AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

2ನೇ ಡೋಸ್​ನ ಲಸಿಕೆ ಪಡೆಯಲು 12 ವಾರದ ಅಂತರ ನಿಗದಿಪಡಿಸಿದ ಕೇಂದ್ರ ಸರ್ಕಾರ

ಮೊದಲು ಒಂದು ಕಂಪನಿಯ ಲಸಿಕೆ ಪಡೆದು, 2ನೇ ಬಾರಿಗೆ ಮತ್ತೊಂದು ಕಂಪನಿಯ ಲಸಿಕೆಯ ಡೋಸ್ ಪಡೆಯಲು ಅವಕಾಶವಿಲ್ಲ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

2ನೇ ಡೋಸ್​ನ ಲಸಿಕೆ ಪಡೆಯಲು 12 ವಾರದ ಅಂತರ ನಿಗದಿಪಡಿಸಿದ ಕೇಂದ್ರ ಸರ್ಕಾರ
ಕೊರೊನಾ ಲಸಿಕೆ (ಪ್ರಾತಿನಿಧಿಕ ಚಿತ್ರ)
Ghanashyam D M | ಡಿ.ಎಂ.ಘನಶ್ಯಾಮ
|

Updated on:Jun 01, 2021 | 6:28 PM

Share

ದೆಹಲಿ: ಕೊರೊನಾ ವೈರಸ್ ಸೋಂಕು ನಿರೋಧಕ ಲಸಿಕೆಯ ಮೊದಲ ಡೋಸ್ ಪಡೆದವರು ಲಸಿಕೆಯ 2ನೇ ಡೋಸ್ ಪಡೆಯಲು ಕೇಂದ್ರ ಸರ್ಕಾರ 12 ವಾರದ (3 ತಿಂಗಳು) ಅಂತರ ನಿಗದಿಪಡಿಸಿದೆ. ಕೊವ್ಯಾಕ್ಸಿನ್​, ಕೊವಿಶೀಲ್ಡ್​ ಲಸಿಕೆಗಳಿಗೆ ಇದು ಅನ್ವಯಿಸುತ್ತದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಂಗಳವಾರ (ಜೂನ್ 1) ಮಾಹಿತಿ ನೀಡಿದೆ.

ದೇಶದಲ್ಲಿ ಈವರೆಗೆ ಒಟ್ಟು 21.60 ಕೋಟಿ ಜನರಿಗೆ ಲಸಿಕೆ ನೀಡಲಾಗಿದೆ. ಈ ಪೈಕಿ 1.67 ಕೋಟಿ ಆರೋಗ್ಯ ಕಾರ್ಯಕರ್ತರು ಮತ್ತು 2.42 ಕೋಟಿ ಜನರು ಫ್ರಂಟ್​​ಲೈನ್​​ ವರ್ಕರ್ಸ್​ ಆಗಿದ್ದಾರೆ. ಲಸಿಕೆ ಪಡೆದುಕೊಂಡಿರುವವರ ಪೈಕಿ 45 ವರ್ಷ ಮೇಲ್ಪಟ್ಟವರು 15.48 ಕೋಟಿ ಜನ. 18-44 ವರ್ಷದೊಳಗಿನ 2.03 ಕೋಟಿ ಜನರಿಗೆ ಈವರೆಗೆ ಲಸಿಕೆ ನೀಡಲಾಗಿದೆ.

ಮೊದಲ ಡೋಸ್ ಕೊವಾಕ್ಸಿನ್ ಅಥವಾ ಕೋವಿಶೀಲ್ಡ್​ ತೆಗೆದುಕೊಂಡಿದ್ದವರು ಎರಡನೇ ಡೋಸ್​ ಆಗಿ ಅದೇ ಲಸಿಕೆ ತೆಗೆದುಕೊಳ್ಳಬೇಕು. ಮೊದಲು ಒಂದು ಕಂಪನಿಯ ಲಸಿಕೆ ಪಡೆದು, 2ನೇ ಬಾರಿಗೆ ಮತ್ತೊಂದು ಕಂಪನಿಯ ಲಸಿಕೆಯ ಡೋಸ್ ಪಡೆಯಲು ಅವಕಾಶವಿಲ್ಲ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

ದೇಶದಲ್ಲಿ ಕೋವ್ಯಾಕ್ಸಿನ್ ಲಸಿಕೆಯ ಲಭ್ಯತೆ ಕಡಿಮೆಯಿರುವುದರಿಂದ ಸರ್ಕಾರ 2ನೇ ಡೋಸ್​ಗೆ ಎಲ್ಲರಿಗೂ ಕೋವಿಶೀಲ್ಡ್​ ನೀಡಲು ಕ್ರಮ ಕೈಗೊಳ್ಳಬಹುದು ಎಂಬ ಅಭಿಪ್ರಾಯಗಳು ವ್ಯಕ್ತವಾಗಿದ್ದವು. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ನೀತಿ ಆಯೋಗದ ಸದಸ್ಯ ಡಾ.ವಿ.ಕೆ.ಪೌಲ್ ಇಂದು ನೀಡಿರುವ ಸ್ಪಷ್ಟನೆ ಮಹತ್ವ ಪಡೆದಿದೆ.

‘ನಾನು ಈ ವಿಷಯವನ್ನು ಸ್ಪಷ್ಟಪಡಿಸಲು ಇಷ್ಟಪಡುತ್ತೇನೆ. ಎರಡು ಡೋಸ್ ಲಸಿಕೆ ನೀಡಬೇಕು ಎಂಬ ನಿರ್ಧಾರದಲ್ಲಿ ಸದ್ಯಕ್ಕೆ ಯಾವುದೇ ಬದಲಾವಣೆ ಇಲ್ಲ. ಕೋವಿಶೀಲ್ಡ್​ನ 2ನೇ ಡೋಸ್​ 12 ವಾರಗಳ ನಂತರ ಮತ್ತು ಕೊವ್ಯಾಕ್ಸಿನ್​ನ 2ನೇ ಡೋಸ್ 4ರಿಂದ 6 ವಾರಗಳ ನಂತರ ನೀಡಲಾಗುವುದು. ನಾವು ಈ ನಿರ್ಧಾರಕ್ಕೆ ಬದ್ಧರಾಗಿದ್ದೇವೆ. ಈ ವಿಚಾರದಲ್ಲಿ ಯಾವುದೇ ಗೊಂದಲಗಳು ಬೇಡ’ ಎಂದು ಅವರು ಹೇಳಿದರು.

(Government of India Schedules 12 weeks distance for 2nd vaccine No mixing of vaccines)

ಇದನ್ನೂ ಓದಿ: Sputnik V Vaccine ಭಾರತಕ್ಕೆ ಬಂತು ರಷ್ಯಾದ ಸ್ಪುಟ್ನಿಕ್ ವಿ ಲಸಿಕೆಯ 30 ಲಕ್ಷ ಡೋಸ್‌

ಇದನ್ನೂ ಓದಿ: ಕೋವಿಡ್ ಲಸಿಕೆ ಉಚಿತವಾಗಿ ಪೂರೈಸುವಂತೆ ಕೇಂದ್ರವನ್ನು ಒತ್ತಾಯಿಸಲು ಬಿಜೆಪಿಯೇತರ ಸರ್ಕಾರದ ಮುಖ್ಯಮಂತ್ರಿಗಳಿಗೆ ಪಿಣರಾಯಿ ವಿಜಯನ್ ಪತ್ರ

Published On - 6:25 pm, Tue, 1 June 21

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು