AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

2ನೇ ಡೋಸ್​ನ ಲಸಿಕೆ ಪಡೆಯಲು 12 ವಾರದ ಅಂತರ ನಿಗದಿಪಡಿಸಿದ ಕೇಂದ್ರ ಸರ್ಕಾರ

ಮೊದಲು ಒಂದು ಕಂಪನಿಯ ಲಸಿಕೆ ಪಡೆದು, 2ನೇ ಬಾರಿಗೆ ಮತ್ತೊಂದು ಕಂಪನಿಯ ಲಸಿಕೆಯ ಡೋಸ್ ಪಡೆಯಲು ಅವಕಾಶವಿಲ್ಲ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

2ನೇ ಡೋಸ್​ನ ಲಸಿಕೆ ಪಡೆಯಲು 12 ವಾರದ ಅಂತರ ನಿಗದಿಪಡಿಸಿದ ಕೇಂದ್ರ ಸರ್ಕಾರ
ಕೊರೊನಾ ಲಸಿಕೆ (ಪ್ರಾತಿನಿಧಿಕ ಚಿತ್ರ)
Ghanashyam D M | ಡಿ.ಎಂ.ಘನಶ್ಯಾಮ
|

Updated on:Jun 01, 2021 | 6:28 PM

Share

ದೆಹಲಿ: ಕೊರೊನಾ ವೈರಸ್ ಸೋಂಕು ನಿರೋಧಕ ಲಸಿಕೆಯ ಮೊದಲ ಡೋಸ್ ಪಡೆದವರು ಲಸಿಕೆಯ 2ನೇ ಡೋಸ್ ಪಡೆಯಲು ಕೇಂದ್ರ ಸರ್ಕಾರ 12 ವಾರದ (3 ತಿಂಗಳು) ಅಂತರ ನಿಗದಿಪಡಿಸಿದೆ. ಕೊವ್ಯಾಕ್ಸಿನ್​, ಕೊವಿಶೀಲ್ಡ್​ ಲಸಿಕೆಗಳಿಗೆ ಇದು ಅನ್ವಯಿಸುತ್ತದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಂಗಳವಾರ (ಜೂನ್ 1) ಮಾಹಿತಿ ನೀಡಿದೆ.

ದೇಶದಲ್ಲಿ ಈವರೆಗೆ ಒಟ್ಟು 21.60 ಕೋಟಿ ಜನರಿಗೆ ಲಸಿಕೆ ನೀಡಲಾಗಿದೆ. ಈ ಪೈಕಿ 1.67 ಕೋಟಿ ಆರೋಗ್ಯ ಕಾರ್ಯಕರ್ತರು ಮತ್ತು 2.42 ಕೋಟಿ ಜನರು ಫ್ರಂಟ್​​ಲೈನ್​​ ವರ್ಕರ್ಸ್​ ಆಗಿದ್ದಾರೆ. ಲಸಿಕೆ ಪಡೆದುಕೊಂಡಿರುವವರ ಪೈಕಿ 45 ವರ್ಷ ಮೇಲ್ಪಟ್ಟವರು 15.48 ಕೋಟಿ ಜನ. 18-44 ವರ್ಷದೊಳಗಿನ 2.03 ಕೋಟಿ ಜನರಿಗೆ ಈವರೆಗೆ ಲಸಿಕೆ ನೀಡಲಾಗಿದೆ.

ಮೊದಲ ಡೋಸ್ ಕೊವಾಕ್ಸಿನ್ ಅಥವಾ ಕೋವಿಶೀಲ್ಡ್​ ತೆಗೆದುಕೊಂಡಿದ್ದವರು ಎರಡನೇ ಡೋಸ್​ ಆಗಿ ಅದೇ ಲಸಿಕೆ ತೆಗೆದುಕೊಳ್ಳಬೇಕು. ಮೊದಲು ಒಂದು ಕಂಪನಿಯ ಲಸಿಕೆ ಪಡೆದು, 2ನೇ ಬಾರಿಗೆ ಮತ್ತೊಂದು ಕಂಪನಿಯ ಲಸಿಕೆಯ ಡೋಸ್ ಪಡೆಯಲು ಅವಕಾಶವಿಲ್ಲ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

ದೇಶದಲ್ಲಿ ಕೋವ್ಯಾಕ್ಸಿನ್ ಲಸಿಕೆಯ ಲಭ್ಯತೆ ಕಡಿಮೆಯಿರುವುದರಿಂದ ಸರ್ಕಾರ 2ನೇ ಡೋಸ್​ಗೆ ಎಲ್ಲರಿಗೂ ಕೋವಿಶೀಲ್ಡ್​ ನೀಡಲು ಕ್ರಮ ಕೈಗೊಳ್ಳಬಹುದು ಎಂಬ ಅಭಿಪ್ರಾಯಗಳು ವ್ಯಕ್ತವಾಗಿದ್ದವು. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ನೀತಿ ಆಯೋಗದ ಸದಸ್ಯ ಡಾ.ವಿ.ಕೆ.ಪೌಲ್ ಇಂದು ನೀಡಿರುವ ಸ್ಪಷ್ಟನೆ ಮಹತ್ವ ಪಡೆದಿದೆ.

‘ನಾನು ಈ ವಿಷಯವನ್ನು ಸ್ಪಷ್ಟಪಡಿಸಲು ಇಷ್ಟಪಡುತ್ತೇನೆ. ಎರಡು ಡೋಸ್ ಲಸಿಕೆ ನೀಡಬೇಕು ಎಂಬ ನಿರ್ಧಾರದಲ್ಲಿ ಸದ್ಯಕ್ಕೆ ಯಾವುದೇ ಬದಲಾವಣೆ ಇಲ್ಲ. ಕೋವಿಶೀಲ್ಡ್​ನ 2ನೇ ಡೋಸ್​ 12 ವಾರಗಳ ನಂತರ ಮತ್ತು ಕೊವ್ಯಾಕ್ಸಿನ್​ನ 2ನೇ ಡೋಸ್ 4ರಿಂದ 6 ವಾರಗಳ ನಂತರ ನೀಡಲಾಗುವುದು. ನಾವು ಈ ನಿರ್ಧಾರಕ್ಕೆ ಬದ್ಧರಾಗಿದ್ದೇವೆ. ಈ ವಿಚಾರದಲ್ಲಿ ಯಾವುದೇ ಗೊಂದಲಗಳು ಬೇಡ’ ಎಂದು ಅವರು ಹೇಳಿದರು.

(Government of India Schedules 12 weeks distance for 2nd vaccine No mixing of vaccines)

ಇದನ್ನೂ ಓದಿ: Sputnik V Vaccine ಭಾರತಕ್ಕೆ ಬಂತು ರಷ್ಯಾದ ಸ್ಪುಟ್ನಿಕ್ ವಿ ಲಸಿಕೆಯ 30 ಲಕ್ಷ ಡೋಸ್‌

ಇದನ್ನೂ ಓದಿ: ಕೋವಿಡ್ ಲಸಿಕೆ ಉಚಿತವಾಗಿ ಪೂರೈಸುವಂತೆ ಕೇಂದ್ರವನ್ನು ಒತ್ತಾಯಿಸಲು ಬಿಜೆಪಿಯೇತರ ಸರ್ಕಾರದ ಮುಖ್ಯಮಂತ್ರಿಗಳಿಗೆ ಪಿಣರಾಯಿ ವಿಜಯನ್ ಪತ್ರ

Published On - 6:25 pm, Tue, 1 June 21

Follow Us
Ghanashyam D M | ಡಿ.ಎಂ.ಘನಶ್ಯಾಮ
Ghanashyam D M | ಡಿ.ಎಂ.ಘನಶ್ಯಾಮ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ವಸ್ತುಗಳನ್ನು ಮನೆಗೆ ಕೊಡಲು ಬಂದ ಡೆಲಿವರಿ ಬಾಯ್ ಮಾಡಿದ್ದೇನು ನೋಡಿ
ವಸ್ತುಗಳನ್ನು ಮನೆಗೆ ಕೊಡಲು ಬಂದ ಡೆಲಿವರಿ ಬಾಯ್ ಮಾಡಿದ್ದೇನು ನೋಡಿ
ವನ್ಯಜೀವಿ ಛಾಯಾಗ್ರಾಹಕಿಯಾದ ಸೋನಲ್ ಮೊಂತೆರೋ
ವನ್ಯಜೀವಿ ಛಾಯಾಗ್ರಾಹಕಿಯಾದ ಸೋನಲ್ ಮೊಂತೆರೋ
ಸಂಜೆಯಾದರೆ ರಸ್ತೆಗಿಳಿಯುವ ಈ ಒಂಟಿ ಸಲಗಕ್ಕೆ ವಾಹನಗಳೇ ಟಾರ್ಗೆಟ್!
ಸಂಜೆಯಾದರೆ ರಸ್ತೆಗಿಳಿಯುವ ಈ ಒಂಟಿ ಸಲಗಕ್ಕೆ ವಾಹನಗಳೇ ಟಾರ್ಗೆಟ್!