AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

2ನೇ ಡೋಸ್​ನ ಲಸಿಕೆ ಪಡೆಯಲು 12 ವಾರದ ಅಂತರ ನಿಗದಿಪಡಿಸಿದ ಕೇಂದ್ರ ಸರ್ಕಾರ

ಮೊದಲು ಒಂದು ಕಂಪನಿಯ ಲಸಿಕೆ ಪಡೆದು, 2ನೇ ಬಾರಿಗೆ ಮತ್ತೊಂದು ಕಂಪನಿಯ ಲಸಿಕೆಯ ಡೋಸ್ ಪಡೆಯಲು ಅವಕಾಶವಿಲ್ಲ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

2ನೇ ಡೋಸ್​ನ ಲಸಿಕೆ ಪಡೆಯಲು 12 ವಾರದ ಅಂತರ ನಿಗದಿಪಡಿಸಿದ ಕೇಂದ್ರ ಸರ್ಕಾರ
ಕೊರೊನಾ ಲಸಿಕೆ (ಪ್ರಾತಿನಿಧಿಕ ಚಿತ್ರ)
Ghanashyam D M | ಡಿ.ಎಂ.ಘನಶ್ಯಾಮ
|

Updated on:Jun 01, 2021 | 6:28 PM

Share

ದೆಹಲಿ: ಕೊರೊನಾ ವೈರಸ್ ಸೋಂಕು ನಿರೋಧಕ ಲಸಿಕೆಯ ಮೊದಲ ಡೋಸ್ ಪಡೆದವರು ಲಸಿಕೆಯ 2ನೇ ಡೋಸ್ ಪಡೆಯಲು ಕೇಂದ್ರ ಸರ್ಕಾರ 12 ವಾರದ (3 ತಿಂಗಳು) ಅಂತರ ನಿಗದಿಪಡಿಸಿದೆ. ಕೊವ್ಯಾಕ್ಸಿನ್​, ಕೊವಿಶೀಲ್ಡ್​ ಲಸಿಕೆಗಳಿಗೆ ಇದು ಅನ್ವಯಿಸುತ್ತದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಂಗಳವಾರ (ಜೂನ್ 1) ಮಾಹಿತಿ ನೀಡಿದೆ.

ದೇಶದಲ್ಲಿ ಈವರೆಗೆ ಒಟ್ಟು 21.60 ಕೋಟಿ ಜನರಿಗೆ ಲಸಿಕೆ ನೀಡಲಾಗಿದೆ. ಈ ಪೈಕಿ 1.67 ಕೋಟಿ ಆರೋಗ್ಯ ಕಾರ್ಯಕರ್ತರು ಮತ್ತು 2.42 ಕೋಟಿ ಜನರು ಫ್ರಂಟ್​​ಲೈನ್​​ ವರ್ಕರ್ಸ್​ ಆಗಿದ್ದಾರೆ. ಲಸಿಕೆ ಪಡೆದುಕೊಂಡಿರುವವರ ಪೈಕಿ 45 ವರ್ಷ ಮೇಲ್ಪಟ್ಟವರು 15.48 ಕೋಟಿ ಜನ. 18-44 ವರ್ಷದೊಳಗಿನ 2.03 ಕೋಟಿ ಜನರಿಗೆ ಈವರೆಗೆ ಲಸಿಕೆ ನೀಡಲಾಗಿದೆ.

ಮೊದಲ ಡೋಸ್ ಕೊವಾಕ್ಸಿನ್ ಅಥವಾ ಕೋವಿಶೀಲ್ಡ್​ ತೆಗೆದುಕೊಂಡಿದ್ದವರು ಎರಡನೇ ಡೋಸ್​ ಆಗಿ ಅದೇ ಲಸಿಕೆ ತೆಗೆದುಕೊಳ್ಳಬೇಕು. ಮೊದಲು ಒಂದು ಕಂಪನಿಯ ಲಸಿಕೆ ಪಡೆದು, 2ನೇ ಬಾರಿಗೆ ಮತ್ತೊಂದು ಕಂಪನಿಯ ಲಸಿಕೆಯ ಡೋಸ್ ಪಡೆಯಲು ಅವಕಾಶವಿಲ್ಲ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

ದೇಶದಲ್ಲಿ ಕೋವ್ಯಾಕ್ಸಿನ್ ಲಸಿಕೆಯ ಲಭ್ಯತೆ ಕಡಿಮೆಯಿರುವುದರಿಂದ ಸರ್ಕಾರ 2ನೇ ಡೋಸ್​ಗೆ ಎಲ್ಲರಿಗೂ ಕೋವಿಶೀಲ್ಡ್​ ನೀಡಲು ಕ್ರಮ ಕೈಗೊಳ್ಳಬಹುದು ಎಂಬ ಅಭಿಪ್ರಾಯಗಳು ವ್ಯಕ್ತವಾಗಿದ್ದವು. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ನೀತಿ ಆಯೋಗದ ಸದಸ್ಯ ಡಾ.ವಿ.ಕೆ.ಪೌಲ್ ಇಂದು ನೀಡಿರುವ ಸ್ಪಷ್ಟನೆ ಮಹತ್ವ ಪಡೆದಿದೆ.

‘ನಾನು ಈ ವಿಷಯವನ್ನು ಸ್ಪಷ್ಟಪಡಿಸಲು ಇಷ್ಟಪಡುತ್ತೇನೆ. ಎರಡು ಡೋಸ್ ಲಸಿಕೆ ನೀಡಬೇಕು ಎಂಬ ನಿರ್ಧಾರದಲ್ಲಿ ಸದ್ಯಕ್ಕೆ ಯಾವುದೇ ಬದಲಾವಣೆ ಇಲ್ಲ. ಕೋವಿಶೀಲ್ಡ್​ನ 2ನೇ ಡೋಸ್​ 12 ವಾರಗಳ ನಂತರ ಮತ್ತು ಕೊವ್ಯಾಕ್ಸಿನ್​ನ 2ನೇ ಡೋಸ್ 4ರಿಂದ 6 ವಾರಗಳ ನಂತರ ನೀಡಲಾಗುವುದು. ನಾವು ಈ ನಿರ್ಧಾರಕ್ಕೆ ಬದ್ಧರಾಗಿದ್ದೇವೆ. ಈ ವಿಚಾರದಲ್ಲಿ ಯಾವುದೇ ಗೊಂದಲಗಳು ಬೇಡ’ ಎಂದು ಅವರು ಹೇಳಿದರು.

(Government of India Schedules 12 weeks distance for 2nd vaccine No mixing of vaccines)

ಇದನ್ನೂ ಓದಿ: Sputnik V Vaccine ಭಾರತಕ್ಕೆ ಬಂತು ರಷ್ಯಾದ ಸ್ಪುಟ್ನಿಕ್ ವಿ ಲಸಿಕೆಯ 30 ಲಕ್ಷ ಡೋಸ್‌

ಇದನ್ನೂ ಓದಿ: ಕೋವಿಡ್ ಲಸಿಕೆ ಉಚಿತವಾಗಿ ಪೂರೈಸುವಂತೆ ಕೇಂದ್ರವನ್ನು ಒತ್ತಾಯಿಸಲು ಬಿಜೆಪಿಯೇತರ ಸರ್ಕಾರದ ಮುಖ್ಯಮಂತ್ರಿಗಳಿಗೆ ಪಿಣರಾಯಿ ವಿಜಯನ್ ಪತ್ರ

Published On - 6:25 pm, Tue, 1 June 21

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ