು ಎದುರಿಸುತ್ತಿರುವ ಸಮಸ್ಯೆಗಳನ್ನು ಕಂಡು ಆಘಾತಕ್ಕೊಳಗಾಗಿದ್ದರು. ಹಾಸ್ಟೆಲ್‌ಗಳ ಅಸಮರ್ಪಕ ನಿರ್ವಹಣೆಯಿಂದ ವಿದ್ಯಾರ್ಥಿಗಳು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಕೇಂದ್ರ ಸಚಿವ ಕಿಶನ್ ರೆಡ್ಡಿ ಅವರು ವಿಶ್ವವಿದ್ಯಾಲಯದ ಕುಲಪತಿ ಮತ್ತು ಹಿರಿಯ ಅಧಿಕಾರಿಗಳೊಂದಿಗೆ ಮಾತನಾಡಿದ್ದರು. ನಂತರ ಕೇಂದ್ರ ಸಾಮಾಜಿಕ ನ್ಯಾಯ ಸಚಿವ ವೀರೇಂದ್ರ ಕುಮಾರ್ ಅವರೊಂದಿಗೆ ಮಾತನಾಡಿ ಹಾಸ್ಟೆಲ್​ನ ಪರಿಸ್ಥಿತಿಯನ್ನು ವಿವರಿಸಿದ್ದರು. ಹಾಸ್ಟೆಲ್ ಕಟ್ಟಡಗಳ ನಿರ್ಮಾಣದ ಅಗತ್ಯವನ್ನು ವಿವರಿಸಿದ್ದರು.

ಈ ಸಂದರ್ಭದಲ್ಲಿ ಯುವತಿಯರು ಮತ್ತು ಯುವಕರಿಗಾಗಿ ಅಂದಾಜು 30 ಕೋಟಿ ರೂ. ವೆಚ್ಚದಲ್ಲಿ 2 ಹಾಸ್ಟೆಲ್ ಕಟ್ಟಡಗಳನ್ನು ನಿರ್ಮಿಸಲು ಕೇಂದ್ರ ಸರ್ಕಾರ ಶೇ. 100 ರಷ್ಟು ಅನುದಾನ ನೀಡಲು ಸಿದ್ಧವಿದೆ ಎಂದು ಸ್ಪಷ್ಟಪಡಿಸಿದ್ದರು. ಕೇಂದ್ರ ಸಚಿವ ವೀರೇಂದ್ರ ಕುಮಾರ್ ಅವರ ಪ್ರಧಾನಮಂತ್ರಿ ಅನುಶುಚಿತ್ ಜಾತಿ ಅಭ್ಯುದಯ ಯೋಜನೆ ಮತ್ತು ಬಾಬು ಜಗಜೀವನ್ ರಾಮ್ ಚತ್ರವಾಸ್ ಯೋಜನೆಯಡಿ 2 ಹಾಸ್ಟೆಲ್‌ಗಳು ನಿರ್ಮಾಣವಾಗುತ್ತಿದೆ. ಹೆಣ್ಣುಮಕ್ಕಳಿಗೆ ಮತ್ತು ಗಂಡು ಮಕ್ಕಳಿಗೆ ಪ್ರತ್ಯೇಕವಾಗಿ ಹಾಸ್ಟೆಲ್ ನಿರ್ಮಿಸಲಾಗುತ್ತಿದ್ದು, ಒಟ್ಟು 500 ವಿದ್ಯಾರ್ಥಿಗಳಿಗೆ ವಸತಿ ಕಲ್ಪಿಸಲು ಉದ್ದೇಶಿಸಲಾಗಿದೆ.

ಇದನ್ನೂ ಓದಿ: ರಾಹುಲ್ ಗಾಂಧಿ ಭೇಟಿಗೆ ಅನುಮತಿ ನಿರಾಕರಿಸಿದ ಉಸ್ಮಾನಿಯಾ ವಿಶ್ವವಿದ್ಯಾಲಯ

ಶೇ.100ರಷ್ಟು ಕೇಂದ್ರ ಸರ್ಕಾರದ ನಿಧಿಯಿಂದ ನಿರ್ಮಾಣವಾಗಲಿರುವ ಈ ಹಾಸ್ಟೆಲ್‌ಗಳು ಪ್ರತಿಯೊಂದಕ್ಕೆ ರೂ. 14.60 ಕೋಟಿ ಮತ್ತು ಸುಮಾರು ರೂ. 30 ಕೋಟಿ ವೆಚ್ಚದಲ್ಲಿ 2 ವಸತಿ ನಿಲಯಗಳನ್ನು ನಿರ್ಮಿಸಲಾಗುವುದು. ಇದಕ್ಕೆ ಪ್ರತಿಕ್ರಿಯಿಸಿದ ವೀರೇಂದ್ರಕುಮಾರ್, ಈ ಹಾಸ್ಟೆಲ್ ಕಟ್ಟಡಗಳ ನಿರ್ಮಾಣಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿ ಮೊದಲ ಕಂತಾಗಿ 7.5 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗುತ್ತಿದೆ ಎಂದು ಬಹಿರಂಗಪಡಿಸಿದ್ದಾರೆ.

ಇದನ್ನೂ ಓದಿ: ಈ ಕಷ್ಟದ ಸಮಯದಲ್ಲಿ ನಾವು ಇಸ್ರೇಲ್‌ನೊಂದಿಗೆ ಒಗ್ಗಟ್ಟಿನಿಂದ ನಿಲ್ಲುತ್ತೇವೆ: ಪ್ರಧಾನಿ ಮೋದಿ

ಈ ಸಂದರ್ಭದಲ್ಲಿ ಕೇಂದ್ರ ಸಚಿವರಿಗೆ ಕೃತಜ್ಞತೆ ಸಲ್ಲಿಸಿದ ಕಿಶನ್ ರೆಡ್ಡಿ, ಉಸ್ಮಾನಿಯಾ ವಿಶ್ವವಿದ್ಯಾನಿಲಯದಲ್ಲಿ ಓದುತ್ತಿರುವ ಎಸ್‌ಸಿ ವಿದ್ಯಾರ್ಥಿಗಳಿಗೆ ಈ ಎರಡು ಹೊಸ ಹಾಸ್ಟೆಲ್‌ಗಳು ಶೀಘ್ರದಲ್ಲೇ ಲಭ್ಯವಾಗುವಂತೆ ಮಾಡಲು ಶ್ರಮಿಸುವುದಾಗಿ ತಿಳಿಸಿದರು. ಎಸ್‌ಸಿ ವಿದ್ಯಾರ್ಥಿಗಳಿಗೆ ಸಕಾಲದಲ್ಲಿ ವಿದ್ಯಾರ್ಥಿವೇತನವನ್ನು ನೀಡುವುದರ ಜೊತೆಗೆ, ನರೇಂದ್ರ ಮೋದಿ ಸರ್ಕಾರವು ಕೌಶಲ್ಯಾಭಿವೃದ್ಧಿ ತರಬೇತಿ ಮತ್ತು ಶಿಕ್ಷಣ ಮುಗಿದ ನಂತರ ಉದ್ಯೋಗದಂತಹ ಪ್ರತಿಯೊಂದು ಅಗತ್ಯವನ್ನು ಗಮನದಲ್ಲಿಟ್ಟುಕೊಂಡು ಅವರ ಸಬಲೀಕರಣಕ್ಕೆ ಬೆಂಬಲವನ್ನು ನೀಡುವುದನ್ನು ಮುಂದುವರಿಸುತ್ತದೆ ಎಂದು ಕಿಶನ್ ರೆಡ್ಡಿ ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sushma Chakre
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ